Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ವಕ್ಫ್‌ಗೆ ಒಬ್ಬ ಮುಸ್ಲಿಮೇತರರೂ ಬರುವುದಿಲ್ಲ – ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿಮ್ಮ ವಕ್ಫ್‌ಗೆ ಒಬ್ಬ ಮುಸ್ಲಿಮೇತರರೂ ಬರುವುದಿಲ್ಲ – ಅಮಿತ್ ಶಾ

Latest

ನಿಮ್ಮ ವಕ್ಫ್‌ಗೆ ಒಬ್ಬ ಮುಸ್ಲಿಮೇತರರೂ ಬರುವುದಿಲ್ಲ – ಅಮಿತ್ ಶಾ

Public TV
Last updated: April 2, 2025 11:34 pm
Public TV
Share
3 Min Read
Amit Shah
SHARE

ನವದೆಹಲಿ: ವಕ್ಫ್ ಆಸ್ತಿಯನ್ನು ತಪ್ಪಾಗಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದು ವಕ್ಫ್ ಬೋರ್ಡ್ ಮತ್ತು ವಕ್ಫ್ ಕೌನ್ಸಿಲ್‌ನ ಕೆಲಸ. ಹಾಗಾಗಿ ವಕ್ಫ್‌ ಕಾನೂನು (Waqf Law) ಅಡಿಯಲ್ಲಿ ಯಾರಾದ್ರೂ ದಾನ ಮಾಡಿದ ಆಸ್ತಿಯ ಆಡಳಿತವನ್ನು ಮಾತ್ರ ಮುಸ್ಲಿಮೇತರ ಸದಸ್ಯರು ನೋಡಿಕೊಳ್ತಾರೆ. ಇನ್ನುಳಿದಂತೆ ಧಾರ್ಮಿಕ ವ್ಯವಹಾರ ನಿರ್ವಹಣೆ ಮಾಡುವಲ್ಲಿ ಮುಸ್ಲಿಮೇತರ ಸದಸ್ಯರು ಯಾವುದೇ ಪಾತ್ರ ನಿರ್ವಹಿಸಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ.

ಪ್ರಶ್ನೋತ್ತರ ಕಲಾಪದ ವೇಳೆ ವಕ್ಫ್ ಬಿಲ್ (Waqf Amendment Bill) ಮಂಡನೆಗೆ ಬಗ್ಗೆ ತಡವಾಗಿ ಸಂಸದರಿಗೆ ಮಾಹಿತಿ ಬಂದಿದೆ, ಸಂಸದರಿಗೂ ಅವಕಾಶ ನೀಡಬೇಕು, ತಿದ್ದುಪಡಿ ಪ್ರತಿಯನ್ನು ಅಧ್ಯಯನಕ್ಕೆ ಸರಿಯಾಗಿ ನೀಡಿಲ್ಲ. ನಾವು ಚರ್ಚೆ ಮಾಡಲು ಹೇಗೆ ಸಾಧ್ಯ? ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಕೆ.ಸಿ ವೇಣುಗೋಪಾಲ್ ಪ್ರಶ್ನೆ ಮಾಡಿದರು.

ಇದಕ್ಕೆ ಉತ್ತರಿಸಿದ ಕೇಂದ್ರ ಗೃಹಸಚಿವ ಅಮಿತ್‌ ಶಾ, ವಿಪಕ್ಷಗಳ ಆಗ್ರಹದ ಮೇರೆಗೆ ವಕ್ಫ್‌ ತಿದ್ದುಪಡಿ ಮಸೂದೆಯನ್ನ ಜೆಪಿಸಿಗೆ ಕಳುಹಿಸಲಾಗಿತ್ತು. ಈಗ ಅಲ್ಲಿಂದ ಬಂದ ಬಳಿಕ ಸಚಿವ ಸಂಪುಟದ ಅನುಮೋದನೆ ಪಡೆದು ಈಗ ಬಿಲ್ ಮಂಡಿಸಿದೆ. ಕಾಂಗ್ರೆಸ್ ಅವಧಿಯ ರೀತಿಯಲ್ಲಿ ಜೆಪಿಸಿ ಕೆಲಸ ಮಾಡಲ್ಲ, ವ್ಯವಸ್ಥಿತ ಚರ್ಚೆಯ ಮೂಲಕ ಪರಿಶೀಲನೆಗೆ ಒಳಪಟ್ಟಿದೆ ಎಂದು ಉತ್ತರಿಸಿದರು.

ನಂತರ ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಚರ್ಚೆ ವೇಳೆ ಮಾಣಿಪ್ಪಾಡಿ ವರದಿ ಉಲ್ಲೇಖಿಸಿ ಅಮಿತ್‌ ಶಾ ಮಾತನಾಡಿದರು. 29,000 ಎಕರೆ ವಕ್ಫ್‌ ಆಸ್ತಿಯನ್ನ ದೇಶದ ಕೆಲಸಗಳಿಗೆ ಬಾಡಿಗೆ ನೀಡಲಾಗಿದೆ ಅಂತಿದ್ದಾರೆ. ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ 15,000 ಎಕರೆಯನ್ನ ವಕ್ಫ್‌ ಆಸ್ತಿ ಎಂದು ಘೋಷಿಸಿ ವಿವಾದ ಮಾಡಲಾಯ್ತು. ಈ ವಿವಾದಿತ ಭೂಮಿ 5,000 ಕೋಟಿ ಬೆಲೆ ಬಾಳುತ್ತದೆ. ಎಕ್ರೆಗೆ 12,000 ರೂಪಾಯಿಯಂತೆ ಬಾಡಿಗೆ ನೀಡಲಾಗಿದೆ. ಆದ್ರೆ ಇದರ ಲೆಕ್ಕಾಚಾರ ಮಾಡ್ಬೇಡಿ, ಪರಿಶೀಲನೆ ಮಾಡಬೇಡಿ ಎಂದು ಹೇಳುತ್ತಾರೆ. ಈ ಹಣ ದೇಶದ ಬಡ ಮುಸ್ಲಿಮರದ್ದು, ಈ ಹಣ ಕಳ್ಳತನ ಮಾಡಲಿಕ್ಕೆ ಇರೋದಲ್ಲ ಅಂತ ಹೇಳಿದ್ದಾರೆ.

ಕರ್ನಾಟಕದ ದತ್ತ ಪೀಠದ ಮೇಲೂ ಹಕ್ಕು ಸ್ಥಾಪನೆ ಮಾಡಿದ್ದಾರೆ. ಬೇರೆ ಬೇರೆ ಸಮುದಾಯದ ಭೂಮಿಯನ್ನ ಅತಿಕ್ರಮಿಸಿಕೊಳ್ಳಲಾಗಿದೆ. ಕ್ರೈಸ್ತರೂ ವಕ್ಫ್‌ ಬಿಲ್‌ಗೆ ಸಹಮತ ನೀಡಿದ್ದಾರೆ. ಈ ಬಿಲ್ ಮುಸ್ಲಿಮರ ಲಾಭಕ್ಕೆ ಇದೆ ಎಂದು ಮುಂದೆ ಗೊತ್ತಾಗಲಿದೆ, ದಕ್ಷಿಣದ ಸಂಸದರು ಇದನ್ನ ವಿರೋಧಿಸುವ ಮೂಲಕ ಕ್ರಿಶ್ಚಿಯನ್ನರ ವಿರೋಧ ಕಟ್ಟಿಕೊಳ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೂ ವಕ್ಫ್‌ ಮಸೂದೆಯ ಬಗ್ಗೆ ವಿಪಕ್ಷ ನಾಯಕರು ತಪ್ಪು ಕಲ್ಪನೆಗಳನ್ನು ಹರಡುತ್ತಿದ್ದಾರೆ. ಈ ಮಸೂದೆಯೂ ಯಾವುದೇ ಸಮುದಾಯದ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ. ಪಾರದರ್ಶಕತೆ ಮತ್ತು ವಕ್ಫ್ ಆಸ್ತಿಗಳ ದುರುಪಯೋಗವನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ. ಯಾವುದೇ ಮುಸ್ಲಿಮೇತರರು ವಕ್ಫ್‌ ಮಂಡಳಿಗೆ ಬರುವುದಿಲ್ಲ. ಇದನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ. ಧಾರ್ಮಿಕ ಸಂಸ್ಥೆಗಳನ್ನು ನಿರ್ವಹಿಸುವವರಲ್ಲಿ ಯಾವುದೇ ಮುಸ್ಲಿಮೇತರರನ್ನು ಸೇರಿಸುವ ನಿಬಂಧನೆ ಇಲ್ಲ, ಹಾಗೆ ಮಾಡಲು ನಾವೂ ಬಯಸೋದಿಲ್ಲ. ತಮ್ಮ ವೋಟ್‌ಬ್ಯಾಂಕ್‌ಗಾಗಿ ಅಲ್ಪ ಸಂಖ್ಯಾತರಲ್ಲಿ ಭಯ ಹುಟ್ಟಿಸಲು ಈ ರೀತಿಯ ತಪ್ಪು ಕಲ್ಪನೆಗಳನ್ನು ಹರಡಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ಮುಸ್ಲಿಮೇತರ ಸದಸ್ಯರ ಕೆಲವು ವಕ್ಫ್ ಕಾನೂನಿನ ಆಡಳಿತ ಮತ್ತು ದೇಣಿಗೆಗಾಗಿ ನೀಡಿದ ನಿಧಿಗಳು ಉದ್ದೇಶಗಳಿಗಾಗಿ ಬಳಕೆಯಾಗುತ್ತಿವೆಯೇ (ಇಸ್ಲಾಂ ಧರ್ಮಕ್ಕಾಗಿ, ಬಡವರ ಅಭಿವೃದ್ಧಿಗಾಗಿ) ಅಥವಾ ಇಲ್ಲವೇ ಎಂಬುದನ್ನು ಮೇಲ್ವಿಚಾರಣೆ ಮಾಡುವುದು ಅಷ್ಟೇ, ಧಾರ್ಮಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದಲ್ಲ. ಅದನ್ನು ಬಿಟ್ಟು ವಕ್ಫ್‌ಗೆ ಒಬ್ಬ ಮುಸ್ಲಿಮೇತರನೂ ಬರುವುದಿಲ್ಲ ಅನ್ನೋದನ್ನ ಈ ಸದನದ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.

ವಕ್ಫ್ ತಿದ್ದುಪಡಿ ಬಿಲ್.. ಪ್ರಮುಖಾಂಶ
* ಇನ್ಮುಂದೆ ಹೊಸ ಆಸ್ತಿಗಳ ಘೋಷಣೆಗೆ ತಡೆ
* ಸೂಕ್ತ ದಾಖಲೆಗಳಿದ್ದರೆ ಮಾತ್ರ ಹಕ್ಕು ಸಾಧಿಸಬಹುದು
* ಎಲ್ಲಾ ವಕ್ಫ್ ಆಸ್ತಿಗಳ ನೋಂದಣಿ ಕಡ್ಡಾಯ
* ಆರು ತಿಂಗಳೊಳಗೆ ಆಸ್ತಿ ವಿವರ ಸಲ್ಲಿಸಬೇಕು
* ಪ್ರತಿ 5 ವರ್ಷಕ್ಕೊಮ್ಮೆ ವಕ್ಫ್ ಆಸ್ತಿಗಳ ಸರ್ವೆ
* ಆಸ್ತಿಗಳ ನೋಂದಣಿ, ನಿರ್ವಹಣೆಯಲ್ಲಿ ಪಾರದರ್ಶಕತೆ
* ಸರ್ಕಾರಕ್ಕೆ ವಕ್ಫ್ ಆಸ್ತಿಗಳ ಮೇಲೆ ಹೆಚ್ಚಿನ ನಿಯಂತ್ರಣ
* ಜಿಲ್ಲಾಧಿಕಾರಿಗಳಿಗೆ ವಕ್ಫ್ ಆಸ್ತಿ ತನಿಖೆಯ ಅಧಿಕಾರ
* ಡಿಸಿ ಮೇಲ್ವಿಚಾರಣೆಯಲ್ಲಿ ಕಾನೂನಿಗೆ ಅನುಗುಣವಾಗಿ ಸರ್ವೆ
* ಮಹಿಳೆಯರಿಗೆ ವಕ್ಫ್ ಆಸ್ತಿಯಲ್ಲಿ ಸಮಾನಹಕ್ಕು ಖಾತ್ರಿ
* ಕೇಂದ್ರ, ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮಹಿಳೆಯರಿಗೆ ಸ್ಥಾನಮಾನ
* ವಕ್ಫ್ ಬೋರ್ಡ್ಗಳಲ್ಲಿ ಮುಸ್ಲಿಮೇತರರಿಗೂ ಸದಸ್ಯ ಸ್ಥಾನ
* ಶಿಯಾ, ಸುನ್ನಿ, ಬೋಹ್ರಾ, ಅಘಖಾನಿ, ಹಿಂದುಳಿದ ವರ್ಗಗಳಿಗೆ ಆದ್ಯತೆ
* ಶಿಕ್ಷಣ, ಆರೋಗ್ಯ, ಧಾರ್ಮಿಕ, ಸಾಮಾಜಿಕ ಕಾರ್ಯಗಳಿಗೆ ಆದಾಯ ಬಳಕೆ
* ಕನಿಷ್ಠ 5 ವರ್ಷ ಇಸ್ಲಾಂ ಧರ್ಮ ಪಾಲಿಸಿದ ವ್ಯಕ್ತಿಗೆ ಆಸ್ತಿ ದಾನದ ಅಧಿಕಾರ

TAGGED:Amit ShahbjpmuslimsNon MuslimsWaqf Amendment Billಅಮಿತ್ ಶಾಬಿಜೆಪಿಮುಸ್ಲಿಮರುವಕ್ಫ್‌ ತಿದ್ದುಪಡಿ ಮಸೂದೆ
Share This Article
Facebook Whatsapp Whatsapp Telegram

Cinema news

sudeep 1 1
ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು – ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ; ಗುಡುಗಿದ ಕಿಚ್ಚ
Cinema Dharwad Latest Sandalwood Top Stories
Nora Fatehi
ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌
Bollywood Cinema Latest Main Post
nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories

You Might Also Like

Infosys Sudhamurthy Hassan Sakleshpuraswamy Temple
Districts

ಸಕಲೇಶಪುರಸ್ವಾಮಿಯ ದರ್ಶನ ಪಡೆದ ಸುಧಾಮೂರ್ತಿ

Public TV
By Public TV
13 minutes ago
DK Shivakumar 11
Bengaluru City

ರಾಜಣ್ಣ ನನಗೂ ಆಪ್ತರು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು: ಡಿಕೆಶಿ

Public TV
By Public TV
19 minutes ago
Byrati Basavaraj 2
Bengaluru City

ಬಂಧನ ಭೀತಿಯಿಂದ ರಾಜ್ಯದಿಂದ ರಾಜ್ಯಕ್ಕೆ ಬೈರತಿ ಅಜ್ಞಾತ – ಮಾಜಿ ಸಚಿವನಿಗಾಗಿ ಸಿಐಡಿಯ 3 ತಂಡ ತೀವ್ರ ತಲಾಶ್

Public TV
By Public TV
40 minutes ago
TRAIN 1
Latest

ಡಿ.26 ರಿಂದ ರೈಲು ಪ್ರಯಾಣ ದರ ಏರಿಕೆ; ಎಸಿ – ನಾನ್‌ ಎಸಿಗೆ ಎಷ್ಟು ಏರಿಕೆ?

Public TV
By Public TV
1 hour ago
Mallikarjun Kharge 1
Districts

ರಾಜ್ಯದಲ್ಲಿ ನಾಯಕತ್ವ ಗೊಂದಲ ಹೈಕಮಾಂಡ್‌ ಸೃಷ್ಟಿಸಿಲ್ಲ, ಅವ್ರೇ ಮಾಡಿಕೊಂಡಿದ್ದಾರೆ: ಖರ್ಗೆ ಗರಂ

Public TV
By Public TV
2 hours ago
Gruhalakshmi Scheme 1
Bengaluru City

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌ – ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?