– ಆಪರೇಷನ್ ಸಿಂಧೂರ ರಾಷ್ಟ್ರದ ಶಕ್ತಿಯ ಸಂಕೇತವಾಗಿ ನಿಂತಿದೆ; ಪ್ರಧಾನಿ
– 15 ಸಾವಿರ ಮಹಿಳೆಯರಿಂದ ಪ್ರಧಾನಿಗಳಿಗೆ ಭೋಪಾಲ್ನಲ್ಲಿ ಸ್ವಾಗತ
– ಭೋಪಾಲ್ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ
ಭೋಪಾಲ್: ಪಾಕಿಸ್ತಾನದ (Pakistan) ಗುಂಡಿನ ದಾಳಿಗಳಿಗೆ ಫಿರಂಗಿ ಗುಂಡುಗಳ ಮೂಲಕವೇ ನಾವು ಉತ್ತರಿಸುತ್ತೇವೆ ಎಂಬುದಕ್ಕೆ ಆಪರೇಷನ್ ಸಿಂಧೂರ ಸ್ಪಷ್ಟ ನಿರ್ದಶನವಾಗಿದೆ. ಇದು ರಾಷ್ಟ್ರದ ಶಕ್ತಿಯ ಸಂಕೇತವಾಗಿ ನಿಂತಿದೆ ಪ್ರಧಾನಿ ನರೇಂದ್ರ ಮೋದಿ (Narendra Modi) ಬಣ್ಣಿಸಿದರು.
ಭೋಪಾಲ್ನಲ್ಲಿ (Bhopal) ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತಿಕರಣ ಮಹಾ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ (Operation Sindoor) ಭಯೋತ್ಪಾದನೆಯ ವಿರುದ್ಧದ ಅತಿದೊಡ್ಡ ದಾಳಿಯಾಗಿದೆ. ಪಾಕಿಸ್ತಾನದ ಗುಂಡಿನ ದಾಳಿಗಳಿಗೆ ಫಿರಂಗಿ ಗುಂಡುಗಳ ಮೂಲಕವೇ ಉತ್ತರಿಸುತ್ತೇವೆ ಎಂಬುದಕ್ಕೆ ಸ್ಪಷ್ಟ ನಿರ್ದಶನ ಆಗಿದೆ. ಇದು ರಾಷ್ಟ್ರದ ಶಕ್ತಿಯ ಸಂಕೇತವಾಗಿ ನಿಂತಿದೆ ಎಂದು ʻಆಪರೇಷನ್ ಸಿಂಧೂರʼವನ್ನ ಬಣ್ಣಿಸಿದರು. ಇದನ್ನೂ ಓದಿ: ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್!
ಭಾರತದ ಪ್ರತಿಕ್ರಿಯೆಯು ದೇಶದ ಸಾಮೂಹಿಕ ಸಂಕಲ್ಪವನ್ನು ಪ್ರತಿಬಿಂಬಿಸುವ ಜೊತೆಗೆ 140 ಕೋಟಿ ಭಾರತೀಯರ ಧ್ವನಿಯಾಗಿದೆ. ನೀವು ಗುಂಡು ಹಾರಿಸಿದ್ರೆ ಅದರ ಪರಿಣಾಮಗಳನ್ನು ಎದುರಿಸಲು ಸಿದ್ಧವಾಗಿರಿ ಎಂದು ಪಾಕ್ ಮತ್ತು ಪಾಕ್ ಪ್ರಾಯೋಜಿತ ಭಯೋತ್ಪಾದಕರಿಗೆ (Terrorists) ಖಡಕ್ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಆರ್ಟಿಕಲ್-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್
ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಭಾರತೀಯರ ರಕ್ತ ಹರಿಸಿದ್ದಲ್ಲದೇ, ನಮ್ಮ ಸಂಸ್ಕೃತಿಯ ಮೇಲೂ ದಾಳಿ ಮಾಡಿದ್ದಾರೆ. ಉಗ್ರರು ನಮ್ಮ ಸಮಾಜವನ್ನು ವಿಭಜಿಸಲು ಪ್ರಯತ್ನಿಸುವುದರ ಜೊತೆಗೆ ದೇಶದ ಮಹಿಳಾ ಶಕ್ತಿ (ನಾರಿ ಶಕ್ತಿಗೆ)ಗೆ ಸವಾಲು ಹಾಕುವ ಧೈರ್ಯ ಮಾಡಿದರು. ಇದೇ ಸವಾಲು ಉಗ್ರರು ಮತ್ತು ಅವರನ್ನು ಪೋಷಿಸುವವರಿಗೆ ಮರಣದಂಡನೆಯಾಗಿದೆ. ಪಾಕಿಸ್ತಾನ ಸೇನೆ ಊಹಿಸಲೂ ಸಾಧ್ಯವಾಗದಷ್ಟರ ಮಟ್ಟಿಗೆ ನಮ್ಮ ಸೇನೆಯು ಉಗ್ರರ ಅಡಗುತಾಣಗಳನ್ನು ನಾಶಪಡಿಸಿದೆ ಮೋದಿ ಸೇನಾ ಸಾಹಸವನ್ನ ಕೊಂಡಾಡಿದರು.
ಇದೇ ವೇಳೆ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಮಹಿಳಾ ಅಧಿಕಾರಿಗಳ ಪಾತ್ರವನ್ನು ಒತ್ತಿ ಹೇಳಿದರು. ಗಡಿ ಭದ್ರತಾ ಪಡೆ (ಬಿಎಸ್ಎಫ್) ಕೊಡುಗೆಯನ್ನು ಶ್ಲಾಘಿಸಿದರು. ಜೊತೆಗೆ ರಾಜಸ್ಥಾನದಿಂದ ಗುಜರಾತ್ವರೆಗೆ ನಮ್ಮ ಬಿಎಸ್ಎಫ್ ಹೆಣ್ಣುಮಕ್ಕಳು ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಿದರು. ಉಗ್ರರ ಗುಂಡಿ ದಾಳಿಗೆ ಸೂಕ್ತ ಉತ್ತರವನ್ನೂ ನೀಡಿದ್ರು ಅಂತ ಮಹಿಳಾ ಅಧಿಕಾರಿಗಳ ಶೌರ್ಯ, ಸಾಹಸವನ್ನು ಬಣ್ಣಿಸಿದರು. ಇದನ್ನೂ ಓದಿ: ಉಗ್ರರು ಮತ್ತೆ ಹೆಡೆ ಬಿಚ್ಚಿದರೆ, ಹುತ್ತದಿಂದ ಎಳೆದು ತುಳಿಯುತ್ತೇವೆ: ಮೋದಿ ಖಡಕ್ ಸಂದೇಶ
ಮುಂದುವರಿದು.. ಇಂದು ಹೆಚ್ಚಿನ ಹೆಣ್ಣುಮಕ್ಕಳು ವಿಜ್ಞಾನಿಗಳು, ವೈದ್ಯರು, ಇಂಜಿನಿಯರ್ ಮತ್ತು ಪೈಲಟ್ಗಳಾಗುತ್ತಿದ್ದಾರೆ. ಬಾಹ್ಯಾಕಾಶ ಕ್ಷೇತ್ರದಲ್ಲೂ ನಮ್ಮ ಅನೇಕ ಮಹಿಳಾ ವಿಜ್ಞಾನಿಗಳು ಮುಂಚೂಣಿಯಲ್ಲಿದ್ದಾರೆ. ಚಂದ್ರಯಾನ-3 ಯಶಸ್ಸಿಗೂ 100ಕ್ಕೂ ಹೆಚ್ಚು ಮಹಿಳೆಯರು ತಮ್ಮ ಕೊಡುಗೆ ನೀಡಿದ್ದಾರೆ. ಅಲ್ಲದೇ ಈ ಬಾರಿ 75 ಮಹಿಳೆಯರು ಸಂಸತ್ ಸದಸ್ಯರಾಗಿದ್ದಾರೆ. ಈ ಸಂಖ್ಯೆಯನ್ನು ಹೆಚ್ಚಿಸುವುದು ನಮ್ಮ ಕರ್ತವ್ಯವಾಗಿದೆ. ಇದು ನಾರಿ ಶಕ್ತಿ ವಂದನ ಅಧಿನಿಯಮದ ಹಿಂದಿನ ಸ್ಫೂರ್ತಿ. ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ವಿವರಿಸಿದರು.
ಅಲ್ಲದೇ ಭಾರತ ಸಂಸ್ಕೃತಿ ಮತ್ತು ಸಂಪ್ರದಾಯಗಳ ದೇಶವಾಗಿದೆ. ನಮ್ಮ ಸಂಪ್ರದಾಯದಲ್ಲಿ ‘ಸಿಂಧೂರ’ ಮಹಿಳಾ ಶಕ್ತಿಯ ಸಂಕೇತವಾಗಿದೆ. ರಾಮ ಭಕ್ತಿಯಲ್ಲಿ ಮುಳುಗಿರುವ ಹನುಮಾನ್ ಜಿ ಅವರು ಸಿಂಧೂರ ಹಚ್ಚಿಕೊಂಡಿರುವುದನ್ನು ನಾವು ನೋಡಬಹುದು. ಹಾಗೆಯೇ ಶಕ್ತಿ ಪೂಜೆಯಲ್ಲಿ ಸಿಂಧೂರ ನೀಡುತ್ತೇವೆ. ಇದೀಗ ‘ಸಿಂಧೂರ’ ಎಂಬುದು ಶೌರ್ಯದ ಸಂಕೇತವಾಗಿದೆ ಎಂದು ಬಣ್ಣಿಸಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಪ್ರಧಾನಿಯಾದ ದಿನ ಪಿಒಕೆ ಭಾರತದ ಭಾಗವಾಗಲಿದೆ: ʻಕೈʼ ಸಂಸದ ಪ್ರಮೋದ್ ತಿವಾರಿ
ಇದಕ್ಕೂ ಮುನ್ನ ಇಂದು ಭೋಪಾಲ್ಗೆ ಭೇಟಿ ನೀಡಿದ್ದ ಮೋದಿ ಅವರಿಗೆ 15,000 ಮಹಿಳೆಯರು ಭವ್ಯಸ್ವಾಗತ ಕೋರಿದರು. 15,000ಕ್ಕೂ ಹೆಚ್ಚು ಮಹಿಳೆಯರು ಸಿಂಧೂರ ಬಣ್ಣದ ಸೀರೆ ಧರಿಸಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ಬಳಿಕ ಪ್ರಧಾನಿ ಅವರು ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಇಂದೋರ್ ಮೆಟ್ರೋದ ಹಳದಿ ಮಾರ್ಗದ ಸೂಪರ್ ಪ್ರಿಯಾರಿಟಿ ಕಾರಿಡಾರ್, ದಾಟಿಯಾ ಮತ್ತು ಸತ್ನಾ ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಜೊತೆಗೆ 2028ರ ಸಿಂಹಸ್ತ ಮಹಾಕುಂಭಕ್ಕಾಗಿ ಕ್ಷಿಪ್ರಾ ನದಿಯಲ್ಲಿ 860 ಕೋಟಿ ಮೌಲ್ಯದ ಘಾಟ್ ನಿರ್ಮಾಣ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ: ಮೊಬೈಲ್ ಬಳಕೆದಾರರ ಸೇರ್ಪಡೆ: ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ರಿಲಯನ್ಸ್ Jio ನಂ.1