ಕೇದಾರನಾಥದಲ್ಲಿ ಲ್ಯಾಂಡಿಂಗ್‌ ವೇಳೆ ಹೆಲಿಕಾಪ್ಟರ್ ಪತನ – ತಪ್ಪಿದ ಭಾರೀ ಅನಾಹುತ

Public TV
1 Min Read
Kedarnath Helicopter crashes

ಡೆಹ್ರಾಡೂನ್‌: ಋಷಿಕೇಶ ಏಮ್ಸ್ ನಿಂದ ಕೇದಾರನಾಥಕ್ಕೆ (Kedarnath) ಬಂದಿದ್ದ ಏರ್‌ ಅಂಬುಲೆನ್ಸ್‌ ಹೆಲಿಕಾಪ್ಟರ್‌ (Helicopter) ಲ್ಯಾಂಡಿಂಗ್‌ ವೇಳೆ ಪತನಗೊಂಡಿದೆ.

ಋಷಿಕೇಶ ಏಮ್ಸ್‌ನಿಂದ ತುರ್ತು ವೈದ್ಯಕೀಯ ಸೇವೆಯ ಅಡಿ ರೋಗಿಯನ್ನು ಕರೆದೊಯ್ಯಲು ಕೇದಾರನಾಥಕ್ಕೆ ಹೆಲಿಕಾಪ್ಟರ್‌ ಬಂದಿತ್ತು. ಹೆಲಿಪ್ಯಾಡ್‌ನಲ್ಲಿ ಲ್ಯಾಂಡಿಂಗ್‌ಗೆ ಇಳಿಸಲಾಗುತ್ತಿತ್ತು, ಆದ್ರೆ ಹೆಲಿಪ್ಯಾಡ್‌ಗೆ (Helipad) ಇನ್ನೂ 20 ಮೀಟರ್‌ ದೂರದಲ್ಲಿರುವಾಗಲೇ ಹಿಂಭಾಗ ಮುರಿದು ಹೆಲಿಕಾಪ್ಟರ್‌ ಪತನಗೊಂಡಿದೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರದ ಬಗ್ಗೆ ಪಾಕ್‌ಗೆ ಮಾಹಿತಿ ನೀಡುತ್ತಿದ್ದ ಹರಿಯಾಣದ ಯುವಕ ಅರೆಸ್ಟ್

ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಏರ್‌ ಆಂಬುಲೆನ್ಸ್‌ನಲ್ಲಿದ್ದ ಇಬ್ಬರು ವೈದ್ಯರು ನತ್ತು ಪೈಲಟ್‌ ಸುರಕ್ಷಿತವಾಗಿದ್ದಾರೆ. ಮೇಲ್ನೋಟಕ್ಕೆ ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಲಾಗಿದ್ದು, ಇನ್ನಷ್ಟೇ ಪರಿಶೀಲನೆ ನಡೆಯಬೇಕಿದೆ. ಇದನ್ನೂ ಓದಿ: ಪಾಕ್‌ ಪ್ರಧಾನಿ ನಿದ್ದೆಗೆಡಿಸಿದ ʻಆಪರೇಷನ್‌ ಸಿಂಧೂರʼ – ಶೆಹಬಾಜ್‌ಗೆ ಮಧ್ಯರಾತ್ರಿ ಕರೆ ಮಾಡಿದ್ಯಾರು?

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ…

Share This Article