Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ – ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ – ಡಿಕೆಶಿ

Bengaluru City

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ – ಡಿಕೆಶಿ

Public TV
Last updated: May 24, 2025 10:21 pm
Public TV
Share
4 Min Read
DK Shivakumar 7
SHARE

-ಬೆಂಗಳೂರಿನ ಫುಟ್ ಪಾತ್ ಅಂಗಡಿಗಳನ್ನು ತೆರವು, ವ್ಯಾಪಾರಿಗಳಿಗೆ ವಾಹನ ಸೌಲಭ್ಯ
-ಕಾನೂನು ಬಾಹಿರವಾಗಿ ಹಾಕಿರುವ ಆಪ್ಟಿಕಲ್ ಕೇಬಲ್ ಕತ್ತರಿಸಲು ಸೂಚನೆ
-ರಸ್ತೆ ಅಗಲೀಕರಣಕ್ಕೆ ಶಾಸಕರು ಶಿಫಾರಸ್ಸು ಮಾಡಿದರೆ ಟಿಡಿಆರ್ ನೀಡಲು ಸಿದ್ಧ
-ಮಳೆಯಿಂದ ಮನೆಯೊಳಗೆ ನೀರು ನುಗ್ಗಿರುವವರಿಗೆ 10 ಸಾವಿರ ಪರಿಹಾರ
-ಕೆಂಪೇಗೌಡ ಬಡಾವಣೆಯ ಬಿಡಿಎ ಜಾಗದಲ್ಲಿ ಸ್ಕೈ ಡೆಕ್ ನಿರ್ಮಾಣ

ಬೆಂಗಳೂರು: ಸೆ.15ರ ಒಳಗಾಗಿ ಬಿಬಿಎಂಪಿ (BBMP) ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru) ರಚನೆಯಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ಗ್ರೇಟರ್ ಬೆಂಗಳೂರು ಸಭೆ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 15ರಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಜಿಎ) ಆಗಿ ಪರಿವರ್ತನೆಗೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. 120 ದಿನಗಳಲ್ಲಿ ನಾವು ಪಾಲಿಕೆಗಳನ್ನು ರಚನೆ ಮಾಡಲೇಬೇಕು. ಹೀಗಾಗಿ ಎಷ್ಟು ಪಾಲಿಕೆ ಮಾಡಬೇಕು ಎಂದು ಬೆಂಗಳೂರಿನ ಎಲ್ಲಾ ಶಾಸಕರ ಬಳಿ ಸಲಹೆಗಳನ್ನು ಕೇಳಿದ್ದೇನೆ. ನಂತರ ಮುಂದೆ ಎಲ್ಲೆಲ್ಲಿ ವಿಸ್ತರಣೆ ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ವಿರೋಧ ಪಕ್ಷದ ನಾಯಕರು ಸೇರಿದಂತೆ ಇನ್ನೂ ಮೂರ್ನಾಲ್ಕು ಶಾಸಕರ ಜೊತೆ ಚರ್ಚೆ ಮಾಡುತ್ತೇನೆ. ಎಲ್ಲರ ಸಲಹೆ ಪಡೆದ ಬಳಿಕ ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಾಡಿ, ಅಂತಿಮ ತೀರ್ಮಾನ ಮಾಡಲಾಗುವುದು. ಸೆಪ್ಟೆಂಬರ್ 15ರ ಒಳಗಾಗಿ ಈ ಪಾಲಿಕೆಗಳು ರಚನೆಯಾಗಬೇಕು ಎಂದಿದ್ದಾರೆ.ಇದನ್ನೂ ಓದಿ:ಮೇ 26ರಿಂದ 2 ದಿನ ಮೋದಿ ಗುಜರಾತ್ ಪ್ರವಾಸ – 53,414 ಕೋಟಿ ರೂ. ವೆಚ್ಚದ ಯೋಜನೆಗಳ ಉದ್ಘಾಟನೆ

ಮಳೆ ಪೀಡಿತ ಪ್ರದೇಶಗಳ ಶಾಸಕರ ಜೊತೆ ಚರ್ಚೆ ಮಾಡಿ, ತುರ್ತು ಕೆಲಸ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಅಧಿಕಾರ ನೀಡಿದ್ದೇವೆ. ಇದಕ್ಕೆ ಅಗತ್ಯವಿರುವ ಬಜೆಟ್ ಅನ್ನು ಸರ್ಕಾರದಿಂದ ನೀಡುತ್ತೇವೆ. ಟ್ಯಾಂಕರ್ ನೀರಿನ ವಿಚಾರವಾಗಿ ದೂರು ಬಂದಿರುವ ಪ್ರದೇಶಗಳಲ್ಲಿ ಆಯಾ ಋತುವಿಗೆ ತಕ್ಕಂತೆ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಬೆಂಗಳೂರಿನ ಎಲ್ಲಾ ಫುಟ್‌ಪಾತ್ ಅಂಗಡಿಗಳನ್ನು ತೆರವುಗೊಳಿಸಲು ನಿರ್ಧರಿಸಿದ್ದೇವೆ. 27,665 ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, ನಾವು ಅವರಿಗೆ ತಳ್ಳುವ ವಾಹನ ನೀಡಲು ಸಿದ್ಧರಿದ್ದೇವೆ. ನಾವು ನಿಗದಿ ಮಾಡುವ ಜಾಗದಲ್ಲಿ ವಾಹನ ಇಟ್ಟುಕೊಂಡು ವ್ಯಾಪಾರ ಮಾಡಬೇಕು. 3,755 ಜನ ವ್ಯಾಪಾರಿಗಳು ವಾಹನ ಬೇಕು ಎಂದು ಕೇಳಿದ್ದಾರೆ. ನೀವು ಶಾಸಕರ ಮೂಲಕ ಒತ್ತಡ ತರಬೇಡಿ. ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ. ನಾವು ಒಂದೇ ಬಾರಿಗೆ ಇದನ್ನು ತೆರವುಗೊಳಿಸಲು ಆಗದಿದ್ದರೂ, ವ್ಯವಸ್ಥಿತವಾಗಿ ಹಂತ ಹಂತವಾಗಿ ಇದನ್ನು ಸರಿಪಡಿಸಲಾಗುವುದು ಎಂದು ತಿಳಿಸಿದರು.

ರಸ್ತೆ ಅಗಲೀಕರಣದ ವಿಚಾರವಾಗಿ ಶಾಸಕರ ಜೊತೆ ಚರ್ಚೆ ಮಾಡಲಾಗಿದ್ದು, ಶಾಸಕರು ಎಲ್ಲೆಲ್ಲಿ ರಸ್ತೆ ಅಗಲೀಕರಣ ಆಗಬೇಕು ಎಂದು ಶಿಫಾರಸ್ಸು ಮಾಡುತ್ತಾರೋ, ಅಲ್ಲಿ ಆಸ್ತಿ ಮಾಲೀಕರಿಗೆ ಟಿಡಿಆರ್ ನೀಡಲಾಗುವುದು. ಶಾಸಕರು ಆಸ್ತಿ ಮಾಲೀಕರ ಜೊತೆ ಚರ್ಚೆ ಮಾಡಬೇಕು. ರಾಜಕಾಲುವೆ ಅಕ್ಕಪಕ್ಕದ ಬಫರ್ ವಲಯದಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಿದ್ದು, ನಾವು 300 ಕಿ.ಮೀ ಉದ್ದದ ರಸ್ತೆ ಗುರುತಿಸಿದ್ದು, ಶಾಸಕರು ಕೂಡ ಸುಮಾರು 300 ಕಿ.ಮೀ ಉದ್ದದಷ್ಟು ರಸ್ತೆ ಮಾಡಲು ಶಿಫಾರಸ್ಸು ನೀಡಬಹುದು ಎಂದು ಹೇಳಿದ್ದೇವೆ. ಮುಂದೆ ತಗ್ಗು ಪ್ರದೇಶಗಳಲ್ಲಿ ಬೇಸ್‌ಮೆಂಟ್ ಪಾರ್ಕಿಂಗ್‌ಗೆ ಅವಕಾಶ ಇರುವುದಿಲ್ಲ. ಆಪ್ಟಿಕಲ್ ಫೈಬರ್ ಕೇಬಲ್‌ಗಳನ್ನು ಸೀವೇಜ್ ಹಾಗೂ ನೀರುಗಾಲುವೆಗಳಲ್ಲಿ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಲವು ಶಾಸಕರು ಹೇಳಿದ್ದಾರೆ. ಈ ರೀತಿ ಎಳೆದಿರುವ ಕೇಬಲ್‌ಗಳನ್ನು ಕತ್ತರಿಸಿ ಹಾಕಲು ನಾನು ಹೇಳಿದ್ದೇನೆ. ಇನ್ನು ಚರಂಡಿಗಳಲ್ಲಿ ಹೂಳು ಎತ್ತಲು ಸೂಚಿಸಲಾಗಿದೆ ಎಂದರು.

ಗ್ರೇಟರ್ ಬೆಂಗಳೂರು ಸಭೆಯ ಬಳಿಕ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆನು. ಚರ್ಚಿತ ವಿಷಯಗಳು ಹೀಗಿವೆ:

– ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ.

– ಬೆಂಗಳೂರಿನ ಫುಟ್‌ಪಾತ್ ಅಂಗಡಿಗಳನ್ನು ತೆರವು ಮಾಡಲಾಗುವುದು. 27,665 ಬೀದಿ ಬದಿ ವ್ಯಾಪಾರಿಗಳು ನೋಂದಣಿ… pic.twitter.com/hOFewZPSev

— DK Shivakumar (@DKShivakumar) May 24, 2025

ನಗರದ 25 ಲಕ್ಷ ಆಸ್ತಿಗಳನ್ನು ಇ-ಖಾತಾ ಮಾಡಲು ಹೇಳಿದ್ದು, ಎಲ್ಲಾ ಆಸ್ತಿಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಮಾಡುತ್ತಿದ್ದು, ಈಗಾಗಲೇ 5 ಲಕ್ಷ ಆಸ್ತಿಗಳ ಡಿಜಿಟಲೀಕರಣ ಪೂರ್ಣಗೊಂಡಿದೆ. ಇದನ್ನು ದೊಡ್ಡ ಅಭಿಯಾನವಾಗಿ ಮಾಡುತ್ತಿದ್ದೇವೆ. ಆಮೂಲಕ ತೆರಿಗೆ ಹಾಗೂ ಆಸ್ತಿ ದಾಖಲಾತಿಯಲ್ಲಿ ಪಾರದರ್ಶಕತೆ ತರಲಾಗುತ್ತಿದೆ. ಇದಕ್ಕಾಗಿ ನ್ಯಾಷನಲ್ ಈ ಗವರ್ನೆನ್ಸ್ ಅವಾರ್ಡ್ ಕೂಡ ಸಿಕ್ಕಿದೆ. ಇನ್ನು ಸ್ಕೈಡೆಕ್ ಅನ್ನು ಹೆಮ್ಮಿಗೆಪುರದಲ್ಲಿ ನಿರ್ಮಿಸಲು ತೀರ್ಮಾನಿಸಿದ್ದೆವು. ಆದರೆ ವಿಮಾನ ನಿಲ್ದಾಣದಿಂದ 20 ಕಿ.ಮೀ ದೂರ ಇರಬೇಕು ಎಂಬ ಕಾರಣದಿಂದ ಅಲ್ಲಿ ಸಮಸ್ಯೆ ಎದುರಾಗಿದೆ. ಹೀಗಾಗಿ ಇದನ್ನು ಕೆಂಪೇಗೌಡ ಬಡಾವಣೆಯಲ್ಲಿ ಬಿಡಿಎ ಜಾಗದಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ರಸ್ತೆಗಳಲ್ಲಿ ಹಳೆ ವಾಹನಗಳನ್ನು ನಿಲ್ಲಿಸಿ ಹೋಗುತ್ತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯಿಂದ 100 ಎಕರೆ ಜಾಗ ಒದಗಿಸಿ, ಆ ಎಲ್ಲಾ ವಾಹನಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸಂಚಾರ ಪೊಲೀಸರಿಗೆ ಸೂಚಿಸಲಾಗಿದೆ. ಪಾಲಿಕೆ ಕಾನೂನಿನ ಪ್ರಕಾರ 21 ದಿನಗಳ ಕಾಲ ರಸ್ತೆಯಲ್ಲಿ ನಿಲ್ಲಿಸಿರುವ ವಾಹನ ತೆಗೆಯದಿದ್ದರೆ ಅದನ್ನು ಅನಾಥ ವಾಹನ ಎಂದು ಪರಿಗಣಿಸಿ ಹರಾಜು ಹಾಕಲು ಅವಕಾಶವಿದೆ. ಇನ್ನು ಪೊಲೀಸರು ನಿಗದಿ ಮಾಡುವ ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ. ಇನ್ನು ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಡೆಗಳಲ್ಲಿ ಸರ್ವೀಸ್ ರಸ್ತೆಗಳನ್ನು ಮುಖ್ಯ ರಸ್ತೆ ಜೊತೆ ವಿಲೀನ ಮಾಡಿ, ಸುಗಮವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಸುಮಾರು 40-50 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಶಾಸಕರನ್ನು ವಿಶ್ವಾಸಕ್ಕೆ ಪಡೆದಿದ್ದು, ಎಲ್ಲರೂ ಒಪ್ಪಿದ್ದಾರೆ ಎಂದು ತಿಳಿಸಿದರು.

ಬಿಬಿಎಂಪಿ ವಿಭಜನೆ ಬಗ್ಗೆ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದಾರೆ ಎಂಬ ಪ್ರಶ್ನೆಗೆ, ಅವರು ನಿಮ್ಮ ಮುಂದೆ ಏನು ಹೇಳುತ್ತಾರೋ ಗೊತ್ತಿಲ್ಲ. ಆದರೆ ನನ್ನ ಬಳಿ ಅವರು ಏನು ಹೇಳುತ್ತಾರೆ ಎಂದು ನನಗೆ ಮಾತ್ರ ಗೊತ್ತಿದೆ. ಟನಲ್ ರಸ್ತೆ ಮಾಡುವುದು ಅಸಾಧ್ಯ ಎಂಬ ಬಿಜೆಪಿ ನಾಯಕರ ಮಾತಿನ ಬಗ್ಗೆ ಕೇಳಿದಾಗ, ಈ ಯೋಜನೆಯ ಟೆಂಡರ್ ಬಂದಾಗ ಗೊತ್ತಾಗುತ್ತದೆ ಎಂದಿದ್ದಾರೆ.ಇದನ್ನೂ ಓದಿ: 3 ವರ್ಷಗಳ ಬಳಿಕ ಮತ್ತೆ ವಕ್ಕರಿಸಿದ ಕೊರೊನಾ – ದೇಶದ ಹಲವು ರಾಜ್ಯಗಳಲ್ಲಿ JN1 ಎಂಟ್ರಿ

TAGGED:bbmpbengalurucongressDK ShivakumarGreater Bengaluru Authority
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
5 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
5 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
6 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
6 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
6 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?