Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಬುಡಕ್ಕೆ ಮತ್ತೊಂದು ಭ್ರಷ್ಟಾಚಾರ ಬಾಂಬ್‌; ಜಮೀರ್ ಪಿಎ – ಬಿ.ಆರ್ ಪಾಟೀಲ್‌ರದ್ದು ಎನ್ನಲಾದ ಆಡಿಯೋ ವೈರಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸರ್ಕಾರದ ಬುಡಕ್ಕೆ ಮತ್ತೊಂದು ಭ್ರಷ್ಟಾಚಾರ ಬಾಂಬ್‌; ಜಮೀರ್ ಪಿಎ – ಬಿ.ಆರ್ ಪಾಟೀಲ್‌ರದ್ದು ಎನ್ನಲಾದ ಆಡಿಯೋ ವೈರಲ್‌

Districts

ಸರ್ಕಾರದ ಬುಡಕ್ಕೆ ಮತ್ತೊಂದು ಭ್ರಷ್ಟಾಚಾರ ಬಾಂಬ್‌; ಜಮೀರ್ ಪಿಎ – ಬಿ.ಆರ್ ಪಾಟೀಲ್‌ರದ್ದು ಎನ್ನಲಾದ ಆಡಿಯೋ ವೈರಲ್‌

Public TV
Last updated: June 20, 2025 11:45 am
Public TV
Share
2 Min Read
BR Patil
SHARE

– ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ರಾ ಶಾಸಕರು?
– ವಸತಿ ನಿಗಮದಲ್ಲಿ ಭಾರೀ ಅಕ್ರಮ ಆರೋಪ

ಕಲಬುರಗಿ: ರಾಜ್ಯ ಸರ್ಕಾರದ ಬುಡಕ್ಕೆ ಈಗ ಮತ್ತೊಂದು ಭ್ರಷ್ಟಾಚಾರ ಬಾಂಬ್‌ ಬಿದ್ದಿದೆ. ರಾಜೀವ್ ಗಾಂಧಿ ವಸತಿ ನಿಗಮದಲ್ಲಿ (Rajeev Gandhi Housing Corporation) ಹಣ ನೀಡಿದವರಿಗಷ್ಟೇ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆಗಿರುವ ಆಳಂದ ಶಾಸಕ ಬಿ.ಆರ್ ಪಾಟೀಲ್‌ (BR Patil) ತಮ್ಮದೇ ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾದ ಆಡಿಯೊವೊಂದು ವೈರಲ್‌ ಆಗಿದೆ.

ಏನಿದು ವೈರಲ್‌ ಆಡಿಯೋ ಬಾಂಬ್‌?
ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed Khan) ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್ ಅವರ ಮೊಬೈಲ್‌ಗೆ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವ ಪಾಟೀಲ್‌ ಅವರು, ಹಣ ಪಡೆದು ಯಾವ ಗ್ರಾಮಕ್ಕೆ ಎಷ್ಟು ಮನೆಗಳನ್ನು ಮಂಜೂರು ಮಾಡಲಾಗಿದೆ? ಎಂಬ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಈ ಮಾಹಿತಿಯನ್ನ ನಾನು ಬಹಿರಂಗಪಡಿಸಿದ್ರೆ ಸರ್ಕಾರವೇ ಅಲುಗಾಡುತ್ತೆ ಎಂದೂ ಶಾಸಕರು ಎಚ್ಚರಿಕೆ ನೀಡಿದ್ದಾರೆ.

ಬಿ.ಆರ್ ಪಾಟೀಲ್‌ ಅವರು ಸರ್ಫರಾಜ್ ಖಾನ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಮೊಬೈಲ್ ಕರೆಯ ಆಡಿಯೋ ʻಪಬ್ಲಿಕ್ ಟಿವಿʼಗೆ ಲಭ್ಯವಾಗಿದೆ. ಇದನ್ನೂ ಓದಿ: ಮಂಗಳೂರು | ಕಾರು ಅಪಘಾತದಲ್ಲಿ `ಕೈ’ ಮುಖಂಡ ಸೇರಿ ಇಬ್ಬರು ದುರ್ಮರಣ

ಆಡಿಯೋ ಸಂಭಾಷಣೆಯಲ್ಲೇನಿದೆ?
ಸಚಿವ ಜಮೀರ್‌ ಅವರ ಆಪ್ತ ಕಾರ್ಯದರ್ಶಿಗೆ ಕರೆ ಮಾಡುವ ಬಿ.ಆರ್ ಪಾಟೀಲ್,‌ ‘ಹಣ ನೀಡಿದವರಿಗಷ್ಟೇ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ನಮ್ಮ ಸರ್ಕಾರವನ್ನೇ ದೂರಲು ಬೇಸರವಾಗುತ್ತಿದೆ’ ಎಂದು ಆರಂಭದಲ್ಲೇ ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಅದಕ್ಕೆ ಸರ್ಫರಾಜ್ ಖಾನ್ ಅವರು, ‘ಯಾವ ಕ್ಷೇತ್ರದಲ್ಲಿ ಹೀಗೆ ಆಗಿದೆ ಮಾಹಿತಿ ಕೊಡಿ. ಕೂಡಲೇ ಅವರನ್ನು ಜೈಲಿಗೆ ಕಳುಹಿಸುತ್ತೇವೆ’ ಎನ್ನುತ್ತಾರೆ. ಇದನ್ನೂ ಓದಿ: ಟ್ರ್ಯಾಕ್ಟರ್ ಕದ್ದು ಜೈಲು ಸೇರಿದ್ರು, ರಿಲೀಸ್ ಆಗಿ ಕಾರು ಕಳ್ಳತನಕ್ಕಿಳಿದ್ರು – ಮತ್ತೆ ಪೊಲೀಸರ ಅತಿಥಿಗಳಾದ ಕಳ್ರು!

ಇದಕ್ಕೆ ವ್ಯಂಗ್ಯವಾಗಿ ನಗುವ ಬಿ.ಆರ್ ಪಾಟೀಲ್‌, ‘ಆಳಂದ ಮತಕ್ಷೇತ್ರದ ಮುನ್ನಳ್ಳಿಯಲ್ಲಿ 200 ಮನೆ, ದರ್ಗಾ ಶಿರೂರದಲ್ಲಿ 100, ಧಂಗಾಪುರದಲ್ಲಿ 200, ಕವಲಗಾದಲ್ಲಿ 200, ಮಾಡಿಯಾಳದಲ್ಲಿ 200 ಮನೆಗಳು ಸೇರಿದಂತೆ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ. ಪಕ್ಕದ ಅಫಜಲಪುರ ಕ್ಷೇತ್ರದಲ್ಲಿಯೂ ಹಣ ಪಡೆದೇ ಮನೆಗಳನ್ನು ಹಂಚಿಕೆ ಮಾಡಲಾಗಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

phone call 2

‘ನಾನು ಕೊಟ್ಟ ಶಿಫಾರಸು ಪತ್ರಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಬದಲಾಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ನೀಡಿದ ಪಟ್ಟಿಗೆ ಅನುಮೋದನೆ ನೀಡಿದ್ದೀರಿ. ಶಾಸಕ ನೀಡಿದ ಪತ್ರಕ್ಕೆ ಬೆಲೆಯೇ ಇಲ್ಲವೇ?’ ಎಂದೂ ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಗುಂಡಿನ ಚಕಮಕಿಯಲ್ಲಿ ಕುಕಿ ಸಮುದಾಯದ ಮಹಿಳೆ ಸಾವು – ಮಣಿಪುರ ಮತ್ತೆ ಉದ್ವಿಗ್ನ

ಶಾಸಕರನ್ನು ಸಮಾಧಾನ ಮಾಡಲು ಯತ್ನಿಸಿದ ಸರ್ಫರಾಜ್ ಅವರು, ‘ನೀವು ಯಾರ ಹೆಸರುಗಳನ್ನು ಶಿಫಾರಸು ಮಾಡಿದ್ದೀರೋ ಅವರ ಪಟ್ಟಿ ಕೊಡಿ ಸರ್. ಅವರಿಗೆ ಮಂಜೂರು ಮಾಡುತ್ತೇವೆ. ಹಣ ಪಡೆದು ಹಂಚಿಕೆ ಮಾಡಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಭರವಸೆ ನೀಡುತ್ತಾರೆ.

ಸದ್ಯ ಈ ಆಡಿಯೋ ಈಗ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದು, ವಿಪಕ್ಷಗಳ ಹೋರಾಟಕ್ಕೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಇದನ್ನೂ ಓದಿ: ರಾಜಕೀಯ ಮಾತಾಡ್ಬಾರದು ಅಂತ ಯಾವಾಗಿನಿಂದ ಜಾರಿಯಾಗಿದೆ? – ನೋಟಿಸ್‌ಗೆ ಚಕ್ರವರ್ತಿ ಸೂಲಿಬೆಲೆ ಕಿಡಿ

TAGGED:BR PatilHouse AllotmentHousing CorporationKalaburagiZameer Ahmed Khanಕಲಬುರಗಿಜಮೀರ್ ಅಹ್ಮದ್ ಖಾನ್ಬಿ.ಆರ್.ಪಾಟೀಲ್ವಸತಿ ನಿಗಮ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
20 minutes ago
Air Ambulance Crash
Latest

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

Public TV
By Public TV
1 hour ago
Turkish Air Force
Latest

Video Viral | ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

Public TV
By Public TV
2 hours ago
Vishwakarma Mahasamsthana Mutt 2
Bengaluru City

ವಿಶ್ವಕರ್ಮ ಮಹಾಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ, ಶಿಷ್ಯ ಸ್ವೀಕಾರ ಸಮಾರಂಭ

Public TV
By Public TV
2 hours ago
Ramanagar Robbery
Districts

ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ – ಖದೀಮರು ಎಸ್ಕೇಪ್

Public TV
By Public TV
3 hours ago
Madikeri Accident 2
Crime

ಮಡಿಕೇರಿ | 20 ಅಡಿ ಆಳದ ಗದ್ದೆಗೆ ಉರುಳಿದ ಕಾರು; ತಾಯಿ – ಮಗ ಸೇಫ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?