ಸುಹಾಸ್‌ ಹತ್ಯೆ ಕೇಸ್‌ | ಮಂಗಳೂರು – ಚಿಕ್ಕಮಗಳೂರು ಗಡಿಯಲ್ಲಿ ಭಾರೀ ಬಂದೋಬಸ್ತ್

Public TV
2 Min Read
Suhas Shetty murder case Heavy security at Mangaluru Chikkamagaluru border

ಚಿಕ್ಕಮಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಬಳಿಕ ಮಂಗಳೂರಿನಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಕರಣದಲ್ಲಿ ಕಳಸ ಮೂಲದ ಇಬ್ಬರು ಆರೋಪಿಗಳು ಸಹ ಭಾಗಿಯಾಗಿದ್ದು, ಪೊಲೀಸರು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಚಿಕ್ಕಮಗಳೂರು (Chikkamagaluru) – ಮಂಗಳೂರು (Mangaluru) ಗಡಿಯಲ್ಲಿ ಭಾರೀ ಭದ್ರತೆ ಕೈಗೊಂಡಿದ್ದಾರೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಪೊಲೀಸರು ಚೆಕ್‌ಪೋಸ್ಟ್‌ನಲ್ಲಿ ಪ್ರತಿ ವಾಹನವನ್ನೂ ತಪಾಸಣೆ ಮಾಡಿ ಬಿಡುತ್ತಿದ್ದಾರೆ. ಕೊಟ್ಟಿಗೆಹಾರ-ಚಾರ್ಮಾಡಿ ಘಾಟಿಯಲ್ಲಿ ಗಸ್ತು ಹೆಚ್ಚಿಸಲಾಗಿದೆ. ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವ ಪ್ರತಿಯೊಂದು ವಾಹನದ ಮೇಲೂ ತೀವ್ರ ನಿಗಾ ಇಡಲಾಗಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

ಬಜ್ಪೆಯ ಕಿನ್ನಿಪದವು ಬಳಿ ಗುರುವಾರ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಲ್ಲಿ ಫಾಝಿಲ್‌ನ ಸಹೋದರ ಆದಿಲ್ ಮೆಹರೂಫ್‌ನೆ ಪ್ರಮುಖ ಆರೋಪಿ ಎಂದು ತಿಳಿದು ಬಂದಿದೆ.

ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾದವರನ್ನು ಅಬ್ದುಲ್ ಸಫ್ವಾನ್, ನಿಯಾಝ್, ಮಹಮ್ಮದ್ ಮುಸಮ್ಮೀರ್, ಕಲಂದರ್ ಶಾಫಿ, ಆದಿಲ್ ಮೆಹರೂಫ್, ರಂಜಿತ್, ಮಹಮ್ಮದ್ ರಿಝ್ವಾನ್ ಹಾಗೂ ನಾಗರಾಜ್ ಎಂದು ಗುರುತಿಸಲಾಗಿದೆ. ಹತ್ಯೆಯಲ್ಲಿ 10 ಜನ ಭಾಗಿಯಾಗಿದ್ದಾರೆ, ಇನ್ನೂ ಇಬ್ಬರ ಬಂಧನ ಬಾಕಿ ಇದೆ. ಈ ಪ್ರಕರಣವನ್ನು ರಿವೇಂಜ್ ಎಂದು ಹೇಳೊಕೆ ಈಗ ಆಗಲ್ಲ. ಸಫ್ವಾನ್‌ಗೂ ಸುಹಾಸ್‌ನಿಂದ ಕೊಲೆಯಾಗುವ ಆತಂಕ ಇತ್ತು. ಹಾಗಾಗಿ ಆದಿಲ್‌ ಸಂಪರ್ಕ ಪಡೆದು ಕೊಲೆ ಮಾಡಲಾಗಿದೆ ಎಂದು ಮಂಗಳೂರು (Mangaluru) ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಸುಹಾಸ್ ಹತ್ಯೆಗೆ 5 ಲಕ್ಷ ರೂ. ನೀಡೋದಾಗಿ ಫಾಜಿಲ್‍ನ ತಮ್ಮ ಆದಿಲ್ ಸಫ್ವಾನ್ ತಂಡಕ್ಕೆ ಹೇಳಿರುತ್ತಾನೆ. ಅದರಲ್ಲಿ 3 ಲಕ್ಷ ರೂ. ಅಡ್ವಾನ್ಸ್ ನೀಡಿರುತ್ತಾನೆ. ಬಳಿಕ ಒಂದು ತಂಡವನ್ನು ಹತ್ಯೆಗಾಗಿ ಸಫ್ವಾನ್ ರೆಡಿ ಮಾಡ್ತಾನೆ. ನಿಯಾಜ್‌ನ ಇಬ್ಬರು ಸ್ನೇಹಿತರು ನಾಗಾರಾಜ್ ಮತ್ತು ರಂಜಿತ್‌ನನ್ನು ಸಂಪರ್ಕಿಸಿ, ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ಇದ್ದು, ಮೇ 1 ರಂದು ಸುಹಾಸ್ ಚಲನವಲನಗಳನ್ನು ಗಮನಿಸಿ ಕೊಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Suhas Shetty Murder: 8 ಆರೋಪಿಗಳ ಬಂಧನ

Share This Article