ನವದೆಹಲಿ: ಮಂಗಳವಾರ ಮುಂಜಾನೆ ಸ್ಯಾನ್ ಫ್ರಾನ್ಸಿಸ್ಕೋದಿಂದ ಕೋಲ್ಕತ್ತಾ ಮೂಲಕ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಗದಿತ ನಿಲುಗಡೆಯ ಸಮಯದಲ್ಲಿ ಪ್ರಯಾಣಿಕರು ಇಳಿಯಬೇಕಾಯಿತು. ಎಡ ಎಂಜಿನ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಕೋಲ್ಕತ್ತಾದಿಂದ ಮುಂಬೈಗೆ ಟೇಕಾಫ್ ಆಗುವುದು ವಿಳಂಬವಾಯಿತು. ಇದನ್ನೂ ಓದಿ: Iran-Israel Conflict | ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್ ಸಪ್ಲೈ ಬಂದ್
ಏರ್ ಇಂಡಿಯಾ ವಿಮಾನ AI180 ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಿಂದ ವೇಳಾಪಟ್ಟಿಯ ಪ್ರಕಾರ ಹೊರಟಿತು. ಆದಾಗ್ಯೂ, ಅದು ಬೆಳಗ್ಗೆ 12:45 ಕ್ಕೆ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಎಡ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು.
ನಾಲ್ಕು ಗಂಟೆಗಳಿಗೂ ಹೆಚ್ಚು ಸಮಯದ ನಂತರ, ಬೆಳಗ್ಗೆ 5:20 ಕ್ಕೆ, ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಇಳಿಯುವಂತೆ ಪ್ರಕಟಣೆ ಹೊರಡಿಸಲಾಯಿತು. ವಿಮಾನ ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕ್ಯಾಪ್ಟನ್ ಪ್ರಯಾಣಿಕರಿಗೆ ತಿಳಿಸಿದರು. ಇದನ್ನೂ ಓದಿ: ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್
ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿತ್ತು. ಪರಿಣಾಮವಾಗಿ 270 ಮಂದಿ ದುರ್ಮರಣಕ್ಕೀಡಾದರು. ಈ ಅವಘಡವಾದ ಐದು ದಿನಗಳ ನಂತರ ಮತ್ತೊಂದು ಸಮಸ್ಯೆ ಕಾಣಿಸಿಕೊಂಡಿದೆ.