ಚಿಕ್ಕೋಡಿ: ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ (Sri Ram Sena) ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ಪೊಲೀಸ್ ಠಾಣೆ (Hukkeri Police Station) ಪಿಎಸ್ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತು ಮಾಡಲಾಗಿದೆ.
ಶ್ರೀರಾಮ ಸೇನೆ ಕಾರ್ಯಕರ್ತರು ಜೂನ್ 26 ರಂದು ಗೋವು ಸಮೇತ ಠಾಣೆಗೆ ಹೋಗಿದ್ದರೂ ಎಫ್ಐಆರ್ ಮಾಡದೇ ನಿರ್ಲಕ್ಷ್ಯ ತೋರಿದ್ದಕ್ಕೆ ಎಸ್ಪಿ ಭೀಮಾಶಂಕರ್ ಗುಳೇದ್ ಅಮಾನತು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಹಗರಣ| ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ – ಎಸ್ಐಟಿ ರದ್ದು, ಸಿಬಿಐ ತನಿಖೆಗೆ ಆದೇಶ
ಘಟನೆಯ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರದೇ ಬೇಜವಾಬ್ದಾರಿ ತೋರಿದ್ದು ಹಾಗೂ ಗಡಿಪಾರಾದ ರೌಡಿ ಶೀಟರ್ ಶ್ರೀರಾಮ ಸೇನೆ ಕಾರ್ಯಕರ್ತ ಮಹಾವೀರ್ ಸೊಲ್ಲಾಪುರೆಯನ್ನ ಕೂಡ ಬಿಟ್ಟು ಕಳುಹಿಸಿದ ಅಂಶಗಳನ್ನು ಪರಿಗಣಿಸಿ ಅಮಾನತು ಮಾಡಲಾಗಿದೆ. ಇದನ್ನೂ ಓದಿ: 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ
ಜುಲೈ 3 ರಂದು ಇಂಗಳಿ ಚಲೋ ಕರೆ ಕೊಟ್ಟಿರುವ ಶ್ರೀರಾಮ ಸೇನೆ ಸಂಘಟನೆ ಪ್ರತಿಭಟನೆಗೂ ಮುನ್ನವೇ ಪಿಎಸ್ಐ ಅವರನ್ನು ಅಮಾನತು ಮಾಡಿ ಬೆಳಗಾವಿ ಎಸ್ ಪಿ ಆದೇಶ ಹೊರಡಿಸಿದ್ದಾರೆ.