Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ರಾಜವಂಶಸ್ಥರಿಗೆ ಟಿಡಿಆರ್ – ಸಿಜೆಐ ಪೀಠಕ್ಕೆ ಪ್ರಕರಣ ವರ್ಗಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಮೈಸೂರು ರಾಜವಂಶಸ್ಥರಿಗೆ ಟಿಡಿಆರ್ – ಸಿಜೆಐ ಪೀಠಕ್ಕೆ ಪ್ರಕರಣ ವರ್ಗಾವಣೆ

Court

ಮೈಸೂರು ರಾಜವಂಶಸ್ಥರಿಗೆ ಟಿಡಿಆರ್ – ಸಿಜೆಐ ಪೀಠಕ್ಕೆ ಪ್ರಕರಣ ವರ್ಗಾವಣೆ

Public TV
Last updated: May 27, 2025 4:04 pm
Public TV
Share
3 Min Read
supreme Court 1
SHARE

– ತ್ರಿಸದಸ್ಯ ಪೀಠದಲ್ಲಿ ವಿಚಾರಣೆ?

ನವದೆಹಲಿ: ಮೈಸೂರು ರಾಜವಂಶಸ್ಥರಿಗೆ ಟಿಡಿಆರ್ (TDR) ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸಲು ತಿರ್ಮಾನ ಕೈಗೊಳ್ಳಲು ಸಿಜೆಐ ಬಿ.ಆರ್ ಗವಾಯಿ ಪೀಠಕ್ಕೆ ವರ್ಗಾಯಿಸಿದೆ.

ಬೆಂಗಳೂರು ಅರಮನೆ ಮೈದಾನದ (Bengaluru Palace Ground) 15 ಎಕರೆ ಸ್ವಾಧೀನಕ್ಕೆ ಸಂಬಂಧಿಸಿದಂತೆ ಮೈಸೂರು ರಾಜಮನೆತನದ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳ (ಟಿಡಿಆರ್) ಪ್ರಮಾಣಪತ್ರಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ (Supreme Court) ನೀಡಿದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌ ಆರಂಭ : ಪರಮೇಶ್ವರ್‌ ಅಧಿಕೃತ ಘೋಷಣೆ

ಇಂದು ಈ ಅರ್ಜಿಯನ್ನು ನ್ಯಾ.ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು. ಈಗಾಗಲೇ ದ್ವಿಸದಸ್ಯ ಪೀಠದಿಂದ ಆದೇಶ ನೀಡಿರುವ ಹಿನ್ನೆಲೆ ಮತ್ತೆ ಇದನ್ನು ದ್ವಿಸದಸ್ಯ ಪೀಠದಲ್ಲೇ ವಿಚಾರಣೆ ಮುಂದುವರಿಸಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯ ಪಟ್ಟಿತು. ಹೀಗಾಗೀ ಇದನ್ನು ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸುವ ಬಗ್ಗೆ ಸಿಜೆಐ ಬಿ.ಆರ್ ಗವಾಯಿ ಪೀಠ ತಿರ್ಮಾನ ಕೈಗೊಳ್ಳಬೇಕಿರುವ ಹಿನ್ನೆಲೆ ಅವರ ಪೀಠಕ್ಕೆ ವರ್ಗಾಯಿಸುವುದಾಗಿ ಹೇಳಿತು. ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಹೆಚ್ಚಳ, ಸದ್ಯಕ್ಕೆ ಮಾಸ್ಕ್ ಕಡ್ಡಾಯ ಇಲ್ಲ: ಸಿದ್ದರಾಮಯ್ಯ

Pramoda Devi

 

ಸೋಮವಾರ ಇದೇ ಪ್ರಕರಣ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠದ ಮುಂದೆ ಬಂದಿತ್ತು. ಈ ವೇಳೆ ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಪ್ರಶ್ನಿಸಿದ ಪೀಠ, ಮತ್ತೊಂದು ಪೀಠವು ನೀಡಿದ ಆದೇಶವನ್ನು ನಾವು ಹೇಗೆ ಪರಿಶೀಲಿಸಬಹುದು ಎಂದು ಕೇಳಿತು. ಇದನ್ನೂ ಓದಿ: ಮಾಜಿ ಸಚಿವ ವೀರಕುಮಾರ ಪಾಟೀಲ ಪುತ್ರ ಪ್ರೀತಮ್ ಅರೆಸ್ಟ್

ಇದಕ್ಕೆ ಉತ್ತರಿಸಿದ ಹಿರಿಯ ವಕೀಲ ಸಿಬಲ್, ಕರ್ನಾಟಕ ಪಟ್ಟಣ ಮತ್ತು ದೇಶ ಯೋಜನಾ ಕಾಯ್ದೆಗೆ 2004ರ ತಿದ್ದುಪಡಿಯ ಮೂಲಕ ಪರಿಚಯಿಸಲಾದ ಟಿಡಿಆರ್ ನಿಬಂಧನೆಯನ್ನು 1996ರಲ್ಲಿ ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆಯಡಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪೂರ್ವಾನ್ವಯವಾಗಿ ಅನ್ವಯಿಸಲಾಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಉಚ್ಚಾಟನೆಯನ್ನು ನಿರೀಕ್ಷಿಸಿದ್ದೆವು, ಒಳ್ಳೆಯದಾಯ್ತು: ಎಸ್‌ಟಿ ಸೋಮಶೇಖರ್

ಟಿಡಿಆರ್ ನಿಬಂಧನೆ ಇರುವ ಮೊದಲೇ 15 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಮತ್ತು ಯಾವುದೇ ಪರಿಹಾರವನ್ನು ಈಗಾಗಲೇ ಮೂಲ ಕಾಯ್ದೆಯಡಿಯಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಸಾಲು ಸಾಲು ಉಚ್ಛಾಟನೆ, ತಾಂತ್ರಿಕವಾಗಿ ಬಿಜೆಪಿ ಬಲಾಬಲ ಕುಸಿತ

ಈ ಸ್ವಾಧೀನವು 1996ರ ಕಾನೂನಿನ ಅಡಿಯಲ್ಲಿ ನಡೆದಿದ್ದು, 11 ಕೋಟಿ ರೂ.ಗಳ ಪರಿಹಾರವನ್ನು ನಿಗದಿಪಡಿಸಲಾಗಿದೆ. ಆ ಸಮಯದಲ್ಲಿ ಟಿಡಿಆರ್ ಪರಿಕಲ್ಪನೆ ಅಸ್ತಿತ್ವದಲ್ಲಿರಲಿಲ್ಲ. ಟಿಡಿಆರ್‌ಗೆ ಅವಕಾಶ ನೀಡುವ ಸೆಕ್ಷನ್ 14 ಬಿ ಅನ್ನು 2004ರಲ್ಲಿ ಮಾತ್ರ ಪರಿಚಯಿಸಲಾಯಿತು ಮತ್ತು ಭೂಮಾಲೀಕರು ಸ್ವಯಂಪ್ರೇರಣೆಯಿಂದ ತಮ್ಮ ಭೂಮಿಯನ್ನು ಬಿಟ್ಟುಕೊಡುವಲ್ಲಿ ಮಾತ್ರ ಅನ್ವಯಿಸುತ್ತದೆ ಮತ್ತು ರಾಜ್ಯವು ಅದನ್ನು ಕಡ್ಡಾಯವಾಗಿ ಸ್ವಾಧೀನಪಡಿಸಿಕೊಳ್ಳುವಲ್ಲಿ ಅಲ್ಲ, ಎಂದು ಹೇಳಿದರು. ಇದನ್ನೂ ಓದಿ: ಕೊಪ್ಪಳದ ಅಂಜನಾದ್ರಿ ದೇವಸ್ಥಾನ ಮುಜರಾಯಿ ಇಲಾಖೆ ವ್ಯಾಪ್ತಿಗೆ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಈ ವಿವಾದವು 1997ರ ಹಿಂದಿನದು. ರಾಜಮನೆತನವು 1996ರ ಕಾಯ್ದೆಯ ಸಿಂಧುತ್ವವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಿದಾಗ ಮತ್ತು ಅರ್ಜಿ ಇನ್ನೂ ಬಾಕಿ ಇದೆ ಎಂದ ಸಿಬಲ್, ನ್ಯಾಯಾಂಗ ನಿಂದನೆಯ ತೀರ್ಪಿನ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸೆಕ್ಷನ್ 14 ಬಿ ಅಡಿಯಲ್ಲಿ ಅವರ ಕಾನೂನು ಆಕ್ಷೇಪಣೆಗಳನ್ನು ಪರಿಹರಿಸಲು ಪೀಠ ವಿಫಲವಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ಅಪಘಾತವಾಗಿದ್ದ ಕಾರು ತೆರವು ಮಾಡ್ತಿದ್ದವರ ಮೇಲೆ ಹರಿದ ಟ್ರಕ್ – ಆರು ಮಂದಿ ಸಾವು

ಪ್ರಸ್ತುತ ಪೀಠವು ಸಮನ್ವಯ ಪೀಠವು ನೀಡಿದ ಆದೇಶದ ಮೇಲೆ ಮೇಲ್ಮನವಿ ಸಲ್ಲಿಸಬಹುದೇ ಎಂದು ಪೀಠ ಪ್ರಶ್ನಿಸಿತು. ರಾಜ್ಯ ಸರ್ಕಾರವು ಹಿಂದಿನ ಆದೇಶವನ್ನು ರದ್ದುಗೊಳಿಸಲು ಪ್ರಯತ್ನಿಸುತ್ತಿಲ್ಲ, ಆದರೆ ಅದನ್ನು ಖಚಿತಪಡಿಸಿಕೊಳ್ಳಲು ಮಾತ್ರ ಪ್ರಯತ್ನಿಸುತ್ತಿದೆ ಎಂದು ಸಿಬಲ್ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆ

ಮೇ 22ರಂದು ನ್ಯಾಯಮೂರ್ತಿಗಳಾದ ಎಂಎಂ ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರನ್ನೊಳಗೊಂಡ ಮತ್ತೊಂದು ಪೀಠವು ನ್ಯಾಯಾಂಗ ನಿಂದನೆ ವಿಚಾರಣೆಯಲ್ಲಿ ರಾಜಮನೆತನದ ಉತ್ತರಾಧಿಕಾರಿಗಳಿಗೆ 3,011 ಕೋಟಿ ರೂ. ಮೌಲ್ಯದ ಟಿಡಿಆರ್ ಪ್ರಮಾಣಪತ್ರಗಳನ್ನು ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದನ್ನೂ ಓದಿ: ಚಂಚಲಗೂಡ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ ರೆಡ್ಡಿ ಶಿಫ್ಟ್‌

TAGGED:New Delhipalace groundSupreme CourtTDRಅರಮನೆ ಮೈದಾನಟಿಡಿಆರ್‌ನವದೆಹಲಿಮೈಸೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
12 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
31 minutes ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago
LOVE 1
Latest

ಮನಸ್ಸಿಗೆ ತುಂಬಾ ಇಷ್ಟವಾದವನು ನೀನು..!

Public TV
By Public TV
8 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
9 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?