Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಯೊಂದು ಮೂರು ಬಾಗಿಲು – ಶಾ ರಾಜ್ಯ ಭೇಟಿ ಸಂದರ್ಭದಲ್ಲೇ ಬಿಜೆಪಿ ಭಿನ್ನಮತ ತಾರಕಕ್ಕೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮನೆಯೊಂದು ಮೂರು ಬಾಗಿಲು – ಶಾ ರಾಜ್ಯ ಭೇಟಿ ಸಂದರ್ಭದಲ್ಲೇ ಬಿಜೆಪಿ ಭಿನ್ನಮತ ತಾರಕಕ್ಕೆ!

Karnataka

ಮನೆಯೊಂದು ಮೂರು ಬಾಗಿಲು – ಶಾ ರಾಜ್ಯ ಭೇಟಿ ಸಂದರ್ಭದಲ್ಲೇ ಬಿಜೆಪಿ ಭಿನ್ನಮತ ತಾರಕಕ್ಕೆ!

Public TV
Last updated: June 20, 2025 6:43 pm
Public TV
Share
3 Min Read
Karnataka BJP rebels meeting V Somanna
SHARE

– ವಿಜಯೇಂದ್ರ ಬದಲಾವಣೆಗೆ ಭಿನ್ನರು ಮತ್ತೆ ಪಟ್ಟು, ಪ್ರತ್ಯೇಕ ಸಭೆ
– ರೆಬೆಲ್ಸ್ ಜತೆ ಬಹಿರಂಗವಾಗಿ ಗುರುತಿಸಿಕೊಂಡ ವಿ ಸೋಮಣ್ಣ

ಬೆಂಗಳೂರು: ಬಿಜೆಪಿ (BJP) ಮನೆಯಲ್ಲಿ ಮತ್ತೆ ಭಿನ್ನಮತ ವಿರಾಟ್ ದರ್ಶನ. ಹೌದು, ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಸುಳಿವು ಸಿಕ್ಕ ಕೂಡಲೇ ಭಿನ್ನರು ಅಲರ್ಟ್ ಆಗಿದ್ದಾರೆ. ಗುರುವಾರ ತಡರಾತ್ರಿ ರೆಬೆಲ್ಸ್ ತಂಡ ವಿಜಯೇಂದ್ರ (BY Vijayendra) ಬದಲಾವಣೆ ಆಗಲೇಬೇಕೆಂಬ ಸಂದೇಶ ರವಾನಿಸಿದೆ. ರೆಬೆಲ್ಸ್‌ ಜತೆ ಕೇಂದ್ರ ಸಚಿವ ವಿ ಸೋಮಣ್ಣ (V Somanna) ಬಹಿರಂಗವಾಗಿಯೇ ಗುರುತಿಸಿಕೊಂಡಿದ್ದು ಗೊಂದಲ ಮತ್ತಷ್ಟು ಸಂಕೀರ್ಣವಾದಂತಿದೆ. ಅಮಿತ್ ಶಾ (Amit Shah) ರಾಜ್ಯ ಭೇಟಿ ಸಂದರ್ಭದಲ್ಲೇ ಗುಂಪುಗಾರಿಕೆ ತಾರಕಕ್ಕೇರಿದೆ.

ಬಿಜೆಪಿ ಗೊಂದಲ ಮುಗಿದಿದೆ ಎಂದು ಒಂದು ಕಡೆ ಹೈಕಮಾಂಡ್ ರಾಜ್ಯಾಧ್ಯಕ್ಷರ ಚುನಾವಣೆ ನಡೆಸುವ ಸುಳಿವು ಕೊಟ್ಟಿದೆ. ಆದರೆ ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಎನ್ನುವಂತೆ ಕಮಲ ಪಾಳಯದಲ್ಲಿ ಮತ್ತೆ ಭಿನ್ನಮತೀಯ ಚಟುವಟಿಕೆ ತೀವ್ರಗೊಂಡಿದೆ. ಯತ್ನಾಳ್ (Basangouda Patil Yatnal) ಉಚ್ಛಾಟನೆ ಬಳಿಕ ಮೌನವಾಗಿದ್ದ ಭಿನ್ನರ ಪಡೆ ಈಗ ಬೇರೊಂದು ರೂಪದಲ್ಲಿ ಪುಟಿದೆದ್ದಿದೆ. ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಕೆಲವರಿಗೆ ಅತೃಪ್ತಿ ಇರೋದು ಸತ್ಯ – ಬಿವೈವಿ

ವಿಜಯೇಂದ್ರ ಬದಲಾವಣೆಗೆ ಪಟ್ಟು ತೀವ್ರಗೊಳಿಸಿರುವ ರೆಬೆಲ್ಸ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ನೇತೃತ್ವದಲ್ಲಿ ತಡರಾತ್ರಿ ಪ್ರತ್ಯೇಕ ಸಭೆ ನಡೆಸಿದೆ. ವಿಶೇಷ ಅಂದ್ರೆ ಈ ಸಭೆಯಲ್ಲಿ ಭಾಗವಹಿಸುವ ಮೂಲಕ ಕೇಂದ್ರ ಸಚಿವ ವಿ ಸೋಮಣ್ಣ ಇದೇ ಮೊದಲ ಬಾರಿಗೆ ಭಿನ್ನರ ಜತೆ ಬಹಿರಂಗವಾಗಿ ಗುರುತಿಸಿಕೊಂಡಿದ್ದಾರೆ. ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬೆಂಗಳೂರಿನ ಫ್ಲ್ಯಾಟ್‌ನಲ್ಲಿ ಸಭೆ ನಡೆಸಿದ್ದ ಭಿನ್ನರು ಶತಾಯಗತಾಯ ವಿಜಯೇಂದ್ರ ಬದಲಾಗಲೇಬೇಕೆಂಬ ಸಂದೇಶ ರವಾನಿಸಿದ್ದಾರೆ. ವಿ ಸೋಮಣ್ಣ ಮೂಲಕ ಅಮಿತ್ ಶಾ ಅವರಿಗೆ ಭಿನ್ನರು ಈ ಸಂದೇಶ ತಲುಪಿಸಿದ್ದಾರೆ ಎನ್ನಲಾಗಿದೆ. ಜತೆಗೆ ಇದೇ ಜೂ.23, 24 ರಂದು ದೆಹಲಿಗೂ ಹೋಗಲು ರೆಬೆಲ್ಸ್ ನಿರ್ಣಯಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಚೇರಿಗೆ ದಿಢೀರ್ ಭೇಟಿ – ಅಸಮಾಧಾನಿತರ ಜೊತೆ ಮಾತುಕತೆಗೆ ಸಿದ್ಧ ಎಂದ ಬಿಎಸ್‌ವೈ

ಗೃಹ ಸಚಿವ ಅಮಿತ್ ಶಾ ಬಿಜಿಎಸ್ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಬೆಂಗಳೂರಿಗೆ ಬಂದಿದ್ದರು. ಅಮಿತ್ ಶಾ ಬಂದ ಸಂದರ್ಭದಲ್ಲೇ ಭಿನ್ನ ರಾಗ ಮೊಳಗಿದ್ದು ಉದ್ದೇಶಪೂರ್ವಕವಾಗಿಯೇ ಎನ್ನಲಾಗ್ತಿದೆ. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಭಿನ್ನರ ಜತೆ ಸಂಧಾನ ಸಭೆ ನಡೆಸಿದರೂ ಅದು ಯಶಸ್ಸಾಗಲಿಲ್ಲ. ಭಿನ್ನರು ತಮ್ಮ ಪಟ್ಟು ಸಡಿಲಿಸಿಲ್ಲ.

 

ಭಿನ್ನರ ಸಭೆ ಬಗ್ಗೆ ಮಾತಾಡಿರುವ ವಿಜಯೇಂದ್ರ, ಕೆಲವರಿಗೆ ತಮ್ಮ ವಿಚಾರದಲ್ಲಿ ಅತೃಪ್ತಿ ಇದೆ. ಎಲ್ಲವೂ ಶೀಘ್ರದಲ್ಲೇ ಸರಿ ಹೋಗಲಿದೆ. ಪ್ರಮುಖರು ಕೂತು ಸರಿಪಡಿಸ್ತೇವೆ. ಒಳಜಗಳ ಬಿಟ್ಟು ಎಲ್ರೂ ಒಟ್ಟಾಗಬೇಕಿದೆ. ಅವರ ಮನವೊಲಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ವಿಜಯೇಂದ್ರ ವಿರುದ್ಧ ಕಳೆದೊಂದು ವಾರದಿಂದಲೂ ಭಿನ್ನರು,ಬಿಜೆಪಿ ತಟಸ್ಥರು ಹಾಗೂ ಹಿರಿಯರ ಬೆಂಬಲ ಪಡೆಯುವ ಕಸರತ್ತಿಗಿಳಿದಿದ್ರು. ಈಗಾಗಲೇ ಬೊಮ್ಮಾಯಿ, ಆರ್ ಅಶೋಕ್, ಡಿವಿಎಸ್, ವಿ ಸೋಮಣ್ಣ, ಶೋಭಾ ಕರಂದ್ಲಾಜೆ ಭೇಟಿ ಮಾಡಿ ಸಮಾಲೋಚಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಯೊಳಗೆ ವಿಜಯೇಂದ್ರ ಪರ ಅನೇಕರು ಇಲ್ಲ ಎಂಬ ಸಂದೇಶ ಹೈಕಮಾಂಡ್‌ಗೆ ರವಾನಿಸುವ ಪ್ರಯತ್ನ ನಡೆಸಿದ್ದಾರೆ.

ಇದೆಲ್ಲದರ ಮಧ್ಯೆ ಮಾಜಿ ಸಿಎಂ ಯಡಿಯೂರಪ್ಪ ಪುತ್ರನ ಪರ ಅಖಾಡಕ್ಕಿಳಿದಿದ್ದಾರೆ. ಗುರುವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ಅಮಿತ್ ಶಾ ಭೇಟಿ ಮಾಡಿದ ಯಡಿಯೂರಪ್ಪ ಪಕ್ಷದ ಆಂತರಿಕ ವಿಚಾರ ಚರ್ಚೆ ಮಾಡಿದ್ದಾರೆ. ವಿಜಯೇಂದ್ರ ಸಾರಥ್ಯ ಸಾಧನೆ ಬಗ್ಗೆಯೂ ಅಮಿತ್ ಶಾಗೆ ಬಿಎಸ್‌ವೈ ಸೂಕ್ಷ್ಮವಾಗಿ ಹೇಳಿದ್ದಾರೆ ಎನ್ನಲಾಗಿದೆ.

TAGGED:bjpramesh jarkiholiV.SomannaVijayendraಅಮಿತ್ ಶಾರಮೇಶ್ ಜಾರಕಿಹೊಳಿವಿ.ಸೋಮಣ್ಣವಿಜಯೇಂದ್ರ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

Pankaja Munde
Latest

ಬಿಜೆಪಿ ಸಚಿವೆ ಪಂಕಜಾ ಮುಂಡೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ – ಚುನಾವಣಾ ಪ್ರಚಾರ ರದ್ದು

Public TV
By Public TV
7 minutes ago
Stray dogs Enters runway at Bengaluru airport
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಲೋಪ – ರನ್‌ವೇಗೆ ನುಗ್ಗಿದ ಬೀದಿನಾಯಿಗಳು!

Public TV
By Public TV
9 minutes ago
WhatsApp
Court

ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌

Public TV
By Public TV
36 minutes ago
Hassan Wheeling
Districts

ರಸ್ತೆ ಮಧ್ಯೆ ಪುಂಡನ ವ್ಹೀಲಿಂಗ್‌ – ವಾಹನ ಸವಾರರಿಗೆ ಕಿರಿಕಿರಿ, ವಿಡಿಯೋ ವೈರಲ್‌

Public TV
By Public TV
56 minutes ago
CJ Roy 4
Bengaluru City

ಎಲ್ಲಾ ವ್ಯವಹಾರವನ್ನು ಕೈಯಲ್ಲೇ ಬರೆದಿಟ್ಟುಕೊಳ್ಳುತ್ತಿದ್ದ ಸಿಜೆ ರಾಯ್‌

Public TV
By Public TV
1 hour ago
Gypsy 3
Districts

ಯಪ್ಪಾ… ಸೌಂಡು – ಸಾರ್ವಜನಿಕರಿಗೆ ಕಿರಿಕಿರಿ ಮಾಡ್ತಿದ್ದ ಜಿಪ್ಸಿ ವಶಕ್ಕೆ ಪಡೆದ ಪೊಲೀಸರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?