ಏ. 26, 27ಕ್ಕೆ ಕರ್ನಾಟಕದ ಅತಿ ದೊಡ್ಡ ಶೈಕ್ಷಣಿಕ ಮೇಳ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
4 Min Read
Vidhyapeeta Karnatakas biggest education expo hosted by Public TV to be held on April 27 28 2

ಗಿನ ಸ್ಪರ್ಧಾ ಜಗತ್ತಿನಲ್ಲಿ ಶೈಕ್ಷಣಿಕ ವಿಷಯಗಳ ವಿಸ್ತಾರ ಹೆಚ್ಚುತ್ತಲೇ ಇದೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಳ್ಳೆಯ ಶಿಕ್ಷಣ ಕೊಡಿಸಬೇಕು ಎಂಬುದು ಪ್ರತಿಯೊಬ್ಬ ಪೋಷಕರ ಆಶಯವಾಗಿರುತ್ತದೆ. ಆದರೆ ನಿರ್ಧಾರಗಳು ಸ್ಪಷ್ಟವಾಗುತ್ತಿಲ್ಲ. ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಮುಂದಿನ ಆಯ್ಕೆಯ ಸವಾಲುಗಳು ಹೆಚ್ಚಾಗಿವೆ. ಈ ಗೊಂದಲ ನಿವಾರಿಸಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ನಿಮ್ಮ ಪಬ್ಲಿಕ್‌ ಟಿವಿ (PUBLiC TV) ವಿದ್ಯಾಪೀಠ (Vidhyapeeta) ಶೈಕ್ಷಣಿಕ ಮೇಳವನ್ನು ಆಯೋಜಿಸಿದೆ.

ದ್ವಿತೀಯ ಪಿಯುಸಿ, ಪದವಿ ಫಲಿತಾಂಶ ಬಂದ ಮೇಲೆ ಮಕ್ಕಳನ್ನು ಯಾವ ಕಾಲೇಜಿಗೆ ಸೇರಿಸಬೇಕು? ಉತ್ತಮ ಕಾಲೇಜು ಆಯ್ಕೆ ಹೇಗೆ? ಯಾವ ಕೋರ್ಸ್‌ಗೆ ಸೇರಿಸಿದರೆ ಸೂಕ್ತ? ಪ್ರವೇಶ ಶುಲ್ಕ, ಕೋರ್ಸ್‌ಗಳ ಆಯ್ಕೆ, ಭವಿಷ್ಯದಲ್ಲಿ ಉದ್ಯೋಗಾವಕಾಶಗಳು ಹೇಗೆ ಎಂಬ ಗೊಂದಲ ಪೋಷಕರಲ್ಲಿ ಇರುವುದು ಸಹಜ. ಈ ಬಗ್ಗೆ ಸರಿಯಾದ ಮಾಹಿತಿ ನೀಡಲು ಒಂದೇ ಸೂರಿನಡಿ ಸೂಕ್ತ ವೇದಿಕೆ ಕಲ್ಪಿಸಿ ಗೊಂದಲ ನಿವಾರಿಸಲು ಪಬ್ಲಿಕ್‌ ಟಿವಿಯ 8ನೇ ಆವೃತ್ತಿಯ ವಿದ್ಯಾಪೀಠ ಶೈಕ್ಷಣಿಕ ಮೇಳ ಆಯೋಜಿಸಿದೆ. ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳವು ಇದೇ ಏಪ್ರಿಲ್‌ 26 (ಶನಿವಾರ), ಏಪ್ರಿಲ್‌ 27 (ಭಾನುವಾರ) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ (ಗೇಟ್‌ ನಂಬರ್‌ 4) ನಡೆಯಲಿದೆ.

‘ಇಂದಿನ ಕಲಿಕೆ, ನಾಳಿನ ದಾರಿ ದೀಪ’ ಎಂಬ ಘೋಷವಾಕ್ಯದೊಂದಿಗೆ ಪಬ್ಲಿಕ್‌ ಟಿವಿ ಪ್ರಸ್ತುತ ಪಡಿಸುವ AD6 Advertising ಸಹಯೋಗದಲ್ಲಿ ಆಯೋಜನೆಗೊಂಡಿರುವ ವಿದ್ಯಾಪೀಠ ಶೈಕ್ಷಣಿಕ ಮೇಳ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶವಿರುತ್ತದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಇನ್ಮುಂದೆ ಅಸ್ಸಾಮಿ ಭಾಷೆಯಲ್ಲೇ ಸರ್ಕಾರಿ ಆದೇಶ, ಸುತ್ತೋಲೆ: ಸಿಎಂ ಹಿಮಂತ ಬಿಸ್ವ ಶರ್ಮಾ

 

Vidhyapeeta Karnatakas biggest education expo hosted by Public TV to be held on April 27 28 3

120 ಕ್ಕೂ ಹೆಚ್ಚು ಸಂಸ್ಥೆಗಳು ಭಾಗಿ: ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳ (Education Expo) ವಿದ್ಯಾಪೀಠದಲ್ಲಿ ರಾಜ್ಯದ ನಾನಾ ಭಾಗಗಳ 120ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪದವಿ, ಸ್ನಾತಕೋತ್ತರ ಪದವಿ, ಕೆಸಿಇಟಿ, ನೀಟ್‌ ಮತ್ತು ಕಾಮೆಡ್‌ ಕೆ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

ಶೈಕ್ಷಣಿಕ ಮೇಳದಲ್ಲಿ ಸೆಮಿನಾರ್‌ ಸೇರಿದಂತೆ ಹಲವು ಕಾರ್ಯಕ್ರಮಗಳು ಇರಲಿವೆ. ಲಕ್ಕಿ ಡ್ರಾ ಮೂಲಕ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು.

ಲ್ಯಾಪ್‌ಟಾಪ್‌, ಬೈಸಿಕಲ್‌ ಉಡುಗೊರೆ
ವಿವಿಧ ಸ್ಪರ್ಧೆಯಲ್ಲಿ ಗೆದ್ದ ವಿಜೇತರಿಗೆ ಲ್ಯಾಪ್‌ಟಾಪ್ ಹಾಗೂ ಬೈಸಿಕಲ್‌ ಸೇರಿದಂತೆ ವಿಶೇಷ ಉಡುಗೊರೆ ನೀಡಲಾಗುವುದು. ಪ್ರತಿ ಅರ್ಧಗಂಟೆಗೆ ಅಚ್ಚರಿಯ ಉಡುಗೊರೆಗಳು ಸಿಗುತ್ತವೆ. ವಿದ್ಯಾರ್ಥಿಗಳಿಗೆ ಬಂಪರ್‌ ಬಹುಮಾನಗಳಿವೆ. ಸ್ಥಳದಲ್ಲೇ ತಕ್ಷಣ ಪ್ರವೇಶಾತಿಗೂ ಅವಕಾಶ ಇರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅಂಕಪಟ್ಟಿಯ ಫೋಟೋಕಾಪಿ ತಂದು ತೋರಿಸಿದ್ದಲ್ಲಿ ಅವರಿಗೂ ಉಡುಗೊರೆ ಸಿಗಲಿದೆ. ಇದನ್ನೂ ಓದಿ: ಚಿಲ್ಲರೆ ಹಣದುಬ್ಬರ| 2019ರ ಬಳಿಕ ಕನಿಷ್ಠ ಮಟ್ಟಕ್ಕೆ ಇಳಿಕೆ

ಗೇಮ್ಸ್‌, ಸ್ಲೋ ಸೈಕಲ್‌ ರೇಸ್‌, ಪಿಕ್‌ & ಸ್ಪೀಚ್‌ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳು ತಮ್ಮ ವಿಶೇಷ ಪ್ರತಿಭೆ ಪ್ರದರ್ಶನಕ್ಕೆ ಶೈಕ್ಷಣಿಕ ಮೇಳ ವೇದಿಕೆ ಕಲ್ಪಿಸಿದೆ.

ಪ್ಲಾಟಿನಂ ಆಯೋಜಕರು:
ಗಾರ್ಡನ್‌ ಸಿಟಿ ಯೂನಿರ್ವಸಿಟಿ, ಸಿಎಂಆರ್‌ ಯೂನಿವರ್ಸಿಟಿ, ರಾಮಯ್ಯ ಯೂನಿವರ್ಸಿಟಿ ಆಫ್‌ ಅಪ್ಲೈಡ್‌ ಸೈನ್ಸಸ್‌, ಕೇಂಬ್ರಿಡ್ಜ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಸಪ್ತಗಿರಿ ಎನ್‌ಪಿಎಸ್‌ ಯೂನಿವರ್ಸಿಟಿ, ರೇವಾ ಯೂನಿವರ್ಸಿಟಿ.

Vidhyapeeta Karnatakas biggest education expo hosted by Public TV to be held on April 27 28 1

ಗೋಲ್ಡ್‌ ಪ್ರಾಯೋಜಕರು:
ಈಸ್ಟ್‌ ಪಾಯಿಂಟ್‌ ಗ್ರೂಪ್‌ ಆಫ್‌ ಎಂಜಿನಿಯರಿಂಗ್‌, ಎಸ್‌ಜೆಬಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ದಿ ಆಕ್ಸ್‌ಫರ್ಡ್‌ ಎಜುಕೇಷನಲ್‌ ಇನ್‌ಸ್ಟಿಟ್ಯೂಟ್,‌ ಆರ್‌ಆರ್‌ ಇನ್‌ಸ್ಟಿಟ್ಯೂಷನ್ಸ್‌, ನಾಗಾರ್ಜುನ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಎಎಂಸಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌, ಈಸ್ಟ್‌ ವೆಸ್ಟ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌.

ಕ್ರಿಯೇಟಿವ್‌ ಸ್ಟಾಲ್‌ ಪಾರ್ಟ್ನರ್ಸ್‌:
ರಾಮಯ್ಯ ಇನ್‌ಸ್ಟಿಟಯೂಟ್‌ ಆಫ್‌ ಟೆಕ್ನಾಲಜಿ, ಎಸ್‌ವಿಸಿಇ (ಶ್ರೀ ವೆಂಕಟೇಶ್ವರ ಕಾಲೇಜ್‌ ಆಫ್‌ ಇಂಜಿನಿಯರಿಂಗ್) ಬೆಂಗಳೂರು, ಪ್ರೆಸಿಡೆನ್ಸಿ ಯೂನಿರ್ವಸಿಟಿ, ನ್ಯೂ ಹಾರಿಜನ್‌ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಕೆಎಲ್‌ಇ ಟೆಕ್ನಾಲಜಿ ಯೂನಿವರ್ಸಿಟಿ, ICFAI ಫೌಂಡೇಶನ್‌ ಫಾರ್‌ ಹೈಯರ್‌ ಎಜುಕೇಶನ್‌, ಪಾರುಲ್‌ ಯೂನಿವರ್ಸಿಟಿ, ಪ್ಲಾನ್‌ ಎಡು, ಫ್ಯೂಚರ್‌ ಮೆಡಿಕೊ.

ಸಿಲ್ವರ್‌ ಪ್ರಯೋಜಕರು:
ಚಾಣಕ್ಯ ಯೂನಿವರ್ಸಿಟಿ, ಪಿಇಎಸ್‌ ಯೂನಿವರ್ಸಿಟಿ, ದಯಾನಂದ ಸಾಗರ ಯೂನಿವರ್ಸಿಟಿ, ಬೃಂದಾವನ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಟ್‌, ಜಿಎಂ ಯೂನಿವರ್ಸಿಟಿ, ಎಐಎಂಎಸ್‌ ಇನ್‌ಸ್ಟಿಟ್ಯೂಟಸ್‌, ಎಬಿಬಿಎಸ್‌ ಬೆಂಗಳೂರು ಬಿ ಸ್ಕೂಲ್‌, ಕೃಪಾನಿಧಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌, ಎಸ್‌ಇಎ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್, ಸಿಟಿ ಕಾಲೇಜ್‌.

ಬ್ಯಾಂಕಿಂಗ್‌ ಪಾರ್ಟ್ನರ್‌:
ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

ಬೆವರೇಜ್‌ ಪಾರ್ಟ್‌ನರ್‌
ಬಾಯರ್ಸ್‌ ಕಾಫಿ

ಗಿಫ್ಟ್‌ ಸ್ಪಾನ್ಸರ್‌
ಜೀನಿ ಸ್ಲಿಮ್‌, ವೇಯ್ಟ್‌ ಲಾಸ್‌ & ಎನರ್ಜಿ ಬೂಸ್ಟರ್‌.

ದಿನಾಂಕ: ಏಪ್ರಿಲ್‌ 26 ಮತ್ತು 27
ಸ್ಥಳ: ಗಾಯತ್ರಿ ವಿಹಾರ, ಅರಮನೆ ಮೈದಾನ, ಬೆಂಗಳೂರು
ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 99000 60815/ 99000 60891

Share This Article