Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಪಬ್ಲಿಕ್ ಟಿವಿ’ಯ ಒಂದು ಕರೆಯಿಂದ ಸರ್ಕಾರಿ ಶಾಲೆಗೆ ಮರುಜೀವ ನೀಡಿದ ಪ್ರಣವ್ ಫೌಂಡೇಶನ್..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | `ಪಬ್ಲಿಕ್ ಟಿವಿ’ಯ ಒಂದು ಕರೆಯಿಂದ ಸರ್ಕಾರಿ ಶಾಲೆಗೆ ಮರುಜೀವ ನೀಡಿದ ಪ್ರಣವ್ ಫೌಂಡೇಶನ್..!

Districts

`ಪಬ್ಲಿಕ್ ಟಿವಿ’ಯ ಒಂದು ಕರೆಯಿಂದ ಸರ್ಕಾರಿ ಶಾಲೆಗೆ ಮರುಜೀವ ನೀಡಿದ ಪ್ರಣವ್ ಫೌಂಡೇಶನ್..!

Public TV
Last updated: May 24, 2025 4:25 pm
Public TV
Share
3 Min Read
Pranav Foundation
SHARE

– ಮೂರು ತಿಂಗಳಲ್ಲಿ 100ಕ್ಕೂ ಅಧಿಕ ಮಕ್ಕಳು ಶಾಲೆಗೆ ಸೇರ್ಪಡೆ

ಮಡಿಕೇರಿ: ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗದ ಪೆರೆಜೆ ಗ್ರಾಮದ (Peraje Village) ಸರ್ಕಾರಿ ಶಾಲೆಯೊಂದು ಮಕ್ಕಳ ಕೊರತೆಯಿಂದಾಗಿ ಮುಚ್ಚುವ ಹಂತಕ್ಕೆ ತಲುಪಿತ್ತು. ಪೆರೆಜೆ ಗ್ರಾಮದ ಸೇರಿ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳಿಗೆ ಆ ಶಾಲೆಯೇ ಆಸರೆಯಾಗಿತ್ತು. ಒಂದು ಕಾಲದಲ್ಲಿ ಸಾವಿರಾರು ಮಕ್ಕಳಿಂದ ತುಂಬಿ ತುಳುತ್ತಿದ್ದ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿಲ್ಲ ಎಂದು ಪೋಷಕರು ಮಕ್ಕಳನ್ನು ಆ ಶಾಲೆಗೆ ಕಳುಹಿಸಲು ಹಿಂದೇಟು ಹಾಕಿದರು. ಖಾಸಗಿ ಶಾಲೆಗಳನ್ನ (Private School) ಪೋಷಕರು ಮುಖ ಮಾಡಿದ್ರು. ಕ್ರಮೇಣ ದಾಖಲಾತಿ ಕೊರತೆಯಿಂದ ಆ ಶಾಲೆಯೇ ಮುಚ್ಚುವ ಹಂತಕ್ಕೆ ತಲುಪಿತ್ತು. ಇಂತಹ ಪರಿಸ್ಥಿತಿಯಲ್ಲಿ ʻನಿಮ್ಮ ಪಬ್ಲಿಕ್‌ ಟಿವಿʼಯ (Public TV) ಒಂದೇ ಒಂದು ಕರೆಯಿಂದ ಶಾಲೆಗೆ ಮರುಜೀವ ಸಿಕ್ಕಿದೆ. ಹೌದು ʻಪಬ್ಲಿಕ್ ಟಿವಿʼಯು ಗಡಿಭಾಗದ ಸರ್ಕಾರಿ ಶಾಲೆಯನ್ನು ಉಳಿಸಬೇಕೆಂದು ಪ್ರಣವ್ ಫೌಂಡೇಶನ್‌ ಸದಸ್ಯರ ಬಳಿ ಕೇಳಿಕೊಂಡಿತ್ತು. ಇಂದು ಯಾವುದೇ ಖಾಸಗಿ ಶಾಲೆಗೂ ಕಡಿಮೆ ಇಲ್ಲದಂತೆ ಪೆರಜೆ ಸರ್ಕಾರಿ ಶಾಲೆ ಬೆಳೆದು ನಿಂತಿದೆ.

Pranav Foundation 5

ಹೌದು. ಪೆರಜೆ ಗ್ರಾಮದ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಮಕ್ಕಳಿಗೆ 1982 ರಿಂದ 2000 ಇಸವಿ ವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಈ ಶಾಲೆ ಜ್ಞಾನಾರ್ಜನೆ ನೀಡಿತ್ತು. ಕಾಲಕ್ರಮೇಣ ಈ ಶಾಲೆಯ ಹಿರಿಯ ಶಿಕ್ಷಕರು ನಿವೃತ್ತಿ ಹೊಂದಿದರು. ಇದರಿಂದ ಹೊಸ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಮೂಲ ಸೌಕರ್ಯಗಳಿಲ್ಲ ಎನ್ನುವ ಕಾರಣಕ್ಕಾಗಿ ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾದರು. ಇದರಿಂದ ಇಡೀ ಶಾಲೆಯೇ ವಿದ್ಯಾರ್ಥಿಗಳಿಲ್ಲದೇ ಬಣಗುಡುತ್ತಿತ್ತು. ಶಿಕ್ಷಣ ಇಲಾಖೆ ಕೂಡ ಶಾಲೆಯನ್ನು ಮುಚ್ಚುವಂತೆ ಆದೇಶ ನೀಡಿತ್ತು. ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ – ವಾಡಿಕೆಗೂ ಮೊದಲೇ ಕೇರಳಕ್ಕೆ ಮುಂಗಾರು ಪ್ರವೇಶ

Pranav Foundation 4

ಇದಾದ ಬಳಿಕ ಈ ಶಾಲೆಯ ಹಳೆಯ ವಿದ್ಯಾರ್ಥಿಗಳು ನಮ್ಮ ಮಡಿಕೇರಿಯ ʻಪಬ್ಲಿಕ್ ಟಿವಿʼ ಜಿಲ್ಲಾ ವರದಿಗಾರ ಮಲ್ಲಿಕಾರ್ಜುನ್ ಅವರಿಗೆ ಕರೆ ಮಾಡಿ ಶಾಲೆಯನ್ನ ಉಳಿಸಿಕೊಂಡುವಂತೆ ಮನವಿ ಮಾಡಿದ್ರು. ಬಳಿಕ ʻಪಬ್ಲಿಕ್‌ ಟಿವಿʼ ಪ್ರಣವ್ ಫೌಂಡೇಶನ್‌ಗೆ ಸಸ್ಯರಿಗೆ ಕರೆ ಮಾಡಿ ಪರಿಸ್ಥಿತಿಯನ್ನ ಮನವರಿಕೆ ಮಾಡಿಕೊಟ್ಟಿತ್ತು. ನಂತರ ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ಪ್ರಣವ್ ಫೌಂಡೇಶನ್‌ನ ಸದಸ್ಯರು ಶಾಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಬಳಿಕ ಮೂರೇ ತಿಂಗಳ ಅವಧಿಯಲ್ಲಿ ಶಾಲೆಯ ಸಂಪೂರ್ಣ ಚಿತ್ರಣವನ್ನೇ ಬದಲಾಯಿಸಿದ್ದಾರೆ. ಯಾವ ಖಾಸಗಿ ಶಾಲೆಗೂ ಕಮ್ಮಿ ಇಲ್ಲದಂತೆ ಶಾಲೆಯ ವಾತಾವರಣವನ್ನ ಬದಲಾಯಿಸಿದ್ದಾರೆ. ಇದನ್ನೂ ಓದಿ: ಸಿಇಟಿ ಫಲಿತಾಂಶ ಪ್ರಕಟ – ಟಾಪರ್‌ಗಳು ಯಾರು?

Pranav Foundation 6

5 ದಶಕಗಳನ್ನು ಪೂರೈಸಿದ ಪೆರೆಜೆ ಗ್ರಾಮದ ಜ್ಯೋತಿ ಪ್ರೌಢಶಾಲೆ ಸಂಪೂರ್ಣವಾಗಿ ಶಿಥಿಲಗೊಂಡಿತ್ತು. ಸುಣ್ಣ-ಬಣ್ಣ ಕಾಣದೇ ಅದೆಷ್ಟೋ ವರ್ಷಗಳಾಗಿತ್ತು. ಈ ಶಾಲೆಯನ್ನ ಮೇಲ್ದರ್ಜೆಗೆ ತೆಗೆದುಕೊಂಡು ಹೋಗಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಸಹಕಾರದಿಂದ ಶಾಲೆಯನ್ನು ದತ್ತು ಪಡೆದ ಪ್ರಣವ್ ಫೌಂಡೇಶನ್‌ನ ಸದಸ್ಯರು ಆಧುನಿಕ ಸ್ಪರ್ಶ ನೀಡಿದ್ದಾರೆ‌. ಈ‌ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ, ಉಚಿತ ಶೈಕ್ಷಣಿಕ ಪ್ರವಾಸ, ಉಚಿತ ಕಲಿಕಾ ಸಾಮಗ್ರಿ, ಕಂಪ್ಯೂಟರ್ ಡಿಜಿಟಲ್ ಶಿಕ್ಷಣ, ಡಿಜಿಟಲ್ ಗ್ರಂಥಾಲಯ, ಸ್ಪೋಕನ್‌ ಕ್ಲಾಸ್, ಪೌಷ್ಠಿಕ ಆಹಾರ ಸೌಲಭ್ಯ ಕಲ್ಪಿಸಿರುವುದಲ್ಲದೇ, ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಸ್ಕೂಲ್ ಬಸ್ ಸೌಲಭ್ಯ ಸಹ ಕಲ್ಪಿಸಿದ್ದಾರೆ. ಇದನ್ನೂ ಓದಿ: ನಿರಂತರ ಮಳೆ ಚಿಕ್ಕಪಡಸಲಗಿ ಬ್ಯಾರೇಜ್‌ಗೆ ಜೀವಕಳೆ – ರೈತರ ಮೊಗದಲ್ಲಿ ಮಂದಹಾಸ

Pranav Foundation 2

ಇನ್ನೂ ಈ ಶಾಲೆಗೆ ಶಿಕ್ಷಕರು ಇಲ್ಲದೇ ಶಾಲೆಗಳಿಗೆ ಮಕ್ಕಳ ಹಾಜರಾತಿ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದೆ‌ ಎಂದು ಅರಿತ ಸದಸ್ಯರು ಶಾಲೆಗೆ ಸುತ್ತಮುತ್ತಲಿನಲ್ಲಿ‌ ಇರುವಂತಹ ಅತೀ ಹೆಚ್ಚು ಓದಿರುವ ಯುವತಿಯರನ್ನೇ ಅತಿಥಿ ಶಿಕ್ಷಕನಾಗಿ ನೇಮಕ ಮಾಡಿಕೊಂಡಿದ್ದಾರೆ.

Pranav Foundation 3

ಅಷ್ಟೇ ಅಲ್ಲದೇ ಇಲ್ಲಿರುವ ಸುಮಾರು 5-6 ಶಿಕ್ಷಕರಿಗೆ ಪ್ರಣವ್ ಫೌಂಡೇಶನ್‌ನ ಸದಸ್ಯರೇ ದಾನಿಗಳ ನೆರವಿನಿಂದ ಪ್ರತಿ ತಿಂಗಳು ತಲಾ ಒಬ್ಬ ಶಿಕ್ಷಕರಿಗೆ 12,000 ರಿಂದ 60,0000 ರೂ.ವರೆಗೆ ವೇತನ ನೀಡುತ್ತಿದ್ದಾರೆ. ಇಂತಹ ಕೆಲಸ ಮಾಡುವುದಕ್ಕೆ ʻಪಬ್ಲಿಕ್ ಟಿವಿʼಯ ಮುಖ್ಯಸ್ಥರಾದ ಹೆಚ್.ಆರ್ ರಂಗನಾಥ್ ಸರ್ ಪ್ರೇರಣೆ ಎನ್ನುತ್ತಾರೆ ಪ್ರಣವ್ ಫೌಂಡೇಶನ್‌ನ ಸದಸ್ಯರು‌.

TAGGED:government schoolhr ranganathKodaguPranav FoundationPublic TVಪಬ್ಲಿಕ್ ಟಿವಿಪೆರಜೆ ಗ್ರಾಮಪ್ರಣವ್‌ ಫೌಂಡೇಶನ್‌ಸರ್ಕಾರಿ ಶಾಲೆಹೆಚ್.ಆರ್.ರಂಗನಾಥ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
19 minutes ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
29 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
53 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
56 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
1 hour ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?