Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಕಿಯರ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ – ವಾರ್ಡನ್‌ಗೆ ನೋಟಿಸ್ ಜಾರಿ ಮಾಡಲು ಜಿಪಂ ಸಿಇಓ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಾಲಕಿಯರ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ – ವಾರ್ಡನ್‌ಗೆ ನೋಟಿಸ್ ಜಾರಿ ಮಾಡಲು ಜಿಪಂ ಸಿಇಓ ಸೂಚನೆ

Districts

ಬಾಲಕಿಯರ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ – ವಾರ್ಡನ್‌ಗೆ ನೋಟಿಸ್ ಜಾರಿ ಮಾಡಲು ಜಿಪಂ ಸಿಇಓ ಸೂಚನೆ

Public TV
Last updated: March 29, 2025 3:25 pm
Public TV
Share
2 Min Read
Mandya Hostel 5
SHARE

– ಅವ್ಯವಸ್ಥೆ ಸರಿಪಡಿಸಲು ಒಂದು ವಾರ ಗಡುವು

ಮಂಡ್ಯ: ಇಲ್ಲಿನ ಜಿಪಂ ಸಿಒಓ ಕೆ.ಆರ್ ನಂದಿನಿ ಅವರು ಮದ್ದೂರು ತಾಲ್ಲೂಕಿನ ಅಣ್ಣೂರು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ (Hostel) ಶುಕ್ರವಾರ ದಿಢೀರ್ ಭೇಟಿ ನೀಡಿದ್ದಾರೆ. ವಿದ್ಯಾರ್ಥಿನಿಲಯದಲ್ಲಿ ಅವ್ಯವಸ್ಥೆಗಳನ್ನು ಪರಿಶೀಲಿಸಿ ವಾರ್ಡನ್‌ಗೆ ನೋಟಿಸ್ ಜಾರಿ ಮಾಡುವಂತೆ ಮದ್ದೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

Mandya Hostel 4

ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೇ ವಿದ್ಯಾಭ್ಯಾಸ ನಡೆಸಬೇಕು ಎಂದು ಸರ್ಕಾರ ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ನಿಲಯಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಸೌಲಭ್ಯ ನೀಡದೇ ಇದ್ದರೆ ಅವರ ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಯೋಜಿಸಿದ್ದಾರೆ. ಇದನ್ನೂ ಓದಿ: 2ನೇ ಗಂಡನೊಂದಿಗೆ ನಂಟು -3ನೇ ಗಂಡನಿಂದ ಪತ್ನಿ ಸೇರಿ ನಾಲ್ವರ ಬಾಳಿಗೆ ಕತ್ತಿಯೇಟು

Mandya Hostel 3

ಅಣ್ಣೂರು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ನೀಡುವ ಆಹಾರ ಶುಚಿ ಹಾಗೂ ರುಚಿಕರವಾಗಿರುವುದಿಲ್ಲ. ಅವರಿಗೆ ನಿದ್ರೆ ಮಾಡಲು ಹಾಸಿಗೆ ವ್ಯವಸ್ಥೆ ಇರುವುದಿಲ್ಲ. ಸ್ನಾನದ ಕೊಠಡಿಗಳು ಅಶುಚಿತ್ವದಿಂದ ಕೂಡಿರುತ್ತವೆ. ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ವಿಸರ್ಜಿಸಲು ನೀಡಿರುವ ಇನ್ಸಿನೇಟರ್ ಯಂತ್ರ ದುರಸ್ತಿಯಲ್ಲಿರುತ್ತದೆ. ಸ್ನಾನ ಮಾಡಲು ಸರಿಯಾದ ಸಮಯಕ್ಕೆ ನೀರಿನ ವ್ಯವಸ್ಥೆ ಇಲ್ಲದಿರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದ ಸಿಇಒ ಅವರು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಿಗೆ ತಕ್ಷಣ ಎಲ್ಲಾ ಅವ್ಯವಸ್ಥೆಗಳನ್ನು 7 ದಿನದೊಳಗಾಗಿ ಸರಿಪಡಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಕೆಲವೇ ದಿನಗಳಲ್ಲಿ ಪುನಃ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಲಿದ್ದು, ಇಂತಹ ಅವ್ಯವಸ್ಥೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಲಿಂಗಾಯತರು ಯಡಿಯೂರಪ್ಪ ಜೊತೆಗಿಲ್ಲ, ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡ್ತಿದ್ದಾರೆ – ಯತ್ನಾಳ್‌

Mandya Hostel

ಎಲ್ಲ ವಿದ್ಯಾರ್ಥಿನಿಲಯಗಳಲ್ಲಿ ಸಹಾಯವಾಣಿ:
ಸಮಾಜ ಕಲ್ಯಾಣ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಸಹಾಯವಾಣಿ ಸಂಖ್ಯೆಯನ್ನು ಅನಾವರಣಗೊಳಿಸಲಾಗುವುದು. ವಿದ್ಯಾರ್ಥಿಗಳು ಯಾವುದಾದರೂ ವ್ಯವಸ್ಥೆಯಲ್ಲಿ ತೊಂದರೆಯಿದ್ದಲ್ಲಿ ಕರೆ ಮಾಡಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್ – ಪ್ರಭಾವಿಯನ್ನ ನೀವೇ ಹುಡುಕಿ, ನಿಮಗೆ ಸಿಕ್ಕೇ ಸಿಕ್ತಾರೆ: ಸತೀಶ್‌ ಜಾರಕಿಹೊಳಿ

Mandya Hostel 2

ಅಣ್ಣೂರು ಗ್ರಾಮದಲ್ಲಿ ಅಂಗನವಾಡಿಗೆ ಭೇಟಿ ನೀಡಿ ಅಂಗನವಾಡಿಗಳು ಹೈಟೆಕ್ ರೂಪದಲ್ಲಿ ಮಕ್ಕಳು ಹಾಗೂ ಪೋಷಕರನ್ನು ಆಕರ್ಷಿಸುವ ರೀತಿ ಇರಬೇಕು. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಮಕ್ಕಳ ಉತ್ತಮ ಬೆಳವಣಿಗೆಯ ಬಗ್ಗೆ ಸದಾ ನಿಗಾ ವಹಿಸಬೇಕು. ಭಾರತೀನಗರದ ಮಣಿಗೆರೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಬೂದು ನೀರು ತ್ಯಜ್ಯ ನಿರ್ವಹಣೆಯನ್ನು ಪರಿಶೀಲಿಸಿ, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ಇದನ್ನೂ ಓದಿ: 1ನೇ ತರಗತಿಗೆ ವಯೋಮಿತಿ ಗೊಂದಲ – ಪರಿಹಾರ ಕೇಳಲು ಬಂದ ಪೋಷಕರ ವಿರುದ್ಧ ಮಧು ಬಂಗಾರಪ್ಪ ಗರಂ!

ಮನರೇಗಾ ಯೋಜನೆಯಡಿ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಗ್ರಾಮೀಣ ಭಾಗದ ಜನರಿಗೆ ವರದಾನವಾಗಿರುವ ಮನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅಧಿಕಾರಿಗಳು ಅನುಷ್ಠಾನ ಮಾಡಬೇಕು.

ಯಾರೂ ಕೂಡ ವಲಸೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ದು ವಿಜಯೇಂದ್ರ & ಡಿಕೆಶಿ, ಹನಿಟ್ರ್ಯಾಪ್‌ ಕೇಸ್‌ನಲ್ಲೂ ಇದೇ ಟೀಂ ಇದೆ – ಯತ್ನಾಳ್‌ ಬಾಂಬ್‌

TAGGED:girls hostelmandyaZilla Panchayat Mandyaಜಿಲ್ಲಾ ಪಂಚಾಯಿತಿಮಂಡ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
52 seconds ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
4 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
4 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
17 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
32 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?