ಬಾಗಲಕೋಟೆ/ಗದಗ: ಇಂದು ಬೆಳಿಗ್ಗೆ ಬಾಗಲಕೋಟೆ (Bagalkote) ಹಾಗೂ ಗದಗ (Gadag) ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು (Lokayuktha Officers) ದಾಳಿ ನಡೆಸಿದ್ದಾರೆ.
ಧಾರವಾಡದ ಕರ್ನಾಟಕ ನೀರಾವರಿ ನಿಗಮದ ಮಲಪ್ರಭಾ ಯೋಜನೆಯ ಮುಖ್ಯ ಇಂಜಿನಿಯರ್ ಆಗಿರುವ ಅಶೋಕ್ ವಸಂದ್ ಅವರ ನಿವಾಸದ ಮೇಲೆ ದಾಳಿ ನಡೆದಿದೆ. ಜಮಖಂಡಿ ಹಾಗೂ ಖಜ್ಜಿಡೋಣಿ ಗ್ರಾಮದಲ್ಲಿರುವ ಅಶೋಕ್ ಅವರ ಎರಡು ನಿವಾಸದ ಮೇಲೆಯೂ ಲೋಕಾ ದಾಳಿ ನಡೆಸಿ, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಪಬ್ನಲ್ಲಿ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ – ಟೆಕ್ಕಿ ಅರೆಸ್ಟ್
ಗದಗ ನಗರ ಠಾಣಾ ಸಿಪಿಐ ಆಗಿರುವ ಡಿ.ಬಿ.ಪಾಟೀಲ್ ಅವರ ಮನೆಯ ಗದಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಶಾಕ್ ನೀಡಿದ್ದಾರೆ. ಆದಾಯ ಮೀರಿ ಆಸ್ತಿಗಳಿಕೆ ಆರೋಪದ ಹಿನ್ನೆಲೆ ದಾಳಿ ಮಾಡಲಾಗಿದೆ. ಡಿ.ಬಿ ಪಾಟೀಲ್ಗೆ ಸಂಬಂಧಿಸಿದ ಏಳು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ. ಶಿವಾನಂದ ನಗರದ ಬಾಡಿಗೆ ಮನೆ, ಶಹರ ಪೊಲೀಸ್ ಠಾಣೆ ಕಚೇರಿ, ಬಾಗಲಕೋಟೆ, ಜಮಖಂಡಿ, ಕೆರೂರು ಮನೆಗಳ ಮೇಲೂ ದಾಳಿ ಮಾಡಲಾಗಿದೆ.
ಇಂಚಿಂಚು ಪರಿಶೀಲನೆ ನಡೆಸಿದ ಅಧಿಕಾರಿಗಳು, ಶೌಚಾಲಯದೊಳಗೆ ಕುಳಿತಿದ್ದ ಸಿಪಿಐ ಮೊಬೈಲ್ನಲ್ಲಿ ಯಾರ ಜೊತೆಯಾದರೂ ಕದ್ದು ಮಾತಾಡುತ್ತಿದ್ದಾನಾ ಎಂದು ಬಾಗಿಲಿಗೆ ಕಿವಿಗೊಟ್ಟು ಕೇಳಿಸಿಕೊಂಡಿದ್ದಾರೆ. ಬಾಗಿಲು ತಟ್ಟಿ ಹೊರಗೆ ಬರುವಂತೆ ಸೂಚಿಸಿದ್ದ ಅಧಿಕಾರಿಗಳ ನಡೆಯನ್ನು ಕಂಡು ಡಿ.ಬಿ ಪಾಟೀಲ್ ಬೆಚ್ಚಿ ಬಿದ್ದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಪಿ.ಎಸ್ ಪಾಟೀಲ, ಸಿಪಿಐ ಪರಶುರಾಮ್ ಕವಟಗಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಾಳಿ ವೇಳೆ ಅನೇಕ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಹಣ, ಬೆಳ್ಳಿ, ಚಿನ್ನಾಭರಣಗಳ ದಾಖಲೆಗಳ ಪರಿಶೀಲನೆ ಮುಂದುವರೆದಿದೆ.ಇದನ್ನೂ ಓದಿ: ದೇಶ ತೊರೆಯಿರಿ ಇಲ್ವೋ ಇಂದು ಸಾಯಲು ಸಿದ್ಧವಾಗಿರಿ – ಕರೆ ಮಾಡಿ ಇರಾನ್ ಕಮಾಂಡರ್ಗಳಿಗೆ ಮೊಸಾದ್ ಎಚ್ಚರಿಕೆ