Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧೂರು ಮಹಾಗಣಪತಿಗೆ 33 ವರ್ಷಗಳ ಬಳಿಕ ಇಂದು ಮೂಡಪ್ಪ ಸೇವೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಧೂರು ಮಹಾಗಣಪತಿಗೆ 33 ವರ್ಷಗಳ ಬಳಿಕ ಇಂದು ಮೂಡಪ್ಪ ಸೇವೆ

Latest

ಮಧೂರು ಮಹಾಗಣಪತಿಗೆ 33 ವರ್ಷಗಳ ಬಳಿಕ ಇಂದು ಮೂಡಪ್ಪ ಸೇವೆ

Public TV
Last updated: April 5, 2025 7:41 pm
Public TV
Share
3 Min Read
Kerala
SHARE

ಮಧೂರು (ಕಾಸರಗೋಡು): ಭಕ್ತರೆಲ್ಲರ ನಿರೀಕ್ಷೆಯ ಆ ಕ್ಷಣ ಬಂದೇ ಬಿಟ್ಟಿದೆ. ಕಾಸರಗೋಡು (Kasaragod) ಜಿಲ್ಲೆಯ ಪ್ರಸಿದ್ಧ ದೇವಾಲಯ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ (Madanantheshwara-Siddhivinayaka Temple) ಶತಮಾನದ ಮೊದಲ ಮೂಡಪ್ಪಸೇವೆ 33 ವರ್ಷಗಳ ಬಳಿಕ ಇಂದು ಜರಗಲಿದೆ.

ಕಳೆದ 14 ವರ್ಷಗಳಿಂದ ನವೀಕರಣ ಜೀರ್ಣೋದ್ಧಾರ ಪ್ರಕ್ರಿಯೆ ಪೂರ್ತಿಗೊಂಡಿದ್ದು, ಪುನಃ ಪ್ರತಿಷ್ಟಾ ಬ್ರಹ್ಮಕಲಶ ಸಮಾಪ್ತಿಯಾಗಿದೆ. ಕುಂಬಳೆ ಸೀಮೆಯ ಅತೀ ದೊಡ್ಡ ಸಂಭ್ರಮವಾಗಿ ಮೂಡಪ್ಪ ಸೇವೆಗೆ ಮಧೂರು ದೇವಸ್ಥಾನ ಅಣಿಯಾಗಿದ್ದು, ಮಹಾ ಉತ್ಸವಕ್ಕೆ ಲಕ್ಷಾಂತರ ಮಂದಿ ಭಕ್ತಾದಿಗಳು ಮಧೂರಿಗೆ ಬರುತ್ತಿದ್ದಾರೆ. ಇದನ್ನೂ ಓದಿ: ಕೊಲ್ಲೂರಲ್ಲಿ ಚಂಡಿಕಾ ಹೋಮದಿಂದ ಸಂಗ್ರಹವಾಯ್ತು 1.77 ಕೋಟಿ ರೂ

Kerala 5

ಮೂಡಪ್ಪ ಸೇವೆಗೆ ಮಧೂರು (Madhur) ಕ್ಷೇತ್ರ ಸಜ್ಜುಗೊಂಡಿದ್ದು, ಅಕ್ಕಿ ಮುಹೂರ್ತ ನಿನ್ನೆ ನೆರವೇರಿತು. ಬೆಳಿಗ್ಗೆ ದೀಪದ ಬಲಿ, ಶತರುದ್ರಾಭಿಷೇಕ, 128 ಕಾಯಿ ಅಷ್ಟದ್ರವ್ಯ ಮಹಾಗಣಪತಿ ಯಾಗ ನೆರವೇರಿತು. ಪಾರಂಪರಿಕ ಒನಕೆ ಹಾಗೂ ಬೀಸುವ ಕಲ್ಲಿನ ಮೂಲಕ ಅಕ್ಕಿ ಹುಡಿಮಾಡುವ ಪ್ರಕ್ರಿಯೆ ನಡೆಯಿತು. ಗಣೇಶ ದೇವರ ನಡೆಯಲ್ಲಿ ಅರೆಯುವ ಕಲ್ಲು, ಒನಕೆ ಹಾಗೂ ಬೀಸುವ ಕಲ್ಲಿಗೆ ಪೂಜೆ ನಡೆಸಲಾಯಿತು.

ಏನಿದು ಮೂಡಪ್ಪ ಸೇವೆ?: ಇಂದು ಬೆಳಗ್ಗೆ ಪೂಜೆ ನೆರವೇರಿಸಿ ಅಪ್ಪ ತಯಾರಿಯೂ ಆರಂಭವಾಗಿದೆ. ಮಹಾಗಣಪತಿಯನ್ನು ಅಪ್ಪದಿಂದ ಮುಚ್ಚುವ ಅತೀ ವಿಶಿಷ್ಟ, ಪ್ರಧಾನ ಸೇವೆಯನ್ನು ಮೂಡಪ್ಪ ಸೇವೆ ಎಂದು ಕರೆಯುತ್ತಾರೆ. ಇದನ್ನೂ ಓದಿ: ಒಳ ಮೀಸಲಾತಿ ಜಾರಿ ಮಾಡಿಯೇ ಮಾಡ್ತೀವಿ, ಯಾರಿಗೂ ಅನ್ಯಾಯ ಮಾಡಲ್ಲ: ಸಿದ್ದರಾಮಯ್ಯ

Kerala 3

ದೇಗುಲದಲ್ಲಿರುವ ಗಣಪತಿ ವಿಗ್ರಹದ ಸುತ್ತ ಸುಮಾರು ಆರೂವರೆ ಅಡಿ ಎತ್ತರದಲ್ಲಿ ಕಬ್ಬಿನಿಂದ ಬೇಲಿ ತಯಾರಿಸಿ ಅದರೊಳಗೆ ಅಷ್ಟದ್ರವ್ಯಗಳ ಸಹಿತ 144 ಸೇರು ಅಕ್ಕಿಯಿಂದ ಅಪ್ಪ ಹಾಗೂ 11 ಸೇರು ಅಕ್ಕಿಯಿಂದ ತಯಾರಿಸಿದ ಪಚ್ಚಪ್ಪ ತಯಾರಿಸಿ ಶ್ರೀ ಮಹಾಗಣಪತಿಯ ಕತ್ತಿನ ಭಾಗದವರೆಗೆ ತುಂಬುತ್ತಾರೆ. ಇದೇ ಸಂದರ್ಭ ಶ್ರೀ ಮದನಂತೇಶ್ವರ ದೇವರಿಗೆ ಮೂರು ಮುಡಿ ಅಕ್ಕಿಯಿಂದ ತಯಾರಿಸಿದ ಅಪ್ಪ ಹಾಗೂ ಒಂದು ಮುಡಿ ಅಕ್ಕಿಯ ನೈವೇದ್ಯ ಸಮರ್ಪಿಸಲಾಗುವುದು.

ಇಂದು ಬೆಳಿಗ್ಗೆ ಶ್ರೀ ದೇವರ ದೀಪದ ಬಲಿ, ದರ್ಶನಬಲಿ, ಶತರುದ್ರಾಭಿಷೇಕ, 128 ಕಾಯಿ ಅಷ್ಟದ್ರವ್ಯ ಮಹಾಗಣಪತಿಯಾಗ ನಡೆಯಿತು. ಇದನ್ನೂ ಓದಿ: ಹಸುವಿಗೆ ಲಕ್ಷಾಂತರ ರೂ. ಖರ್ಚು ಮಾಡಿ ಸೀಮಂತ – ಹಳ್ಳಿಕಾರ್‌ ತಳಿ ಉಳಿಸಲು ಉದ್ಯಮಿಯಿಂದ ವಿಶೇಷ ಜಾಗೃತಿ!

Kerala 2

ನಂತರ ಮೂಡಪ್ಪ ತಯಾರಿಯ ಅರಿಕೊಟ್ಟಿಗೆಯ ಮುಹೂರ್ತ ನಡೆಯಿತು. ಉಳಿಯತ್ತಾಯ ವಿಷ್ಣು ಆಸ್ರ ಬೆಳಗ್ಗಿನ ಜಾವ ಗಣಪತಿ ದೇವರಿಗೆ ಕಲಶಾಭಿಷೇಕ ನಡೆಸಿ, ಅರಿಕೊಟ್ಟಿಗೆ ಪ್ರವೇಶಿಸಿ ದ್ವಿಜರಿಗೆ ಮುಹೂರ್ತ ದಾನ ದಕ್ಷಿಣೆ ಕೊಟ್ಟು, ಸರ್ವಾಪ್ಪಣೆ ಪಡೆದು ಅಪ್ಪ ತಯಾರಿಗೆ ನಾಂದಿ ಹಾಡಿದರು.

ಸಂಜೆ 5ಕ್ಕೆ ಮಧೂರಿನಲ್ಲಿ ಉತ್ಸವ ಬಲಿ ನಡೆದು ಬಳಿಕ ದೇವರ ಮೂಲಸ್ಥಾನಕ್ಕೆ ಸವಾರಿ ಹೊರಡಲಿದೆ. ರಾತ್ರಿ ಮೂಲಸ್ಥಾನದ ಬೆಡಿಕಟ್ಟೆಯಲ್ಲಿ ಸುಡುಮದ್ದು ಪ್ರದರ್ಶನ ನಡೆಯಲಿದೆ. ಬಳಿಕ ದೇವರು ಕ್ಷೇತ್ರಕ್ಕೆ ನಿರ್ಗಮಿಸುವ ಯಾತ್ರೆ, ನಂತರ ದೇವಳದಲ್ಲಿ ಶ್ರೀ ಭೂತಬಲಿ ನಡೆದು ಮಹಾ ಮೂಡಪ್ಪಾಧಿವಾಸ ಹೋಮ ಜರಗಲಿದೆ. ಇದನ್ನೂ ಓದಿ: ಕಾಪು ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ

Kerala 4

ನಾಳೆ ಏನೇನು ನಡೆಯಲಿದೆ?: ಏಪ್ರಿಲ್‌ 6ರಂದು ನಾಳೆ ಬೆಳಿಗ್ಗೆ 6.20ಕ್ಕೆ ಕವಾಟೋದ್ಘಾಟನೆ, ಅಪೂಪ ಪರ್ವತದ ಮಧ್ಯದಿಂದ ಮೂಡಿ ಬರುವ ಬೊಡ್ಡಜ್ಜ ಶ್ರೀ ಮಧೂರು ಸಿದ್ಧಿವಿನಾಯಕ ದೇವರ ದಿವ್ಯದರ್ಶನ, ವಿಶೇಷಾಭಿಷೇಕ, ಪ್ರಸನ್ನಪೂಜೆ, ಅಪೂಪಪ್ರಸಾದ ವಿತರಣೆ ಬಳಿಕ 128 ಕಾಯಿ ಅಷ್ಟದ್ರವ್ಯ ಮಹಾಗಣಪತಿಯಾಗ, ಮಹಾಪೂಜೆ, ಸಂಜೆ 6ಕ್ಕೆ ಜಳಕದ ಬಲಿ, ಕಟ್ಟೆಪೂಜೆ, ಶ್ರೀ ದೇವರ ಕೆರೆಯಲ್ಲಿ ಅವಭೃತ ಸ್ನಾನ, ದರ್ಶನ ಬಲಿ, ರಾಜಾಂಗಣ ಪ್ರಸಾದ ಬಳಿಕ ಧ್ವಜಾವರೋಹಣ ನಡೆಯಲಿರುವುದು.

ಅಪ್ಪ ತಯಾರಿ ಜವಾಬ್ದಾರಿ: ಈ ಬಾರಿ ಮಧೂರಿನ ದೇವನರ್ತಕ ಧನಂಜಯರಿಗೆ ಮೂಡಪ್ಪ ಅಪ್ಪ ಸೇವಾ ನಿರ್ಮಾಣ ಜವಾಬ್ದಾರಿ ವಹಿಸಲಾಗಿದೆ. ಇವರು ಮಧೂರಿನ ಪಡು ಕಕ್ಕೆಪ್ಪಾಡಿ ಮನೆಯವರು. ಈ ಹಿಂದೆ 1962ರಲ್ಲಿ ಮಧೂರಿನಲ್ಲಿ ನಡೆದ ಮೂಡಪ್ಪ ಸೇವೆ ಮತ್ತು 1992ರ ಮೂಡಪ್ಪ ಸೇವೆಯಲ್ಲಿ ಆ ಕಾಲದಲ್ಲಿ ಪ್ರಸಿದ್ಧ ದೇವನರ್ತಕರಾಗಿದ್ದ ಪಡುಕಕ್ಕೆಪ್ಪಾಡಿ ರಾಮಕೃಷ್ಣ ಭಟ್ರ ಪುತ್ರ.

Kerala 6

ಏಪ್ರಿಲ್‌ 6 ಭಾನುವಾರವಾಗಿರುವ ಹಿನ್ನೆಲೆಯಲ್ಲಿ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆಯಿದೆ. ಇಂದು ಕೂಡಾ ದೇವಳದಲ್ಲಿ ಭಾರೀ ಜನಸಂದಣಿಯಿದ್ದು, ಉಳಿಯತ್ತಡ್ಕದಲ್ಲೇ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಏರಿಕೆಯಾಗುತ್ತಿದ್ದ ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

TAGGED:Ganapathi UtsavakasaragodMadhur TempleSiddhi Vinayaka Templeಕಾಸರಗೋಡುಗಣಪತಿ ಉತ್ಸವಮಧೂರು ದೇವಸ್ಥಾನ
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Khawaja Asif Benjamin Netanyahu
Latest

ಬೆಂಜಮಿನ್ ನೆತನ್ಯಾಹು ಅಪಹರಿಸಿ – ಅಮೆರಿಕ, ಟರ್ಕಿಗೆ ಪಾಕ್ ಒತ್ತಾಯ

Public TV
By Public TV
3 minutes ago
Yeshwanthpur Flyover Mini Tempo Accident
Bengaluru City

ಫ್ಲೈಓವರ್ ಡಿವೈಡರ್‌ಗೆ ಗುದ್ದಿದ ಮಿನಿ ಟೆಂಪೋ – ತಪ್ಪಿದ ಅನಾಹುತ

Public TV
By Public TV
35 minutes ago
HDK 3
Bengaluru City

ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್? – ಅಭಿಮಾನಿಗಳಿಂದ ʻDaddy is homeʼ ಎಐ ವಿಡಿಯೋ ರಿಲೀಸ್‌!

Public TV
By Public TV
37 minutes ago
Hubballi BJP Worker Undressed Case CID
Dharwad

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ – ಪ್ರಕರಣ ಸಿಐಡಿಗೆ ವಹಿಸಲು ಸರ್ಕಾರ ಚಿಂತನೆ

Public TV
By Public TV
1 hour ago
Chamarajanagar 2
Chamarajanagar

ಚಾಮರಾಜನಗರ | 7 ಗ್ರಾಮಗಳ ಜನರ ನಿದ್ದೆಗೆಡಿಸಿದ್ದ ತಾಯಿ ಹುಲಿ ಸೆರೆ!

Public TV
By Public TV
1 hour ago
Chikkaballapura 2 2
Chikkaballapur

ಕಾಡುಹಂದಿಗೆ ಹಾಕಿದ್ದ ಬಲೆಗೆ ಸಿಲುಕಿ ಅಸ್ವಸ್ಥ – ಒದ್ದಾಡಿ ಪ್ರಾಣ ಬಿಟ್ಟ ಚಿರತೆ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?