Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

50ಕ್ಕೂ ಹೆಚ್ಚು ಕೊಲೆ ಮಾಡಿ ಪರಾರಿಯಾಗಿದ್ದ ಸಿರಿಯಲ್‌ ಕಿಲ್ಲರ್‌ ʻಡಾಕ್ಟರ್‌ ಡೆತ್‌ʼ ಅರೆಸ್ಟ್‌!

Public TV
Last updated: May 21, 2025 7:40 pm
Public TV
Share
3 Min Read
D rDeath
SHARE

– ರಾಜಸ್ಥಾನದ ಆಶ್ರಮದಲ್ಲಿ ಆರ್ಚಕನಂತೆ ಪತ್ತೆಯಾದ ನರ ರಾಕ್ಷಸ
– ಹತ್ಯೆ ಮಾಡಿ ಹೆಣಗಳನ್ನು ಮೊಸಳೆಗಳಿಗೆ ನೀಡುತ್ತಿದ್ದ ಪಾಪಿ!
– ಕಿಡ್ನಿ ರಾಕೆಟ್‌ನಲ್ಲೂ ಸಿಲುಕಿದ್ದ ಹಂತಕ

ಜೈಪುರ್‌: 50 ಜನರನ್ನು ಭೀಕರವಾಗಿ ಹತ್ಯೆ ಮಾಡಿ ಪೊಲೀಸ್ ದಾಖಲೆಗಳಲ್ಲಿ ‘ಡಾಕ್ಟರ್ ಡೆತ್’ (Dr Death) ಎಂದು ಕುಖ್ಯಾತಿ ಪಡೆದಿದ್ದ ಸರಣಿ ಹಂತಕನನ್ನು ದೆಹಲಿ ಪೊಲೀಸರು (Delhi Police ) ರಾಜಸ್ಥಾನದಲ್ಲಿ (Rajasthan) ಬಂಧಿಸಿದ್ದಾರೆ.

ಬಂಧಿತ ಸರಣಿ ಹಂತಕನನ್ನು ಡಾ. ದೇವೇಂದರ್ ಶರ್ಮಾ (67) (Dr.Devender Sharma) ಎಂದು ಗುರುತಿಸಲಾಗಿದೆ. ಈತ ಆಗಸ್ಟ್ 2023 ರಲ್ಲಿ ಪೆರೋಲ್‌ ಪಡೆದು ತಲೆಮರೆಸಿಕೊಂಡಿದ್ದ. ಪೊಲೀಸರಿಂದ ತಪ್ಪಿಸಿಕೊಳ್ಳಲು ರಾಜಸ್ಥಾನದ ದೌಸಾದ ಆಶ್ರಮವೊಂದರಲ್ಲಿ ಅರ್ಚಕನಾಗಿ ಸೇರಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶರ್ಮಾ ರಾಜಸ್ಥಾನದ ಬಂಡಿಕುಯಿಯಲ್ಲಿರುವ ಜಂತ ಕ್ಲಿನಿಕ್‌ನಲ್ಲಿ 11 ವರ್ಷಗಳ ಕಾಲ ಆಯುರ್ವೇದ ವೈದ್ಯನಾಗಿ ಕೆಲಸ ಮಾಡಿದ್ದ. 1994 ರಲ್ಲಿ, ಅನಿಲ ಎಜೆನ್ಸಿ ತೆರೆಯಲು ಪ್ರಯತ್ನಿಸಿದ್ದ. ಈ ವೇಳೆ ಆತನಿಗೆ 11 ಲಕ್ಷ ರೂ.ಗಳನ್ನು ವಂಚಿಸಲಾಗಿತ್ತು. ಬಳಿಕ ಅಲ್ಲಿಂದ ಅಲಿಘರ್‌ನ ಮನೆಗೆ ಮರಳಿ, ಅಲ್ಲಿ ನಕಲಿ ಅನಿಲ ಏಜೆನ್ಸಿಯನ್ನು ನಡೆಸುತ್ತಿದ್ದ. ಈ ಸಮಯದಲ್ಲಿ ಬೇರೆ ಕಡೆಗಳಿಗೆ ಸಾಗಿಸುತ್ತಿದ್ದ ಅನಿಲ ಸಿಲಿಂಡರ್‌ಗಳನ್ನು ಕದಿಯಲು ಟ್ರಕ್ ಚಾಲಕರನ್ನು ಕೊಲೆ ಮಾಡುತ್ತಿದ್ದ. ಬಳಿಕ ಶವಗಳನ್ನು ನದಿಗಳಿಗೆ ಎಸೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

arrest crime

1998 ಮತ್ತು 2004ರ ಅವಧಿಯಲ್ಲಿ ಶರ್ಮಾ ಅಕ್ರಮ ಮೂತ್ರಪಿಂಡ ಕಸಿ ದಂಧೆಯಲ್ಲಿ ಭಾಗಿಯಾಗಿದ್ದ. ದೆಹಲಿ, ಹರಿಯಾಣ ಮತ್ತು ರಾಜಸ್ಥಾನದಾದ್ಯಂತ 125 ಕ್ಕೂ ಹೆಚ್ಚು ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಸಹಕರಿಸಿದ್ದ. ಮೂತ್ರಪಿಂಡ ದಾನಿಗಳನ್ನು ವ್ಯವಸ್ಥೆ ಮಾಡುವ ಮಧ್ಯವರ್ತಿಯಾಗಿ ಪ್ರತಿ ಕಸಿಗೆ 5 ರಿಂದ 7 ಲಕ್ಷ ರೂ.ಗಳನ್ನು ಗಳಿಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಇನ್ನೂ 2002 ಮತ್ತು 2004 ರ ನಡುವೆ, ಶರ್ಮಾ ಹಲವಾರು ಟ್ಯಾಕ್ಸಿ ಚಾಲಕರ ಅಪಹರಣ ಮಾಡಿ ಕೊಲೆಗೈದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಶರ್ಮಾ ದೆಹಲಿಯಿಂದ ಟ್ಯಾಕ್ಸಿಗಳನ್ನು ಬಾಡಿಗೆಗೆ ಪಡೆದು, ಚಾಲಕರನ್ನು ಕೊಂದು ಶವವನ್ನು ಕಾಸ್ಗಂಜ್‌ನ ಮೊಸಳೆಗಳಿಂದ ತುಂಬಿದ ಹಜ್ರಾ ಕಾಲುವೆಯಲ್ಲಿ ಎಸೆಯುತ್ತಿದ್ದ. ನಂತರ ಕದ್ದ ಟ್ಯಾಕ್ಸಿಗಳನ್ನು ಬೂದು ಮಾರುಕಟ್ಟೆಯಲ್ಲಿ ತಲಾ 20,000 ರಿಂದ 25,000 ರೂ.ಗಳಿಗೆ ಮಾರಾಟ ಮಾಡುತ್ತಿದ್ದ. ಬಳಿಕ ಆತನನ್ನು ಪೊಲೀಸರು ಬಂಧಿಸಿ 21 ಟ್ಯಾಕ್ಸಿ ಚಾಲಕರ ಕೊಲೆಗಳ ಆರೋಪ ಹೊರಿಸಿದ್ದರು. ನಂತರ ಶರ್ಮಾ 50ಕ್ಕೂ ಹೆಚ್ಚು ಜನರನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರಿಗೆ ಹತ್ಯೆಗೀಡಾದವರ ಶವಗಳನ್ನು ಪತ್ತೆ ಮಾಡಲು ಸಾಧ್ಯವಾಗದ ಕಾರಣ, ಕೇವಲ ಏಳು ಕೊಲೆಗಳಿಗೆ ಶರ್ಮಾಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಕೆಲವು ಪ್ರಕರಣಗಳಲ್ಲಿ ಗಲ್ಲು ಶಿಕ್ಷೆಗೂ ಆದೇಶಿಸಲಾಗಿತ್ತು. ಇನ್ನೂ ಅಪರಾಧ ಸಾಭೀತಾದ ಬಳಿಕ ಆತನ ಪತ್ನಿ ಮತ್ತು ಮಕ್ಕಳು ಅವನಿಂದ ದೂರವಾಗಿದ್ದರು.

ಜನವರಿ 2020 ರಲ್ಲಿ, ಹಂತಕ ಶರ್ಮಾನನ್ನು ಉತ್ತಮ ನಡವಳಿಕೆಯ ಆಧಾರದ ಮೇಲೆ ಜೈಪುರ ಕೇಂದ್ರ ಜೈಲಿನಿಂದ ಪೆರೋಲ್ ಮೇಲೆ ಬಿಡುಗಡೆ ಮಾಡಲಾಯಿತು. ಆದರೆ ಆಗಲೂ ಆತ ತಲೆಮರೆಸಿಕೊಂಡಿದ್ದ. ಕೆಲವು ತಿಂಗಳ ಬಳಿಕ ಪೊಲೀಸರು ಅಪರಾಧಿಗಳ ಬಗ್ಗೆ ಮಾಹಿತಿ ಕಲೆ ಹಾಕುವಾಗ ಶರ್ಮಾ, ಎರಡನೇ ಹೆಂಡತಿಯೊಂದಿಗೆ ಬಾಪ್ರೋಲಾದಲ್ಲಿ ವಾಸಿಸುತ್ತಿರುವುದು ತಿಳಿದು ಬಂದಿತ್ತು. ಈ ವೇಳೆ ಆತ ರಿಯಲ್‌ ಎಸ್ಟೇಟ್‌ ಉದ್ಯಮ ಆರಂಭಿಸಿಕೊಂಡಿದ್ದ. ವಿವಾದಿತ ಕಟ್ಟಡ ಮಾರಾಟದಲ್ಲಿ ತೊಡಗಿದ್ದ ವೇಳೆಯೇ ಆತನನ್ನು ಬಂಧಿಸಿ ಪೊಲೀಸರು ತಿಹಾರ್‌ ಜೈಲಿಗಟ್ಟಿದ್ದರು. ಸ್ವಲ್ಪ ವರ್ಷಗಳ ಕಾಲ ಜೈಲಲ್ಲಿದ್ದ ಶರ್ಮಾಗೆ 2023ರಲ್ಲಿ ಎರಡು ತಿಂಗಳ ಪೆರೋಲ್ ನೀಡಲಾಯಿತು, ಇದಾದ ಬಳಿಕ ಮತ್ತೆ ಆತ ತಲೆಮರೆಸಿಕೊಂಡಿದ್ದ.

ಹಂತಕನ ಪತ್ತೆಗೆ ಜೈಪುರ, ದೆಹಲಿ, ಅಲಿಗಢ, ಆಗ್ರಾ ಮತ್ತು ಪ್ರಯಾಗ್‌ರಾಜ್ ಸೇರಿದಂತೆ ಎಲ್ಲಾ ಸಂಭಾವ್ಯ ಅಡಗುತಾಣಗಳಲ್ಲಿ ಆರು ತಿಂಗಳ ಕಾಲ ಪೊಲೀಸರು ಮಾಹಿತಿ ಸಂಗ್ರಹಿಸಿದ್ದರು. ಕೊನೆಗೆ ರಾಜಸ್ಥಾನದ ದೌಸಾದ ಆಶ್ರಮದಲ್ಲಿ ಅರ್ಚಕನ ವೇಷದಲ್ಲಿ ಅಡಗಿಕೊಂಡಿದ್ದು ಪತ್ತೆಯಾಗಿತ್ತು. ಪೊಲೀಸರ ತಂಡವು ಅಲ್ಲಿ ಮೊಕ್ಕಾಂ ಹೂಡಿ, ಆತನ ಅನುಯಾಯಿಯಂತೆ ನಟಿಸಿ ಬಂಧಿಸಿದ್ದಾರೆ. ಬಂಧನದ ಬಳಿಕ ಆತ ತನ್ನೆಲ್ಲಾ ಅಪರಾಧಗಳನ್ನು ಒಪ್ಪಿಕೊಂಡಿದ್ದಾನೆ. ಮತ್ತೆ ಜೈಲಿಗೆ ವಾಪಸ್‌ ಆಗಬಾರದು ಎಂದೇ ಪೆರೋಲ್‌ ಪಡೆದು ಪರಾರಿಯಾಗಿದ್ದೆ ಎಂದು ಹೇಳಿಕೊಂಡಿದ್ದಾನೆ.

ಶರ್ಮ ಕೊಲೆ, ಅಪಹರಣ ಮತ್ತು ದರೋಡೆ ಸೇರಿದಂತೆ 27 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಆತನನ್ನು ಮುಂದಿನ ಕಾನೂನು ಕ್ರಮಗಳಿಗಾಗಿ ಜೈಲು ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:crimeDelhi PoliceDevender SharmaDr Deathrajasthan
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
2 hours ago
Hubballi Exam
Dharwad

ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

Public TV
By Public TV
2 hours ago
Bengaluru Govindraj nagar arrest
Bengaluru City

ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

Public TV
By Public TV
3 hours ago
SSLC Exams
Bengaluru City

ಇನ್ಮುಂದೆ 33% ಅಂಕ ಪಡೆದರೆ SSLC ಪಾಸ್

Public TV
By Public TV
3 hours ago
MB Patil and k.rammohan Naidu
Bengaluru City

ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಮನವಿ – ಕೇಂದ್ರ ವಿಮಾನಯಾನ ಸಚಿವರೊಂದಿಗೆ ಎಂಬಿಪಿ ಮಾತುಕತೆ

Public TV
By Public TV
3 hours ago
Hulk Hogan 3
Latest

WWE ಲೆಜೆಂಡ್‌, ಕುಸ್ತಿಪಟು ಹಲ್ಕ್ ಹೊಗನ್ ನಿಧನ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?