ವಿಜಯಪುರ: ಮಾರಕಾಸ್ತ್ರ ಬಳಸಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ನಡೆದಿದೆ.
ಫೈಸಲ್ ಇನಾಂದಾರ್ (24) ಕೊಲೆಯಾದ ಯುವಕ.ಇದನ್ನೂ ಓದಿ: Rajasthan | ಐಎಎಫ್ ಜಾಗ್ವಾರ್ ಯುದ್ಧ ವಿಮಾನ ಪತನ – ಇಬ್ಬರು ಪೈಲೆಟ್ ದುರ್ಮರಣ
ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಯುವಕನನ್ನು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈವರೆಗೂ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಪೊಲೀಸರು ಶ್ವಾನದಳ, ಬೆರಳಚ್ಚು ತಂಡದಿಂದ ಪರೀಕ್ಷೆ ನಡೆಸಲಾಗಿದೆ. ಸದ್ಯ ಗಾಂಧಿಚೌಕ್ ಪೊಲೀಸ್ ಠಾಣೆ (Gandhi Chowk Police Station) ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.