Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ, ಡಿಸಿಎಂ, ರಾಜೀನಾಮೆಗೆ ಒತ್ತಾಯಿಸಿ ಜೂ. 17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿಎಂ, ಡಿಸಿಎಂ, ರಾಜೀನಾಮೆಗೆ ಒತ್ತಾಯಿಸಿ ಜೂ. 17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ

Latest

ಸಿಎಂ, ಡಿಸಿಎಂ, ರಾಜೀನಾಮೆಗೆ ಒತ್ತಾಯಿಸಿ ಜೂ. 17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ

Public TV
Last updated: June 15, 2025 7:57 pm
Public TV
Share
3 Min Read
K Gopalaiah
SHARE

– 11 ಜನರ ಸಾವಿಗೆ ನ್ಯಾಯ ಒದಗಿಸಿ – ಧೀರಜ್ ಮುನಿರಾಜು

ಬೆಂಗಳೂರು: ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಜೂನ್ 17 ರಂದು ಬೆಳಿಗ್ಗೆ 10:30 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ (K Gopalaiah) ಅವರು ತಿಳಿಸಿದ್ದಾರೆ.

ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಪತ್ರಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 10 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆದ ದುರ್ಘಟನೆಯು ಇತಿಹಾಸದಲ್ಲಿ ಈ ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆ ಎಂದು ಅವರು ವಿಶ್ಲೇಷಿಸಿದರು. ಕಾಲ್ತುಳಿತದಿಂದ 11 ಜನರು ಸಾವಿಗೀಡಾಗಿದ್ದು, ಇದು ರಾಜ್ಯಕ್ಕೆ ದೊಡ್ಡ ಕಳಂಕ ಎಂದು ಗೋಪಾಲಯ್ಯ ತಿಳಿಸಿದರು. ಇದನ್ನೂ ಓದಿ: ನಿಖಿಲ್ ಪಟ್ಟಾಭಿಷೇಕಕ್ಕೂ ಮುನ್ನ ರಾಜ್ಯ ಪ್ರವಾಸದ ಪರೀಕ್ಷೆ – ನಾಳೆಯಿಂದ ಮೊದಲ ಹಂತದ ಟೂರ್

 

ಆರ್‌ಸಿಬಿ (RCB) ಗೆದ್ದ ಸಂದರ್ಭದಲ್ಲಿ ಇಡೀ ರಾಜ್ಯಾದ್ಯಂತ ಪೊಲೀಸ್ ಭದ್ರತೆಯಲ್ಲಿ ಅಭಿಮಾನಿಗಳು ಸಂಭ್ರಮಿಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರವು ಗೌರವ ಕೊಡುವ ಸಂಬಂಧ ಎರಡು ಕಾರ್ಯಕ್ರಮಗಳನ್ನು ಏರ್ಪಡಿಸಿತ್ತು. ಈ ಕಾರ್ಯಕ್ರಮಗಳು ಬೇಡವೆಂದು ಪೊಲೀಸ್ ಇಲಾಖೆ ಪತ್ರದ ಮೂಲಕ ತಿಳಿಸಿದರೂ ಸಿಎಂ ರವರು ಕಾರ್ಯಕ್ರಮ ಮಾಡಬೇಕು. ಆಟಗಾರರಿಗೆ ಗೌರವ ಕೊಡಬೇಕು ಎಂದು ಸೂಚಿಸಿದರು. ಅದು ಅವರಿಗೆ ಗೌರವ ಕೊಡುವ ಕಾರ್ಯಕ್ರಮವಾಗಿರಲಿಲ್ಲ. ಆಟಗಾರರನ್ನು ಅವಮಾನಿಸುವ ಕಾರ್ಯಕ್ರಮವಾಗಿತ್ತು ಎಂದು ಗೋಪಾಲಯ್ಯ ಟೀಕಿಸಿದರು.

167 ಕೋಟಿಯ ಲೆಕ್ಕ ಕೊಡಿ
ಕಾಲ್ತುಳಿತವನ್ನು ಮರೆಮಾಚುವ ಸಲುವಾಗಿ ಮತ್ತೊಮ್ಮೆ ಜಾತಿಗಣತಿಯನ್ನು ಮಾಡಲು ಸರ್ಕಾರ ನಿರ್ಧರಿಸಿದೆ. ಅದನ್ನು ನಾವು ಸ್ವಾಗತ ಮಾಡುತ್ತೇವೆ. ಆದರೆ ಹಿಂದಿನ ಜನಗಣತಿಗೆ ರಾಜ್ಯದ ಜನರ ತೆರಿಗೆ ಹಣದಿಂದ 167 ಕೋಟಿ ಹಣ ವೆಚ್ಚ ಭರಿಸಿದ್ದು, ಅದರ ಲೆಕ್ಕವನ್ನು ಸಾರ್ವಜನಿಕರಿಗೆ ನೀಡಬೇಕು ಎಂದು ಕೆ. ಗೋಪಾಲಯ್ಯ ಅವರು ಆಗ್ರಹಿಸಿದರು.

 

ಒಂದು ಲಕ್ಷಕ್ಕಿಂತ ಹೆಚ್ಚಿನ ಅಭಿಮಾನಿಗಳು ಸೇರಿದ್ದರೂ ವಿಧಾನಸೌಧದ ಬಳಿ ಆಯೋಜಿಸಿದ್ದ ಕಾರ್ಯಕ್ರಮವನ್ನು ನೋಡಲು ಆಗಲಿಲ್ಲ. ಇದೊಂದು ಪ್ರಚಾರಕ್ಕೆಂದೇ ಮಾಡಿರುವ ಕಾರ್ಯಕ್ರಮವಾಗಿದೆ ಎಂದು ಅವರು ಆರೋಪಿಸಿದರು.

ಮಧ್ಯಾಹ್ನ ಸುಮಾರು 3 ಗಂಟೆಗೆ ಕಾಲ್ತುಳಿತದಿಂದ ಒಂದು ಸಾವಾಗಿದ್ದು, ಮುಖ್ಯಮಂತ್ರಿಗಳಿಗೆ ಆ ವಿಷಯವು ಸಂಜೆ 5 ಗಂಟೆಗೆ ತಿಳಿಯುತ್ತದೆ ಎಂದರೆ ಹೇಗೆ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.
ವಿಧಾನ ಸೌಧದ ಮುಂದೆ ಕಾರ್ಯಕ್ರಮ ಆಯೋಜಿಸುವ ಮೊದಲು ಎಲ್ಲಾ ಸಿದ್ಧತೆ ಮಾಡಿಕೊಂಡು ಕಾರ್ಯಕ್ರಮವನ್ನು ಆಯೋಜಿಸುವ ಬದಲು ತರಾತುರಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಮೂಲಕ 11 ಜನರ ಬಲಿಯನ್ನು ಕಾಂಗ್ರೆಸ್ ಸರ್ಕಾರವು ಪಡೆದಿದೆ ಎಂದು ಅವರು ಆರೋಪಿಸಿದರು. ಇದನ್ನೂ ಓದಿ: ಅರಣ್ಯ ಇಲಾಖೆಯ ಗುತ್ತಿಗೆ ನೌಕರ ಸಂಶಯಾಸ್ಪದ ಸಾವು – DRF, RFO ಸೇರಿ ಐವರ ವಿರುದ್ಧ ಎಫ್‌ಐಆರ್‌

ಸರ್ಕಾರದ ವೈಫಲ್ಯಗಳನ್ನು ಮರೆಮಾಚುವ ಸಲುವಾಗಿ ಪೊಲೀಸ್ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಭದ್ರತೆಯ ವೈಫಲ್ಯವೆಂದು ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ಗೋಪಾಲಯ್ಯ ಆಕ್ಷೇಪಿಸಿದರು.

11 ಜನರ ಸಾವಿಗೆ ನ್ಯಾಯ ಒದಗಿಸಿ – ಧೀರಜ್ ಮುನಿರಾಜು
ಸರ್ಕಾರದ ಮಂತ್ರಿಗಳು, ಶಾಸಕರು ಅಭಿಮಾನಿಗಳಾಗಿ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಲು ಹೋಗಿದ್ದೇವೆ. ಒಂದು ಕ್ರಿಕೆಟ್ ಪಂದ್ಯದ ಸಂಭ್ರಮಾಚರಣೆಗೆ ಹೋಗುವುದು ತಪ್ಪಲ್ಲ. ಸರ್ಕಾರ ಕಾರ್ಯಕ್ರಮ ಆಯೋಜಿಸುವ ಮೊದಲು ಪೊಲೀಸ್ ಭದ್ರತೆ, ಇನ್ನಿತರೆ ಸಿದ್ಧತೆಗಳನ್ನು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಏಕೆ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಪ್ರಶ್ನಿಸಿದರು.

ಡಿ.ಪಿ.ಎ.ಆರ್. ಕಾರ್ಯದರ್ಶಿಯವರು ಮಾಧ್ಯಮದ ಮೂಲಕ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ನಾವು ಕಾರ್ಯಕ್ರಮವನ್ನು ರೂಪಿಸಿದ್ದೇವೆ; ದಯವಿಟ್ಟು ಸಾರ್ವಜನಿಕರು ಸ್ಟೇಡಿಯಂಗೆ ಬರಬೇಕು ಎಂದು ಹೇಳಿಕೆಯನ್ನು ನೀಡಿದ್ದಾರೆ. ಅದೇ ರೀತಿ ಡಿಸಿಎಂ ಅವರು ಕೂಡ ಹೇಳಿದ್ದಾರೆ. ಆದರೆ ಆರ್.ಸಿ.ಬಿ ತಂಡವು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದಕ್ಕೆ ಅವರನ್ನು ಬಂಧಿಸಿದ್ದಾರೆ. ಮೇಲೆ ಹೇಳಿಕೆ ನೀಡಿರುವವರನ್ನು ಏಕೆ ಬಂಧಿಸಿಲ್ಲ ಎಂದು ಅವರು ಕೇಳಿದರು.

ಈ ದೇಶದಲ್ಲಿ ಒಂದು ರಾಜ್ಯದಲ್ಲಿ ಒಂದೊಂದು ನ್ಯಾಯವಿದೆ ಎಂದು ನನಗೆ ತಿಳಿದಿಲ್ಲ. ಆದರೆ ಇಡೀ ದೇಶಕ್ಕೆ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೋರಾಟ ಮಾಡಿದೆ. ಇಂದು ಇಡೀ ದೇಶಕ್ಕೆ, ನಾಗರೀಕರಿಗೆ, ಶಾಸಕರಿಗೆ, ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಒಂದೇ ಕಾನೂನು ಇರಬೇಕು. ಯಾರ ವೈಫಲ್ಯದಿಂದ ಈ ಸಾವಾಗಿದೆಯೋ ಅಷ್ಟು ಜನರ ಮೇಲೆ ಕ್ರಮತೆಗೆದುಕೊಳ್ಳಲು ಮತ್ತು 11 ಜನರ ಸಾವಿಗೆ ನ್ಯಾಯಕೊಡಿಸುವ ಸಲುವಾಗಿ ಈ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

TAGGED:bjpDK ShivakumarK. Gopalaiahsiddaramaiahಕೆ. ಗೋಪಾಲಯ್ಯಡಿಕೆ ಶಿವಕುಮಾರ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
19 minutes ago
KOMUL
Districts

ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ

Public TV
By Public TV
49 minutes ago
Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
By Public TV
1 hour ago
SSLC Exams
Bagalkot

ನಾಳೆ SSLC ಫಲಿತಾಂಶ ಪ್ರಕಟ

Public TV
By Public TV
2 hours ago
Maharashtra Lady traffic jam
Latest

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

Public TV
By Public TV
2 hours ago
Mallikarjun kharge
Latest

24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?