ಹುಬ್ಬಳ್ಳಿ: ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ರನ್ನ (Basanagouda Patil Yatnal) ಉಚ್ಚಾಟನೆ ಮಾಡಿರುವುದು ಬಹಳಷ್ಟು ದುಃಖ ತಂದಿದೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ (Aravind Bellad) ಹೇಳಿದರು.
ಯತ್ನಾಳ್ರನ್ನು ಬಿಜೆಪಿ ಪಕ್ಷದಿಂದ 6 ವರ್ಷ ಹೈಕಮಾಂಡ್ ಉಚ್ಚಾಟನೆ ಮಾಡಿರುವ ವಿಚಾರವಾಗಿ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದರು. ಯತ್ನಾಳ್ ಒಬ್ಬ ಪಕ್ಷದ ಹಿರಿಯ ಜನಪ್ರಿಯ ನಾಯಕರು. ಅವರು ಪಕ್ಷದಿಂದ ದೂರವಾಗುತ್ತಿರುವುದು ನನಗೆ ದುಃಖ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ
ಹೈಕಮಾಂಡ್ನ ನಿರ್ಧಾರಕ್ಕೆ ನಾನು ತಲೆ ಬಾಗುತ್ತೇನೆ. ಪಕ್ಷದಲ್ಲಿ ಮುಂದೆ ಎಲ್ಲವೂ ಸರಿಯಾಗುತ್ತದೆ ಎನ್ನುವ ಭರವಸೆ ನನಗಿದೆ. ಯತ್ನಾಳ್ ಅವರಿಗೆ ಕೇಂದ್ರದ ಮಂತ್ರಿಯಾಗಿ, ಶಾಸಕರಾಗಿ ಸಾಕಷ್ಟು ಅನುಭವವಿದೆ. ಅವರು ಏನೇ ವಿಷಯವಿದ್ದರೂ ನೇರವಾಗಿಯೇ ಹೇಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ: ಉಚ್ಚಾಟನೆಗೆ ದಾಸರ ಹಾಡಿನ ಮೂಲಕ ಯತ್ನಾಳ್ ಕೌಂಟರ್