Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ

Public TV
Last updated: April 12, 2025 3:18 pm
Public TV
Share
2 Min Read
Stalin
SHARE

ಚೆನ್ನೈ: ತಮಿಳುನಾಡು (Tamil Nadu) ಸರ್ಕಾರವು ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನು ಅಧಿಕೃತವಾಗಿ ಜಾರಿಗೊಳಿಸಿದೆ. ಸುಪ್ರೀಂ ಕೋರ್ಟ್‌ನ (Supreme Court) ಐತಿಹಾಸಿಕ ತೀರ್ಪಿನ ಆಧಾರದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ತಮಿಳುನಾಡು ರಾಜ್ಯ ವಿಧಾನಸಭೆಯು 2020ರ ಜನವರಿಯಿಂದ 2023ರ ಏಪ್ರಿಲ್‌ವರೆಗೆ 12 ಮಸೂದೆಗಳನ್ನು ಅಂಗೀಕರಿಸಿತ್ತು. ಈ ಮಸೂದೆಗಳು ರಾಜ್ಯದ ವಿಶ್ವವಿದ್ಯಾಲಯಗಳ ಆಡಳಿತವನ್ನು ಗವರ್ನರ್‌ರಿಂದ ರಾಜ್ಯ ಸರ್ಕಾರಕ್ಕೆ ವರ್ಗಾಯಿಸುವ ಗುರಿಯನ್ನು ಹೊಂದಿದ್ದವು. ಆದರೆ, ಗವರ್ನರ್ ಆರ್.ಎನ್.ರವಿ ಈ ಮಸೂದೆಗಳಿಗೆ ಸಮ್ಮತಿ ನೀಡದೆ ಮೂರು ವರ್ಷಗಳಿಗೂ ಹೆಚ್ಚು ಕಾಲ ವಿಳಂಬ ಮಾಡಿದರು.

Droupadi Murmu

2023ರ ನವೆಂಬರ್‌ನಲ್ಲಿ ಗವರ್ನರ್ 10 ಮಸೂದೆಗಳಿಗೆ ಸಮ್ಮತಿಯನ್ನು ನಿರಾಕರಿಸಿದರು. ಎರಡನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದರು. ರಾಜ್ಯ ವಿಧಾನಸಭೆಯು ಈ 10 ಮಸೂದೆಗಳನ್ನು ವಿಶೇಷ ಅಧಿವೇಶನದಲ್ಲಿ ಮತ್ತೆ ಅಂಗೀಕರಿಸಿ ಗವರ್ನರ್‌ಗೆ ಕಳುಹಿಸಿತಾದರೂ, ಅವರು ಇವುಗಳನ್ನು ರಾಷ್ಟ್ರಪತಿಗಳಿಗೆ ರವಾನಿಸಿದರು. ರಾಷ್ಟ್ರಪತಿಗಳು ಒಂದು ಮಸೂದೆಗೆ ಸಮ್ಮತಿ ನೀಡಿದರು, ಏಳನ್ನು ತಿರಸ್ಕರಿಸಿದರು ಮತ್ತು ಎರಡನ್ನು ಪರಿಗಣನೆಗೆ ತೆಗೆದುಕೊಳ್ಳಲಿಲ್ಲ.

ಈ ವಿಳಂಬ ಮತ್ತು ಕ್ರಮಗಳನ್ನು ಪ್ರಶ್ನಿಸಿ, ತಮಿಳುನಾಡು ಸರ್ಕಾರವು 2023ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಗವರ್ನರ್‌ರ ಕ್ರಮಗಳು ಸಂವಿಧಾನದ 200ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಸರ್ಕಾರ ವಾದಿಸಿತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಜೆ.ಬಿ. ಪಾರ್ಡಿವಾಲಾ ಮತ್ತು ಆರ್. ಮಹದೇವನ್ ಅವರ ದ್ವಿಸದಸ್ಯ ಪೀಠವು, ಗವರ್ನರ್ ಆರ್.ಎನ್. ರವಿ ಅವರ ಕ್ರಮವನ್ನು ಕಾನೂನುಬಾಹಿರ ಮತ್ತು ತಪ್ಪು ಎಂದು ಘೋಷಿಸಿತು.

Tamil Nadu Governor R. N Ravi

ರಾಜ್ಯಪಾಲರಿಗೆ ಮಸೂದೆಗಳನ್ನು ಅನಿರ್ದಿಷ್ಟವಾಗಿ ತಡೆಹಿಡಿಯುವ ‘ಪಾಕೆಟ್ ವೀಟೋ’ ಅಧಿಕಾರವಿಲ್ಲ. ಸಂವಿಧಾನದಲ್ಲಿ ಇಂತಹ ಆಯ್ಕೆಯನ್ನು ಒದಗಿಸಲಾಗಿಲ್ಲ ಎನ್ನುವ ಮೂಲಕ ರಾಜ್ಯಪಾಲರ ಕಾರ್ಯವಿಧಾನಕ್ಕೆ ಸ್ಪಷ್ಟ ಸಮಯ ಮಿತಿಗಳನ್ನು ವಿಧಿಸಿತು. ಸಮ್ಮತಿಯನ್ನು ನಿರಾಕರಿಸಲು ಅಥವಾ ರಾಷ್ಟ್ರಪತಿಗಳಿಗೆ ಕಳುಹಿಸಲು ಒಂದು ತಿಂಗಳು, ಸಮ್ಮತಿಯನ್ನು ನಿರಾಕರಿಸಲು ಮತ್ತು ವಿಧಾನಸಭೆಗೆ ಮರಳಿಸಲು ಮೂರು ತಿಂಗಳು ಹಾಗೂ ಮರು-ಅಂಗೀಕೃತ ಮಸೂದೆಗೆ ಸಮ್ಮತಿ ನೀಡಲು ಒಂದು ತಿಂಗಳು ಸಮಯ ನಿಗದಿ ಮಾಡಿತು.

ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವಾದ ಆರ್ಟಿಕಲ್ 142ನ್ನು ಬಳಸಿಕೊಂಡು, ಈ 10 ಮಸೂದೆಗಳು ರಾಜ್ಯ ವಿಧಾನಸಭೆಯಿಂದ ಮರು-ಅಂಗೀಕರಿಸಿದ ದಿನಾಂಕದಿಂದಲೇ ಗವರ್ನರ್‌ರ ಸಮ್ಮತಿಯನ್ನು ಪಡೆದಿರುವಂತೆ ಘೋಷಿಸಿತು. ರಾಷ್ಟ್ರಪತಿಗಳಿಂದ ತೆಗೆದುಕೊಂಡ ಯಾವುದೇ ಕ್ರಮಗಳನ್ನು ಅಸಿಂಧು ಎಂದು ಘೋಷಿಸಲಾಯಿತು.

ಸುಪ್ರೀಂ ಕೋರ್ಟ್ ಆದೇಶದ ಅನ್ವಯ ತಮಿಳುನಾಡು ಸರ್ಕಾರವು ಈ 10 ಕಾಯ್ದೆಗಳನ್ನು ಸರ್ಕಾರಿ ಗೆಜೆಟ್‌ನಲ್ಲಿ ಅಧಿಸೂಚಿಸಿತು. ಇದರಿಂದಾಗಿ ಅವು ಕಾನೂನು ರೂಪವನ್ನು ಪಡೆದವು. ತಮಿಳುನಾಡು ವೆಟರಿನರಿ ಮತ್ತು ಪಶು ವಿಜ್ಞಾನ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ, ತಮಿಳುನಾಡು ಮೀನುಗಾರಿಕೆ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ, ಅಣ್ಣಾ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ ಸೇರಿ ಹತ್ತು ಕಾಯ್ದೆಗಳು ಕಾನೂನಾಗಿ ಜಾರಿಯಾದವು. ಇದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಬೆಳವಣಿಗೆಯಾಗಿದೆ.

Share This Article
Facebook Whatsapp Whatsapp Telegram
Previous Article Earthquake ಪಾಕಿಸ್ತಾನದಲ್ಲಿ 5.3 ತೀವ್ರತೆಯ ಭೂಕಂಪ – ಜಮ್ಮು-ಕಾಶ್ಮೀರದಲ್ಲೂ ಭೂಮಿ ಕಂಪಿಸಿದ ಅನುಭವ
Next Article Tokay Gecko Lizards ಒಂದಕ್ಕೆ 60 ಲಕ್ಷ – 11 ಅಪರೂಪದ ಹಲ್ಲಿಗಳ ಕಳ್ಳಸಾಗಾಣಿಕೆಗೆ ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್‌!

Latest Cinema News

Jana Nayagan Thalapathy Vijay
ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್ – ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ?
Cinema Latest Sandalwood
Rani Mukerji
ಪ್ರಶಸ್ತಿ ಸ್ವೀಕರಿಸಲು ಬಂದಿದ್ದ ರಾಣಿ ಮುಖರ್ಜಿ ಕತ್ತಲ್ಲಿ ಮಗಳ ಹೆಸರಿನ ಚೈನ್‌
Cinema Latest National Top Stories
Biggboss
ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್
Cinema Latest Top Stories TV Shows
S.L.Bhyrappa cinema
ಎಸ್.ಎಲ್.ಭೈರಪ್ಪಗೆ ಸಿನಿಮಾ ನಂಟು – ಕಾದಂಬರಿ ಆಧರಿತ ಸಿನಿಮಾಗಳಲ್ಲಿ ವಿಷ್ಣು ಸೇರಿ ಖ್ಯಾತ ನಟರ ಅಭಿನಯ
Cinema Latest Sandalwood Top Stories
SL Bhyrappa And Anant Nag
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Chaitanya Baghel
Crime

ಛತ್ತೀಸ್‌ಗಢ ಮದ್ಯ ಹಗರಣ | ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಎಸಿಬಿ ಕಸ್ಟಡಿಗೆ

18 minutes ago
Chris Wright
Latest

ನಾನು ಭಾರತದ ದೊಡ್ಡ ಅಭಿಮಾನಿ – ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಮತ್ತೆ ಅಮೆರಿಕ ಒತ್ತಾಯ

21 minutes ago
Srirangapatna Dasara 1
Districts

ಇಂದಿನಿಂದ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ ಉತ್ಸವ

55 minutes ago
Vijayapura Doni river bridge flooded Biker drowned while trying to cross
Districts

ವಿಜಯಪುರ | ಡೋಣಿ ನದಿ ಸೇತುವೆ ಜಲಾವೃತ – ದಾಟಲು ಯತ್ನಿಸಿದ ಬೈಕ್ ಸವಾರ ನೀರುಪಾಲು

1 hour ago
S L Bhyrappa 1
Bengaluru City

ಬದುಕಿನ `ಯಾನ’ ಮುಗಿಸಿದ ಭೈರಪ್ಪ – ನಾಳೆ ಮೈಸೂರಲ್ಲಿ ಅಂತ್ಯಕ್ರಿಯೆ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?