Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರು ಜನರು ಬ್ರ್ಯಾಂಡೆಡ್‌ ನರಕದಲ್ಲಿ ನರಳುತ್ತಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರು ಜನರು ಬ್ರ್ಯಾಂಡೆಡ್‌ ನರಕದಲ್ಲಿ ನರಳುತ್ತಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ

Bengaluru City

ಬೆಂಗ್ಳೂರು ಜನರು ಬ್ರ್ಯಾಂಡೆಡ್‌ ನರಕದಲ್ಲಿ ನರಳುತ್ತಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ

Public TV
Last updated: May 20, 2025 3:15 pm
Public TV
Share
3 Min Read
HD Kumaraswamy 1
SHARE

– ಕಾಂಗ್ರೆಸ್ ಸಾಧನೆ ಬೆಂಗ್ಳೂರಿನ ರಸ್ತೆ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ
– ಬ್ರ‍್ಯಾಂಡ್ ಅಂದ್ರೆ ಬೆಂಗಳೂರನ್ನ ಮುಳುಗಿಸೋದಾ? – ಕೇಂದ್ರ ಸಚಿವ

ಬೆಂಗಳೂರು: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಬ್ರ‍್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮಳೆ ಅವಾಂತರದಿಂದಾಗಿ ಬೆಂಗಳೂರು ಜನ ಸತ್ತು ಬದುಕುತ್ತಿದ್ದರೆ ರಾಜ್ಯ ಕಾಂಗ್ರೆಸ್ (Congress) ನಾಯಕರಿಗೆ ಸಾಧನಾ ಸಮಾವೇಶದ ಚಿಂತೆಯಾಗಿದೆ. ಒಂದು ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತುಗಳನ್ನು ಹಾಕುತ್ತಿದ್ದಾರೆ. ಬೆಂಗಳೂರು ಜನ ಬ್ರ‍್ಯಾಂಡೆಡ್ ನರಕದಲ್ಲಿದ್ದಾರೆ. ನಗರದ ಜನ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಸಿವಿಲ್ ನ್ಯಾಯಾಧೀಶ ಸ್ಥಾನಕ್ಕೆ ನೇಮಕಾತಿಯಾಗಲು ಕನಿಷ್ಠ ಮೂರು ವರ್ಷಗಳ ವಕೀಲಿಕಿ ಅನುಭವ ಕಡ್ಡಾಯ: ಸುಪ್ರೀಂ

ಹೆಚ್‌ಡಿಕೆ ಎಕ್ಸ್‌ನಲ್ಲಿ ಏನಿದೆ?
ಜನ ಸತ್ತು ಬದುಕುತ್ತಿದ್ದರೆ ಕಾಂಗ್ರೆಸ್ (Congress) ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ. ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತು ಬೇರೆ. ಬೆಂಗಳೂರು ಜನ ಬ್ರ‍್ಯಾಂಡೆಡ್ ನರಕದಲ್ಲಿದ್ದಾರೆ. ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು.

ಕಾಂಗ್ರೆಸ್ ಸರ್ಕಾರದ ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಸತ್ತ ಸರ್ಕಾರಕ್ಕೆ ಸಾಧನೆ ಸಮಾವೇಶ ಬೇರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮಾತಿನ ಡಬ್ಬಾ ಹೊಡೆಯುವುದು ಬಿಟ್ಟು, ಪ್ರತಿಪಕ್ಷಗಳನ್ನು ನಿಂದಿಸುವುದನ್ನು ಪಕ್ಕಕ್ಕಿಟ್ಟು ಕೆಲಸ ಮಾಡಲಿ.

ಜನ ಸತ್ತು ಬದುಕುತ್ತಿದ್ದರೆ @INCKarnataka ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತು ಬೇರೆ..!
ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ! ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು.

ಕಾಂಗ್ರೆಸ್ ಸರಕಾರದ ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ… pic.twitter.com/cQ1iTBB2jV

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 20, 2025

ವಾರ್ ರೂಂನಲ್ಲಿ ಕೂತು ಜೆಡಿಎಸ್, ಬಿಜೆಪಿ ಮೇಲೆ ಪ್ರಾಕ್ಸಿವಾರ್ ಮಾಡಿದರೆ ಪ್ರಯೋಜನವೇನು? ಕೈಲಾಗದವನಿಗೆ ಬಾಯಿ ಭದ್ರ ಇರುವುದಿಲ್ಲ. ಈ ಮನುಷ್ಯ ಆ ಪರಿಸ್ಥಿತಿಯಲ್ಲಿದ್ದಾರೆ. ಯಾವ ಪುರುಷಾರ್ಥಕ್ಕೆ ಗ್ರೇಟರ್ ಬೆಂಗಳೂರು? ಯಾರ ಉದ್ಧಾರಕ್ಕೆ ಬ್ರ‍್ಯಾಂಡ್ ಬೆಂಗಳೂರು? ಲೂಟಿ ಹೊಡೆಯೋದಕ್ಕೆ ಹೊಸ ಹೊಸ ಹೆಸರೇ? ಎರಡು ವರ್ಷಗಳಿಂದ ಬ್ರ‍್ಯಾಂಡ್, ಬ್ರ‍್ಯಾಂಡ್ ಎಂದು ಭಜನೆ ಮಾಡುತ್ತಿದ್ದೀರಲ್ಲ. ಬ್ರ‍್ಯಾಂಡ್ ಎಂದರೆ ಬೆಂಗಳೂರನ್ನು ಮುಳುಗಿಸುವುದಾ?

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಈ ವ್ಯಕ್ತಿ ಪಾಲಿಗೆ ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ. ಬಯಸಿದಾಗ ನೋಟಿನ ಮಳೆ ಸುರಿಸುವ ಅಕ್ಷಯಪಾತ್ರೆ. ಎರಡು ವರ್ಷಗಳಿಂದ ಸುರಿದ ನೋಟಿನ ಮಳೆ ಪ್ರಮಾಣ ಎಷ್ಟು? ಕೈ ಇಟ್ಟ ಕಡೆಯಲ್ಲಾ ದುಡ್ಡು, ಜನರ ಮೇಲೆ ತೆರಿಗೆ ಮೇಲೆ ತೆರಿಗೆ, ಎರಡು ವರ್ಷಗಳಲ್ಲಿ ಎಷ್ಟೊಂದು ಬಾರಿ ಸಾಯಿ ಬಡವಾಣೆ ಮುಳುಗಿತು? ಅಲ್ಲಿಗೆ ಡಿಸಿಎಂ ಎಷ್ಟು ಸಲ ಹೋಗಿದ್ದರು? ಈ ಹಿಂದೆ ನಗರಾಭಿವೃದ್ಧಿ ಮಂತ್ರಿ ಆಗಿದ್ದಾಗ ನಗರಕ್ಕೇನು ಮಾಡಿದ್ದರು? ಸಚಿವಗಿರಿಯನ್ನು ಸ್ವ-ನಗದು ಅಭಿವೃದ್ಧಿಗೆ ಬಳಸಿಕೊಂಡರಷ್ಟೇ.

ಮಾತೆತ್ತಿದರೆ ಬೆಂಗಳೂರಿಗೆ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡಿದರೆಂದು ಕೇಳುತ್ತಾರೆ. 2006ರ 20 ತಿಂಗಳ ಅವಧಿಯಲ್ಲಿ 58 ರಸ್ತೆ ಅಗಲೀಕರಣ, ಮೆಟ್ರೋ ಮೊದಲ ಹಂತ ಕಾಮಗಾರಿಗೆ ಚಾಲನೆ, ಹೊಸ ಏರ್‌ಪೋರ್ಟ್ ರಸ್ತೆ, ನೆಲಮಂಗಲ ರಸ್ತೆ, ಎಲೆಕ್ಟ್ರಾನಿಕ್ ರಸ್ತೆ ಅಭಿವೃದ್ಧಿ ಸೇರಿ ಎಷ್ಟೋ ಕೆಲಸ ಮಾಡಿದ್ದೇನೆ. ಕೆರೆಯನ್ನೇ ನುಂಗಿ ಜೆಪಿ ನಗರ ಡಾಲರ್ಸ್ ಕಾಲೋನಿ ಮಾಡಿದ್ದರಲ್ಲ, ಆ ಮನೆಗಳಿಗೆ ಕೆರೆ ನೀರು ನುಗ್ಗುತ್ತಿದ್ದನ್ನು ತಪ್ಪಿಸಿದ್ದು ಯಾರು? ನನ್ನ ಆಡಳಿತ ಅತ್ಯಲ್ಪ. ಹಿಂದೆ ಬಿಜೆಪಿ ಜೊತೆ 20 ತಿಂಗಳು, ಇನ್ನೊಮ್ಮೆ ನಿಮ್ಮ ಜೊತೆ 14 ತಿಂಗಳು. ನನ್ನ ಕೆಲಸಗಳಿಗೆ ದಾಖಲೆಗಳಿವೆ, ಓದಿಕೊಳ್ಳಿ.

ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ, ವೀರನೂ ಅಲ್ಲ. ಜನ ನಿಮಗೆ ಕುದುರೆ ಕೊಟ್ಟಿದ್ದಾರೆ. ಕುದುರೆ ಶೋಕಿಗಲ್ಲ. ಪೆನ್ನು ಅಲಂಕಾರಕ್ಕಲ್ಲ. ಇನ್ನಾದರೂ ಮಾತು ನಿಲ್ಲಿಸಿ ಕೆಲಸ ಮಾಡಿ. ಇಲ್ಲವಾದರೆ ನಿಮ್ಮ ಬ್ರ‍್ಯಾಂಡಿಗೆ ಜನ ಅದೇ ನೀರು ಬಿಟ್ಟಾರು. ಬ್ರ‍್ಯಾಂಡೆಡ್ ನರಕ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಹಕ್ಕು ಪತ್ರ ನೀಡುವ ಮೂಲಕ ಆರನೇ ಗ್ಯಾರಂಟಿ ಜಾರಿ: ರಾಹುಲ್‌ ಗಾಂಧಿ

TAGGED:bengaluruBrand BengalurucongressDK Shivakumarhd kumaraswamyಕಾಂಗ್ರೆಸ್ಬೆಂಗಳೂರುಬ್ರ್ಯಾಂಡ್ ಬೆಂಗಳೂರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
28 minutes ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
1 hour ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
1 hour ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
2 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
2 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?