ಬಾಗಲಕೋಟೆ: ಮದುವೆ ಸಂಭ್ರಮದಲ್ಲಿದ್ದ ವರ ಆರತಕ್ಷತೆ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ (Heart Attack) ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿ (Jamakhandi) ನಗರದಲ್ಲಿ ನಡೆದಿದೆ.
ಪ್ರವೀಣ್ ಕುರಣಿ ಮೃತ ವರ. ಇಂದು ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರವೀಣ್ ಕುರಣಿ ಹಾಗೂ ಪೂಜಾ ಎಂಬವರ ಮದುವೆ ಸಮಾರಂಭ ಅದ್ಧೂರಿಯಾಗಿ ನಡೆದಿತ್ತು. ಆದರೆ ವಿಧಿಯಾಟ ಬೇರೆಯೇ ಇತ್ತು. ಆರತಕ್ಷತೆ ಮುಗಿಯುವಷ್ಟರಲ್ಲಿ ಮಧುಮಗ ಪ್ರವೀಣ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಹಗ್ ಮಾಡ್ತೀನಿ – ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾದ ಯುವಕ
ಪ್ರವೀಣ್ ರಾಜ್ಯ ಸೈಕ್ಲಿಂಗ್ ಕಾರ್ಯದರ್ಶಿ ಶ್ರೀಶೈಲ ಕುರಣಿ ಅವರ ಪುತ್ರ. ಮೂಲತಃ ಜಮಖಂಡಿ ತಾಲೂಕಿನ ಕುಂಬಾರಹಳ್ಳಿ ಗ್ರಾಮದ ನಿವಾಸಿಯಾದ ಪ್ರವೀಣ್ ಮನೆಯಲ್ಲಿ ಬೆಳಗ್ಗೆ ದೈವದ ಅಕ್ಕಿಕಾಳು ಕಾರ್ಯ ನಡೆದಿತ್ತು. ಬಳಿಕ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ಇಟ್ಟುಕೊಂಡಿದ್ದರು. ಕಲ್ಯಾಣಮಂಟಪಕ್ಕೆ ಆಗಮಿಸಿದ ನವ ದಂಪತಿಗೆ ಬಂಧು-ಮಿತ್ರರು ಆರತಕ್ಷತೆ ಹಾಕಿ ಆಶೀರ್ವದಿಸುವ ಗಳಿಗೆಯಲ್ಲೇ ಯಾರೂ ಊಹಿಸದ ರೀತಿ ದುರ್ಘಟನೆ ನಡೆದಿದೆ. ಇದನ್ನೂ ಓದಿ: ‘ಆಪರೇಷನ್ ಸಿಂಧೂರ’ದಲ್ಲಿ ಶೌರ್ಯ ಮೆರೆದ BSF ಯೋಧ – ಗೌರವಿಸಿದ ಸೇನಾ ಮುಖ್ಯಸ್ಥ
ಹಸೆಮಣೆ ಏರಿ ವಿಭಿನ್ನ ಕನಸುಗಳನ್ನು ಕಂಡಿದ್ದ ಪ್ರವೀಣ್ ದಿಢೀರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಘಟನೆಯಿಂದ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಶುಭ ಸಂದರ್ಭದಲ್ಲಿ ಹೃದಯಾಘಾತಕ್ಕೆ ವರ ಬಲಿಯಾಗಿದ್ದನ್ನು ಕಂಡು ಕುಟುಂಬಸ್ಥರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಇದನ್ನೂ ಓದಿ: ಕೊತ್ತೂರು ಮಂಜುನಾಥ್ ಅನುಮಾನ ಸೇನೆ ಬಗ್ಗೆ ಅಲ್ಲ, ಬಿಜೆಪಿ ನಾಯಕರ ಬಗ್ಗೆ: ರಾಮಲಿಂಗಾ ರೆಡ್ಡಿ