ಬೆಂಗಳೂರು: ಕಾಶ್ಮೀರದ ಪಹಲ್ಗಾವ್ನಲ್ಲಿ (Pahalgam ) ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ರಾಜ್ಯಕ್ಕೆ ಆಗಮಿಸಿದೆ.
ದೆಹಲಿಯಿಂದ ಇಂಡಿಗೋ ವಿಮಾನದಲ್ಲಿ ಬೆಳಗ್ಗೆ 3:30ಕ್ಕೆ ಬೆಂಗಳೂರಿನ (Bengaluru) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಪಾರ್ಥಿವ ಶರೀರ ಆಗಮಿಸಿತು.
With great anguish, landed in Bengaluru along with the families of the Pahalgam terror attack victims.
The mortal remains of Shri Manjunath are being taken to his hometown in Shivamogga, while those of Shri Bharath Bhushan are being moved to his residence in Mathikere. The… pic.twitter.com/j1laQ6ovOm
— Tejasvi Surya (@Tejasvi_Surya) April 24, 2025
ಈ ವಿಮಾನದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಮತ್ತು ಮೃತರ ಕುಟುಂಬಸ್ಥರು ಆಗಮಿಸಿದ್ದರು.
ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ (Somanna) ಅವರು ಮೃತದೇಹವನ್ನು ಬರಮಾಡಿಕೊಂಡು ಅಂತಿಮ ನಮನ ಸಲ್ಲಿಸಿದರು. ವಿಮಾನ ನಿಲ್ಥಾಣದ ಒಳಗಡೆ ಸಚಿವ ಸೋಮಣ್ಣ ಮತ್ತು ಅಧಿಕಾರಿಗಳು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪಹಲ್ಗಾಮ್’ನ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ಕನ್ನಡಿಗರಾದ ಶ್ರೀ ಮಂಜುನಾಥ್ ರಾವ್ ಹಾಗೂ ಶ್ರೀ ಭರತ್ ಭೂಷಣ್ ಅವರ ಪಾರ್ಥಿವ ಶರೀರಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಲಾಯಿತು.
ಇದೇ ವೇಳೆ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ದುಃಖ ತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆನು. pic.twitter.com/9Y08wrGiiU
— V. Somanna (@VSOMANNA_BJP) April 24, 2025
ವಿಮಾನ ನಿಲ್ದಾಣದಲ್ಲಿ ಗೌರವ ಸಲ್ಲಿಸಿದ ಬಳಿಕ ಸರ್ಕಾರ ಕುಟುಂಬಸ್ಥರಿಗೆ ಎರಡು ಮೃತ ದೇಹಗಳ ಹಸ್ತಾಂತರ ಮಾಡಿತು. ಒಂದು ಅಂಬುಲೆನ್ಸ್ನಲ್ಲಿ ಬೆಂಗಳೂರಿನ ಮತ್ತಿಕೇರೆಯಲ್ಲಿರುವ ಸುಂದರನಗರಕ್ಕೆ ಭರತ್ ಭೂಷಣ್ ಶವ ಮತ್ತೊಂದು ಅಂಬುಲೆನ್ಸ್ನಲ್ಲಿ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಪಾರ್ಥಿವ ಶವವವನ್ನು ಕಳುಹಿಸಲಾಯಿತು.
ಬೆಳಗ್ಗೆ 5:30ರ ವೇಳೆಗೆ ಭರತ್ ಭೂಷಣ್ ಶವ ಸುಂದರ ನಗರಕ್ಕೆ ಆಗಮಿಸಿತು. ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ, ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.