ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

Public TV
1 Min Read
Narayanapura Dam 1 1

ರಾಯಚೂರು: ಪಶ್ಚಿಮಘಟ್ಟ ಹಾಗು ಕೃಷ್ಣಾ ನದಿ (Krishna River) ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ರಾಯಚೂರಿನಲ್ಲಿ (Raichur) ಕೃಷ್ಣೇ ಈಗ ಮೈದುಂಬಿ ಹರಿಯುತ್ತಿದ್ದಾಳೆ. ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1,06,085 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಈಗಲೇ ಪ್ರವಾಹದ ಭೀತಿ ಆರಂಭವಾಗಿದೆ.

ಜಲಾಶಯದ 30 ಗೇಟ್‌ಗಳ ಮೂಲಕ ನೀರು ಹೊರಬಿಡಲಾಗುತ್ತಿದ್ದು, ಸದ್ಯ ಜಲಾಶಯಕ್ಕೆ 1 ಲಕ್ಷ 10 ಸಾವಿರ ಕ್ಯುಸೆಕ್ ಒಳಹರಿವು ಇದೆ. ಇನ್ನೂ ಹೆಚ್ಚಳವಾಗುವ ಸಾಧ್ಯತೆಯಿದೆ. 492.25 ಮೀಟರ್ ಸಾಮರ್ಥ್ಯದ ಜಲಾಶಯದಲ್ಲಿ 490.72 ಮೀಟರ್ ನೀರು ಸಂಗ್ರಹವಾಗಿದೆ. ಜಲಾಶಯ ಒಟ್ಟು 33.313 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಪ್ರಸ್ತುತ ಜಲಾಶಯದಲ್ಲಿ 26.74 ಟಿಎಂಸಿ ನೀರು ಸಂಗ್ರಹವಿದೆ. ಇದನ್ನೂ ಓದಿ: ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡುವುದಿಲ್ಲ: ಡಿಕೆಶಿ

ಜಲಾಶಯಕ್ಕೆ ಒಳಹರಿವು ಹೆಚ್ಚಾದಂತೆ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಬಿಡುವ ಸಾಧ್ಯತೆ ಹಿನ್ನೆಲೆ ಜನ ಜಾನುವಾರು ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಮನ್ ಕಿ ಬಾತ್‌ನಲ್ಲಿ ಕಲಬುರಗಿ ರೊಟ್ಟಿಗೆ ಪ್ರಧಾನಿ ಮೋದಿ ಪ್ರಶಂಸೆ

Share This Article