ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ (Charmadi Ghat) ಭಾರೀ ಗಾಳಿ ಮಳೆಗೆ (Rain) ಬೃಹತ್ ಗಾತ್ರದ ಮರ ಧರೆಗುರುಳಿದೆ. ಪರಿಣಾಮ 3 ಕಿಮೀ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಗಾಳಿ ಮಳೆಗೆ ಚಾರ್ಮಾಡಿಯ ಘಾಟಿ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಭಾರೀ ಗಾತ್ರದ ಮರ ಬಿದ್ದಿದೆ. ಇದರಿಂದ ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸುಮಾರು 3 ಕಿಮೀ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದನ್ನೂ ಓದಿ: 2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್ ಪಡೆಯಿರಿ: ಆರ್ ಅಶೋಕ್ ಆಗ್ರಹ
ಒಂದು ಗಂಟೆ ಬಳಿಕ ಜೆಸಿಬಿ ಮೂಲಕ ಮರ ತೆರವು ಮಾಡಲಾಯಿತು. ಬಳಿಕ ವಾಹನ ಸಂಚಾರ ಆರಂಭವಾಯಿತು. ಘಾಟಿಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಬಣಕಲ್ ಪೊಲೀಸರು ಹಾಗೂ ಸ್ಥಳೀಯರ ವಾಹನ ಸವಾರರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಮನಗರ-ತುಮಕೂರು ಮಧ್ಯೆ ಹೇಮಾವತಿ ಕಲಹ – ಸರ್ವಪಕ್ಷ ಸಭೆ ಕರೆಯಲು ಬಿಜೆಪಿ ಆಗ್ರಹ