ಬಳ್ಳಾರಿ: ಜಿಲ್ಲೆಯ ಕಮಲಾಪುರದ (Kamalapura) ಅಟಲ್ಜೀ ಮೃಗಾಲಯದಲ್ಲಿದ್ದ ಹೆಣ್ಣು ಹುಲಿ ದೇವಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ (Atal Bihari Vajpaye Zoological Park) ಮೃಗಾಲಯದಲ್ಲಿದ್ದ ದೇವಿ ಎಂಬ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ.ಇದನ್ನೂ ಓದಿ: ಬಿಹಾರದಲ್ಲಿ ಇಂದು 5,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿಯಿಂದ ಚಾಲನೆ
ಅಂದಾಜು 18 ರಿಂದ 19 ವರ್ಷದ ದೇವಿ ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು.
ಕಳೆದ ಎರಡು ವರ್ಷಗಳಿಂದ ಮೃಗಾಲಯದಲ್ಲಿರುವ ರಕ್ಷಣಾ ಕೇಂದ್ರದಲ್ಲಿ ವೈದ್ಯೋಪಚಾರ ನೀಡಲಾಗಿತ್ತು. ಆರೋಗ್ಯದಲ್ಲಿಯೂ ಸುಧಾರಣೆ ಕಂಡು ಬಂದಿತ್ತು. ಆದರೆ ಇದೀಗ ವಯೋಸಹಜವಾಗಿ ಮೃತಪಟ್ಟಿದೆ.ಇದನ್ನೂ ಓದಿ: ಮರದ ಕೊಂಬೆ ಬಿದ್ದು ಯುವಕ ಸಾವು – ಮೂವರು ಬಿಬಿಎಂಪಿ ಅರಣ್ಯಾಧಿಕಾರಿಗಳ ವಿರುದ್ಧ FIR