Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಚಿನ್ನಾಭರಣಕ್ಕಾಗಿ ಕಂಟ್ರಾಕ್ಟರ್ ಹತ್ಯೆ ಕೇಸ್ – ಓರ್ವ ಅಪ್ರಾಪ್ತ ಸೇರಿ ಇಬ್ಬರ ಬಂಧನ

Public TV
Last updated: June 1, 2025 8:20 am
Public TV
Share
3 Min Read
Hasan Murder Arrest
SHARE

– ಕೇವಲ 10 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಹಾಸನ: ಚಿನ್ನಾಭರಣಕ್ಕಾಗಿ ಕಂಟ್ರಾಕ್ಟರ್ ಹತ್ಯೆ (Contractor Murder) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಆರೋಪಿಗಳನ್ನು ಅರಸೀಕೆರೆ ಪೊಲೀಸರು ಬಂಧಿಸಿದ್ದಾರೆ.

ಬಿಹಾರ (Bihar) ಮೂಲದ ಕಾರ್ಮಿಕರಾದ ಬಿಕ್ರಂಕುಮಾರ್ (25), ಅಪ್ರಾಪ್ತ ಸಚಿನ್‌ಕುಮಾರ್ (15) ಬಂಧಿತ ಆರೋಪಿಗಳು. ಇದನ್ನೂ ಓದಿ: ಚಿನ್ನಕ್ಕಾಗಿ ಜೊತೆಗಿದ್ದ ಕಾರ್ಮಿಕರಿಂದಲೇ ಕಂಟ್ರಾಕ್ಟರ್ ಬರ್ಬರ ಹತ್ಯೆ – ಆಭರಣ ದೋಚಿ ಪರಾರಿಯಾದ ದುಷ್ಕರ್ಮಿಗಳು

ಆರೋಪಿ ಬಿಕ್ರಂಕುಮಾರ್ ಬಿಹಾರದ ಪೂರ್ನಿಯಾ ಜಿಲ್ಲೆಯ ರಾಂಪುರ ಗ್ರಾಮದವನಾಗಿದ್ದು, ಅಪ್ರಾಪ್ತ ಬಾಲಕ ಸಚಿನ್‌ಕುಮಾರ್ ಪೂರ್ನಿಯಾ ಜಿಲ್ಲೆಯ ರೂಪೋಲಿ ಗ್ರಾಮದವನೆಂದು ತಿಳಿದುಬಂದಿದೆ. ಬಿಕ್ರಂಕುಮಾರ್ 2 ತಿಂಗಳ ಹಿಂದೆ ಕುಟುಂಬ ಸಮೇತರಾಗಿ ಕೆಲಸ ಹುಡುಕಿಕೊಂಡು ಅರಸೀಕೆರೆಗೆ ಬಂದಿದ್ದ. ಬಳಿಕ ಒಂದೂವರೆ ತಿಂಗಳು ಕೆಲಸ ಮಾಡಿ, ಹಬ್ಬ ಇದೆ ಎಂದು ಹೇಳಿ ಗ್ರಾಮಕ್ಕೆ ತೆರಳಿದ್ದ. ಬಿಕ್ರಂಕುಮಾರ್ ಪತ್ನಿ ಹಾಗೂ ಮಗುವನ್ನು ಊರಲ್ಲೇ ಬಿಟ್ಟು, ಅಪ್ರಾಪ್ತ ಬಾಲಕನನ್ನು ಕಳೆದ ಹದಿನೈದು ದಿನಗಳ ಹಿಂದೆ ಅರಸೀಕೆರೆಗೆ ಕರೆದುಕೊಂಡು ಬಂದಿದ್ದ. ಇದನ್ನೂ ಓದಿ: ತಪ್ಪಿಲ್ಲದಿದ್ರೂ ನನ್ನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ: ಆಟೋ ಚಾಲಕ

ಕೊಲೆ ಆರೋಪಿಗಳನ್ನು ಅರಸೀಕೆರೆ ನಗರ ಠಾಣೆ ಪೊಲೀಸರು (Arsikere City Police), ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 2 ಚಿನ್ನದ ಸರ, 3 ಚಿನ್ನದ ಉಂಗುರಗಳು ಹಾಗೂ 1 ಬೈಕ್ ವಶಕ್ಕೆ ಪಡೆದಿದ್ದಾರೆ.

ಏನಿದು ಪ್ರಕರಣ?
ಅರಸೀಕೆರೆ ಪಟ್ಟಣದ ವಿಜಯಕುಮಾರ್ (46), ಕಟ್ಟಡ ಹಾಗೂ ಲೇಬರ್ ಗುತ್ತಿಗೆದಾರರಾಗಿದ್ದರು. ಕೆಎಸ್‌ಆರ್‌ಟಿಸಿ ಮುಂಭಾಗ ನಿರ್ಮಾಣವಾಗುತ್ತಿರುವ ಹೊಸ ಹೋಟೆಲ್ ಕಟ್ಟಡದ ಗಾರೆ ಕೆಲಸಕ್ಕೆ ಬಿಕ್ರಂಕುಮಾರ್ ಹಾಗೂ ಅಪ್ರಾಪ್ತ ಬಾಲಕನನ್ನು ಕರೆ ತಂದಿದ್ದರು. ಕೆಲವು ದಿನಗಳಿಂದ ಆರೋಪಿಗಳಾದ ಬಿಕ್ರಂಕುಮಾರ್ ಹಾಗೂ ಅಪ್ರಾಪ್ತ ಬಾಲಕ, ವಿಜಯ್‌ಕುಮಾರ್ ಜೊತೆಯಲ್ಲೇ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ – ಬೋನ್ ಅಳವಡಿಸಿ ಪತ್ತೆ ಕಾರ್ಯಾಚರಣೆ

ವಿಜಯಕುಮಾರ್ ಯಾವಾಗಲೂ ಕೊರಳಿನಲ್ಲಿ ದಪ್ಪದಾದ ಚಿನ್ನದ ಸರ, ನಾಲ್ಕೈದು ಚಿನ್ನದ ಉಂಗುರಗಳನ್ನು ಹಾಕಿಕೊಳ್ಳುತ್ತಿದ್ದರು. ವಿಜಯಕುಮಾರ್ ಮೈಮೇಲಿದ್ದ ಚಿನ್ನದ ಒಡವೆಗಳ ಮೇಲೆ ಆರೋಪಿಗಳ ಕಣ್ಣು ಹಾಕಿದ್ದು, ಅದನ್ನು ಪಡೆಯಲು ಮಾಸ್ಟರ್ ಪ್ಲಾನ್ ಮಾಡಿದ್ದರು.

ಶುಕ್ರವಾರ ತಡರಾತ್ರಿ ಆರೋಪಿಗಳು, ವಿಜಯಕುಮಾರ್ ಅವರಿಗೆ ಕರೆ ಮಾಡಿ ನಮಗೆ ಆರೋಗ್ಯ ಸರಿಯಿಲ್ಲ, ನಮ್ಮನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ, ನಾವು ಹೊರಗಡೆ ಹೋದರೆ ಅನುಮಾನ ಪಡುತ್ತಾರೆ ಎಂದಿದ್ದರು. ತಕ್ಷಣವೇ ವಿಜಯಕುಮಾರ್ ಕಟ್ಟಡದ ಮಾಲೀಕ ಶ್ರೀನಿವಾಸ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಇದನ್ನೂ ಓದಿ: Miss World | ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ

ಈಗ ನೀನು ಹೋಗುವುದು ಬೇಡ ನಾಳೆ ನೋಡೋಣ ಬಿಡು ಎಂದಿದ್ದರು. ಆದರೆ ವಿಜಯಕುಮಾರ್ ಅವರಿಗೆ ಏನಾದರೂ ಹೆಚ್ಚು ಕಡಿಮೆ ಆದರೆ ನಾನು ಹೊಣೆಗಾರನಾಗಬೇಕಾಗುತ್ತದೆ, ಹೋಗಿ ನೋಡಿಕೊಂಡು ಬರುತ್ತೇನೆ ಎಂದು ತಮ್ಮ ಸ್ಕೂಟಿಯಲ್ಲಿ ಕಟ್ಟಡದ ಬಳಿಗೆ ತೆರಳಿದ್ದರು. ವಿಜಯಕುಮಾರ್ ಬರುವುದನ್ನೇ ಆರೋಪಿಗಳು ಕಾಯುತ್ತ ನಿಂತಿದ್ದರು. ನಿರ್ಮಾಣ ಹಂತದ ಕಟ್ಟಡದ ಮುಂದೆ ಸ್ಕೂಟಿ ನಿಲ್ಲಿಸಿ ಒಳಗೆ ಹೋಗುತ್ತಿದ್ದಂತೆ ಆರೋಪಿಗಳು, ಕಬ್ಬಿಣದ ರಾಡ್‌ನಿಂದ ಬಲವಾಗಿ ತಲೆಗೆ ಹೊಡೆದಿದ್ದು, ಪರಿಣಾಮ ಆ ಕೂಡಲೇ ವಿಜಯಕುಮಾರ್ ನೆಲಕ್ಕೆ ಬಿದ್ದಿದ್ದರು. ನಂತರ ಸಣ್ಣ ಗ್ಯಾಸ್ ಸಿಲಿಂಡರ್‌ನಿಂದ ತಲೆ, ಮುಖವನ್ನು ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದರು. ಇದನ್ನೂ ಓದಿ: ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

ವಿಜಯಕುಮಾರ್ ಮೃತಪಟ್ಟ ನಂತರ ಆರೋಪಿಗಳು ಅವರ ಕೊರಳಿನಲ್ಲಿದ್ದ ಚಿನ್ನದ ಚೈನ್, ಕೈಯಲ್ಲಿದ್ದ ಮೂರು ಉಂಗರುಗಳನ್ನು ಕಸಿದುಕೊಂಡಿದ್ದರು. 1 ಉಂಗುರ ಬೆರಳಿನಿಂದ ಬಾರದಿದ್ದಾಗ ಬೆರಳನ್ನು ತುಂಡರಿಸಿ ಬೆರಳಿನ ಸಮೇತ ಉಂಗುರವನ್ನು ಎತ್ತಿಕೊಂಡು ವಿಜಯಕುಮಾರ್ ಅವರ ಸ್ಕೂಟಿಯಲ್ಲಿಯೇ ಸ್ಥಳದಿಂದ ಹೊರಟಿದ್ದರು. ಬಳಿಕ ಪಟ್ಟಣದ ಹೋಟೆಲ್‌ವೊಂದರ ಮುಂದೆ ಸ್ಕೂಟಿ ನಿಲ್ಲಿಸಿ ಎಸ್ಕೇಪ್ ಆಗಿದ್ದರು. ಆರೋಪಿಗಳು ವಿಜಯಕುಮಾರ್ ಅವರನ್ನು ಕೊಲೆ ಮಾಡಿ ಸ್ಕೂಟಿಯಲ್ಲಿ ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

TAGGED:Arsikere City Police
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
21 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 day ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
1 day ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
2 days ago

You Might Also Like

Virat On Left DK On Right Jitesh Sharma dressing room Notes
Cricket

ಮಾರ್ಚ್‌ನಲ್ಲಿ ಸ್ಕ್ರಿಪ್ಟ್‌ ಬರೆದು ಜೂನ್‌ನಲ್ಲಿ ‘ಪಿಕ್ಚರ್‌’ ತೆಗೆದ ಜಿತೇಶ್‌ ಶರ್ಮಾ!

Public TV
By Public TV
30 seconds ago
Belagavi RCB Fan Death copy
Belgaum

ಆರ್‌ಸಿಬಿ ವಿಜಯೋತ್ಸವದ ವೇಳೆ ಹೃದಯಾಘಾತ – ಅಭಿಮಾನಿ ಸಾವು

Public TV
By Public TV
11 minutes ago
Madhya Pradesh Accident
Crime

ಕಾರಿನ ಮೇಲೆ ಮಗುಚಿ ಬಿದ್ದ ಸಿಮೆಂಟ್ ಟಿಪ್ಪರ್ – ಒಂದೇ ಕುಟುಂಬದ 9 ಮಂದಿ ದಾರುಣ ಅಂತ್ಯ

Public TV
By Public TV
50 minutes ago
DK Shivakumar RCB IPL 2025
Bengaluru City

ಆರ್‌ಸಿಬಿ ಹುಡುಗರು ಕರ್ನಾಟಕಕ್ಕೆ ಗೌರವ, ಹೆಮ್ಮೆ ತಂದಿದ್ದಾರೆ: ಡಿಕೆಶಿ

Public TV
By Public TV
1 hour ago
Elon Musk
Cricket

ಸರ್ಕಾರದಿಂದ ಹೊರ ಬಂದ ಬೆನ್ನಲ್ಲೇ ಟ್ರಂಪ್‌ ವಿರುದ್ಧ ಮಸ್ಕ್‌ ಕೆಂಡಾಮಂಡಲ

Public TV
By Public TV
1 hour ago
RCB Team
Cricket

ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ ವಿಜಯೋತ್ಸವ ಮೆರವಣಿಗೆ | ಎಷ್ಟು ಗಂಟೆಗೆ ಏನು?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?