– ವಿದೇಶಿ ಭೇಟಿ ಬಗ್ಗೆ ಸಮಗ್ರ ಮಾಹಿತಿ ಪಡೆಯಲಿರುವ ಪ್ರಧಾನಿ
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ (Operation Sindoor) ಬಳಿಕ ಪಾಕಿಸ್ತಾನದ ಮುಖವಾಡವನ್ನ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಬಯಲು ಮಾಡಲು ಹೊರಟಿರುವ ಭಾರತದ ಸರ್ವಪಕ್ಷಗಳ ನಿಯೋಗದ ಸದಸ್ಯರನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶೀಘ್ರದಲ್ಲೇ ಭೇಟಿ ಮಾಡಲಿದ್ದಾರೆ.
ಜೂನ್ 9 ಅಥವಾ 10ರಂದು ಮೋದಿ ನೇತೃತ್ವದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಈ ಸಭೆಯಲ್ಲಿ ಸರ್ವಪಕ್ಷಗಳ ನಿಯೋಗಗಳು ತಮ್ಮ ವಿದೇಶಿ ಭೇಟಿಗಳ ಬಗ್ಗೆ ಸಮಗ್ರ ಮಾಹಿತಿಯನ್ನ ಪ್ರಧಾನಿಗಳಿಗೆ ವಿವರಿಸಲಿದ್ದಾರೆ. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ವೇಳೆ ಭಾರತ ಧ್ವಂಸಗೊಳಿಸಿದ್ದ ಮುರಿಡ್ಕೆ ಮಸೀದಿಯಲ್ಲಿ ಮತ್ತೆ ತಲೆಎತ್ತಿದ ಲಷ್ಕರ್ ಗುಂಪು; ವಿಡಿಯೋ ವೈರಲ್
ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟಕ್ಕೆ ಜಾಗತಿಕ ಬೆಂಬಲ ಪಡೆಯುವ ತನ್ನ ಉಪಕ್ರಮದ ಭಾಗವಾಗಿ, ಬಿಜೆಪಿ ನೇತೃತ್ವದ ಸರ್ಕಾರವು 33 ರಾಜಧಾನಿಗಳಿಗೆ ಭೇಟಿ ನೀಡಲು 7 ಸರ್ವಪಕ್ಷಗಳ ನಿಯೋಗವನ್ನು ರಚಿಸಿತ್ತು. ಆಡಳಿತ ಪಕ್ಷವಾದ NDA (NDA)ಯ 31 ರಾಜಕೀಯ ನಾಯಕರು, ಇತರ ರಾಜಕೀಯ ಪಕ್ಷಗಳ 20 ಪ್ರತಿನಿಧಿಗಳನ್ನು ಒಳಗೊಂಡ 7 ನಿಯೋಗಗಳಲ್ಲಿ ಒಟ್ಟು 59 ಸದಸ್ಯರು ಇದ್ದರು. ಇದನ್ನೂ ಓದಿ: ಪಂಜಾಬ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 113 ಡ್ರಗ್ ಪೆಡ್ಲರ್ಗಳು ಅರೆಸ್ಟ್
ಸರ್ವಪಕ್ಷಗಳ ನಿಯೋಗದ ರುವಾರಿಗಳು
* ಶಶಿ ತರೂರ್ (INC)
* ರವಿಶಂಕರ್ ಪ್ರಸಾದ್ (BJP)
* ಸಂಜಯ್ ಕುಮಾರ್ ಝಾ (JDU)
* ಬೈಜಯಂತ್ ಪಾಂಡಾ (BJP)
* ಕನಿಮೋಳಿ ಕರುಣಾನಿಧಿ (DMK)
* ಸುಪ್ರಿಯಾ ಸುಳೆ (NCP)
* ಶ್ರೀಕಾಂತ್ ಏಕನಾಥ್ ಶಿಂಧೆ (ಶಿವಸೇನೆ)
ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದಿದ್ದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ದಾಳಿ ಬಳಿಕ ಪಾಕ್ನ ಭಯೋತ್ಪಾದನೆಯ ಮುಖವಾಡವನ್ನ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಳಚಲು ತೀರ್ಮಾನಿಸಿ ಸರ್ವಪಕ್ಷಗಳ ನಿಯೋಗವನ್ನ ರಚನೆ ಮಾಡಿತ್ತು. ವಿಶ್ವದಾದ್ಯಂತ ಅನೇಕ ದೇಶಗಳಿಗೆ ಭೇಟಿ ನೀಡಿರುವ ಈ ನಿಯೋಗಗಳು ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದು, ಭಾರತದ ಹೋರಾಟಕ್ಕೆ ಬೆಂಬಲ ದೊರೆತಿದೆ. ಇದನ್ನೂ ಓದಿ: ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳಕ್ಕೆ `ಮಹಾ’ ಸಿಎಂ ಆಕ್ಷೇಪ – ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸಲು ಕೇಂದ್ರಕ್ಕೆ ಡಿಕೆಶಿ ಮನವಿ
ಟೀಂ ಇಂಡಿಯಾಕ್ಕೆ ಜಾಗತೀಕ ಬೆಂಬಲ:
ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಕೊಂಬಿಯಾ, ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ಬೆಂಬಲ ಸೂಚಿಸಿವೆ. ಈ ಬಗ್ಗೆ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರತಿಜ್ಞೆ ಸ್ವೀಕರಿಸುವುದಾಗಿ ಹೇಳಿದ್ದು, ಭಾರತಕ್ಕೆ ರಾಜತಾಂತ್ರಿಕ ಯಶಸ್ಸು ಕೂಡ ಸಿಕ್ಕಂತಾಗಿದೆ.