Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಇದು ರಾಜಕೀಯ ಮಾಡುವ ಸಮಯವಲ್ಲ, ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ: ಮಲ್ಲಿಕಾರ್ಜುನ ಖರ್ಗೆ

Public TV
Last updated: April 23, 2025 4:25 pm
Public TV
Share
2 Min Read
Mallikarjuna Kharge 1
SHARE

– ಉಗ್ರರ ವಿರುದ್ಧ ಹೋರಾಟದಲ್ಲಿ ಕೇಂದ್ರದ ಪರ ಇರುತ್ತೇವೆ; ಎಐಸಿಸಿ ಅಧ್ಯಕ್ಷ

ನವದೆಹಲಿ: ಇದು ರಾಜಕೀಯ ಮಾಡುವ ಸಮಯವಲ್ಲ. ಮೃತಪಟ್ಟ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಹೇಳಿದ್ದಾರೆ.

ಪಹಲ್ಗಾಮ್‌ನಲ್ಲಿ (Pahalgam) ನಡೆದ ದಾಳಿಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಪ್ರವಾಸಿಗರ ಹತ್ಯೆಯನ್ನು ಖಂಡಿಸಿದ್ದಾರೆ. ಉಗ್ರರು ಪ್ರವಾಸಿಗರನ್ನು ಹತ್ಯೆ ಮಾಡಿರುವ ದುರದೃಷ್ಟಕರ ಘಟನೆ ನಡೆದಿದೆ. ಉಗ್ರರು ಅಮಾಯಕರನ್ನ ಕೊಂದಿದ್ದಾರೆ. ಇದು ತುಂಬಾ ದುಃಖಕರ ಸಂಗತಿ, ಕಾಂಗ್ರೆಸ್ (Congress) ಪಕ್ಷ ಉಗ್ರರ ಈ ಕೃತ್ಯವನ್ನ ಉಗ್ರವಾಗಿ ಖಂಡಿಸುತ್ತದೆ. ಈ ಘಟನೆ ದೇಶದ ಒಗ್ಗಟ್ಟು, ಐಕ್ಯತೆ ಮೇಲಿನ ದಾಳಿ ಎಂದಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ, ಇಂತಹ ಉಗ್ರ ಸಂಘಟನೆಗಳನ್ನು ಸದೆಬಡೆಯಬೇಕು – ಡಿಕೆಶಿ

ಬುಧವಾರ ರಾತ್ರಿ ನಾನು ಅಮಿತ್ ಶಾ (Amit Shah) ಜೊತೆ ಹಾಗೂ ಒಮರ್ ಅಬ್ದುಲ್ಲಾರೊಂದಿಗೆ ಮಾತನಾಡಿದ್ದೇನೆ. ಜಮ್ಮು ಮತ್ತು ಕಾಶ್ಮೀರದ ನಾಯಕರ ಜೊತೆಯೂ ಮಾತಾಡಿದ್ದೇನೆ. ಯಾರು ಈ ಕೃತ್ಯದ ಹಿಂದಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಅಮಿತ್ ಶಾ ನನಗೆ ಹೇಳಿದ್ದಾರೆ. ಇದು ರಾಜಕೀಯ ಮಾಡುವ ಸಮಯ ಅಲ್ಲ. ಮೃತರಾದ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ. ಹಾಗಾಗಿ ಈ ವಿಚಾರದಲ್ಲಿ ಒಟ್ಟಾಗಿ ಹೋರಾಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಲಾಕೋಟ್‌ ಏರ್‌ಸ್ಟ್ರೈಕ್‌ನಂತೆ ದಾಳಿ ಭೀತಿ – ಗಡಿಗೆ ವಿಮಾನಗಳನ್ನು ಸಾಗಿಸುತ್ತಿದೆ ಪಾಕ್‌

ಕರ್ನಾಟಕದ ಮಂಜುನಾಥ್ ರಾವ್, ಭರತ್ ಭೂಷಣ್ ಮೃತರಾಗಿದ್ದಾರೆ. ಅವರ ಪತ್ನಿಯರಾದ ಪಲ್ಲವಿ, ಸುಜಾತ ಅವರೊಂದಿಗೆ ಮಾತನಾಡಿದ್ದೇನೆ. ಘಟನಾ ಸ್ಥಳಕ್ಕೆ ಸಂತೋಷ್ ಲಾಡ್ ಕೂಡ ಹೋಗಿದ್ದಾರೆ. ಅವರ ಜೊತೆಯೂ ಮಾತನಾಡಿದ್ದೇನೆ. ಕರ್ನಾಟಕದಿಂದ 200 ಟೂರಿಸ್ಟ್ ಹೋಗಿದ್ದಾರೆ ಎನ್ನಲಾಗಿದೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ಸರ್ಕಾರ ಕ್ರಮ ಕೈಗೊಂಡಿದೆ ಎಂದಿದ್ದಾರೆ.

ಘಟನೆಯ ಬಗ್ಗೆ ಓಮರ್ ಅಬ್ದುಲ್ಲಾ ಅವರ ಜೊತೆಯೂ ಮಾತಾಡಿದ್ದೇನೆ. ಕೇಂದ್ರ ಸರ್ಕಾರದ ಜವಾಬ್ದಾರಿಯೂ ಹೆಚ್ಚಿದೆ. ಉಗ್ರರನ್ನ ಬಗ್ಗುಬಡಿಯಬೇಕು. ಮೃತರಿಗೆ ಸಂತಾಪ ಸೂಚಿಸುತ್ತೇವೆ. ಕಾಂಗ್ರೆಸ್ ಪಕ್ಷ ಕುಟುಂಬದವರ ಜೊತೆ ಇದೆ. ಇದು ಭಾರತದ ಮೇಲಿನ ನೇರ ದಾಳಿಯಾಗಿದೆ. ಪಾಕಿಸ್ತಾನಿ ಪ್ರಾಯೋಜಿತ ಉಗ್ರ ಚಟುವಟಿಕೆಗಳನ್ನ ಬಗ್ಗು ಬಡಿಯಬೇಕು ಎಂದು ಬರೆದಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ; ಮಾಹಿತಿ ಕೊರತೆ, ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿಎಂ

ಕಾಶ್ಮೀರದಲ್ಲಿ ಟೂರಿಸ್ಟ್‌ಗಳಿಗೆ ರಕ್ಷಣೆ ಒದಗಿಸಬೇಕು. ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಮರನಾಥ ಯಾತ್ರೆಯ ಸೆಕ್ಯೂರಿಟಿ ಕೂಡಾ ಟೈಟ್ ಮಾಡಬೇಕು. ಉಗ್ರರ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರ್ಕಾರದ ಜೊತೆ ನಾವು ಇರುತ್ತೇವೆ. ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಎಲ್ಲರ ಅಭಿಪ್ರಾಯ ಪಡೆಯಲಿ. ಇದು ರಾಜಕೀಯ ಮಾಡಲು ಅಲ್ಲ. ಆದರೆ ಎಲ್ಲರಿಂದಲೂ ಸಲಹೆ ಪಡೆಯಿರಿ. ಎಲ್ಲರೂ ಒಂದಾಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿ ಎಂದಿದ್ದಾರೆ. ಇದನ್ನೂ ಓದಿ: Pahalgam Terror Attack | ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

ಸಂಪುಟದಲ್ಲಿ ನಾವು ಒಟ್ಟಾಗಿದ್ದೇವೆ. ನಾಳೆ ಕಾಂಗ್ರೆಸ್ ವಿಶೇಷ ಸಿಡಬ್ಲೂಸಿ ಸಭೆ ನಡೆಸಲಿದೆ. ನಾಳೆ 11ಗಂಟೆಗೆ ದೆಹಲಿಯಲ್ಲಿ ಕಾಂಗ್ರೆಸ್ ಸಿಡಬ್ಲೂಸಿ ಸಭೆ ನಡೆಯಲಿದ್ದು, ಉಗ್ರರ ಕೃತ್ಯ, ಭದ್ರತೆ ಸೇರಿದಂತೆ ಅನೇಕ ವಿಚಾರಗಳು ಚರ್ಚೆಯಾಗಲಿದೆ ಎಂದು ಹೇಳಿದ್ದಾರೆ.

TAGGED:mallikarjuna khargenewdelhiPahalgam Terrorist AttackTerror Attack On Hinduನವದೆಹಲಿಪಹಲ್ಗಾಮ್ ಅಟ್ಯಾಕ್ಭಯೋತ್ಪಾದಕರ ದಾಳಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema Updates

rukmini vijaykumar
10 ಲಕ್ಷದ ಡೈಮಂಡ್ ರಿಂಗ್, 9 ಲಕ್ಷ ಮೌಲ್ಯದ ವಾಚ್- ‘ಭಜರಂಗಿ’ ನಟಿ ಬ್ಯಾಗ್ ಕದ್ದ ಆರೋಪಿ ಅರೆಸ್ಟ್
50 minutes ago
aamir khan rajkumar hirani
11 ವರ್ಷಗಳ ಬಳಿಕ ‘ಪಿಕೆ’ ನಿರ್ದೇಶಕನ ಜೊತೆ ಕೈಜೋಡಿಸಿದ ಆಮೀರ್ ಖಾನ್
59 minutes ago
Disha Patani
ಬೆಡ್‌ರೂಮಲ್ಲಿ ಬಿಕಿನಿ ತೊಟ್ಟು ಸೆಲ್ಫಿ ಕ್ಲಿಕ್ಕಿಸಿದ ನಟಿ – ದಿಶಾ ಪಟಾನಿ ಮೈಮಾಟಕ್ಕೆ ಪಡ್ಡೆ ಹುಡುಗರು ಬೋಲ್ಡ್
3 hours ago
gajendra
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಯಜಮಾನ’ ಸೀರಿಯಲ್ ಖ್ಯಾತಿಯ ಗಜೇಂದ್ರ
3 hours ago

You Might Also Like

Bangalore Iskcon 2
Court

ಬೆಂಗಳೂರಿನ ಇಸ್ಕಾನ್‌ ಆಸ್ತಿ ಮುಂಬೈ ಇಸ್ಕಾನ್‌ಗೆ ಸೇರಿದ್ದಲ್ಲ – ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Public TV
By Public TV
8 minutes ago
PRATAP SIMHA
Latest

ಜನರು ಮೋದಿಗೆ ಕ್ರೆಡಿಟ್‌ ಕೊಟ್ರೆ ನಿಮಗೆ ಯಾಕೆ ಹೊಟ್ಟೆ ಉರಿ?- ‘ಕೈ’ ನಾಯಕರ ವಿರುದ್ಧ ಪ್ರತಾಪ್‌ ಸಿಂಹ ಗರಂ

Public TV
By Public TV
1 hour ago
Priyank Kharge 3
Bengaluru City

ಪಾಕ್‌ಗೆ ಬೆಂಬಲ ಕೊಟ್ಟ ಚೀನಾಗೆ ಬಾಯ್ಕಾಟ್ ಹೇಳೋ ಧೈರ್ಯ ಇದೆಯಾ? – ಪ್ರಿಯಾಂಕ್ ಖರ್ಗೆ ಟಾಂಗ್

Public TV
By Public TV
1 hour ago
Kothur Manjunath
Districts

ಬೂಟಾಟಿಕೆಗೆ 4 ಫ್ಲೈಟ್ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ; `ಆಪರೇಷನ್‌ ಸಿಂಧೂರ’ ಕುರಿತು ಕಾಂಗ್ರೆಸ್‌ ಶಾಸಕ ಲೇವಡಿ

Public TV
By Public TV
2 hours ago
Akash missile defence system
Latest

ಆಪರೇಷನ್‌ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್‌ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

Public TV
By Public TV
2 hours ago
Adugodi Fake Astrologer Arrest
Bengaluru City

ಜಾತಕದಲ್ಲಿ ದೋಷ ಅಂತ ಪೂಜೆಗಾಗಿ 5 ಲಕ್ಷ ಪಂಗನಾಮ – ಲೇಡಿ ಕಾನ್‌ಸ್ಟೇಬಲ್‌ಗೆ ವಂಚಿಸಿದ್ದ ಡೋಂಗಿ ಜ್ಯೋತಿಷಿ ಅರೆಸ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?