– ಡಿ-ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 1 ವರ್ಷ
ಚಿತ್ರದುರ್ಗ: ಪುತ್ರಶೋಕಂ ನಿರಂತರಂ ಎಂಬಂತೆ ಮಗನ ಸಾವಿನ ನೋವು ನಿರಂತರವಾಗಿ ಕಾಡುತ್ತಿದೆ ಎಂದು ಮೃತ ರೇಣುಕಾಸ್ವಾಮಿ (Renukaswamy Case) ತಂದೆ ಕಾಶಿನಾಥಯ್ಯ ನೋವು ತೋಡಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ 29ರಂದೇ ಕಾರ್ಯ ಮಾಡಿದ್ದೇವೆ. ಇಂದಿಗೆ ರೇಣುಕಾಸ್ವಾಮಿ ನಮ್ಮನ್ನಗಲಿ ಒಂದು ವರ್ಷವಾಗಿದೆ. ಹೀಗಾಗಿ ನಾನು, ನನ್ನ ಹೆಂಡತಿ, ಸೊಸೆ ಹಾಗೂ ಮೊಮ್ಮಗ ಎಲ್ಲರೂ ರೇಣುಕಾಸ್ವಾಮಿ ಫೋಟೊಗೆ ಸಾಂಕೇತಿಕವಾಗಿ ಪೂಜೆ ಸಲ್ಲಿಸಿದ್ದೇವೆ. ಪುತ್ರಶೋಕಂ ನಿರಂತರಂ ಎಂಬಂತೆ ಮಗನ ನೋವು ಕಾಡುತ್ತಲೇ ಇದೆ ಎಂದರು.ಇದನ್ನೂ ಓದಿ: ಪೊಲೀಸರದ್ದೇ ತಪ್ಪು, ಸರ್ಕಾರಕ್ಕೆ ಯಾಕೆ ಮುಜುಗರ ಆಗ್ಬೇಕು: ಸಿದ್ದರಾಮಯ್ಯ ಪ್ರಶ್ನೆ
ಇದೇ ವೇಳೆ ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಿರುವ ಕುರಿತು ಮಾತನಾಡಿದ ಅವರು, ಅದೆಲ್ಲ ಕಾನೂನು ವಿಚಾರ. ಕಾನೂನು ಒಂದು ಕ್ರಮಕೈಗೊಳ್ಳುತ್ತದೆ. ಮಗನ ಕೊಲೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಬೇಕು. ಸರ್ಕಾರ, ಕೋರ್ಟ್ ಮೇಲೆ ನಂಬಿಕೆ ಇದ್ದು, ಕ್ರಮ ಆಗುತ್ತದೆ ಎಂದುಕೊಂಡಿದ್ದೇವೆ. ಈವರೆಗೂ ನಟ ದರ್ಶನ್ ನಮ್ಮನ್ನು ಸಂಪರ್ಕಿಸಿಲ್ಲ. ನಾವು ಕೂಡ ಯಾವುದೇ ರೀತಿಯ ರಾಜಿ, ಪಂಚಾಯಿತಿಗೆ ಯತ್ನಿಸಿಲ್ಲ. ಒಂದು ವೇಳೆ ಆ ಸಂದರ್ಭ ಬಂದರೆ ನಮ್ಮ ಸಮಾಜದ ಮುಖಂಡರು ನಿರ್ಧಾರಿಸುತ್ತಾರೆ. ಆದರೆ ನನ್ನ ಮಗನ ಕೊಲೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಬೇಕು. ಸೊಸೆ, ಮೊಮ್ಮಗನ ಜೀವನಕ್ಕೆ ಸರ್ಕಾರ ಅನುಕೂಲ ಮಾಡಿಕೊಡಲಿ ಎಂದು ಮನವಿ ಮಾಡಿಕೊಂಡಿದ್ದಾರೆ
ಇನ್ನೂ ಡಿ-ಗ್ಯಾಂಗ್ನ (D-Gang) ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದು, ನಟ ದರ್ಶನ್ (Actor Darshan) ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ಬ್ಯೂಸಿಯಾಗಿದ್ದಾರೆ.ಇದನ್ನೂ ಓದಿ: ಪರಿಷತ್ಗೆ ಶಿಫಾರಸ್ಸಾಗಿದ್ದ 4 ಹೆಸರುಗಳಿಗೆ ಕೊನೆ ಕ್ಷಣದಲ್ಲಿ ಹೈಕಮಾಂಡ್ ಬ್ರೇಕ್!