Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಧ್ಯಾತ್ಮಿಕ ಶಕ್ತಿ ನೀಡುವ ಶ್ರೀರಾಮ ದೇವಾಲಯಗಳಿವು…!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಆಧ್ಯಾತ್ಮಿಕ ಶಕ್ತಿ ನೀಡುವ ಶ್ರೀರಾಮ ದೇವಾಲಯಗಳಿವು…!

Karnataka

ಆಧ್ಯಾತ್ಮಿಕ ಶಕ್ತಿ ನೀಡುವ ಶ್ರೀರಾಮ ದೇವಾಲಯಗಳಿವು…!

Public TV
Last updated: April 6, 2025 7:27 am
Public TV
Share
4 Min Read
Sri Rama
SHARE

ಭಾರತೀಯ ಸಂಸ್ಕೃತಿಯ ಬುನಾದಿಯೇ ರಾಮಾಯಣ ಮಹಾಕಾವ್ಯ. ಯುಗಯುಗಾಂತರಗಳಿಂದ ಧರ್ಮದ ಬೇರಾಗಿ, ಜನಪದ ಜೀವನ ಸೂತ್ರವಾಗಿ, ಭರತಖಂಡದ ಮಾರ್ಗದರ್ಶಿಯಾಗಿದೆ. ರಾಮನ ಆದರ್ಶ, ಲಕ್ಷ್ಮಣನ ತ್ಯಾಗ, ಸೀತೆಯ ನಿಷ್ಠೆ, ಹನುಮಂತನ ಸ್ವಾಮಿ ಭಕ್ತಿ, ರಾಮರಾಜ್ಯದ ಕನಸುಗಳು ಇಂದಿಗೂ ಭಾರತೀಯ ವಿಚಾರಧಾರೆಯ ಸ್ಪೂರ್ತಿಸೆಲೆಯಾಗಿದೆ.

ನೀವು ಭಾರತದ ಯಾವುದೇ ಮೂಲೆಗೆ ಹೋದರೂ ರಾಮ ಎನ್ನುವ ಹೆಸರನ್ನು ಕೇಳಬಹುದು. ಯಾಕೆಂದರೆ ಆ ಹೆಸಡರಿನ ದೇವನಿಗೆ ಅಷ್ಟೊಂದು ಮಹತ್ವವಿದೆ ಮತ್ತು ಭಕ್ತರಿದ್ದಾರೆ. ಭಗವಾನ್ ರಾಮನು ವಿಷ್ಣುವಿನ 7ನೇ ಅವತಾರ ಎಂಬುದು ಪುರಾಣಗಳ ಉಲ್ಲೇಖ ಮತ್ತು ಪ್ರಪಂಚದಾದ್ಯಂತದ ಹಿಂದೂಗಳಿಂದ ಪೂಜಿಸಲ್ಪಡುವ ದೇವ. ರಾಮನು ಅತ್ಯಂತ ಶಕ್ತಿಶಾಲಿ ಮತ್ತು ಬುದ್ಧಿವಂತ ರಾಕ್ಷಸನಾದ ರಾವಣನನ್ನು ಸೋಲಿಸಿದನು ಮತ್ತು ಅವನ ದುಷ್ಟತನದಿಂದ ನಮ್ಮನ್ನು ರಕ್ಷಿಸಿದನು. ಆದ್ದರಿಂದಲೇ ರಾಮನು ಭಾರತದ ದಿವ್ಯ ಭೂಮಿಯ ಪ್ರತಿಯೊಬ್ಬರ ಹೃದಯದಲ್ಲೂ, ಪ್ರತಿಯೊಂದು ಮೂಲೆಯಲ್ಲೂ ನೆಲೆಸಿದ್ದಾನೆ. ಆದ್ದರಿಂದಲೇ ಭಾರತದ ಪ್ರತಿಯೊಂದು ಸ್ಥಳದಲ್ಲೂ ಒಂದಿಲ್ಲೊಂದು ರೂಪದಲ್ಲಿ ಶ್ರೀರಾಮನ ದೇವಾಲಯಗಳನ್ನು ಕಾಣುತ್ತೇವೆ. ಆಧ್ಯಾತ್ಮಿಕ ಅನುಭವ ಪಡೆಯಲು ಭಯಸುವವರು ಶ್ರೀರಾಮನವಮಿಯಂದು ರಾಮನ ದೇವಾಲಯಗಳಿಗೆ ಭೇಟಿ ನೀಡಿ ಸಂತೃಪ್ತಿ ಪ್ರಾಪ್ತಿ ಮಾಡಿಕೊಳ್ಳುತ್ತಾರೆ. ಇನ್ನೂ ಕೆಲವರು ಮನೆಯಲ್ಲೇ ಶ್ರೀರಾಮನ ಭಜನೆ, ಭಕ್ತಿ ಗೀತೆಗಳನ್ನು ಹಾಡಿ ತಮ್ಮ ಭಕ್ತಿಯನ್ನ ಸೂಚಿಸುತ್ತಾರೆ. ಹಾಗಾದ್ರೆ ಕರ್ನಾಟಕವೂ ಸೇರಿದಂತೆ ದೇಶದಲ್ಲಿ ಆಧ್ಯಾತ್ಮಿಕ ಶಕ್ತಿಗೆ ಹೆಸರು ವಾಸಿಯಾಗಿರುವ ದೇವಾಲಯಗಳ ಬಗ್ಗೆ ತಿಳಿಯೋಣ..

AYODHYA

ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರ
ಅಯೋಧ್ಯೆಯಲ್ಲಿರುವ ರಾಮಮಂದಿರವು ಯಾವಾಗಲೂ ಹಿಂದೂಗಳಿಗೆ ಅತ್ಯಂತ ಶ್ರೇಷ್ಠವಾದ ಸ್ಥಳವಾಗಿದೆ. ಏಕೆಂದರೆ ಇದು ರಾಮನ ಜನ್ಮಸ್ಥಳವಾದ ʻರಾಮ ಜನ್ಮ ಭೂಮಿ’ ಎಂದು ಹೇಳಲಾಗುತ್ತದೆ. ಫೈಜಾಬಾದ್ ಜಿಲ್ಲೆಯ ಸರಯು ನದಿಯ ದಡದಲ್ಲಿರುವ ಈ ರಾಮಮಂದಿರವು ಹಿಂದೂಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಪ್ರತಿ ವರ್ಷ ಸಾವಿರಾರು ಭಕ್ತರು ತಮ್ಮ ಆದರ್ಶ ರಾಜ ಶ್ರೀರಾಮ ಜನಿಸಿದ ಸ್ಥಳವನ್ನು ನೋಡಲು ಈ ದೈವಿಕ ಭೂಮಿಗೆ ಬರುತ್ತಾರೆ. ಅದರಲ್ಲೂ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಬಳಿಕ ಇಲ್ಲಿಗೆ ಭೇಟಿ ನೀಡುವ ಶ್ರೀರಾಮಭಕ್ತರ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ.

Triprayar Kerala
​ತ್ರಿಪ್ರಯಾರ್ ಶ್ರೀ ರಾಮ ದೇವಸ್ಥಾನ, ಕೇರಳ​

​ತ್ರಿಪ್ರಯಾರ್ ಶ್ರೀ ರಾಮ ದೇವಸ್ಥಾನ, ಕೇರಳ​
ತ್ರಿಪ್ರಯಾರ್ ಶ್ರೀರಾಮ ದೇವಾಲಯವು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿದೆ. ಈ ರಾಮ ಮಂದಿರವು ಇಲ್ಲಿ ಸ್ಥಾಪಿಸಲಾದ ವಿಗ್ರಹದ ಹಿಂದೆ ಬಹಳ ಆಕರ್ಷಕವಾದ ಕಥೆಯನ್ನು ಹೊಂದಿದೆ. ತ್ರಿಪ್ರಯಾರ್‌ನಲ್ಲಿ ಇರಿಸಲಾಗಿರುವ ವಿಗ್ರಹವನ್ನು ಭಗವಾನ್ ವಿಷ್ಣುವಿನ ಅವತಾರವೆಂದು ಪರಿಗಣಿಸಲಾದ ಶ್ರೀಕೃಷ್ಣನು ಪೂಜಿಸಲು ಬಳಸುತ್ತಿದ್ದನೆಂದು ನಂಬಲಾಗಿದೆ. ಈ ವಿಗ್ರಹವು ಒಮ್ಮೆ ಸಮುದ್ರದ ಪಾಲಾಗಿತ್ತು. ಆದರೆ, ಕೇರಳದ ಮೀನುಗಾಗರರಿಗೆ ಸಿಕ್ಕಿ ಮತ್ತೆ ಇದನ್ನು ಮರು ಸ್ಥಾಪನೆ ಮಾಡಲಾಗಿದೆ. ಈ ಆಕರ್ಷಕವಾದ ದೇವಾಲಯದಲ್ಲಿ ನೀವು ಆಸಕ್ತಿದಾಯಕ ಶಿಲ್ಪಗಳು ಮತ್ತು ಮರದ ಕೆತ್ತನೆಗಳನ್ನು ಕಾಣಬಹುದು, ಇದು ಭಾರತದ ಅತ್ಯುತ್ತಮ ರಾಮ ದೇವಾಲಯಗಳಲ್ಲಿ ಒಂದಾಗಿದೆ. ತ್ರಿಪ್ರಯಾರ್‌ಗೆ ಭೇಟಿ ನೀಡುವುದರಿಂದ ನಿಮ್ಮ ಸುತ್ತಮುತ್ತಲಿನ ಎಲ್ಲಾ ನಕಾರಾತ್ಮಕ ಶಕ್ತಿಗಳು ದೂರಾಗುತ್ತದೆ ಎನ್ನುವ ನಂಬಿಕೆ ಈಗಲೂ ಜನರಿಗೆ ಇದೆ.

Kala Rama Mandir Nasic
ನಾಸಿಕ್‌ನ ​ಕಲಾರಾಮ ಮಂದಿರ

ನಾಸಿಕ್‌ನ ​ಕಲಾರಾಮ ಮಂದಿರ
ನಾಸಿಕ್‌ನ ಕಲಾರಾಮ ಮಂದಿರವು ಮಹಾರಾಷ್ಟ್ರದ ನಾಸಿಕ್‌ನ ಪಂಚವಟಿ ಪ್ರದೇಶದಲ್ಲಿ ನೆಲೆಗೊಂಡಿರುವ ಭಾರತದ ಒಂದು ಅದ್ಭುತವಾದ ರಾಮಮಂದಿರವಾಗಿದೆ. ಕಲಾರಾಮ ಎಂದರೆ ‘ಕಪ್ಪು ರಾಮ’ ಎಂದರ್ಥ ಮತ್ತು ರಾಮನ 2 ಅಡಿ ಎತ್ತರದ ಕಪ್ಪು ಪ್ರತಿಮೆಯಿಂದಾಗಿ ಈ ದೇವಾಲಯಕ್ಕೆ ಈ ಹೆಸರು ಬಂದಿದೆ. ಸೀತಾದೇವಿ ಮತ್ತು ಲಕ್ಷ್ಮಣನ ವಿಗ್ರಹಗಳನ್ನು ಸಹ ಇಲ್ಲಿ ಸ್ಥಾಪಿಸಲಾಗಿದೆ. ರಾಮನನ್ನು 14 ವರ್ಷಗಳ ಕಾಲ ವನವಾಸಕ್ಕೆ ಕಳುಹಿಸಿದಾಗ, ಹತ್ತನೇ ವರ್ಷದ ನಂತರ, ಅವನು ಸೀತೆ ಮತ್ತು ಲಕ್ಷ್ಮಣನೊಂದಿಗೆ ಪಂಚವಟಿಯಲ್ಲಿ ಗೋದಾವರಿ ನದಿಯ ಪಕ್ಕದಲ್ಲಿ ವಾಸಿಸಲು ಬಂದಿದ್ದನು ಎಂದು ನಂಬಲಾಗಿದೆ. ಒಮ್ಮೆ ಕನಸಿನಲ್ಲಿ ಸರ್ದಾರ್‌ ರಂಗರೂ ಓಧೇಕರ್‌ ಗೋದಾವರಿ ನದಿಯಲ್ಲಿ ಕಪ್ಪು ಕಲ್ಲಿನ ದೃಶ್ಯವನ್ನು ನೋಡುತ್ತಾರೆ. ಮರುದಿನ ನದಿಯಿಂದ ಆ ಕಪ್ಪು ಕಲ್ಲನ್ನು ತೆಗೆದು ಕಲಾರಾಮ ರಾಮ ಮಂದಿರಲ್ಲಿ ನಿರ್ಮಿಸಿದರು.

Telangana Sitha Ramaswamy
ತೆಲಂಗಾಣದ ಸೀತಾ ರಾಮಚಂದ್ರಸ್ವಾಮಿ ದೇವಸ್ಥಾನ

ತೆಲಂಗಾಣದ ಸೀತಾ ರಾಮಚಂದ್ರಸ್ವಾಮಿ ದೇವಸ್ಥಾನ
ಸೀತಾ ರಾಮಚಂದ್ರಸ್ವಾಮಿ ದೇವಾಲಯವು ಭಾರತದ ಅತ್ಯಂತ ಪ್ರಸಿದ್ಧವಾದ ರಾಮಮಂದಿರಗಳಲ್ಲಿ ಒಂದಾಗಿದೆ. ಲಂಕೆಯಿಂದ ಸೀತೆಯನ್ನು ಮರಳಿ ಕರೆತರಲು ರಾಮನು ಗೋದಾವರಿ ನದಿಯನ್ನು ದಾಟಿದ ಮಹತ್ವಪೂರ್ಣ ಇತಿಹಾಸವನ್ನು ಹೊಂದಿದೆ. ದೇವಾಲಯದ ಒಳಗೆ ಪ್ರತಿಷ್ಠಾಪಿಸಲಾದ ವಿಗ್ರಹವು ತ್ರಿಭಂಗನ ಭಂಗಿಯಲ್ಲಿದೆ. ಭಗವಾನ್ ರಾಮನು ತನ್ನ ಕೈಯಲ್ಲಿ ಧನಸ್ಸು ಮತ್ತು ಬಾಣವನ್ನು ಹಿಡಿದಿದ್ದಾನೆ ಮತ್ತು ಸೀತಾ ದೇವಿಯು ಕೈಯಲ್ಲಿ ಕಮಲವನ್ನು ಹಿಡಿದು ಅವನ ಪಕ್ಕದಲ್ಲಿ ನಿಂತಿದ್ದಾಳೆ.

Ramaraja Temple Madhya pradesh
​ರಾಮರಾಜ ದೇವಾಲಯ, ಮಧ್ಯಪ್ರದೇಶ

​ರಾಮರಾಜ ದೇವಾಲಯ, ಮಧ್ಯಪ್ರದೇಶ
ರಾಮರಾಜ ದೇವಾಲಯವು ಭಾರತದಲ್ಲಿ ರಾಮನನ್ನು ದೇವರಂತೆ ಅಲ್ಲ, ರಾಜನಾಗಿ ಪೂಜಿಸುವ ಏಕೈಕ ದೇವಾಲಯವಾಗಿದೆ. ಈ ರಾಮಮಂದಿರವನ್ನು ಭವ್ಯವಾದ ಕೋಟೆಯಾಗಿ ನಿರ್ಮಿಸಲಾಗಿದ್ದು, ಜೊತೆಗೆ ಪೊಲೀಸರು ದೇವಾಲಯದ ಕಾವಲುಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿ ದಿನ ರಾಜ ರಾಮನಿಗೆ ಆಯುಧ ನಮಸ್ಕಾರವನ್ನು ನೀಡಲಾಗುತ್ತದೆ. ಇದು ಭಾರತದ ಅತ್ಯುತ್ತಮ ರಾಮ ದೇವಾಲಯಗಳಲ್ಲಿ ಒಂದಾಗಿದೆ.

photo0jpg
ಧರ್ಮಸ್ಥಳ ರಾಮ ಮಂದಿರ

ಧರ್ಮಸ್ಥಳ ರಾಮ ಮಂದಿರ
ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ, ದೇವಾಲಯದ ತಾಣವು ಸಾಟಿಯಿಲ್ಲದ ನೈಸರ್ಗಿಕ ಸೌಂದರ್ಯವನ್ನು ಹೊಂದಿದೆ. ಪುರಾಣದ ಪ್ರಕಾರ, ಭಗವಾನ್ ರಾಮನು ‘ಸೀತಾನ್ವೇಷಣೆ ’ ಅಂದರೆ ಸೀತೆಯನ್ನು ಹುಡುಕುತ್ತಿದ್ದ ಸಮಯದಲ್ಲಿ ಸ್ವಲ್ಪ ಕಾಲ ಇಲ್ಲಿಯೇ ಇದ್ದರು. ಶ್ರೀಮಂತ ವಿನ್ಯಾಸ ಕಲಾತ್ಮಕ ಸೌಂದರ್ಯದಿಂದ ಸಮೃದ್ಧವಾಗಿರುವ ಈ ದೇವಾಲಯದಲ್ಲಿ ತಮಿಳುನಾಡಿನ ‘ವಾಸ್ತು’, ರಾಜಸ್ಥಾನದ ಶ್ರೀಮಂತ ಗ್ರಾನೈಟ್ ಕಲ್ಲುಗಳು, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ, ತಮಿಳುನಾಡು ಮತ್ತು ರಾಜಸ್ಥಾನದ ಶಿಲ್ಪಿಗಳು ಕೆತ್ತಿದ ಸುಂದರ ವಿನ್ಯಾಸಗಳಿವೆ.

TAGGED:Rama NavamiRama Templesri ramaರಾಮ ದೇವಾಲಯರಾಮನವಮಿಶ್ರೀರಾಮ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
3 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
3 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
3 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
3 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
4 hours ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?