Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಲೆಯಾಗಿದ್ದ ಮಹಿಳೆ ಪತ್ತೆ ಕೇಸ್; 2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಕೊಲೆಯಾಗಿದ್ದ ಮಹಿಳೆ ಪತ್ತೆ ಕೇಸ್; 2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಸುರೇಶ್

Court

ಕೊಲೆಯಾಗಿದ್ದ ಮಹಿಳೆ ಪತ್ತೆ ಕೇಸ್; 2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಸುರೇಶ್

Public TV
Last updated: April 24, 2025 6:37 pm
Public TV
Share
3 Min Read
Madikeri Murder Case
SHARE

ಮಡಿಕೇರಿ: ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಶಿಕ್ಷೆ ವಿಧಿಸಿದ್ದ ನ್ಯಾಯಾಲಯವೇ, `ಪೊಲೀಸರು ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆತ ತಪ್ಪು ಮಾಡಿಲ್ಲ’ ಎಂದು ಸ್ಪಷ್ಟಪಡಿಸಿ ನಿರಪರಾಧಿ ಎಂದು ಘೋಷಿಸಿದೆ. ತಪ್ಪು ಮಾಡದೇ 2 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ವ್ಯಕ್ತಿ ಇದೀಗ ನ್ಯಾಯ ದೊರಕಿಸಿಕೊಟ್ಟ ವಕೀಲರಿಗೂ ಹಾಗೂ ನ್ಯಾಯಾಧೀಶರಿಗೂ ಕೃತ್ಯಜ್ಞತೆ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?
4 ವರ್ಷದ ಹಿಂದೆ, ಮೈಸೂರು (Mysuru) ಜಿಲ್ಲೆಯ ಬೆಟ್ಟದಪುರದ ಶಾನುಭೋಗನಹಳ್ಳಿಯಲ್ಲಿ ಮಹಿಳೆಯ ಶವವು ಪತ್ತೆಯಾಗಿತ್ತು. ಮೃತ ಮಹಿಳೆಯನ್ನು ಕೊಡಗಿನ (Kodagu) ಕುಶಾಲನಗರದ ನಿವಾಸಿ ಮಲ್ಲಿಗೆ ಎಂದು ಗುರುತಿಸಲಾಗಿತ್ತು. ಆ ಮಹಿಳೆಯನ್ನು ಆಕೆಯ ಗಂಡ ಸುರೇಶ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಬೆಟ್ಟದಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ಕೊಲೆಗೈದು ಅಂತ್ಯಸಂಸ್ಕಾರ ಮಾಡಿ ಜೈಲುಪಾಲಾಗಿದ್ದ ಪತಿಗೆ ಶಾಕ್‌ – 4 ವರ್ಷದ ಬಳಿಕ ಪ್ರಿಯಕರನ ಜೊತೆ ಪತ್ನಿ ಪ್ರತ್ಯಕ್ಷ!

ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಏ. 1ರಂದು ಮಹಿಳೆಯು ಆಕೆಯ ಪ್ರಿಯತಮ ಗಣೇಶ್‌ನೊಂದಿಗೆ ಮಡಿಕೇರಿ ನಗರದಲ್ಲೇ ಪತ್ತೆಯಾದ ಬಳಿಕ ಪ್ರಕರಣ ತಿರುವು ಪಡೆದುಕೊಂಡಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು ಪೊಲೀಸ್ ತನಿಖಾಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿಹಿಡಿದು, ಏ.23ಕ್ಕೆ ಆದೇಶ ಕಾಯ್ದಿರಿಸಿತ್ತು. ಬುಧವಾರ ಈ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ಕೊಲೆ ಮಾಡದೇ 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ಎಂಬುವವರನ್ನು ನಿರಪರಾಧಿ ಎಂದು ಘೋಷಣೆ ಮಾಡಿ ಗೌರವಯುತವಾಗಿ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಏ.27ರೊಳಗೆ ಭಾರತ ಬಿಟ್ಟು ತೊಲಗಿ – ಪಾಕ್ ಪ್ರಜೆಗಳಿಗೆ ಭಾರತ ಖಡಕ್ ವಾರ್ನಿಂಗ್

ಈ ಕೊಲೆ ಆರೋಪದಲ್ಲಿ ಜೈಲುವಾಸ ಅನುಭವಿಸಿದ್ದ ಕುಶಾಲನಗರದ ಬಸವನಹಳ್ಳಿ ನಿವಾಸಿ ಸುರೇಶ್ ಅವರನ್ನು ನಿರಪರಾಧಿ ಎಂದು ಘೋಷಿಸುತ್ತಿದ್ದಂತೆ ಕುಟುಂಬಸ್ಥರು ಕಣ್ಣಿರು ಹಾಕಿದರು. ಪ್ರಕರಣ ಸಂಬಂಧ, ಪೊಲೀಸ್ ದಾಖಲೆಗಳಿಂದ ಅವರ ಹೆಸರನ್ನು ತೆಗೆದು ಹಾಕುವಂತೆ ಬೆಟ್ಟದಪುರ ಪೊಲೀಸರಿಗೆ ನ್ಯಾಯಾಧೀಶರಾದ ಗುರುರಾಜ್ ಸೋಮಕ್ಕಳವರ್ ಸೂಚನೆ ನೀಡಿದರು. ಆರೋಪಿಯ ಜಾಮೀನು ಬಾಂಡ್ ಮತ್ತು ಅವರ ಶೂರಿಟಿ ಬಾಂಡ್ ಅನ್ನು ರದ್ದುಗೊಳಿಸಲಾಗಿದೆ. ಅವರಿಗೆ 1 ಲಕ್ಷ ಪರಿಹಾರ ನೀಡುವಂತೆ ಸರ್ಕಾರದ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದರು. ಇದನ್ನೂ ಓದಿ: ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಬೈಲಕುಪ್ಪೆ ಸರ್ಕಲ್ ಇನ್‌ಸ್ಪೆಕ್ಟರ್ ಬಿ.ಜಿ.ಪ್ರಕಾಶ್ ವಿರುದ್ಧ ಐಪಿಸಿ ಸೆಕ್ಷನ್ 193, 195ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗೆ ಸೂಚಿಸಿದ್ದಾರೆ. ಅಲ್ಲದೇ ತನಿಖಾ ತಂಡದಲ್ಲಿದ್ದ ಅಂದಿನ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್, ಬೆಟ್ಟದಪುರ ಪಿಎಸ್‌ಐ ಮಹೇಶ್ ಕುಮಾರ್, ಎಸ್‌ಐ ಪ್ರಕಾಶ್ ಯತ್ತಿಮನಿ ವಿರುದ್ಧ ಇಲಾಖಾ ತನಿಖೆ ನಡೆಸಬೇಕು ಎಂದು ಮೈಸೂರು ಐಜಿಪಿಗೆ ಆದೇಶಿಸಿದ್ದಾರೆ. ಹಾಗೆಯೇ ಪ್ರಸ್ತುತ ಪ್ರಕರಣದಲ್ಲಿ ದಾಖಲಾದ ಯುಡಿಆರ್ ಕುರಿತು ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಟಾಲಿವುಡ್‌ ಸಿನಿಮಾದಲ್ಲಿ ಸುದೀಪ್‌ ಪುತ್ರಿ ಸಾನ್ವಿ- ಫ್ಯಾನ್ಸ್‌ಗೆ ಗುಡ್‌ ನ್ಯೂಸ್

ಬಿಡುಗಡೆ ಬಳಿಕ ಮಾತನಾಡಿರುವ ಸುರೇಶ್ ಅವರು, ತಾನು ಮಾಡದೇ ಇರುವ ತಪ್ಪಿಗೆ 2 ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಯಿತು. ತಮಿಳು ಚಿತ್ರದ `ಜೈಭೀಮ್’ ಚಿತ್ರದಲ್ಲಿ ಹೇಗೆ ಪೊಲೀಸರು ಟ್ರೀಟ್‌ಮೆಂಟ್ ನೀಡಿದ್ರೋ ಹಾಗೇ ನನ್ನ ನಿಜ ಜೀವನದಲ್ಲಿ ಅಂತಹ ಟ್ರೀಟ್‌ಮೇಟ್ ಪೋಲಿಸರು ಕೊಟ್ಟಿದ್ದಾರೆ. ಕರೆಂಟ್ ಶಾಕ್, ಹಗ್ಗದಲ್ಲಿ ಕಟ್ಟಿ ಹಾಕಿ ಮಾಡದೇ ಇರುವ ಕೊಲೆಯನ್ನು ತನ್ನ ತಲೆಯ ಮೇಲೆ ಹಾಕಿದರು. ಗೊತ್ತಿಲ್ಲದ ಸ್ಥಳದಲ್ಲಿ ಮಹಜರು ಮಾಡಿದರು. ನನಗೆ ಶಿಕ್ಷೆ ಕೊಟ್ಟ ಹಾಗೆ ಬಡವರ್ಗದ ಹಲವು ಜನರಿಗೂ ಶಿಕ್ಷೆ ನೀಡಿ ಮಾಡದೇ ಇರುವ ತಪ್ಪುಗಳನ್ನು ಬೇರೆ ಯಾರೋ ಮೇಲೆ ಕೇಸ್ ಹಾಕಿದ್ದಾರೋ ಗೊತ್ತಿಲ್ಲ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಅಲ್ಲದೇ ತನ್ನ ಪರ ನ್ಯಾಯಾಲಯದಲ್ಲಿ ವಕೀಲರಾದ ಪಾಡು ಪೂಜಾರಿ ಅವರು ವಾದ ಮಾಡಿ ತನ್ನ ಬಳಿ 1 ರೂ. ಹಣವನ್ನೂ ಪಡೆಯದೇ ತನಗೆ ನ್ಯಾಯ ಕೊಡಿಸಿದ್ದಾರೆ ಅವರಿಗೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಬಸ್‌ ನಿಲ್ಲಿಸದಿದ್ದಕ್ಕೆ ಕಲ್ಲೆಸೆದು ಅನ್ಯಕೋಮಿನ ಯುವಕರಿಂದ ದಾಂಧಲೆ – ಸಾರ್ವಜನಿಕರಿಂದ ಬಿತ್ತು ಗೂಸಾ

ಪತ್ನಿ ನಾಪತ್ತೆ ಆಗಿದ್ದಾಳೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿ, ನನ್ನನ್ನೇ ಕೊಲೆ ಆರೋಪಿಯನ್ನಾಗಿ ಮಾಡಿದ್ದರು. ಮಾಡದ ತಪ್ಪಿಗೆ 2 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಮಾಡಿದ ಪೋಲಿಸರಿಗೆ ತಕ್ಕ ಶಿಕ್ಷೆ ಆಗುತ್ತದೆ ಅನ್ನೋ ನಿರೀಕ್ಷೆಯಲ್ಲಿ ಸುರೇಶ್ ಇದ್ದಾರೆ.

TAGGED:courtKodaguKushalnagaramysuruಕುಶಾಲನಗರಕೊಡಗುಕೋರ್ಟ್ಮೈಸೂರು
Share This Article
Facebook Whatsapp Whatsapp Telegram

Cinema news

Rakshita Shetty Dhruvanth Secret Room Fight
`ರಕ್ಷಿತಾ ಆರ್ ಕೂಡ ನೀವಲ್ಲ’- ರಕ್ಷಿತಾ ಧ್ರುವಂತ್ ಸಿಕ್ಕಾಪಟ್ಟೆ ಕಿತ್ತಾಟ!
Cinema Latest Sandalwood Top Stories TV Shows
Sai Pallavi
ಎಂ.ಎಸ್ ಸುಬ್ಬಲಕ್ಷ್ಮಿ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ ನಟನೆ ಫಿಕ್ಸ್‌
Bollywood Cinema Latest Top Stories
Sohail Khan
ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಸಲ್ಮಾನ್ ಖಾನ್ ಸಹೋದರ
Bollywood Cinema Latest
Kichcha Sudeep 2
ಮಸ್ತ್ ಮಲೈಕಾ ಜೊತೆ ಕಿಚ್ಚ ಸಖತ್ ಡಾನ್ಸ್‌
Cinema Latest Sandalwood

You Might Also Like

Sonia Gandhi Rahul Gandhi
Court

ನ್ಯಾಷನಲ್ ಹೆರಾಲ್ಡ್ ಕೇಸ್ – ಸೋನಿಯಾ, ರಾಹುಲ್ ಗಾಂಧಿಗೆ ರಿಲೀಫ್

Public TV
By Public TV
13 minutes ago
electric pole
Crime

ಹಾಸನ | ವಿದ್ಯುತ್ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು – ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

Public TV
By Public TV
19 minutes ago
venkatesh prasad
Cricket

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐಗೆ ಮನವಿ: ವೆಂಕಟೇಶ್ ಪ್ರಸಾದ್

Public TV
By Public TV
50 minutes ago
Breast milk uranium
Health

ಎದೆಹಾಲಿನಲ್ಲಿ ಯುರೇನಿಯಂ – ‘ಅಮೃತ’ಕ್ಕೆ ಇದೆಂಥಾ ಕಂಟಕ; ತಾಯಂದಿರು, ಶಿಶುಗಳ ಮೇಲೆ ಎಫೆಕ್ಟ್‌ ಏನು?

Public TV
By Public TV
1 hour ago
Chicken Meat Price Hike
Bengaluru City

ಮೊಟ್ಟೆ ಬೆನ್ನಲ್ಲೇ ಚಿಕನ್ ಬೆಲೆ ಏರಿಕೆ – 270 ರೂ. ತಲುಪಿದ ಕೋಳಿ ಮಾಂಸದ ದರ

Public TV
By Public TV
1 hour ago
Lokayukta Raids Shivamogga
Bengaluru City

ಶಿವಮೊಗ್ಗ | ಮುಂಜಾನೆ ಮೈ ಕೊರೆಯುವ ಚಳಿಯಲ್ಲೇ ಇಂಜಿನಿಯರ್‌ಗೆ ಶಾಕ್‌ ಕೊಟ್ಟ ಲೋಕಾಯುಕ್ತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?