ಮಂಗಳೂರು: ಮುಸ್ಲಿಂ ಧರ್ಮದ (Muslim Religion) ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಆರೋಪದಡಿ ಬೆಳ್ತಂಗಡಿ (Belthangady) ವಿಧಾನಸಭಾ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶನಿವಾರ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು – ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ
ಧರ್ಮ, ಧರ್ಮಗಳ ನಡುವೆ ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ (Uppinangady Police Station) ಬಿಎನ್ಎಸ್ ಕಾಯ್ದೆಯಡಿ 196, 352(2) ಪ್ರಕರಣ ದಾಖಲಾಗಿದೆ.