ಧಾರವಾಡ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ, ಬೆಣ್ಣಿಹಳ್ಳ ತುಂಬಿ ಹರಿಯುತ್ತಿದೆ. ಇದೀಗ ಕುಟುಂಬವೊಂದು ಬೆಣ್ಣಿ ಹಳ್ಳದಲ್ಲಿ (Bennihalli) ಸಿಲುಕಿಕೊಂಡಿದೆ.
ಧಾರವಾಡ (Dharwad) ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದ ಬಳಿಯ ತೋಟದ ಮನೆಯಲ್ಲಿ ಕುಟುಂಬ ಸಿಲುಕಿಕೊಂಡಿದೆ. ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳಿರುವ ತೋಟದ ಮನೆಯು ಸಂಪೂರ್ಣ ಜಲಾವೃತವಾಗಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ
ಯಮನೂರ (Yamanuru) ಗ್ರಾಮದ ಪಕ್ಕದಲ್ಲೇ ಇರುವ ತೋಟದ ಮನೆಯಲ್ಲಿ ಕುಟುಂಬದ ಜೊತೆ ನಾಯಿ ಕೂಡ ಇದೆ. ಸದ್ಯ ಮನೆಯ ಕೆಳಗಡೆ ನೀರು ಬಂದಿದ್ದರಿಂದ, ಕುಟುಂಬಸ್ಥರು ಮೇಲಿನ ಮನೆಯಲ್ಲಿದ್ದಾರೆ. ಇದೀಗ ಮನೆ ಸಂಪೂರ್ಣ ಜಲಾವೃತವಾಗಿರುವುದರಿಂದ ಮನೆಯಿಂದ ಹೊರಬರಲಾರದೇ ಕುಟುಂಬ ಪರದಾಡುತ್ತಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ
ರಾತ್ರಿಯಿಡೀ ಸುರಿದ ಭಾರಿ ಮಳೆಯ ಪರಿಣಾಮ ಬೆಣ್ಣಿಹಳ್ಳ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇದೀಗ ಮಳೆಯ ಅವಾಂತರಕ್ಕೆ ನವಲಗುಂದ ತಾಲೂಕಿನ ಜನ ಜೀವನ ಅಸ್ತವ್ಯಸ್ತಗೊಂಡಿದೆ.