ಧಾರವಾಡ: ಕ್ಷುಲ್ಲಕ ಕಾರಣಕ್ಕಾಗಿ ಅನ್ಯಕೋಮಿನ ನಾಲ್ವರು ಯುವಕರು ಆರ್ಎಸ್ಎಸ್ (RSS) ಮುಖಂಡ ಶಿರೀಶ್ ಬಳ್ಳಾರಿ ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿರುವ ಘಟನೆ ಧಾರವಾಡದ (Dharwad) ಗಾಂಧಿಚೌಕ್ ಬಳಿ ನಡೆದಿದೆ.
ಸಿಗರೇಟು (Cigarette) ಸೇದುತ್ತಿದ್ದ ನಾಲ್ವರಿಗೆ ಶಿರೀಶ್ ಅವರು ಬುದ್ಧಿವಾದ ಹೇಳಿದ್ದಾರೆ. ಈ ವಿಚಾರವನ್ನೇ ಮುಂದಿಟ್ಟುಕೊಂಡ ನಾಲ್ವರು ಶಿರೀಶ್ ಅವರ ಮನೆಯೊಳಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಮಗು ಇದೆ ಬಿಟ್ಟು ಬಿಡಿ ಅಂದ್ರೂ ಶೂಟ್ ಮಾಡಿದ್ರು – ಬಿಕ್ಕಿಬಿಕ್ಕಿ ಅತ್ತ ಸುಜಾತ
ಶಿರೀಶ್ ಅಷ್ಟೇ ಅಲ್ಲದೇ ಅವರ ಕುಟುಂಬಸ್ಥರ ಮೇಲೂ ಯುವಕರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಲ್ಲೆ ಮಾಡಿದ ನಂತರ ನಾಲ್ವರು ನಾಪತ್ತೆಯಾಗಿದ್ದಾರೆ.
ಈ ಸಂಬಂಧ ದೂರು ಪಡೆದಿರುವ ಧಾರವಾಡ ಶಹರ ಠಾಣೆ ಪೊಲೀಸರು ನಾಪತ್ತೆಯಾಗಿರುವ ಯುವಕರ ಪತ್ತೆಗೆ ಬಲೆ ಬೀಸಿದ್ದು ಇಬ್ಬರನ್ನು ಬಂಧಿಸಿದ್ದಾರೆ.