ಇತ್ತೀಚೆಗಷ್ಟೇ ನಿಧನರಾದ ʻಕಾಮಿಡಿ ಕಿಲಾಡಿʼ ಸೀಸನ್ 3 ವಿನ್ನರ್, ಕನ್ನಡದ ಕಿರುತೆರೆಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ (Rakesh Poojary) ಅವರ ನಿವಾಸಕ್ಕೆ ಡಿವೈನ್ ನಟ ರಿಷಭ್ ಶೆಟ್ಟಿ ದಂಪತಿ ಭೇಟಿ ನೀಡಿದ್ದಾರೆ.
ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಅವರು ಇಂದು ನೀಡಿ ರಾಕೇಶ್ ಅವರ ತಾಯಿ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ರಾಕೇಶ್ ತಂಗಿ ಮದುವೆಗೂ ಆರ್ಥಿಕ ಸಹಾಯ ಮಾಡಿದ್ದಾರೆ. ಮುಂದಿನ ದಿನದಲ್ಲಿ ನಿರ್ಮಾಣವಾಗುವ ರಾಕೇಶ್ನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿ ಸದಾಕಾಲ ಕುಟುಂಬದೊಂದಿಗೆ ನಾನಿದ್ದೇನೆ ಎನ್ನುವ ಭರವಸೆಯನ್ನೂ ರಿಷಭ್ ಶೆಟ್ಟಿ ನೀಡಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್
ರಾಕೇಶ್ಗೆ ಏನಾಗಿತ್ತು?
ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ 34 ವರ್ಷದ ರಾಕೇಶ್ ಪೂಜಾರಿ ಕಳೆದ ಮೇ 12ರ ಬೆಳಗ್ಗಿನ ಜಾವ 3:30ರ ವೇಳೆಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಸಾವಿಗೂ ಮುನ್ನ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ಕಾಂತಾರ ಪ್ರಿಕ್ವೆಲ್ ಶೂಟಿಂಗ್ ಮುಗಿದ ಬಳಿಕ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿ ನಿಧನ ಹೊಂದಿದ್ದರು. ಇದನ್ನೂ ಓದಿ: ʻಥಗ್ ಲೈಫ್ʼ ಸಿನಿಮಾಗೆ ಬ್ಯಾನ್ ಬಿಸಿ – ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್
‘ಕಾಂತಾರ ಚಾಪ್ಟರ್ 1’ ಶೂಟಿಂಗ್ ಮುಗಿಸಿಕೊಟ್ಟಿದ್ದ ರಾಕೇಶ್:
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಕಿರುತೆರೆಯಲ್ಲಿ ಅಲ್ಲದೇ ಹಿರಿತೆರೆಯಲ್ಲಿಯೂ ಆಕ್ಟೀವ್ ಆಗಿದ್ದರು. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರಲ್ಲಿ (Kantara Chapter 1) ರಾಕೇಶ್ ನಟಿಸಿದ್ದು, ತಮ್ಮ ಪಾತ್ರದ ಶೂಟಿಂಗ್ ಕೂಡ ಮುಗಿಸಿ ಕೊಟ್ಟಿದ್ದರು. ಇದನ್ನೂ ಓದಿ: ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ