Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಹಲ್ಗಾಮ್ ಉಗ್ರರ ದಾಳಿ – ಕೇಂದ್ರದ ನಿರ್ಧಾರಕ್ಕೆ ನಮ್ಮ ಸಹಕಾರವಿದೆ: ದೇವೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಹಲ್ಗಾಮ್ ಉಗ್ರರ ದಾಳಿ – ಕೇಂದ್ರದ ನಿರ್ಧಾರಕ್ಕೆ ನಮ್ಮ ಸಹಕಾರವಿದೆ: ದೇವೇಗೌಡ

Bengaluru City

ಪಹಲ್ಗಾಮ್ ಉಗ್ರರ ದಾಳಿ – ಕೇಂದ್ರದ ನಿರ್ಧಾರಕ್ಕೆ ನಮ್ಮ ಸಹಕಾರವಿದೆ: ದೇವೇಗೌಡ

Public TV
Last updated: April 29, 2025 3:14 pm
Public TV
Share
3 Min Read
h.d.devegowda
SHARE

ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ (Pahalgam Terror Attack) ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಯಾವುದೇ ನಿರ್ಣಯ ತೆಗೆದುಕೊಂಡರೂ ನನ್ನ ಸಂಪೂರ್ಣ ಬೆಂಬಲ ಇರಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H D Devegowda) ಹೇಳಿದರು.

ಪಹಲ್ಗಾಮ್ ಘಟನೆಗೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಶ್ಮೀರ ಘಟನೆ ಬಗ್ಗೆ ಕೇಂದ್ರ ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ಮೊದಲ ಬಾರಿಗೆ ಪ್ರವಾಸಿಗರ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಪಾಕಿಸ್ತಾನದ (Pakistan) ಬೆಂಬಲದಿಂದ ಮಾಡಿದ್ದಾರೆ ಎಂಬ ಮಾಹಿತಿ ಕೇಂದ್ರದ ಬಳಿ ಇದೆ. ಇಡೀ ದೇಶದ ಎಲ್ಲಾ 140 ಕೋಟಿ ಜನರು ಈ ವಿಷಯದಲ್ಲಿ ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ನೇತೃತ್ವದಲ್ಲಿ ಯಾವ ಕ್ರಮ ತೆಗೆದುಕೊಳ್ಳುತ್ತಾರೋ ಅದಕ್ಕೆ ಎಲ್ಲರೂ ಬೆಂಬಲ ಕೊಡಬೇಕು. ಒಂದೇ ಧ್ವನಿಯಲ್ಲಿ ಬೆಂಬಲ ಕೊಡಬೇಕು ಎಂದರು. ಇದನ್ನೂ ಓದಿ: Pahalgam Terrorist Attack | ನಾಳೆ ಮೋದಿ ನೇತೃತ್ವದಲ್ಲಿ 2ನೇ ಸುತ್ತಿನ ಹೈವೋಲ್ಟೇಜ್‌ ಸಭೆ

ನಾನು ರಾಜಕೀಯ ಪಕ್ಷದ ನಾಯಕ, ಎನ್‌ಡಿಎ ಮುಖಂಡನಾಗಿ ಹೇಳುತ್ತೇನೆ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ. ಕೇಂದ್ರದ ಎಲ್ಲಾ ನಿರ್ಣಯಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ಈ ವಿಷಯದಲ್ಲಿ ತೆಗೆದುಕೊಳ್ಳುವ ಎಲ್ಲಾ ನಿರ್ಣಯಕ್ಕೆ ನಮ್ಮ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಏ.20ರಂದೇ ನಡೆಯಬೇಕಿದ್ದ ಪಹಲ್ಗಾಮ್ ದಾಳಿ 2 ದಿನ ತಡವಾಗಿದ್ದೇಕೆ? – NIA ತನಿಖೆಯಲ್ಲಿ ರೋಚಕ ಅಂಶ

ಪ್ರಧಾನಿ ಮೋದಿ (Narendra Modi) ಅವರೇನು ನನಗೆ ಕರೆ ಮಾಡಿಲ್ಲ. ಮಾಡೋ ಅವಶ್ಯಕತೆಯೂ ಇಲ್ಲ. ಅವಶ್ಯಕತೆ ಬಿದ್ದರೆ ನಾನೇ ಮೋದಿ ಅವರಿಗೆ ಪತ್ರ ಬರೆಯುತ್ತೇನೆ. ನಾನು ಅನೇಕ ಸಮಯದಲ್ಲಿ ಪತ್ರಗಳನ್ನು ಬರೆದಿದ್ದೇನೆ. ಮುಂದೆಯೂ ಬರೆಯುತ್ತೇನೆ. ನನಗೆ ಅನ್ನಿಸಿದ್ದನ್ನ ಆತಂಕ ಇಲ್ಲದೇ ಹೇಳುತ್ತೇನೆ. ಮೋದಿ ಹಾಗೂ ನನ್ನ ಸಂಬಂಧ ಇಂದು-ನಾಳೆ ಅಂತ ಅಲ್ಲ. ನನ್ನ ಜೀವನದ ಕೊನೆ ಘಟ್ಟದಲ್ಲಿ ಈ ನಿರ್ಣಯ ಮಾಡಿದ್ದೇನೆ ಎಂದು ಹೇಳಿದರು.

ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ತಡೆ ಹಿಡಿದಿರುವ ವಿಚಾರ ಮತ್ತು ಯುದ್ಧ ಆಗಬೇಕು ಎಂಬ ಒತ್ತಡಗಳ ವಿಚಾರವಾಗಿ ಪ್ರತಿಕ್ರಿಯಿಸಿದರು. ಯುದ್ದ ಮಾಡಬೇಕು ಅನ್ನುವ ಸನ್ನಿವೇಶದ ಬಗ್ಗೆ ನಮ್ಮ ದೇಶದ ಪ್ರಧಾನಿಗಳು ತೀರ್ಮಾನ ಮಾಡ್ತಾರೆ. ಇಡೀ ರಾಷ್ಟ್ರದ ನಾಯಕತ್ವ ಅಲ್ಲ. ವಿಶ್ವದಲ್ಲಿ ಮೋದಿ ಅವರಿಗೆ ಗೌರವ ಇದೆ. ವಿಶ್ವದ ಅನೇಕ ನಾಯಕರು ಈ ಘಟನೆ ಖಂಡಿಸಿದ್ದಾರೆ. ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಕೂಡಾ ಮೊದಲ ಬಾರಿಗೆ ರಿಯಾಕ್ಟ್ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಪಹಲ್ಗಾಮ್‌ಗೆ ಹೋಗಿದ್ರೆ ಜಮೀರ್, ಖಾದರ್ ಬಿಟ್ಟು ಸಿದ್ದರಾಮಯ್ಯಗೆ ಗುಂಡು ಹೊಡೆಯುತ್ತಿದ್ರು: ಮುತಾಲಿಕ್

ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಕೊಡುವ ಅನೇಕ ರಾಷ್ಟ್ರಗಳು ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ. ಮುಂದೆ ಏನಾಗಬಹುದು ಅನ್ನೋ ಬಗ್ಗೆ ನಾನು ಈಗ ಹೇಳೋಕೆ ಆಗುವುದಿಲ್ಲ. ಆದರೆ ಪ್ರಧಾನಮಂತ್ರಿಗಳು ತೆಗೆದುಕೊಳ್ಳುವ ಆಯಾ ಸನ್ನಿವೇಶಕ್ಕೆ ತಕ್ಕಂತೆ ಏನು ನಿರ್ಣಯ ತೆಗೆದುಕೊಳ್ಳುತ್ತಾರೆ. ಅದಕ್ಕೆ ಇಡೀ ರಾಷ್ಟ್ರದ ಜನತೆ ಬೆಂಬಲ ಕೊಡಬೇಕು. ನಾನು ಒಬ್ಬ ಮಾತ್ರ ಅಲ್ಲ. ಎಲ್ಲರೂ ಬೆಂಬಲ ಕೊಡಬೇಕು. ಇದರಲ್ಲಿ ಯಾರು ರಾಜಕೀಯ ಮಾಡಬಾರದು. ಪ್ರಧಾನಿಗಳು ತೆಗೆದುಕೊಳ್ಳೋ ನಿರ್ಧಾರಕ್ಕೆ ನಾವೆಲ್ಲರೂ ಒಗ್ಗಟ್ಟಿನಿಂದ ಸಹಕಾರ ಕೊಡಬೇಕು. ಇಂತಹ ಘಟನೆ ಮುಂದೆ ನಡೆಯಬಾರದು. ಕೃತ್ಯ ಮಾಡಿರೋರನ್ನ ಪತ್ತೆ ಹಚ್ಚಿ ಅವರಿಗೆ ಶಿಕ್ಷೆ ಕೊಡೋವರೆಗೂ, ಯಾರು ಇದರ ಹಿಂದೆ ಇದ್ದಾರೆ ಅವರಿಗೂ ಶಿಕ್ಷೆ ಕೊಡೋಕೆ ಪ್ರಧಾನಿಗಳು ತೆಗೆದುಕೊಳ್ಳೋ ನಿರ್ಣಯಕ್ಕೆ, ರಕ್ಷಣಾ ಹಾಗೂ ಗೃಹ ಸಚಿವರು ತೆಗೆದುಕೊಳ್ಳೋ ನಿರ್ಧಾರಕ್ಕೆ ನಾವು, ನಮ್ಮ ಪಕ್ಷ ಬದ್ಧರಾಗಿ ಇದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಜೊತೆಗೆ ನಾವಿದ್ದೇವೆ, ಪಾಕ್‌ ವಿರುದ್ಧ ಇಂದಿರಾ ಗಾಂಧಿಯಂತೆ ಕ್ರಮ ಕೈಗೊಳ್ಳಬೇಕು: ಎಂ.ಬಿ ಪಾಟೀಲ್‌

ಘಟನೆ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ರಾಜಕೀಯ ಮಾಡ್ತಿರೋ ವಿಚಾರಕ್ಕೆ ಮಾತನಾಡಿದ ಅವರು, ಈಗಾಗಲೇ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು ಘಟನೆ ಬಗ್ಗೆ ಯಾವುದೇ ಕೊಂಕು ಇಲ್ಲದೇ ಪ್ರಧಾನಿಗಳ ಜೊತೆ ನಿಲ್ಲೋದಾಗಿ ಹೇಳಿದ್ದಾರೆ. ಖರ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು. ಅವರು ಹಿರಿಯ ಮುಖಂಡರು, ಅನುಭವದಿಂದ ಹೇಳಿದ್ದಾರೆ. ಕಾಂಗ್ರೆಸ್ ವರಿಷ್ಠರು ಮಾತಾಡಿರೋ ಮಾತಿಗೆ ಮಾತ್ರ ಬೆಲೆ ಹೆಚ್ಚು. ಇದಕ್ಕಿಂತ ಹೆಚ್ಚು ನಾನೇನೂ ಹೇಳೋದಿಲ್ಲ. ಕಾಂಗ್ರೆಸ್‌ನ ಸಹಕಾರ ಇದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರ ಮಾತಿಗೆ ಬೆಲೆ ಇಲ್ಲ ಅಂತ ಪರೋಕ್ಷವಾಗಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟರು.

TAGGED:bengaluruh d devegowdajdsPahalgam Terror Attackಜೆಡಿಎಸ್ಪಹಲ್ಗಾಮ್‌ ಉಗ್ರರ ದಾಳಿಬೆಂಗಳೂರುಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Mallamma Bigg Boss Kannada 12
ಬಿಗ್‌ಬಾಸ್ ಮನೆಗೆ ಮತ್ತೆ ಮರಳಿದ ಮಲ್ಲಮ್ಮ – ಧ್ರುವಂತ್‌ಗೆ ಶಾಕ್
Latest Top Stories TV Shows
Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows

You Might Also Like

donald trump
Latest

ನಾನೇ ವೆನೆಜುವೆಲಾದ ಹಂಗಾಮಿ ಅಧ್ಯಕ್ಷ – ಡೊನಾಲ್ಡ್‌ ಟ್ರಂಪ್‌ ಘೋಷಣೆ

Public TV
By Public TV
25 minutes ago
HR Job
Bengaluru City

ನಾನ್ ಕನ್ನಡಿಗ ಹೆಚ್‌ಆರ್ ಕೆಲಸಕ್ಕೆ ಬೇಕು – ಕನ್ನಡಿಗರನ್ನ ಕೆರಳಿಸಿದ ಬೆಂಗಳೂರಿನ ಖಾಸಗಿ ಕಂಪನಿ

Public TV
By Public TV
1 hour ago
Namma Metro Purple Line
Bengaluru City

ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ

Public TV
By Public TV
1 hour ago
girl dating app
Bengaluru City

AI ಯುವತಿಯ ಮೋಹಕ್ಕೆ ಬಿದ್ದು ಬಟ್ಟೆ ಬಿಚ್ಚಿ ಪೆಚ್ಚಾದ ಯುವಕ – 1.53 ಲಕ್ಷ ಲೂಟಿ

Public TV
By Public TV
2 hours ago
Yathindra Siddaramaiah Class To Irrigation Officer Mysuru
Districts

ಜನಸಂಪರ್ಕ ಸಭೆ ಬೇಕಾಬಿಟ್ಟಿ ಮಾಡ್ತಿದ್ದೀವಾ? – ನೀರಾವರಿ ಇಲಾಖೆ ಅಧಿಕಾರಿಗೆ ಯತೀಂದ್ರ ಕ್ಲಾಸ್

Public TV
By Public TV
3 hours ago
SSLC preparatory exam question paper leak Case 8 people arrested
Districts

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌- 8 ಮಂದಿ ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?