ನವದೆಹಲಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯ ಮತಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ. ಹೀಗಾಗಿ ಬಿಜೆಪಿ ಗೆಲುವು ಬಹುತೇಕ ಖಚಿತವಾಗಿದ್ದು, ಆದ್ರೆ ಈ ಗೆಲುವನ್ನು ಆಚರಿಸದೇ ಇರಲು ಬಿಜೆಪಿ ನಿರ್ಧರಿಸಿದೆ.
ಕಳೆದ ಸೋಮವಾರ ಸುಕ್ಮಾದಲ್ಲಿ ಯೋಧರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು. ಈ ವೇಳೆ ಸುಮಾರು 25 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಹೀಗಾಗಿ ಬಿಜೆಪಿಗೆ ದೊರೆತ ಜಯವನ್ನು ಆಚರಿಸಲ್ಲ ಅಂತಾ ದೆಹಲಿಯ ಬಿಜೆಪಿ ಮುಖಂಡ ಮನೋಜ್ ತಿವಾರಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ದೆಹಲಿಯಲ್ಲಿ ಸಿಕ್ಕ ಈ ವಿಜಯವನ್ನು ಮಡಿದ ಹುತಾತ್ಮರಿಗೆ ಗೌರವ ಸಲ್ಲಿಸುವ ಮೂಲಕ ಸೈನಿಕರಿಗೆ ಅರ್ಪಿಸುವುದಾಗಿ ಅವರು ಹೇಳಿದ್ದಾರೆ.
- Advertisement -
ಸದ್ಯ ಒಟ್ಟು 270 ಸ್ಥಾನಗಳಲ್ಲಿ ಬಿಜೆಪಿ 180ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮೂರನೇ ಬಾರಿ ಮೂರು ಪಾಲಿಕೆಯ ಗದ್ದುಗೆಯನ್ನು ಏರಲಿದೆ.
- Advertisement -
We dedicate this win to CRPF jawans who lost their lives in #sukmaattack: Manoj Tiwari, BJP Delhi Chief #DelhiMcdElection2017 pic.twitter.com/midKkyNAVL
— ANI (@ANI_news) April 26, 2017