Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?

Bengaluru City

ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?

Public TV
Last updated: July 6, 2025 12:29 pm
Public TV
Share
3 Min Read
Siddaramaiah mallikarjun kharge
SHARE

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ʻಸೆಪ್ಟೆಂಬರ್ ಕ್ರಾಂತಿʼಯ ಬಿರುಗಾಳಿ ಜೋರಾಗಿ ಬೀಸುತ್ತಿದೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೇಳಿಕೆ – ಪ್ರತಿ ಹೇಳಿಕೆಗಳ ಜಟಾಪಟಿ ನಡೆಯುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ (AICC OBC Advisory Council) ಅಧ್ಯಕ್ಷರಾಗಿ ನೇಮಕ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.‌

ಇದರಿಂದ ʻ5 ವರ್ಷ ನಾನೇ ಸಿಎಂʼ ಎಂಬ ಸಂದೇಶ ನೀಡಿದ್ದ ಸಿದ್ದರಾಮಯ್ಯ ಅವರು ಸಿಎಂ ಹುದ್ದೆ ತೊರೆದು ರಾಷ್ಟ್ರ ರಾಜಕಾರಣಕ್ಕೆ ತೆರಳಲಿದ್ದಾರೆಯೇ ಎನ್ನುವ ಪ್ರಶ್ನೆಯೂ ಮೂಡಿದೆ. ಇದನ್ನೂ ಓದಿ: ಆರ್ಥಿಕ ನೆರವು, ವಿವಾಹದ ಭರವಸೆ ನೀಡಿ ಹಿಂದೂಗಳನ್ನ ಇಸ್ಲಾಂಗೆ ಮತಾಂತರ – ಮಾಸ್ಟರ್‌ ಮೈಂಡ್‌ ಸೇರಿ ಇಬ್ಬರು ಅರೆಸ್ಟ್‌

Siddaramaiah 3

ಸದ್ಯ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಸಿದ್ದರಾಮಯ್ಯರನ್ನ ನೇಮಕ ಮಾಡಲಾಗಿದೆ. ಮಂಡಳಿಯ ಚಟುವಟಿಕೆಗಳನ್ನು ಕರ್ನಾಟಕದಿಂದಲೇ ಆರಂಭಿಸಲು ಎಐಸಿಸಿ ನಿರ್ಧರಿಸಿದ್ದು, ಇದೇ ಜುಲೈ 15ರಂದು ಬೆಂಗಳೂರಿನಲ್ಲಿ ಮೊದಲ ಸಭೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ (KPCC) ಕಚೇರಿ ಆವರಣದಲ್ಲಿನ ಭಾರತ್ ಜೋಡೊ ಭವನದಲ್ಲಿ ಮಂಡಳಿಯ ಮೊದಲ ಸಭೆ ನಡೆಯಲಿದೆ. ಮಂಡಳಿಯ ಸದಸ್ಯರು, ಸಂಚಾಲಕರು, ಕಾರ್ಯದರ್ಶಿಗಳು, ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು ಸೇರಿದಂತೆ ದೇಶದ ವಿವಿಧ ರಾಜ್ಯಗಳ 90 ನಾಯಕರಿಗೆ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಈ ಪೈಕಿ ಐವರು ಮಾಜಿ ಸಿಎಂಗಳು, 10 ಮಂದಿ ಕೇಂದ್ರದ ಮಾಜಿ ಸಚಿವರೂ ಸಹ ಪಾಲ್ಗೊಳ್ಳುವ ಸಾಧ್ಯತೆಯಿದೆ.

ದೇಶದಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಚರ್ಚಿಸಿ, ಪರಿಹಾರ ಒದಗಿಸುವ ದಿಕ್ಕಿನಲ್ಲಿ ಕಾರ್ಯತಂತ್ರ ರೂಪಿಸಲು ಈ ವೇದಿಕೆ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: ಗ್ಯಾರಂಟಿ ಬೇಡ ಅಂತ ಹೇಳಿ, ಅದೇ ದುಡ್ಡಲ್ಲಿ ರಸ್ತೆ ಮಾಡಿಸ್ತೀವಿ: ರಾಯರೆಡ್ಡಿ

Siddaramaiah BK Hariprasad 2

ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 24 ಸದಸ್ಯರಿರುವ ಈ ಸಲಹಾ ಮಂಡಳಿಯನ್ನು ಸಿದ್ದರಾಮಯ್ಯ ಅವರು ಮುನ್ನಡೆಸಲಿದ್ದಾರೆ. ಸಲಹಾ ಮಂಡಳಿ ರಚನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅನುಮೋದನೆ ನೀಡಿದ್ದಾರೆ. ರಾಜ್ಯದ ಕಾಂಗ್ರೆಸ್ ನಾಯಕರ ಪೈಕಿ ಸಿದ್ದರಾಮಯ್ಯ ಅವರೊಂದಿಗೆ ಬಿ.ಕೆ ಹರಿಪ್ರಸಾದ್ ಹಾಗೂ ಮಾಜಿ ಸಿಎಂ ಎಂ.ವೀರಪ್ಪ ಮೊಯಿಲಿ ಕೂಡ ಮಂಡಳಿಯಲ್ಲಿದ್ದಾರೆ. ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಬಳಸಿಕೊಂಡು ದೇಶದಾದ್ಯಂತ ಹಿಂದುಳಿದ ವರ್ಗಗಳನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್‌ ಈ ತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

VEERAPPA MOILY 1

ಎಐಸಿಸಿಯ ಹಿಂದುಳಿದ ವರ್ಗಗಳ ಘಟಕಕ್ಕೆ ಮುಂದಿನ ಕಾರ್ಯಯೋಜನೆಗಳು, ಅವುಗಳ ಅನುಷ್ಠಾನ, ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಕುರಿತು ಈ ಸಲಹಾ ಮಂಡಳಿಯು ಹಲವು ಸಲಹೆಗಳನ್ನು ನೀಡಲಿದೆ. ದೇಶದಾದ್ಯಂತ ಹಿಂದುಳಿದ ವರ್ಗಗಳ ಸಮಸ್ಯೆ, ಸವಾಲುಗಳನ್ನು ಅರಿತು ಸಲಹೆ ನೀಡುವುದರ ಜೊತೆಗೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಈ ಮಂಡಳಿ ಸಲಹೆಗಳನ್ನು ನೀಡಲಿದೆ. ಇದನ್ನೂ ಓದಿ: ಅಮೆರಿಕ ಪಾರ್ಟಿ; ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ ಎಲಾನ್‌ ಮಸ್ಕ್‌

ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯಲ್ಲಿ ಯಾರೆಲ್ಲ ಇರಲಿದ್ದಾರೆ?
ಸಿದ್ದರಾಮಯ್ಯ (ಅಧ್ಯಕ್ಷರು), ಬಿ.ಕೆ. ಹರಿಪ್ರಸಾದ್, ಅಶೋಕ್ ಗೆಹ್ಲೋಟ್‌, ಭೂಪೇಶ್ ಬಘೇಲ್, ವಿ.ನಾರಾಯಣಸ್ವಾಮಿ, ಸಚಿನ್ ಪೈಲಟ್, ಗುರುದೀಪ್ ಸಿಂಗ್ ಸಪ್ಪಲ್, ಅರುಣ್ ಯಾದವ್, ವಿಜಯ್ ನಾಮ್‌ದೇವ್‌ರಾವ್ ವಡೆಟ್ಟಿವಾರ್, ವಿ. ಹನುಮಂತರಾವ್, ಅಮಿತ್ ಚಾವ್ಡಾ, ಬಿ. ಮಹೇಶ್ ಕುಮಾರ್ ಗೌಡ, ಪೊನ್ನಮ್ ಪ್ರಭಾಕ, ಡಾ. ವೀರಪ್ಪ ಮೊಯಿಲಿ, ಎಸ್. ಜೋತಿಮಣಿ (ಸಂಸದೆ), ಶ್ರೀಕಾಂತ್ ಜೇನಾ, ಕಮಲೇಶ್ವರ್ ಪಟೇಲ್, ಅಜಯ್ ಕುಮಾರ್ ಲಲ್ಲು, ಸುಭಾಷಿಣಿ ಯಾದವ್, ಅಡೂರು ಪ್ರಕಾಶ್ (ಸಂಸದ), ಧನೇಂದ್ರ ಸಾಹು, ಹೀನಾ ಕಾವ್ರೆ, ಡಾ. ಅನಿಲ್ ಜೈಹಿಂದ್- ಸಲಹಾ ಮಂಡಳಿಯ ಸಂಚಾಲಕರು, ಜಿತೇಂದರ್ ಬಘೇಲ್- ಸಲಹಾ ಮಂಡಳಿಯ ಕಾರ್ಯದರ್ಶಿ.

TAGGED:aicccongressmallikarjun khargeOBC Advisory Councilsiddaramaiahಎಐಸಿಸಿಒಬಿಸಿ ಸಲಹಾ ಮಂಡಳಿಕಾಂಗ್ರೆಸ್ಮಲ್ಲಿಕಾರ್ಜುನ ಖರ್ಗೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
5 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
8 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
31 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
33 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
50 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
55 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?