ಹಾಸನ: ವರದಕ್ಷಿಣೆ ಹಣ ತರುವಂತೆ ಪತಿ ಮನೆಯವರು ನೀಡುತ್ತಿದ್ದ ಕಿರುಕುಳ ಸಹಿಸಲಾಗದೇ ನೇಣುಬಿಗಿದುಕೊಂಡು ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ (Hassan) ಜಿಲ್ಲೆಯ ಆಲೂರು (Aluru) ತಾಲ್ಲೂಕಿನ ಕಣದಹಳ್ಳಿ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಹಲಸಿನ ಗಟ್ಟಿ ಸವಿಯಲು ಬಲು ರುಚಿ!
ನೇಣಿಗೆ ಶರಣಾದ ವಿವಾಹಿತೆಯನ್ನು ರಕ್ಷಿತಾ (21) ಎಂದು ಗುರುತಿಸಲಾಗಿದೆ.
ಹಳೇಪಾಳ್ಯ ಗ್ರಾಮದ ರಕ್ಷಿತಾ ಮೂರು ವರ್ಷದ ಹಿಂದೆ ಅದೇ ಗ್ರಾಮದ ಪುನೀತ್ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು. ಆದರೆ ವಿವಾಹದ ಬಳಿಕ ಪತಿ ಮನೆಯವರು ವರದಕ್ಷಿಣೆ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದರು. ಇದರಿಂದ ಮನನೊಂದಿದ್ದ ರಕ್ಷಿತಾ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಇದನ್ನೂ ಓದಿ: ಚಿನ್ನ, ಬೆಳ್ಳಿ ಆಯ್ತು – ಇದೀಗ 25 ಲಕ್ಷ ಬೆಲೆಬಾಳುವ 400 ಕೆಜಿ ಕೂದಲು ಕಳ್ಳತನ