Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Pahalgam Attack | 11 ವರ್ಷದಿಂದ ದಿನದ 24 ಗಂಟೆ ಮುಸ್ಲಿಂ.. ಮುಸ್ಲಿಂ.. ಮುಸ್ಲಿಂ.. – ಕೇಂದ್ರದ ವಿರುದ್ಧ ಸಂತೋಷ್‌ ಲಾಡ್‌ ಸಿಡಿಮಿಡಿ

Public TV
Last updated: April 25, 2025 11:00 pm
Public TV
Share
2 Min Read
Santosh Lad 2
SHARE

– ಅಲ್ಲಿ 2,000 ಜನರನ್ನ ಹೆಗಲಮೇಲೆ ಹೊತ್ಕೊಂಡು ಬಂದವರು ಮುಸ್ಲಿಮರೇ
– 2014ರಿಂದ ಆಗಿರುವ ಹಿಂದೂಗಳ ಸಾವಿನ ಹೊಣೆ ಕೇಂದ್ರವೇ ಹೊರಬೇಕೆಂದ ಸಚಿವ

ಬೆಂಗಳೂರು: ಕಳೆದ 11 ವರ್ಷಗಳಿಂದಲೂ ಕೇಂದ್ರ ಸರ್ಕಾರ ದಿನದ 24 ಗಂಟೆಯೂ ಮುಸ್ಲಿಂ.. ಮುಸ್ಲಿಂ.. ಮುಸ್ಲಿಂ.. ಅಂತ ಬೈಯೋದು ಬಿಟ್ರೆ ಬೇರೇನು ಮಾಡಿಲ್ಲ ಎಂದು ಸಚಿವ ಸಂತೋಷ್‌ ಲಾಡ್‌ (Santosh Lad) ಸಿಡಿಮಿಡಿಗೊಂಡಿದ್ದಾರೆ.

Pahalgam Terror Attack | ನಿಮ್ಮ ಅವಧಿಯಲ್ಲಿ ಹಿಂದೂಗಳಿಗೆ ಅನ್ಯಾಯ ಆಯ್ತು ಅಂತ ಒಪ್ಪಿಕೊಳ್ಳಿ, ನೀವು ಹಿಂದೂಗಳನ್ನ ಕೊಂದಿರೋದು: ಕೇಂದ್ರದ ವಿರುದ್ಧ ಸಂತೋಷ್ ಲಾಡ್ ಕೆಂಡ https://t.co/uAkS6XsxQD#Pahalgam #Kashmir #PahalgamTerrorAttack #PMModi #AmitShah #Pakistan #SantoshLad pic.twitter.com/TGELPpCxBx

— PublicTV (@publictvnews) April 25, 2025

ಬೆಂಗಳೂರಿನಲ್ಲಿ (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಜಿಕಲ್‌ ಸ್ಟ್ರೈಕ್‌ ಏನಾಯ್ತು? ಪುಲ್ವಾಮಾ ದಾಳಿ ಏನಾಯ್ತು? ಯಾರೂ ಚರ್ಚೆ ಮಾಡ್ತಿಲ್ಲ ಯಾಕೆ..? ಯಾಕೆ ಮೆರವಣಿಗೆ ಮಾಡ್ತೀರ, ನೀವು ಹಿಂದೂಗಳನ್ನ ಕೊಂದಿರೋದು. 2014ರಿಂದ ಆಗಿರುವ ಹಿಂದೂಗಳ ಹತ್ಯೆಯ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು. 20 ರಾಜ್ಯಗಳಲ್ಲಿ ನಿಮ್ಮ ಪಕ್ಷದವರೇ ಸಿಎಂ, ನೀವೆ ಪಿಎಂ, ಬರೀ ಹಿಂದೂ ಮುಸ್ಲಿಂ (Hindu – Muslim) ಬಿಟ್ರೆ ಬೇರೆ ಏನೂ ಇಲ್ಲ. ಸರ್ಕಾರ ಬಂದು ಇವತ್ತು ವೈಫಲ್ಯ ಅಂತ ಹೇಳಿದೆ. ಇವರೇ ಆರ್ಟಿಕಲ್ 370 ರದ್ದು ಮಾಡಿದ್ರು, ಎಲ್ಲಾ ನಮ್ಮ ಕಂಟ್ರೋಲ್‌ನಲ್ಲೇ ಇದೆ ಅಂದ್ರು. ನಾನು ನೋಡಿದಂತೆ ಅಲ್ಲಿನ ಲೋಕಲ್ ಜನ ಬ್ಯೂಟಿಫುಲ್ ಆಗಿದ್ದಾರೆ. ಆದ್ರೆ ನಮಗಿಂತ ಹೆಚ್ಚಾಗಿ ಅಲ್ಲಿನ ಜನ ರಕ್ತ ಕಣ್ಣೀರು ಹಾಕ್ತಿದ್ದಾರೆ. ಅಲ್ಲಿ ಹೇಗೆ ಬಂದೂಕು ಬಂತು, ಅವರು ಹೇಗೆ ಬಂದ್ರು ಅದರ ಬಗ್ಗೆ ಚರ್ಚೆ ಮಾಡ್ತಿಲ್ಲ ಎಂದು ಕಿಡಿ ಕಾರಿದರು.

ಕಳೆದ 11 ವರ್ಷಗಳಿಂದ ದಿನಬೆಳಗಾದ್ರೆ ಹಿಂದೂ ಮುಸ್ಲಿಂ ವಿಚಾರ ಬಿಟ್ಟರೆ ಬೇರೇನಿಲ್ಲ. ಅಲ್ಲಿ ಉಗ್ರರ ದಾಳಿಯಾದಾಗ 2000 ಪ್ರವಾಸಿಗರನ್ನು ಸ್ಥಳಾಂತರ ಮಾಡಿದ್ದು, ಅದೇ ಮುಸ್ಲಿಮರು. ಇನ್ನಾದ್ರೂ ಒಳ್ಳೆಯ ವಿಷಯಗಳ ಬಗ್ಗೆ ಚರ್ಚೆ ಮಾಡೋಣ ಅಂತ ಮನವಿ ಮಾಡಿದರು.

ಪಹಲ್ಗಾಮ್ ಘಟನೆ ಬಗ್ಗೆ ಇಡೀ ದೇಶಕ್ಕೆ ಗೊತ್ತಿದೆ. ಪ್ರವಾಸಿಗರಿಗೆ ಆಗಿದ್ದು ಭಯಾನಕ ಘಟನೆ. ರಾಜಕೀಯ ಮಾತನಾಡಬಾರದು ಅಂದುಕೊಂಡಿದ್ದೇವೆ. ಆದರೆ ಕೆಲವಾರು ಪ್ರಶ್ನೆ ನಮ್ಮನ್ನ ಕಾಡುತ್ತಿವೆ. ಇಂತಹ ಘಟನೆಗಳು ನಡೆದಾಗ ಯಾವ ಕೇಂದ್ರ ಸಚಿವರೂ ಪ್ರತಿಕ್ರಿಯೆ ನೀಡಲ್ಲ. ನೇರವಾಗಿ ಬಂದು ಉತ್ತರ ಕೊಟ್ಟಿರೋದು ಬೆರಳೆಣಿಕೆಯಷ್ಟು ಸಚಿವರು ಮಾತ್ರ. ಕೇವಲ ಸ್ಟುಡಿಯೋಗಳಲ್ಲಿ ಪರ ವಿರೋಧ ಚರ್ಚೆಗಳು ಆಗ್ತಿವೆ. ಕೇಂದ್ರ ಸರ್ಕಾರದಲ್ಲಿ ಆದ ವೈಫಲ್ಯದ ಬಗ್ಗೆ ಯಾರೂ ಮಾತನಾಡ್ತಿಲ್ಲ. 2 ದಿನಗಳ ಬಳಿಕ ಕೇಂದ್ರ ಸರ್ಕಾರ ಭದ್ರತಾ ಲೋಪ ಆಗಿದೆ ಅಂತ ಒಪ್ಪಿಕೊಳ್ಳುವಷ್ಟರಲ್ಲಿ, ಆಗಬಾರದ್ದೆಲ್ಲ ಚರ್ಚೆ ಆಗಿ ಹೋಗಿತ್ತು ಎಂದು ಅಸಮಾಧಾನ ಹೊರಹಾಕಿದರು.

ಕೇಂದ್ರ ಗೃಹ ಸಚಿವರ ರಾಜೀನಾಮೆ ಯಾರೂ ಕೇಳ್ತಿಲ್ಲ. ನಮ್ಮ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆಕೇಳ್ತಿದ್ದಾರೆ. ಶ್ರೀನಗರದಲ್ಲಿ ಹೆಜ್ಜೆ ಹೆಜ್ಜೆಗೂ ಚೆಕ್‌ಪೋಸ್ಟ್ ಇದೆ. ಒಂದು ಹುಳನೂ ತಪ್ಪಿಸಿಕೊಂಡು ಹೋಗೋಕೆ ಆಗಲ್ಲ. ಗೃಹ ಸಚಿವರನ್ನ ಕೇಳ್ತೇನೆ, ದಾಳಿ ನಡೆದಾಗ ಯಾಕೆ ಒಬ್ಬ ಸೆಕ್ಯೂರಿಟಿನೂ ಇಲ್ಲ ಯಾಕೆ..? ಇದರ ಬಗ್ಗೆ ಚರ್ಚೆ ಆಗಬೇಕೇ ವಿನಃ ಬೇರೆಯದ್ದಕ್ಕಲ್ಲ. ಮಾತಿಗೆ ಮುನ್ನ ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹಿಂದೂ-ಮುಸ್ಲಿಂ ಅಂತಾರೆ. ಹಾಗಾದ್ರೆ ನಿಮ್ಮ ಅವಧಿಯಲ್ಲಿ ಹಿಂದೂಗಳಿಗೆ ಅನ್ಯಾಯ ಆಯ್ತು ಅಂತ ಒಪ್ಪಿಕೊಳ್ಳಿ. ಇಂತಹ ದೊಡ್ಡ ಘಟನೆ ನಡೆದರೂ ಪ್ರಧಾನಿ ಮೋದಿ ಬಿಹಾರ ಚುನಾವಣೆ ಪ್ರಚಾರದಲ್ಲಿ ಭಾಗವಹಿಸ್ತಾರೆ ಅಂತ ಕೇಂದ್ರದ ವಿರುದ್ಧ ಹರಿಹಾಯ್ದರು.

TAGGED:Amit ShahkashmirPahalgamPahalgam Terror AttackpakistanPM ModiSantosh Ladಅಮಿತ್ ಶಾನರೇಂದ್ರ ಮೋದಿಪಹಲ್ಗಾಮ್ ದಾಳಿಮುಸ್ಲಿಂಸಂತೋಷ್ ಲಾಡ್ಹಿಂದೂ
Share This Article
Facebook Whatsapp Whatsapp Telegram

You Might Also Like

Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
20 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
31 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
37 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
56 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
1 hour ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?