Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

ಕೊಲೆಯಾಗಿದ್ದ ಮಹಿಳೆ ಪತ್ತೆ ಕೇಸ್; 2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಸುರೇಶ್

Public TV
Last updated: April 24, 2025 6:37 pm
Public TV
Share
3 Min Read
Madikeri Murder Case
SHARE

ಮಡಿಕೇರಿ: ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಶಿಕ್ಷೆ ವಿಧಿಸಿದ್ದ ನ್ಯಾಯಾಲಯವೇ, `ಪೊಲೀಸರು ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆತ ತಪ್ಪು ಮಾಡಿಲ್ಲ’ ಎಂದು ಸ್ಪಷ್ಟಪಡಿಸಿ ನಿರಪರಾಧಿ ಎಂದು ಘೋಷಿಸಿದೆ. ತಪ್ಪು ಮಾಡದೇ 2 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ವ್ಯಕ್ತಿ ಇದೀಗ ನ್ಯಾಯ ದೊರಕಿಸಿಕೊಟ್ಟ ವಕೀಲರಿಗೂ ಹಾಗೂ ನ್ಯಾಯಾಧೀಶರಿಗೂ ಕೃತ್ಯಜ್ಞತೆ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?
4 ವರ್ಷದ ಹಿಂದೆ, ಮೈಸೂರು (Mysuru) ಜಿಲ್ಲೆಯ ಬೆಟ್ಟದಪುರದ ಶಾನುಭೋಗನಹಳ್ಳಿಯಲ್ಲಿ ಮಹಿಳೆಯ ಶವವು ಪತ್ತೆಯಾಗಿತ್ತು. ಮೃತ ಮಹಿಳೆಯನ್ನು ಕೊಡಗಿನ (Kodagu) ಕುಶಾಲನಗರದ ನಿವಾಸಿ ಮಲ್ಲಿಗೆ ಎಂದು ಗುರುತಿಸಲಾಗಿತ್ತು. ಆ ಮಹಿಳೆಯನ್ನು ಆಕೆಯ ಗಂಡ ಸುರೇಶ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಬೆಟ್ಟದಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ಕೊಲೆಗೈದು ಅಂತ್ಯಸಂಸ್ಕಾರ ಮಾಡಿ ಜೈಲುಪಾಲಾಗಿದ್ದ ಪತಿಗೆ ಶಾಕ್‌ – 4 ವರ್ಷದ ಬಳಿಕ ಪ್ರಿಯಕರನ ಜೊತೆ ಪತ್ನಿ ಪ್ರತ್ಯಕ್ಷ!

ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಏ. 1ರಂದು ಮಹಿಳೆಯು ಆಕೆಯ ಪ್ರಿಯತಮ ಗಣೇಶ್‌ನೊಂದಿಗೆ ಮಡಿಕೇರಿ ನಗರದಲ್ಲೇ ಪತ್ತೆಯಾದ ಬಳಿಕ ಪ್ರಕರಣ ತಿರುವು ಪಡೆದುಕೊಂಡಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು ಪೊಲೀಸ್ ತನಿಖಾಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿಹಿಡಿದು, ಏ.23ಕ್ಕೆ ಆದೇಶ ಕಾಯ್ದಿರಿಸಿತ್ತು. ಬುಧವಾರ ಈ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ಕೊಲೆ ಮಾಡದೇ 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ಎಂಬುವವರನ್ನು ನಿರಪರಾಧಿ ಎಂದು ಘೋಷಣೆ ಮಾಡಿ ಗೌರವಯುತವಾಗಿ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಏ.27ರೊಳಗೆ ಭಾರತ ಬಿಟ್ಟು ತೊಲಗಿ – ಪಾಕ್ ಪ್ರಜೆಗಳಿಗೆ ಭಾರತ ಖಡಕ್ ವಾರ್ನಿಂಗ್

ಈ ಕೊಲೆ ಆರೋಪದಲ್ಲಿ ಜೈಲುವಾಸ ಅನುಭವಿಸಿದ್ದ ಕುಶಾಲನಗರದ ಬಸವನಹಳ್ಳಿ ನಿವಾಸಿ ಸುರೇಶ್ ಅವರನ್ನು ನಿರಪರಾಧಿ ಎಂದು ಘೋಷಿಸುತ್ತಿದ್ದಂತೆ ಕುಟುಂಬಸ್ಥರು ಕಣ್ಣಿರು ಹಾಕಿದರು. ಪ್ರಕರಣ ಸಂಬಂಧ, ಪೊಲೀಸ್ ದಾಖಲೆಗಳಿಂದ ಅವರ ಹೆಸರನ್ನು ತೆಗೆದು ಹಾಕುವಂತೆ ಬೆಟ್ಟದಪುರ ಪೊಲೀಸರಿಗೆ ನ್ಯಾಯಾಧೀಶರಾದ ಗುರುರಾಜ್ ಸೋಮಕ್ಕಳವರ್ ಸೂಚನೆ ನೀಡಿದರು. ಆರೋಪಿಯ ಜಾಮೀನು ಬಾಂಡ್ ಮತ್ತು ಅವರ ಶೂರಿಟಿ ಬಾಂಡ್ ಅನ್ನು ರದ್ದುಗೊಳಿಸಲಾಗಿದೆ. ಅವರಿಗೆ 1 ಲಕ್ಷ ಪರಿಹಾರ ನೀಡುವಂತೆ ಸರ್ಕಾರದ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದರು. ಇದನ್ನೂ ಓದಿ: ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಬೈಲಕುಪ್ಪೆ ಸರ್ಕಲ್ ಇನ್‌ಸ್ಪೆಕ್ಟರ್ ಬಿ.ಜಿ.ಪ್ರಕಾಶ್ ವಿರುದ್ಧ ಐಪಿಸಿ ಸೆಕ್ಷನ್ 193, 195ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗೆ ಸೂಚಿಸಿದ್ದಾರೆ. ಅಲ್ಲದೇ ತನಿಖಾ ತಂಡದಲ್ಲಿದ್ದ ಅಂದಿನ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್, ಬೆಟ್ಟದಪುರ ಪಿಎಸ್‌ಐ ಮಹೇಶ್ ಕುಮಾರ್, ಎಸ್‌ಐ ಪ್ರಕಾಶ್ ಯತ್ತಿಮನಿ ವಿರುದ್ಧ ಇಲಾಖಾ ತನಿಖೆ ನಡೆಸಬೇಕು ಎಂದು ಮೈಸೂರು ಐಜಿಪಿಗೆ ಆದೇಶಿಸಿದ್ದಾರೆ. ಹಾಗೆಯೇ ಪ್ರಸ್ತುತ ಪ್ರಕರಣದಲ್ಲಿ ದಾಖಲಾದ ಯುಡಿಆರ್ ಕುರಿತು ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಟಾಲಿವುಡ್‌ ಸಿನಿಮಾದಲ್ಲಿ ಸುದೀಪ್‌ ಪುತ್ರಿ ಸಾನ್ವಿ- ಫ್ಯಾನ್ಸ್‌ಗೆ ಗುಡ್‌ ನ್ಯೂಸ್

ಬಿಡುಗಡೆ ಬಳಿಕ ಮಾತನಾಡಿರುವ ಸುರೇಶ್ ಅವರು, ತಾನು ಮಾಡದೇ ಇರುವ ತಪ್ಪಿಗೆ 2 ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಯಿತು. ತಮಿಳು ಚಿತ್ರದ `ಜೈಭೀಮ್’ ಚಿತ್ರದಲ್ಲಿ ಹೇಗೆ ಪೊಲೀಸರು ಟ್ರೀಟ್‌ಮೆಂಟ್ ನೀಡಿದ್ರೋ ಹಾಗೇ ನನ್ನ ನಿಜ ಜೀವನದಲ್ಲಿ ಅಂತಹ ಟ್ರೀಟ್‌ಮೇಟ್ ಪೋಲಿಸರು ಕೊಟ್ಟಿದ್ದಾರೆ. ಕರೆಂಟ್ ಶಾಕ್, ಹಗ್ಗದಲ್ಲಿ ಕಟ್ಟಿ ಹಾಕಿ ಮಾಡದೇ ಇರುವ ಕೊಲೆಯನ್ನು ತನ್ನ ತಲೆಯ ಮೇಲೆ ಹಾಕಿದರು. ಗೊತ್ತಿಲ್ಲದ ಸ್ಥಳದಲ್ಲಿ ಮಹಜರು ಮಾಡಿದರು. ನನಗೆ ಶಿಕ್ಷೆ ಕೊಟ್ಟ ಹಾಗೆ ಬಡವರ್ಗದ ಹಲವು ಜನರಿಗೂ ಶಿಕ್ಷೆ ನೀಡಿ ಮಾಡದೇ ಇರುವ ತಪ್ಪುಗಳನ್ನು ಬೇರೆ ಯಾರೋ ಮೇಲೆ ಕೇಸ್ ಹಾಕಿದ್ದಾರೋ ಗೊತ್ತಿಲ್ಲ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಅಲ್ಲದೇ ತನ್ನ ಪರ ನ್ಯಾಯಾಲಯದಲ್ಲಿ ವಕೀಲರಾದ ಪಾಡು ಪೂಜಾರಿ ಅವರು ವಾದ ಮಾಡಿ ತನ್ನ ಬಳಿ 1 ರೂ. ಹಣವನ್ನೂ ಪಡೆಯದೇ ತನಗೆ ನ್ಯಾಯ ಕೊಡಿಸಿದ್ದಾರೆ ಅವರಿಗೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಬಸ್‌ ನಿಲ್ಲಿಸದಿದ್ದಕ್ಕೆ ಕಲ್ಲೆಸೆದು ಅನ್ಯಕೋಮಿನ ಯುವಕರಿಂದ ದಾಂಧಲೆ – ಸಾರ್ವಜನಿಕರಿಂದ ಬಿತ್ತು ಗೂಸಾ

ಪತ್ನಿ ನಾಪತ್ತೆ ಆಗಿದ್ದಾಳೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿ, ನನ್ನನ್ನೇ ಕೊಲೆ ಆರೋಪಿಯನ್ನಾಗಿ ಮಾಡಿದ್ದರು. ಮಾಡದ ತಪ್ಪಿಗೆ 2 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಮಾಡಿದ ಪೋಲಿಸರಿಗೆ ತಕ್ಕ ಶಿಕ್ಷೆ ಆಗುತ್ತದೆ ಅನ್ನೋ ನಿರೀಕ್ಷೆಯಲ್ಲಿ ಸುರೇಶ್ ಇದ್ದಾರೆ.

TAGGED:courtKodaguKushalnagaramysuruಕುಶಾಲನಗರಕೊಡಗುಕೋರ್ಟ್ಮೈಸೂರು
Share This Article
Facebook Whatsapp Whatsapp Telegram

Cinema Updates

Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood
Actress Rakshith Prem and Ramya
`ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?
Cinema Latest Sandalwood Top Stories

You Might Also Like

H C Mahadevappa
Bengaluru City

ಮಲ್ಲಿಕಾರ್ಜುನ ಖರ್ಗೆಯವರಿಗೆ ಎಲ್ಲಾ ಹುದ್ದೆ ಅನುಭವಿಸುವ ಅರ್ಹತೆ ಇದೆ: ಮಹದೇವಪ್ಪ

Public TV
By Public TV
2 minutes ago
Indian Army
Latest

Operation MAHADEV | ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರರನ್ನು ಹತ್ಯೆಗೈದ ಸೇನೆ

Public TV
By Public TV
6 minutes ago
Pahalgam Terrorists
Latest

Operation Mahadev | ಪಹಲ್ಗಾಮ್‌ ನರಮೇಧಕ್ಕೆ ಕಾರಣವಾಗಿದ್ದ ಪ್ರಮುಖ ಉಗ್ರ ಯೋಧರ ಗುಂಡಿಗೆ ಬಲಿ

Public TV
By Public TV
6 minutes ago
BBMP
Districts

ನವೆಂಬರ್-ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ಅನುಮಾನ?

Public TV
By Public TV
19 minutes ago
mahadevappa
Bengaluru City

ಕಾನೂನು, ಕಾಯ್ದೆ ಪ್ರಕಾರವೇ ಗ್ಯಾರಂಟಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ಬಳಕೆ: ಮಹದೇವಪ್ಪ

Public TV
By Public TV
20 minutes ago
Dharmasthala SIT 1 1
Dakshina Kannada

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ನೇತ್ರಾವತಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?