Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಲ್ಲಿ ಬದಲಾವಣೆ ತಂದಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಲ್ಲಿ ಬದಲಾವಣೆ ತಂದಿದೆ: ಡಿಕೆಶಿ

Bengaluru City

ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಲ್ಲಿ ಬದಲಾವಣೆ ತಂದಿದೆ: ಡಿಕೆಶಿ

Public TV
Last updated: May 1, 2025 4:52 pm
Public TV
Share
4 Min Read
D K Shivakumar
SHARE

– ಆಯುಕ್ತರಿಗೆ ನೀಡುವ ಗೌರವವನ್ನು ಪೌರಕಾರ್ಮಿಕರಿಗೂ ನೀಡಬೇಕು; ಡಿಸಿಎಂ

ಬೆಂಗಳೂರು: ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತಂದು, ಸಮಾಜದಲ್ಲಿ ಸಮಾನತೆ ತರುವ ಕೆಲಸ ಮಾಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D K Shivakumar) ತಿಳಿಸಿದರು.

D K Shivakumar 1

ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಗುರುವಾರ ನಡೆದ ಪೌರ-ಕಾರ್ಮಿಕರ ದಿನಾಚರಣೆ  ಹಾಗೂ 12,692 ಮಂದಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ಇದನ್ನೂ ಓದಿ: ಜನರ ಒತ್ತಡಕ್ಕೆ ಕೇಂದ್ರ ಸರ್ಕಾರ ಜಾತಿಗಣತಿ ಘೋಷಣೆ: ಮಲ್ಲಿಕಾರ್ಜುನ ಖರ್ಗೆ

ಸಮಾಜ ಸುಭದ್ರವಾಗಿರಲು ನಾಲ್ಕು ಆಧಾರ ಸ್ತಂಭಗಳಿರಬೇಕು. ಅವುಗಳೆಂದರೆ ಕೃಷಿಕ, ಕಾರ್ಮಿಕ, ಸೈನಿಕ ಹಾಗೂ ಶಿಕ್ಷಕ. ಕಾರ್ಮಿಕರು ಈ ಸಮಾಜದ ಆಧಾರಸ್ತಂಭ. ನಮ್ಮ ಸರ್ಕಾರ ಪೌರಕಾರ್ಮಿಕರನ್ನು ದೇವರ ಮಕ್ಕಳು, ಸ್ವಚ್ಛತಾ ರಾಯಭಾರಿಗಳು ಎಂದು ಭಾವಿಸುತ್ತಿದೆ. ನೀವು ಸಮಾಜದ ಆರೋಗ್ಯ ಕಾಪಾಡುತ್ತಿರುವ ವೈದ್ಯರು, ನೀವು ಬೆಂಗಳೂರು (Bengaluru) ನಗರವನ್ನು ಸುಂದರವಾಗಿಟ್ಟು ಸೇವೆ ಮಾಡಿರುವುದಕ್ಕೆ ಈ ನಗರಕ್ಕೆ ವಿಶ್ವ ಮಟ್ಟದ ಹೆಸರು ಬಂದಿದೆ. ಇಡೀ ವಿಶ್ವಕ್ಕೆ ದೊಡ್ಡ ಸೇವೆ ಮಾಡುವ ಕಾರ್ಮಿಕರ ದಿನವಿಂದು ಎಂದು ಶ್ಲಾಘಿಸಿದರು.

ಪುರದ ಹಿತ ಕಾಪಾಡುತ್ತಿರುವವರು ಪೌರ ಕಾರ್ಮಿಕರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರ ಮಾರ್ಗದರ್ಶನದಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಾವು ವಿರೋಧ ಪಕ್ಷದಲ್ಲಿದ್ದಾಗ ಹಾಗೂ ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ (Congress) ಪಕ್ಷ ಪೌರ ಕಾರ್ಮಿಕರನ್ನು ಸರ್ಕಾರಿ ಕಾರ್ಮಿಕರನ್ನಾಗಿ ಮಾಡುವ ಮಾತು ಕೊಟ್ಟಿದ್ದೆವು. ನಾವುಗಳು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಪೌರ ಕಾರ್ಮಿಕರ ಮಕ್ಕಳೇ ಇಂದು ಈ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ, ಬುದ್ಧಿವಂತರಾಗಿ ದೊಡ್ಡ ಹುದ್ದೆ ಅಲಂಕರಿಸುವಂತೆ ಮಾಡಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರದ ಸೌಲಭ್ಯಗಳನ್ನು ಬಳಸಿ ಪ್ರಗತಿ ಹೊಂದಿ: ಪೌರಕಾರ್ಮಿಕರಿಗೆ ಸಿಎಂ ಕಿವಿಮಾತು

ಯೋಗಿ ಎನಿಸಿಕೊಳ್ಳುವುದಕ್ಕಿಂತ ಉಪಯೋಗಿ ಎನಿಸಿಕೊಂಡರೆ ಬದುಕಿಗೆ ಹೆಚ್ಚು ಬೆಲೆ. ಪೌರಕಾರ್ಮಿಕರನ್ನು ಕುವೆಂಪು ಅವರು ಶಿವನಿಗೆ ಹೋಲಿಸಿದ್ದರು. `ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ. ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ. ಅಂಜದಿರು ಸೋದರನೇ ನಿಮ್ಮ ಜತೆ ನಾವಿದ್ದೇವೆ’ ಎಂದು ಕುವೆಂಪು ಅವರು ಹೇಳಿದ್ದರು. ಇಂದು ನಿಮ್ಮ ಬದುಕು ಬದಲಾವಣೆಯಾಗುತ್ತಿರುವ ಬಹಳ ಪವಿತ್ರವಾದ ದಿನ. ಇಂದು ನೀವು ಸರ್ಕಾರಿ ನೌಕರರಾಗಿದ್ದೀರಿ ಎಂದು ತಿಳಿಸಿದರು. ಇದನ್ನೂ ಓದಿ: ಎಎಸ್‍ಪಿಗೆ ಸಿಎಂ ಕೈ ಎತ್ತಿದ್ದಾರೆ, ಏಕವಚನದಲ್ಲಿ ಕರೆದಿದ್ದಾರೆ ಎಂಬುದು ಮಾಧ್ಯಮ ಸೃಷ್ಟಿ: ರಾಜಣ್ಣ

ಮಲ್ಲಿಕಾರ್ಜುನ ಖರ್ಗೆ ಅವರು ಮುನ್ಸಿಪಲ್ ಅಧ್ಯಕ್ಷರಾಗಿ ಜೀವನ ಆರಂಭಿಸಿದವರು. ಇಂದು ದೇಶದ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದಾರೆ. ಮಹಾತ್ಮಾ ಗಾಂಧೀಜಿ, ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಲಂಕರಿಸಿದ ಹುದ್ದೆಯಲ್ಲಿದ್ದಾರೆ. ಖರ್ಗೆ ಅವರು ಕಾರ್ಮಿಕ ಸಚಿವರಾಗಿ ಮಾಡಿದ ಕೆಲಸಗಳು ದೇಶದ ಇತಿಹಾಸ ಪುಟ ಸೇರಿವೆ. ದೇಶದ ಉದ್ದಗಲದಲ್ಲಿ ಇಎಸ್‌ಐ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಿದ್ದಾರೆ. ಹೀಗಾಗಿ ಅವರಿಂದಲೇ ಈ ಕಾರ್ಯಕ್ರಮ ಉದ್ಘಾಟಿಸಲು ತೀರ್ಮಾನಿಸಿದ್ದೇವೆ ಎಂದರು. ಇದನ್ನೂ ಓದಿ: Haveri | ರಸ್ತೆ ಮಧ್ಯೆ ಬಸ್ ನಿಲ್ಲಿಸಿ ನಮಾಜ್ – ಡ್ರೈವರ್ ಅಮಾನತು

ಪೌರ ಕಾರ್ಮಿಕರ ಅಭಿವೃದ್ಧಿಗಾಗಿ ಪಾಲಿಕೆ ಬಜೆಟ್‌ನಲ್ಲಿ 600 ಕೋಟಿ ರೂ. ಹಣ ಮೀಸಲಿಡಲಾಗಿದ್ದು, ಒಂದೇ ಒಂದು ರೂಪಾಯಿ ಲಂಚ ಪಡೆಯದೇ ನಿಮ್ಮನ್ನು ಖಾಯಂ ಮಾಡಲಾಗಿದೆ. ಸಿಂಧುತ್ವ ವಿಚಾರದಲ್ಲಿ ಕೆಲವು ಗೊಂದಲಗಳಿರುವ ಕಾರಣಕ್ಕೆ ಕೆಲವರ ಕೆಲಸ ಖಾಯಂ ಆಗಿಲ್ಲ. ಈ ಬಗ್ಗೆ ಪ್ರತ್ಯೇಕವಾಗಿ ಬೂತ್ ಆರಂಭಿಸಿ, ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಿಸಿ ನಿಮ್ಮೆಲ್ಲರಿಗೂ ನ್ಯಾಯ ಒದಗಿಸಲಾಗುವುದು ಎಂದು ವಾಗ್ದಾನ ನೀಡಿದರು. ಇದನ್ನೂ ಓದಿ: ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸ್ತೀರಾ? – ಪಹಲ್ಗಾಮ್‌ ಅರ್ಜಿದಾರರ ವಿರುದ್ಧ ಸುಪ್ರೀಂ ಕೆಂಡಾಮಂಡಲ

ಇದ್ದಾಗ ರೊಟ್ಟಿ ಕೊಟ್ಟರೆ, ಸತ್ತಾಗ ಸ್ವರ್ಗ ಸಿಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ನಮ್ಮ ಸರ್ಕಾರ ನಿಮ್ಮ ಸರ್ಕಾರ. ಬೆಂಗಳೂರಿನ ಕಾಂಗ್ರೆಸ್ ಶಾಸಕರು ಸದಾ ನಿಮ್ಮನ್ನು ಖಾಯಂ ಮಾಡುವ ಬಗ್ಗೆ ನನ್ನ ಮೇಲೆ ಒತ್ತಡ ಹಾಕುತ್ತಿದ್ದರು. ನಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ ಈ ಕೆಲಸ ಮಾಡಿದ್ದೇವೆ. ಇದು ನಮ್ಮ ಸಂಕಲ್ಪ. ಸಮಾಜ ಎನ್ನುವ ಚಕ್ರದಲ್ಲಿ ಕೆಳಗಿರುವವರು ಮೇಲಕ್ಕೆ ಹೋಗುತ್ತಾರೆ. ಮೇಲಿರುವವರು ಕೆಳಗೆ ಹೋಗುತ್ತಾರೆ ಎಂದು ವಿವೇಕಾನಂದರು ಹೇಳಿದ್ದಾರೆ. ಅದೇ ರೀತಿ ನಿಮಗೆ ಸಮಾನತೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಬಸವಲಿಂಗಪ್ಪ, ಐಪಿಡಿ ಸಾಲಪ್ಪ ಅವರ ಜತೆ ನಾನು ರಾಜಕೀಯವಾಗಿ ಕೆಲಸ ಮಾಡಿದ್ದು, ಅವರನ್ನು ಸ್ಮರಿಸುತ್ತೇನೆ. ಅವರು ನಿಮ್ಮ ಬದುಕಿನ ಕಲ್ಯಾಣಕ್ಕೆ ಹೋರಾಟ ಮಾಡಿದ್ದಾರೆ. ಡಿ.ಸಾಲಪ್ಪ ಅವರು ನಿಮ್ಮ ಬಗ್ಗೆ ವರದಿ ನೀಡಿದ್ದಾರೆ. ಆ ವರದಿಯನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸುತ್ತಿದ್ದೇವೆ. ನಿಮ್ಮ ಮಕ್ಕಳ ಭವಿಷ್ಯ ಗಟ್ಟಿಗೊಳಿಸಲು ಅನೇಕ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕಾಗಿ 700 ಕೋಟಿ ರೂ. ಮೀಸಲಿಡಲಾಗಿದೆ. ನೀವು ನಿವೃತ್ತಿಯಾದಾಗ 10 ಲಕ್ಷ ರೂ. ಹಣವನ್ನು ಡೆಪಾಸಿಟ್ ಮಾಡಿ 6 ಸಾವಿರ ರೂ. ಪಿಂಚಣಿ ದೊರೆಯುವಂತೆ ಯೋಜನೆ ರೂಪಿಸಿದ್ದೇವೆ. ನಿಮಗೆ ಆರೋಗ್ಯ, ಮಕ್ಕಳ ಶಿಕ್ಷಣ, ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಹಿಂದೂಗಳ ಜೊತೆ ಹಿಂದೂಗಳೇ ನಿಲ್ಲಬೇಕು – 26 ಕುಟುಂಬಕ್ಕೆ ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

2017ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ 10 ಸಾವಿರ ಪೌರ ಕಾರ್ಮಿಕರನ್ನು ನೇರ ನೇಮಕ ಮಾಡಿತ್ತು. ರಾಜ್ಯದಾದ್ಯಂತ ನಿಮಗಾಗಿ 7.70 ಲಕ್ಷ ಮನೆ ನಿರ್ಮಿಸಲಾಗಿತ್ತು. 1 ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗಿದೆ. 2024-25ನೇ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ವಿಮೆ ಘೋಷಿಸಿದ್ದಾರೆ ಎಂದು ಸರ್ಕಾರದ ಕಾರ್ಯಕ್ರಮಗಳನ್ನು ವಿವರಿಸಿದರು. ಇದನ್ನೂ ಓದಿ: ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ, ತನಿಖೆಗೆ ಸಹಕರಿಸಿ: ಪಾಕ್‌ಗೆ ಬುದ್ದಿಮಾತು ಹೇಳಿದ ಅಮೆರಿಕ

ಕೋವಿಡ್ ಸಂದರ್ಭದಲ್ಲಿ ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ವಾರಿಯರ್‌ನಂತೆ ಇಡೀ ರಾಜ್ಯವನ್ನು ಕಾಪಾಡಿದ್ದನ್ನು ನಾವು ಮರೆಯಲು ಸಾಧ್ಯವಿಲ್ಲ. ಪೌರ ಕಾರ್ಮಿಕರನ್ನು ಯಾರೂ ಕೀಳಾಗಿ ಕಾಣುವಂತಿಲ್ಲ. ನಾವು ಆಯುಕ್ತರಿಗೆ ನೀಡುವ ಗೌರವವನ್ನು ಪೌರಕಾರ್ಮಿಕರಿಗೂ ನೀಡಬೇಕು ಎಂದು ತಿಳಿಸಿದರು.

TAGGED:bengalurud k shivakumarInternational Labours Daypourakarmikasಡಿ ಕೆ ಶಿವಕುಮಾರ್‌ʼಪೌರಕಾರ್ಮಿಕರುಬೆಂಗಳೂರು
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

Husband commits suicide after wife elopes with her Lover in Davanagere
Crime

ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿ – ನೇಣಿಗೆ ಕೊರಳೊಡ್ಡಿದ ಪತಿ

Public TV
By Public TV
4 minutes ago
arrest crime
Latest

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಬೇಹುಗಾರಿಕೆ ಶಂಕೆ; ರಾಜಸ್ಥಾನದ ಜೈಸಲ್ಮೇರ್‌ ವ್ಯಕ್ತಿ ಬಂಧನ

Public TV
By Public TV
2 hours ago
gold silver 1
Latest

ಬಜೆಟ್‌ ಬಳಿಕ ಚಿನ್ನ, ಬೆಳ್ಳಿ ದರ ಇಳಿಯುತ್ತಾ?

Public TV
By Public TV
2 hours ago
Bengaluru Hitachi Company ATM Theft
Bengaluru City

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ – ಏಜೆನ್ಸಿ ಸಿಬ್ಬಂದಿಯಿಂದ 1.40 ಕೋಟಿ ಲೂಟಿ

Public TV
By Public TV
2 hours ago
Bengaluru GBA Election
Bengaluru City

ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್‌ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ

Public TV
By Public TV
2 hours ago
trump US
Latest

ಭಾರತ-EU ವ್ಯಾಪಾರ ಒಪ್ಪಂದದೊಂದಿಗೆ ಯುರೋಪ್ ತನ್ನ ವಿರುದ್ಧವೇ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದೆ: ಅಮೆರಿಕ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?