Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮದ ಸಮಾವೇಶಕ್ಕೆ ಸಿದ್ಧತೆ ಪೂರ್ಣ: ಡಾ. ಎಂ.ಎನ್.ರಾಜೇಂದ್ರ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮದ ಸಮಾವೇಶಕ್ಕೆ ಸಿದ್ಧತೆ ಪೂರ್ಣ: ಡಾ. ಎಂ.ಎನ್.ರಾಜೇಂದ್ರ ಕುಮಾರ್

Dakshina Kannada

ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮದ ಸಮಾವೇಶಕ್ಕೆ ಸಿದ್ಧತೆ ಪೂರ್ಣ: ಡಾ. ಎಂ.ಎನ್.ರಾಜೇಂದ್ರ ಕುಮಾರ್

Public TV
Last updated: May 8, 2025 7:34 pm
Public TV
Share
4 Min Read
rajendra kumar
SHARE

– ಒಂದೂವರೆ ಲಕ್ಷ ಪ್ರತಿನಿಧಿಗಳ ಭಾಗಿ ನಿರೀಕ್ಷೆ

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಮೇ 10 ರಂದು ನಡೆಯಲಿರುವ ನವೋದಯ ಸ್ವಸಹಾಯ ಗುಂಪುಗಳ 25 ನೇ ವರ್ಷದ ಅಂಗವಾಗಿ ನಡೆಯುವ ಸಮಾವೇಶ ‘ರಜತ ಸಂಭ್ರಮ’ ರಾಜ್ಯದ ಐತಿಹಾಸಿಕ ಸಮಾವೇಶವಾಗಲಿದೆ. ಸಮಾವೇಶದಲ್ಲಿ ಸುಮಾರು 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಭಾಗವಹಿಸಲಿರುವುದು ರಾಜ್ಯದಲ್ಲಿಯೇ ಪ್ರಥಮ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳು ಪೂರ್ಣಗೊಂಡಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಂಸ್ಥಾಪಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

54f6ee5d d349 4b8f be4e fa119331c86d scaled

ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಸುದ್ದಿಗೋಷ್ಠಿಯನ್ನುದ್ದೇಶಿಸಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮಾತನಾಡಿ, ಈ ಸಮಾವೇಶ ಮಹಿಳಾ ಸಬಲೀಕರಣ, ಸಶಕ್ತತೆಯ ಹಿನ್ನೆಲೆಯಲ್ಲಿ ಇತರರಿಗೂ ಮಾದರಿ ಸಮಾವೇಶ ಆಗಬೇಕು ಎನ್ನುವುದು ನಮ್ಮ ಆಶಯ. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭೆಯ ಸಭಾಧ್ಯಕ್ಷರು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೊದಲಾದವರು ಆಗಮಿಸಲಿದ್ದಾರೆ. ಇದನ್ನೂ ಓದಿ: ನವೋದಯ ರಜತ ಸಂಭ್ರಮ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಭಾಗಿ: ರಾಜೇಂದ್ರ ಕುಮಾರ್

27d10845 c2c2 4c03 b727 32d6d3b7b8c3 scaled

ನವೋದಯ ಸ್ವಸಹಾಯ ಗುಂಪುಗಳು ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸಿ ಪ್ರಜಾಪ್ರಭುತ್ವದ ತಳಹದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ಜೊತೆಗೆ ಸಬಲೀಕರಣದ ಹಾದಿಯಲ್ಲಿ ಸಾಗುತ್ತಿದೆ. ಈ ಒಂದು ಉದಾತ್ತವಾದ ಉದ್ದೇಶವನ್ನಿಟ್ಟುಕೊಂಡು ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲರನ್ನೂ ಒಳಗೊಳ್ಳುವ ಸಮಾವೇಶ- ನವೋದಯ ಸ್ವಸಹಾಯ ಸಂಘದಲ್ಲಿ ಜಾತಿ, ಮತ ಭೇದವಿಲ್ಲದೆ ಎಲ್ಲಾ ಜನರನ್ನು ಒಳಗೊಂಡ ಸಮಾವೇಶ ಎಂದು ಸಮಾವೇಶದ ಸಂಘಟಕರಾದ ದೇವಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ – ರಾಜನಾಥ್ ಸಿಂಗ್ ಮಹತ್ವದ ಸುಳಿವು

54f6ee5d d349 4b8f be4e fa119331c86d 1 scaled

2000ನೇ ಇಸವಿಯ ಜನವರಿ 29ರಂದು ಕಾರ್ಕಳದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಆಗಿನ ಸಹಕಾರ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಉದ್ಘಾಟಿಸಲ್ಪಟ್ಟ ನವೋದಯ ಸ್ವಸಹಾಯ ಗುಂಪುಗಳ ಕಾರ್ಯ ವಿಸ್ತಾರವು ಇಂದು ರಾಜ್ಯದ 8 ಜಿಲ್ಲೆಗಳಿಗೆ ಪಸರಿಸಿದೆ. ಇದರಲ್ಲಿ ಸುಮಾರು 5ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದು, ಮುಖ್ಯವಾಗಿ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಿಕೊಟ್ಟಿದೆ. ನವೋದಯದ ರಜತ ಸಂಭ್ರಮವನ್ನು ದೇಶಕ್ಕೆ ಮಾದರಿಯಾಗಿ ಹಮ್ಮಿಕೊಳ್ಳುವ ಯೋಜನೆ ರೂಪಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಟ್ರಸ್ಟ್(ರಿ.) ಮಂಗಳೂರು ಇದರ ಸಂಸ್ಥಾಪಕರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.

088dec5c f45f 441d 8a22 c28ad5e7cb7f

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಚಿವ ಕೆ.ಎನ್.ರಾಜಣ್ಣ, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್‌, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ ಅವರು ಭಾಗವಹಿಸಲಿದ್ದಾರೆ ಎಂದು ದೇವಿಪ್ರಸಾದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್.ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಿ.ದೇವಿ ಪ್ರಸಾದ್ ಶೆಟ್ಟಿ ಬೆಳಪು, ಎಂ. ವಾದಿರಾಜ ಶೆಟ್ಟಿ, ಎಸ್.ಬಿ.ರಾಜೇಶ್ ರಾವ್, ಕುಶಾಲಪ್ಪ ಗೌಡ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ, ಜನವೋದಯ ಟ್ರಸ್ಟಿಗಳಾದ ಮೇಘರಾಜ್ ಆರ್. ಜೈನ್, ಸುನಿಲ್ ಕುಮಾರ್ ಬಜಗೋಳಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಉದ್ಯಮಿ ಪುಷ್ಪರಾಜ್ ಜೈನ್, ನವೋದಯ ಚ್ಯಾರಿಟಬಲ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು. ಇದನ್ನೂ ಓದಿ: ರಾಜ್ಯದ 17 ಅಣೆಕಟ್ಟುಗಳಲ್ಲಿ ಅಲರ್ಟ್ – ನಾರಾಯಣಪುರ ಡ್ಯಾಂಗೆ 42 ಪೊಲೀಸ್ ಸಿಬ್ಬಂದಿ ನಿಯೋಜನೆ

3ba32129 32c8 4f45 882f c6bdb8640f32

* ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಒಂದೂವರೆ ಲಕ್ಷ ಜನರು ಭಾಗವಹಿಸಬಹುದಾದ ಬೃಹತ್ ಸಭಾಂಗಣ ನಿರ್ಮಿಸಲಾಗಿದೆ.
* 3 ಸಾವಿರ ಬಸ್ ಹಾಗೂ 750 ಕಾರ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.
* ಊಟದ ವ್ಯವಸ್ಥೆಗಾಗಿ ಸ್ಥಳದಲ್ಲಿ 160 ಕೌಂಟರ್ ನಿರ್ಮಿಸಲಾಗಿದೆ.
* ನವೋದಯ ಸ್ವ ಸಹಾಯ ಗುಂಪುಗಳ ವಸ್ತು ಪ್ರದರ್ಶನದ ವ್ಯವಸ್ಥೆ ಇರುತ್ತದೆ.
* ಪಡುಬಿದ್ರೆ ಬಂಟರ ಸಭಾಂಗಣ, ವಾಮಂ ಜೂರು, ಬಂಟ್ವಾಳ ಬಂಟರ ಭವನ, ಯಶಸ್ವಿ ಹಾಲ್ ಪರಂಗಿಪೇಟೆಯಲ್ಲಿ ಸಮಾವೇಶಕ್ಕೆ ಆಗಮಿಸುವವರಿಗೆ ಆಹಾರದ ಪೊಟ್ಟಣ ನೀಡಲಾಗುವುದು ಎಂದು ದೇವಿ ಪ್ರಸಾದ್ ಶೆಟ್ಟಿ ಸಮಾವೇಶದ ಸಿದ್ಧತೆಯ ಬಗ್ಗೆ ವಿವರಿಸಿದರು.
* ಬಂಗ್ರಕೂಳೂರಿನಲ್ಲಿ ಎಂ.ಎನ್.ಆರ್ ಪ್ರೊಡಕ್ಷನ್ಸ್ ಸಂಸ್ಥೆಯ ವತಿಯಿಂದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನಿರ್ಮಾಪಕರಾಗಿರುವ ವಿಜಯ ಕುಮಾರ್ ಕೊಡಿಯಾಲ ಬೈಲ್ ಅವರ ನಿರ್ದೇಶನದ ‘ಡಾಕ್ಟ್ರಾ ಭಟ್ರಾ’ ಹೆಸರಿನ ತುಳು ಚಲನಚಿತ್ರದ ಪೋಸ್ಟರನ್ನು ಡಾ‌.ಎಂ.ಎನ್.ರಾಜೇಂದ್ರ ಕುಮಾರ್ ಗುರುವಾರ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ ಬೈಲ್ ಉಪಸ್ಥಿತರಿದ್ದರು.

TAGGED:MangaluruNavodaya Self Help GroupRajendra Kumarನವೋದಯ ಸ್ವ-ಸಹಾಯ ಸಂಘಮಂಗಳೂರುರಾಜೇಂದ್ರ ಕುಮಾರ್‌
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
12 minutes ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
18 minutes ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
25 minutes ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
41 minutes ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
1 hour ago
Khawaja Asif
Latest

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ: ಪಾಕ್‌ ರಕ್ಷಣಾ ಸಚಿವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?