ಮುಂಬೈ: ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್ಗೆ (IIT Bombay Campus) ಅಕ್ರಮ ಪ್ರವೇಶ ಮಾಡಿದ್ದ ಮಂಗಳೂರು ಯುವಕನನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿರುವ ಘಟನೆ ನಡೆದಿದೆ. ಘಟನೆ ಬಳಿಕ ಭದ್ರತಾ ಲೋಪದ ಬಗ್ಗೆ ಕಳವಳ ಹುಟ್ಟಿಕೊಂಡಿದ್ದು, ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಬಿಲಾಲ್ ಅಹ್ಮದ್ ಫಯಾಜ್ ಅಹ್ಮದ್ ತೇಲಿ ಬಂಧಿತ ಯುವಕ. ಜೂನ್ 17ರಂದು ಕಾಲೇಜು ಕ್ಯಾಂಪಸ್ನ ಭದ್ರತಾ ಸಿಬ್ಬಂದಿ ಆತನನ್ನ ಹಿಡಿದು ಪೊವೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಈ ಸಂಬಂಧ ಕಾಲೇಜು ಆಡಳಿತ ಮಂಡಳಿ ದೂರು ನೀಡಿದೆ. ಇದನ್ನೂ ಓದಿ: ಜೈ ಹಿಂದ್.. ಜೈ ಭಾರತ್..: ಬಾಹ್ಯಾಕಾಶದಿಂದಲೇ ಶುಭಾಂಶು ಶುಕ್ಲಾ ಮೊದಲ ಸಂದೇಶ
Maharashtra: IIT Bombay tightened security after a 22-year-old Mangaluru man, Bilal Ahmed Fayaz Ahmed Teli, was caught illegally staying on campus for 14 days posing as a student. He was arrested on June 17 and a case has been filed against him pic.twitter.com/c2WvxFraXh
— IANS (@ians_india) June 24, 2025
ಬೆಳಕಿಗೆ ಬಂದಿದ್ದು ಹೇಗೆ?
ಪೊಲೀಸರು ಹೇಳುವಂತೆ, ಬಿಲಾಲ್ ಶಿಕ್ಷಣ ಸಂಸ್ಥೆಯ (Educational institution) ಪ್ರಮುಖ ಕಾರ್ಯಕ್ರಮವೊಂದಕ್ಕೆ ಬಂದಿದ್ದ, ಆದ್ರೆ ವಾಪಸ್ ಹೋಗಿರಲಿಲ್ಲ. ಮೊದಲು ಒಂದು ದಿನದ ಅಧ್ಯಯನಕ್ಕೆ ಕ್ಯಾಂಪಸ್ ಪ್ರವೇಶಿಸಿದವನು ಬಳಿಕ ಕ್ಯಾಂಪಸ್ನಲ್ಲಿಯೇ ಉಳಿದುಕೊಂಡು, ಉಪನ್ಯಾಸಗಳಿಗೆ ಹಾಜರಾಗಲು ಶುರು ಮಾಡಿದ್ದ. ಯಾವುದೇ ಮಾನ್ಯತಾ ದಾಖಲೆಗಳನ್ನು ಹೊಂದಿರದ ಬಿಲಾಲ್ ತರಗತಿಗಳಿಗೆ ಹಾಜರಾಗುತ್ತಿದ್ದ.
ಒಮ್ಮೆ ತರಗತಿಯಲ್ಲಿದ್ದಾಗ ಪ್ರಾಧ್ಯಾಪಕರೊಬ್ಬರು ತನ್ನ ಗುರುತಿನ ಚೀಟಿ ತೋರಿಸುವಂತೆ ಕೇಳಿದ್ರು. ಆಗ ಅಕ್ರಮ ಪ್ರವೇಶ ಮಾಡಿರುವುದು, ಕ್ಯಾಂಪಸ್ನಲ್ಲೇ ಅಕ್ರಮವಾಗಿ ವಾಸ್ತವ್ಯ ಹೂಡಿರುವುದು ಬೆಳಕಿಗೆ ಬಂದಿತು. ನಂತರ ಆಡಳಿತ ಮಂಡಳಿ ಆತನನ್ನ ಪೊಲೀಸರಿಗೆ ಒಪ್ಪಿಸಿ, ದೂರು ದಾಖಲಿಸಿತು. ಇದನ್ನೂ ಓದಿ: ಕುಮಾವೂನ್ ವಿವಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮೂರ್ಛೆ ಹೋದ ಜಗದೀಪ್ ಧನಕರ್
ಮೂಲಗಳು ಹೇಳುವುದೇನು?
ಇದೇ ಜೂನ್ 2 ರಿಂದ 7ರ ವರೆಗೆ ಕ್ಯಾಂಪಸ್ನಲ್ಲಿ ಕಾಣಿಸಿಕೊಂಡಿದ್ದ ಬಿಲಾಲ್ ಬಳಿಕ ಸ್ವಲ್ಪ ಸಮಯ ಕಣ್ಮರೆಯಾಗಿದ್ದ. ಜೂನ್ 17ರಂದು ಮತ್ತೆ ಕ್ಯಾಂಪಸ್ನಲ್ಲಿ ಕಾಣಿಸಿಕೊಂಡಾಗ ಅನುಮಾನ ಬಂದು ಆತನನ್ನ ವಿಚಾರಿಸಲಾಯಿತು ಎಂದು ಸಂಸ್ಥೆ ಮೂಲಗಳು ತಿಳಿಸಿವೆ.
ಸದ್ಯ ಆತನನ್ನ ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯಕ್ಕೆ ಆತನ ಬಳಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಜೊತೆಗೆ ಅವನ ಮೂಲ ಉದ್ದೇಶ ಏನೆಂಬುದೂ ತಿಳಿದುಬಂದಿಲ್ಲ. ಅವನಿಗೆ ಕ್ಯಾಂಪಸ್ನಲ್ಲಿ ಯಾರಾದ್ರೂ ಸ್ನೇತರಿದ್ದಾರಾ? ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬೆಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Honeymoon Murder | ಕೊನೆಗೂ ತಮ್ಮಿಬ್ಬರ ಸಂಬಂಧ ಒಪ್ಪಿಕೊಂಡ ಸೋನಂ ರಘುವಂಶಿ – ರಾಜ್