Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂಗಳು ಮತಾಂತರ ಮಾಡುವಂತೆ ಬಹಿರಂಗವಾಗಿ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಹಿಂದೂಗಳು ಮತಾಂತರ ಮಾಡುವಂತೆ ಬಹಿರಂಗವಾಗಿ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ

Dakshina Kannada

ಹಿಂದೂಗಳು ಮತಾಂತರ ಮಾಡುವಂತೆ ಬಹಿರಂಗವಾಗಿ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ

Public TV
Last updated: April 20, 2025 9:54 am
Public TV
Share
4 Min Read
Chakravarthy Sulibele
SHARE

-‌ ಯಾರಾದ್ರೂ ಮತಾಂತರ ಆಗಬೇಕು ಅಂದ್ರೆ ಪ್ರೀತಿಯಿಂದ ಕರೀರಿ
– ನಮ್ಮ ಹೆಣ್ಮಕ್ಕಳಿಗೆ ಗಂಡು ಮಕ್ಕಳ ಪಕ್ಕ ಕೂರಬೇಡಿ ಅಂದಿಲ್ಲ; ಚಿಂತಕ

ಮಂಗಳೂರು: ಇತ್ತೀಚೆಗಷ್ಟೇ ʻಹಿಂದೂ ಯುವಕರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿʼ ಎಂದು ಕರೆ ನೀಡಿ ವಿವಾದಕ್ಕೀಡಾಗಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉಜಿರೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹಿಂದೂಗಳು ಮತಾಂತರ (Conversion) ಮಾಡುವಂತೆ ಬಹಿರಂಗವಾಗಿ ಕರೆ ಕೊಟ್ಟಿದ್ದಾರೆ.

ಉಜಿರೆಯ ರಾಮೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುತ್ತಾ ಮಾತನಾಡಿದ ಅವರು, ಹಿಂದೂಗಳು ಮತಾಂತರ ಮಾಡುವಂತೆ ಬಹಿರಂಗ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಎಡಪಂಥೀಯರು ಹಿಂದೂಗಳನ್ನ ಜಾತಿ, ಮತ, ಪಂಥಗಳ ಹೆಸರಿನಲ್ಲಿ ವಿಭಜಿಸುತ್ತಾರೆ: ಚಕ್ರವರ್ತಿ ಸೂಲಿಬೆಲೆ

ಇತ್ತೀಚೆಗೆ ಬಜರಂಗದಳದವರು (Bajrang Dal) ಸಂಕಲ್ಪ ತಗೊಂಡಿದ್ದಾರೆ. ಹಿಂದೂಗಳ ಸಂಖ್ಯೆ ಜಾಸ್ತಿ ಮಾಡಲು ಏನು ಐಡಿಯಾ ಇದೆ ಅಂತ ಕೇಳಿದಾಗ ಹೆಚ್ಚು ಮಕ್ಕಳನ್ನು ಮಾಡುವಂತೆ ಮನವಿ ಮಾಡಿಕೊಳ್ತೇವೆ ಅಂತ ಹೇಳಿದ್ರು. ಆದ್ರೆ ನಮ್ಮ ಜನ 2-3 ಮಕ್ಕಳನ್ನ ಮಾಡ್ತಾರೇನ್ರೀ? ನಮ್ಮ ಜನರಿಗೆ ಅವರ ಮಕ್ಕಳನ್ನು ಪಂಚರ್ ಹಾಕಲು ಕಳುಹಿಸಲು ಇಷ್ಟ ಇಲ್ಲ. ಅವರಿಗೆ ನಮ್ಮ ಮಕ್ಕಳು ಚೆನ್ನಾಗಿ ಓದಿ ಡಾಕ್ಟರ್, ಇಂಜಿನಿಯರ್ ಆಗಿ ಮಾಡಬೇಕು ಅನ್ನೋದಷ್ಟೇ ಇದೆ. ಹಾಗಾಗಿ ಓದಿಸೋ ಕೆಪಾಸಿಟಿ ಇಲ್ಲದ ಕಾರಣ ಒಂದು ಸಾಕು, ಎರಡು ಸಾಕು ಅಂತಾರೆ. ಹಾಗಾಗಿ ಸರ್ಕಾರ ನಮಗಾಗಿ ಮಾಡಿರೋ ಕಾನೂನುಗಳನ್ನು ಬಳಸಿಕೊಳ್ಳಿ ಅಂತ ಕರೆ ಕೊಟ್ಟಿದ್ದಾರೆ.

ಪೊಲೀಸರಿಗೂ ಹೇಳ್ತಾ ಇದೀನಿ, ಇದು ಸರ್ಕಾರ ಕೊಟ್ಟಿರೋ ಕಾನೂನು, ನಮ್ಮದಲ್ಲ. ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು, ಹೊಸ ಸರ್ಕಾರ ಬಂದು ಆ ಕಾನೂನು ತೆಗೆದು ಹಾಕಿತು. ಅಂದರೆ ಅದರ ಅರ್ಥ ನೀವೂ ಮತಾಂತರ ಮಾಡಬಹುದು ಅಂತ. ಸರ್ಕಾರವೇ ಧೈರ್ಯವಾಗಿ ಹೇಳಿದೆ, ಮತಾಂತರ ಮಾಡಿ ಅಂತ, ಹಾಗಿದ್ದಾಗ ನಾವು ಮಾಡಬೇಕಲ್ವಾ? ಜಗತ್ತಿನ ಯಾವ ರಾಷ್ಟ್ರದಲ್ಲೂ ಈ ರೀತಿಯ ಪರಿಸ್ಥಿತಿ ಇಲ್ಲ. ಹಾಗಾಗಿ ಮತಾಂತರ ಮಾಡಿ, ಸರ್ಕಾರವೇ ಅಧಿಕೃತವಾಗಿ ಹೇಳಿದೆ, ಮಾಡಲು ನಿಮಗೆ ಕಷ್ಟ ಏನು? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

ಮತಾಂತರ ಮಾಡೋದು ಕಷ್ಟ ಏನಿಲ್ಲ, ನಾನು ಜಗತ್ತಿನ ಅತ್ಯಂತ ಶ್ರೇಷ್ಠ ಹಿಂದೂ ಧರ್ಮಕ್ಕೆ ಸೇರಿದವನು. ಜಗತ್ತಿನಲ್ಲಿ ಅನೇಕ ಮತ ಪಂಥಗಳಿವೆ, ಆದರೆ ಅವರಿಗೆಲ್ಲಾ ಒಬ್ಬನೇ ದೇವರು. ಒಬ್ಬ ದೇವರಿಗೆ ಸಮಸ್ಯೆಯಾದ್ರೆ ಆ ಧರ್ಮವೇ ಹೋಯಿತು, ಆದರೆ ನಮಗೆ 33 ಕೋಟಿ ದೇವತೆಗಳು. ನೀವು ರಾಮನನ್ನ ಬೈದರೆ ನಾನು ಸೀತೆಯನ್ನ ಹಿಡಿದುಕೊಳ್ತೀನಿ. ನೀವು ಸೀತೆಗೆ ಕಳಂಕ ತರೋ ಪ್ರಯತ್ನ ಪಟ್ಟರೆ ಶ್ರೀಕೃಷ್ಣ ಇದ್ದಾನೆ. ಕೃಷ್ಣನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನಮಗೆ ಮಂಜುನಾಥಸ್ವಾಮಿ ಇದ್ದಾನೆ. ನೀವು ಮಂಜುನಾಥನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನನಗೆ ಊರಲ್ಲೊಂದು ದೇವಸ್ಥಾನ ಇದೆ, ಎಲ್ಲಿ ಬೇಕಾದರೂ ಹೋಗ್ತೀನಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಪ್ಲೀಸ್ ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು ವಿದ್ಯಾರ್ಥಿಯ ವಿಚಿತ್ರ ಬೇಡಿಕೆ

ಹಾಗಾಗಿ ಅವರಿಗೆ ಹೇಳಿ, ಒಂದೇ ದೇವರು ಒಳ್ಳೆಯದೋ ಅಥವಾ 33 ಕೋಟಿ ದೇವರು ಒಳ್ಳೆಯದೋ? ಅಂಥ. ಮಿತ್ರರೇ ಅವರು ಬಂದು ಹೇಳ್ತಾರೆ, ನಮ್ಮದೊಂದೇ ಪುಸ್ತಕ, ನಿಮ್ಮತ್ರ ಬಹಳ ಪುಸ್ತಕ ಇದೆ ಅಂತ. ಆಗ ನೀವು ಹೇಳಿ, ನಮ್ಮತ್ರ ಲೈಬ್ರಿರಿ ಇದೆ, ಯಾವುದೋ ಒಂದು ಪುಸ್ತಕ ಸುಡೋದ್ರಿಂದ ಹಿಂದೂ ಧರ್ಮ ಸಾಯಲ್ಲ. ನಿಮ್ಮ ಮತ-ಪಂಥಗಳಲ್ಲಿ ಹೆಣ್ಮಕ್ಕಳಿಗೆ ಗೌರವ ಇಲ್ಲ ಅಂತ ಅವರಿಗೆ ಹೇಳಿ. ಇಲ್ಲಿರೋ ಹೆಣ್ಮಕ್ಕಳಿಗೆ ಮುಖ ಮುಚ್ಚಿಕೊಳ್ಳಿ ಅಂತ ಹೇಳಿಲ್ಲ, ಗಂಡು ಮಕ್ಕಳ ಪಕ್ಕದಲ್ಲಿ ಕೂರಬೇಡಿ ಅಂತ ಹೇಳಿಲ್ಲ. ಬರೋರಿಗೆ ಬನ್ನಿ ಅಂತ ಹೇಳಿ, ಬರುವವರನ್ನು ಮುಕ್ತ ಕಂಠದಿಂದ ಸ್ವಾಗತಿಸಿ, ಸಂಖ್ಯೆ ವೃದ್ಧಿಸಲು ಮಕ್ಕಳೇ ಆಗಬೇಕೆಂದಿಲ್ಲ, ನಮ್ಮ ಹೃದಯ ಸ್ವಲ್ಪ ವಿಶಾಲ ಆಗಬೇಕಿದೆ ಎಂದು ಕರೆ ಕೊಟ್ಟಿದ್ದಾರೆ.

ಸೇವೆ ಮಾಡೋದು ನಿಮ್ಮ ಸಮಾಜ ಮಾತ್ರ ಅಲ್ಲ, ನಮ್ಮ ಸಮಾಜ ಮಾಡೋ ಸೇವೆ ಯಾವ ಧರ್ಮ ಮಾಡಿದೆ? ಇಂಥ ಸೇವೆ ಮಾಡೋ ಸಮಾಜ ಮತ್ತೊಂದಿಲ್ಲ ಅಂತ ಹೇಳಿ ನಮ್ಮ ಸಮಾಜಕ್ಕೆ ಕರೆಯಿರಿ. ನಮ್ಮ ಸಮಾಜದ ಎಲ್ಲಾ ಪ್ರಮುಖರು ಈ ಬಗ್ಗೆ ಒಂದು ಘೋಷಣೆ ಹೊರಡಿಸಿ. ಯಾರಾದರೂ ನಮಗೆ ಮತಾಂತರ ಆಗಬೇಕು ಅಂದ್ರೆ ನಮ್ಮ ಸಮಾಜ ಅವರನ್ನ ಪ್ರೀತಿಯಿಂದ ಸ್ವಾಗತಿಸುತ್ತೆ ಬನ್ನಿ ಅಂತ ಕರೀರಿ. ಸಮಾಜದ ಸ್ವಾಮೀಜಿಗಳ ಮೂಲಕ ಘೋಷಣೆ ಕೊಡಲಿ, ಯಾರಾದ್ರೂ ಬರ್ತೀರ ಅಂತಾದರೆ ಜಾತಿ ಕೇಳದೇ ಕರೆಯಿರಿ, ನೀವು ಒಂದು ಸಲ ಮುಕ್ತ ಕಂಠದಿಂದ ಕರೀರಿ, ಎಷ್ಟು ಜನ ಸೈಲೆಂಟಾಗಿ ಸೇರಿಕೊಳ್ತಾರೆ ನೋಡಿ ಎಂದು ಬಹಿರಂಗವಾಗಿಯೇ ಮತಾಂತರಕ್ಕೆ ಕರೆ ಕೊಟ್ಟಿದ್ದಾರೆ.

ಜನಸಂಖ್ಯೆ ಜಾಸ್ತಿ ಮಾಡಲು ಸರ್ಕಾರವೇ ಕೊಟ್ಟ ಇಂಥ ಕಾನೂನುಗಳು ನಮ್ಮಲ್ಲಿವೆ. ಹಾಗಾಗಿ ಸಂಖ್ಯೆ ವಿಸ್ತರಿಸಲು ಈ ರೀತಿಯಲ್ಲಿ ನಾವು ಕೆಲಸ ಮಾಡಬೇಕಿದೆ. ಮುಂದಿನ ಪೀಳಿಗೆಗೆ ಭಾರತ ಬಿಟ್ಟು ಕೊಟ್ಟು ಹೋಗುವಾಗ ಅದಕ್ಕೆ ಸ್ವಲ್ಪ ಪಾಕಿಸ್ತಾನ, ಬಾಂಗ್ಲಾದೇಶ, ಅಗತ್ಯ ಬಿದ್ದರೆ ನೇಪಾಳವನ್ನೂ ಸೇರಿಸೋಣ ಎಂದು ಹೇಳಿದ್ದಾರೆ.

TAGGED:Bajrang Dalchakravarthy sulibeleconversionhinduMangalurupopulationಚಕ್ರವರ್ತಿ ಸೂಲಿಬೆಲೆಜನಸಂಖ್ಯೆದಕ್ಷಿಣ ಕನ್ನಡಮಂಗಳೂರುಮತಾಂತರಹಿಂದೂ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
49 seconds ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
13 minutes ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
1 hour ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
2 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
2 hours ago
US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?