Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿಢೀರ್‌ 35 ಸಾವಿರದಿಂದ 3 ಸಾವಿರ ಕ್ಯುಸೆಕ್‌ಗೆ ಇಳಿಕೆಯಾಯ್ತು ನೀರು – ಭಾರತದ ʼಜಲ ಬಾಂಬ್‌ʼಗೆ ಪಾಕ್‌ ತತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದಿಢೀರ್‌ 35 ಸಾವಿರದಿಂದ 3 ಸಾವಿರ ಕ್ಯುಸೆಕ್‌ಗೆ ಇಳಿಕೆಯಾಯ್ತು ನೀರು – ಭಾರತದ ʼಜಲ ಬಾಂಬ್‌ʼಗೆ ಪಾಕ್‌ ತತ್ತರ

Latest

ದಿಢೀರ್‌ 35 ಸಾವಿರದಿಂದ 3 ಸಾವಿರ ಕ್ಯುಸೆಕ್‌ಗೆ ಇಳಿಕೆಯಾಯ್ತು ನೀರು – ಭಾರತದ ʼಜಲ ಬಾಂಬ್‌ʼಗೆ ಪಾಕ್‌ ತತ್ತರ

Public TV
Last updated: May 6, 2025 1:05 pm
Public TV
Share
3 Min Read
Chenab River Pakistan
SHARE

ಇಸ್ಲಾಮಾಬಾದ್‌/ ನವದೆಹಲಿ: ಭಾರತ (India) ಹಾಕಿದ ಜಲಬಾಂಬ್‌ಗೆ ಪಾಕಿಸ್ತಾನದಲ್ಲಿ (Pakistan) ಪರಿಣಾಮ ಬೀಳುತ್ತಿದೆ. ಒಂದೇ ದಿನ ಚೆನಾಬ್‌ ನದಿಯ (Chenab River) ನೀರಿನ ಮಟ್ಟ 31,900 ಕ್ಯುಸೆಕ್‌ ಇಳಿಕೆಯಾಗಿದ್ದು ಸಮಸ್ಯೆ ಆರಂಭವಾಗಿದೆ.

ಚೆನಾಬ್ ನದಿಗೆ ಅಡ್ಡಲಾಗಿ ರಾಮಬನದಲ್ಲಿ ಬಾಗ್ಲಿಹಾರ್ ಮತ್ತು ರಿಯಾಸಿಯಲ್ಲಿ ಸಲಾಲ್ ಜಲವಿದ್ಯುತ್ ಅಣೆಕಟ್ಟುಗಳನ್ನು ನಿರ್ಮಾಣ ಮಾಡಲಾಗಿದೆ. ಸೋಮವಾರ ಈ ಎರಡು ಅಣೆಕಟ್ಟಿನಿಂದ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ.

ನೀರು ಹರಿಸುವುದನ್ನು ನಿಲ್ಲಿಸಿದ ಪರಿಣಾಮ ಪಾಕಿಸ್ತಾನದ ಮರಾಲಾ ಬಳಿ ಭಾನುವಾರ 35,000 ಕ್ಯುಸೆಕ್‌ ನೀರು ಹರಿಯುತ್ತಿದ್ದರೆ ಸೋಮವಾರ ಇದು 3,100 ಕ್ಯುಸೆಕ್‌ಗೆ ಇಳಿಕೆಯಾಗಿದೆ ಎಂದು ಪಾಕಿಸ್ತಾನದ ಡಾನ್‌ ವರದಿ ಮಾಡಿದೆ.

ಮರಾಲಾ ಬ್ಯಾರೇಜ್ ಸಲಾಲ್ ಅಣೆಕಟ್ಟಿನಿಂದ 76 ಕಿ.ಮೀ ದೂರದಲ್ಲಿದೆ. ಒಟ್ಟು 1.2 ದಶಲಕ್ಷ ಎಕರೆ ಅಡಿಗಳಷ್ಟು ನೀರು ಸಂಗ್ರಹಣಾ ಸಾಮರ್ಥ್ಯವನ್ನು ಹೊಂದಿದೆ. ಭಾರತ ಇನ್ನು 4 ರಿಂದ 5 ದಿನಗಳ ಕಾಲ ನೀರು ಹರಿಸುವುದನ್ನು ನಿಲ್ಲಿಸಬಹುದು. ಸಲಾಲ್‌ ಅಣೆಕಟ್ಟಯ ಭರ್ತಿಯಾದ ನಂತರ ಒಂದೇ ಬಾರಿಗೆ ಚೆನಾಬ್‌ ನದಿಗೆ ನೀರು ಹರಿಸಿದರೆ ಪಾಕ್‌ ಭಾಗದಲ್ಲಿ ಪ್ರವಾಹ ಎದುರಾಗಬಹುದು ಎಂದು ಅಧಿಕಾರಿಯೊಬ್ಬರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಭಾರತದ ವಿರುದ್ಧ ಸುಳ್ಳು ಆರೋಪ – ಪಾಕ್‌ಗೆ ಹಿಗ್ಗಾಮುಗ್ಗಾ ಜಾಡಿಸಿದ ವಿಶ್ವಸಂಸ್ಥೆ

Chenab River
ಮೊದಲ ಬಾರಿಗೆ ನೀರು ಭಾರೀ ಇಳಿಕೆಯಾಗಿದ್ದು ಚೆನಾಬ್‌ ನದಿಯ ಫೋಟೋ ತೆಗೆಯುತ್ತಿರುವ ಜನ

ಒಂದು ವೇಳೆ ಭಾರತ ಸರಿಯಾಗಿ ನೀರನ್ನು ಹರಿಸದೇ ಇದ್ದರೆ ಖಾರಿಫ್ ಬೆಳೆಗಳಿಗೆ ಭಾರೀ ಸಮಸ್ಯೆಯಾಗಲಿದೆ. ಈಗಾಗಲೇ 21% ನೀರಿನ ಕೊರತೆಯನ್ನು ಎದುರಿಸುತ್ತಿದೆ. ಚೆನಾಬ್‌ ನದಿಯ ಒಳಹರಿವು ಹಠಾತ್ ಇಳಿಕೆಯಾದರೆ ಖಾರಿಫ್ ಋತುವಿನ ಆರಂಭದಲ್ಲಿ ಕೊರತೆ ಎದುರಾಗಲಿದೆ ಎಂದು ವರದಿಯಾಗಿದೆ.  ಇದನ್ನೂ ಓದಿ: ಕಾಶ್ಮೀರದಲ್ಲಿ 2 ಜಲವಿದ್ಯುತ್ ಯೋಜನೆಗಳಿಗೆ ಚಾಲನೆ – ಪಾಕ್‌ಗೆ ಶಾಕ್‌

ಪಹಲ್ಗಾಮ್‌ ಭೀಕರ ನರಮೇಧಕ್ಕೆ (Pahalgam Terror Attack) ಪ್ರತಿಯಾಗಿ ಭಾರತ ಸಿಂಧೂ ನದಿಯ ಒಪ್ಪಂದವನ್ನು ಮೊದಲ ಬಾರಿಗೆ ಅಮಾನತಿನಲ್ಲಿಟ್ಟು ಪಾಕಿಸ್ತಾನದ ಬುಡಕ್ಕೆ `ಜಲ’ಬಾಂಬ್ ಹಾಕಿದೆ. ಒಪ್ಪಂದವನ್ನು ಭಾರತ ಅಮಾನತಿನಲ್ಲಿಟ್ಟ ಬೆನ್ನಲ್ಲೇ ಚೆನಾಬ್ ನದಿಗೆ ಜಲಾಶಯಗಳಿಂದ ನೀರು ಹರಿಸುವುದನ್ನೇ ನಿಲ್ಲಿಸಿದೆ.

 

ಅಷ್ಟೇ ಅಲ್ಲದೇ ಜಲಾಶಯದಿಂದ ನೀರನ್ನು ಹರಿಸುವ ಬಗ್ಗೆ ಪಾಕಿಸ್ತಾನಕ್ಕೆ ಮೊದಲೇ ಮಾಹಿತಿಯನ್ನು ಹಂಚಿಕೊಳ್ಳುವ ಅಗತ್ಯ ಇಲ್ಲ. ನೀರನ್ನು ಯಾವಾಗ ಬೇಕಾದರೂ ತಡೆದು ನಿಲ್ಲಿಸಬಹುದು. ಯಾವಾಗ ಬೇಕಾದರೂ ಗೇಟ್‌ ತೆರೆದು ನದಿಗೆ ಬಿಡಬಹುದು. ಒಂದು ವೇಳೆ ದಿಢೀರ್‌ ಗೇಟ್‌ ತೆರೆದರೆ ಪಾಕ್‌ ಭಾಗದಲ್ಲಿ ಭಾರೀ ಪ್ರವಾಹ ಸೃಷ್ಟಿಯಾಗಲಿದೆ.

ಭಾರತ ದೀರ್ಘ ಕಾಲ ನೀರನ್ನು ಜಲಾಶಯದಲ್ಲಿ ಸಂಗ್ರಹಿಸಿ ಇಡಲು ಸಾಧ್ಯವಿಲ್ಲ. ಬೇಸಿಗೆ ಅವಧಿಯಲ್ಲಿ ಕೆಲ ದಿನಗಳ ಕಾಲ ನೀರನ್ನು ಸಂಗ್ರಹಿಸಿ ಇಡಬಹುದು. ಪಹಲ್ಗಾಮ್‌ ದಾಳಿಯ ನಂತರ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ ನಿರ್ಮಾಣವಾಗಿರುವ ಜಲಾಶಯಗಳ ಹೂಳೆತ್ತಲು ಮುಂದಾಗಿದೆ.

#JammuAndKashmir: Visuals from Ramban, where all gates of the Baglihar Hydroelectric Power Project Dam on Chenab River are closed.#ChenabRiver #Ramban pic.twitter.com/laETkrsAcn

— All India Radio News (@airnewsalerts) May 6, 2025

ಕ್ಯುಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯುಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯುಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯುಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

TAGGED:indiapakistanSindhu Riverಪಹಲ್ಗಾಮ್‌ಪಾಕಿಸ್ತಾನಭಾರತಸಿಂಧೂ ಒಪ್ಪಂದ
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

Criminal Behind Bomb Attack On Prison Convoy Shot Dead In Encounter In Tamil Nadu
Crime

ಪೊಲೀಸ್ ವಾಹನದ ಮೇಲೆ ಕಂಟ್ರಿ ಬಾಂಬ್ ಎಸೆದಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ

Public TV
By Public TV
8 minutes ago
SMG STUDENTS
Districts

ಭದ್ರಾವತಿ | ಶಾಲೆಯಲ್ಲಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Byrathi Suresh
Bengaluru City

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಬೈರತಿ ಸುರೇಶ್

Public TV
By Public TV
2 hours ago
Modi India Europe Trade Deal
Bengaluru City

1 ಒಪ್ಪಂದ, 27 ಯುರೋಪ್‌ ಮಾರುಕಟ್ಟೆಗಳು – ಕರ್ನಾಟಕಕ್ಕೆ ಏನು ಪ್ರಯೋಜನ?

Public TV
By Public TV
2 hours ago
chalavadi narayanaswamy council
Bengaluru City

ಅಬಕಾರಿ ‌ಇಲಾಖೆ ಅಕ್ರಮ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ: ಬಿಜೆಪಿ

Public TV
By Public TV
2 hours ago
Supreme Court
Court

ಮಹಾಕಾಳೇಶ್ವರ ದೇವಸ್ಥಾನದಲ್ಲಿ VIP ದರ್ಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?