Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಜಯ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿಗೆ ಪ್ಲ್ಯಾನ್‌ – ಪ್ರವಾಸಿಗರಿಗೆ ಸಿಗಲಿದೆ ಥ್ರಿಲ್ಲಿಂಗ್‌ ಅನುಭವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಜಯ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿಗೆ ಪ್ಲ್ಯಾನ್‌ – ಪ್ರವಾಸಿಗರಿಗೆ ಸಿಗಲಿದೆ ಥ್ರಿಲ್ಲಿಂಗ್‌ ಅನುಭವ

Latest

ಸಂಜಯ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿಗೆ ಪ್ಲ್ಯಾನ್‌ – ಪ್ರವಾಸಿಗರಿಗೆ ಸಿಗಲಿದೆ ಥ್ರಿಲ್ಲಿಂಗ್‌ ಅನುಭವ

Public TV
Last updated: July 14, 2025 8:36 am
Public TV
Share
4 Min Read
Leopard 2
SHARE

ನೀವು ವನ್ಯಜೀವಿ ಪ್ರಿಯರೇ? ಹಾಗಾದ್ರೆ ಖಂಡಿತವಾಗಿ ಯಾವುದಾದ್ರೂ ಒಂದು ಕಾಡಿಗೆ ಭೇಟಿ ಕೊಟ್ಟೇ ಇರ್ತೀರಿ. ತೆರೆದ ಜಿಪ್ಸಿಯಲ್ಲಿ ದಿನವಿಡೀ ಕಾಡು ಸುತ್ತಿ ಕೊನೇ ಕ್ಷಣದಲ್ಲಿ ಒಂದು ಚಿರತೆ (Leopard) ನಿಮ್ಮ ಮುಂದೆ ಹಾದು ಹೋದ್ರೆ ಅದೆಷ್ಟು ಖುಷಿ ಇರುತ್ತೆ ಅಲ್ಲವೇ? ಒಂದು ಕ್ಷಣ ಮೈ ರೋಮಗಳು ನೆಟ್ಟಗಾಗುತ್ತವೆ. ಅದರಂತೆಯೇ ಅಪರೂಪದ ಪ್ರಾಣಿ, ಪಕ್ಷಿಗಳು, ಗಮನ ಸೆಳೆಯುವ ಸಸ್ಯವರ್ಗ ಸೇರಿದಂತೆ ಹಲವು ಆಕರ್ಷಣೆಗಳೊಂದಿಗೆ ಪ್ರವಾಸಿಗರನ್ನ ಸೆಳೆಯುತ್ತವೆ ನಮ್ಮ ಭಾರತೀಯ ರಾಷ್ಟ್ರೀಯ ಉದ್ಯಾನಗಳು. ಇತ್ತೀಚೆಗಷ್ಟೇ ನಮ್ಮ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ದಕ್ಷಿಣ ಭಾರತದ ಮೊದಲ ಮತ್ತು ದೇಶದ ಅತಿ ದೊಡ್ಡ ಚಿರತೆ ಸಫಾರಿಯನ್ನ ಶುರು ಮಾಡಲಾಗಿದೆ. ಇದೀಗ ಮುಂಬೈನ ಸಂಜಯ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲೂ (SGNP) ಚಿರತೆ ಸಫಾರಿ ಶುರು ಮಾಡಲು ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಈವರೆಗೆ ಇದ್ದ ತೊಡಕುಗಳೆಲ್ಲವನ್ನ ಪರಿಹರಿಸಿ ಪ್ರವಾಸೋದ್ಯಮಕ್ಕೆ ಪುನಶ್ಚೇತನ ನೀಡುವ ಮಹತ್ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಹೆಚ್ಚು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ..

Contents
  • ಇಷ್ಟು ವರ್ಷ ಶುರು ಮಾಡದಿದ್ದಕ್ಕೆ ಕಾರಣ ಏನು?
  • ಗಡಿ ಗೋಡೆ ನಿರ್ಮಿಸಲು ಕ್ರಮ

Tourists 2

ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಬಗ್ಗೆ ನಿಮಗೆಷ್ಟು ಗೊತ್ತು?

ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ (Mumbai) 1969 ರಲ್ಲಿ ಸ್ಥಾಪಿಸಲಾದ ಸಂಜಯ್‌ ಗಾಂಧಿ ರಾಷ್ಟ್ರೀಯ ಉದ್ಯಾನವನವು ಮೊದಲು 87 ಕಿಮೀ ವಿಸ್ತೀರ್ಣ ಹೊಂದಿತ್ತು. ಇದೀಗ ಮುಂಬೈ ಮತ್ತು ಥಾಣೆಯಲ್ಲಿ 104 ಚದರ ಕಿ.ಮೀ ಪ್ರದೇಶದಲ್ಲಿ ವಿಸ್ತರಿಸಿಕೊಂಡಿದೆ. ಪ್ರವಾಸಿಗರ ಪ್ರಮುಖ ಆಕರ್ಷಣಾ ಕೇಂದ್ರ ಮಾತ್ರವಲ್ಲದೇ ವನ್ಯಜೀವಿ ಸಂರಕ್ಷಣಾ (Wildlife Protection) ತಾಣವೂ ಆಗಿದೆ. ಈ ಜೀವ ವೈವಿಧ್ಯಮಯ ತಾಣವು ಅದ್ಭುತವಾದ ಸದ್ಯ ಮತ್ತು ಪ್ರಾಣಿಗಳ ನೆಲೆಯಾಗಿದೆ. 1,300ಕ್ಕೂ ಹೆಚ್ಚು ಸಸ್ಯ ಪ್ರಭೇದಗಳು, 274 ಪಕ್ಷಿ ಪ್ರಭೇದಗಳು, 40 ಜಾತಿಯ ಸಸ್ತನಿಗಳು, 250 ಜಾತಿಯ ಪಕ್ಷಿಗಳು, 150 ಜಾತಿಯ ಚಿಟ್ಟೆಗಳು ಮತ್ತು 38 ಜಾತಿಯ ಸರೀಸೃಪಗಳಿಗೆ ನೆಲೆಯಾಗಿದೆ. ಈ ಉದ್ಯಾನವು ಪ್ರಕೃತಿ ಪ್ರಿಯರಿಗೆ ಕೇವಲ ಸ್ವರ್ಗವಲ್ಲ, ಇತಿಹಾಸ ಮತ್ತು ಸಂಸ್ಕೃತಿಯ ನಿಧಿಯೂ ಆಗಿದೆ. ಶತಮಾನಗಳ ಹಿಂದೆ ಬಂಡೆಗಳಲ್ಲಿ ಕೆತ್ತಿದ ಗುಹೆಗಳು ಇನ್ನೂ ಇಲ್ಲಿವೆ. ಇಷ್ಟು ವನ್ಯ ಸಂಪತ್ತನ್ನ ಹೊಂದಿರುವ ಉದ್ಯಾನದಲ್ಲಿ ಇದೀಗ ಚಿರತೆ ಸಫಾರಿ ಆರಂಭಿಸಲು ಸಕಲ ತಯಾರಿ ನಡೆಯುತ್ತಿದೆ. 

Tourists

ಯಾವಾಗಿನಿಂದ ಸಫಾರಿ ಶುರು? 

2024ರ ಗಣತಿಯ ಪ್ರಕಾರ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನವು 54 ಚಿರತೆಗಳನ್ನು ಹೊಂದಿದೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್‌ ಸೆಷನ್‌ನಲ್ಲಿ ಮಹಾರಾಷ್ಟ್ರ ಅರಣ್ಯ ಸಚಿವ ಗಣೇಶ್ ನಾಯಕ್ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದರು. SGNP ನೈಸರ್ಗಿಕ ಸಂರಕ್ಷಣೆಯ ವಾತಾವರಣ ಇರೋದ್ರಿಂದ ಚಿರತೆಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಸ್ಥಿರವಾಗಿ ಬೆಳೆಯುತ್ತಲೇ ಇದೆ. 2015 ರಲ್ಲಿ 35 ಇದ್ದ ಚಿರತೆಗಳ ಸಂಖ್ಯೆ 2017 ರಲ್ಲಿ 41, 2018 ರಲ್ಲಿ 47, 2019 ರಲ್ಲಿ 46, 2023 ರಲ್ಲಿ 52 ಮತ್ತು 2024 ರಲ್ಲಿ 54 ಚಿರತೆಗಳು ಕಂಡುಬಂದಿವೆ. ಹೀಗಾಗಿ ಶೀಘ್ರದಲ್ಲೇ ಚಿರತೆ ಸಫಾರಿ ಆರಂಭಿಸಲು ತಯಾರಿ ನಡೆಸಲಾಗಿದೆ ಅಂತ ಸಚಿವರು ವಿವರಿಸಿದ್ದಾರೆ.

Leopard 1

ಇಷ್ಟು ವರ್ಷ ಶುರು ಮಾಡದಿದ್ದಕ್ಕೆ ಕಾರಣ ಏನು?

ಕೆಪಿ ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡಕ್ಕೆ ಅನುವಾದಿಸಿರುವ ʻರುದ್ರ ಪ್ರಯಾಗದ ಭಯಾನಕ ನರಭಕ್ಷಕʼ (ಕೆನ್ನೆತ್ ಆಂಡರ್ಸನ್ ಅವರ ಅನುವಾದ ಕಥನ) ಕಾಡಿನ ಕಥೆಯನ್ನ ನೀವು ಓದಿದ್ದರೆ ನರಭಕ್ಷಕ ಚಿರತೆ ಇಡೀ ರುದ್ರ ಪ್ರಯಾಗವನ್ನು ಯಾವ ರೀತಿ ಕಾಡಿತ್ತು ಅನ್ನೋದು ನಿಮಗೆ ನೆನಪಾಗುತ್ತೆ. ಹಾಗೆಯೇ ಇಲ್ಲಿನ ಕಾಡಂಚಿನ ಗ್ರಾಮಗಳ ಜನ ಭಯದಲ್ಲೇ ಓಡಾಡುವಂತಾಗಿತ್ತು. 2017ರಲ್ಲಿ ಚಿರತೆ ದಾಳಿಗೆ ಇಬ್ಬರು ಮಕ್ಕಳು (ಒಂದು ಹುಡುಗಿ ಮತ್ತು ಒಂದು ಹುಡುಗ) ಬಲಿಯಾಗಿದ್ದರು. ಈ ಘಟನೆ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. 2022ರಲ್ಲಿ ಮತ್ತೆ ಹುಡುಗಿಯೊಬ್ಬಳು ಚಿರತೆ ದಾಳಿಗೆ ಬಲಿಯಾಗಿದ್ದಳು. ಕಾನೂನಿನ ಅನ್ವಯ ಸರ್ಕಾರ ಸಂತ್ರಸ್ತ ಕುಟುಂಬಗಳಿಗೆ ತಲಾ 20 ಲಕ್ಷ ರೂಪಾಯಿ ಪರಿಹಾರವನ್ನೇನೋ ನೀಡಲಾಯ್ತು. ಆದ್ರೆ ತಡೆಗೋಡೆಗಳು ಇಲ್ಲದಿದ್ದ ಪರಿಣಾಮ ಹೊರವಲಯದಲ್ಲಿ ವಾಸಿಸುವ ಮಕ್ಕಳ ಮೇಲೆ ಚಿರತೆ ದಾಳಿ ಮುಂದುವರಿಯುತ್ತಲೇ ಇದೆ. ಮನೆಯಿಂದ ಪ್ರಕೃತಿ ಕರೆಗೆ ಹೋದಂತಹ ಸಂದರ್ಭದಲ್ಲಿ ಏಕಾಏಕಿ ನೆಗೆದು ದಾಳಿ ಮಾಡಿವೆ. ಹೀಗಾಗಿಯೇ ಇಷ್ಟು ವರ್ಷ ಇಲ್ಲಿ ಚಿರತೆ ಸಫಾರಿ ಶುರು ಮಾಡಿರಲಿಲ್ಲ ಎಂದು ಹೇಳಲಾಗುತ್ತಿದೆ. 

104 ಚದರ ಕಿಮೀ ವ್ಯಾಪಿಸಿಕೊಂಡಿರುವ ಉದ್ಯಾನದಲ್ಲಿ ಚಿರತೆಗಳಿಗೆ ಈಗ ಸಾಕಷ್ಟು ಬೇಟೆಗಳಿವೆ. ಚಿರತೆಗಳಿಗೆ ಬೇಟೆಯಾಗಿ ಸಸ್ಯಹಾರಿ ಪ್ರಾಣಿಗಳಿವೆ. ಇದನ್ನ ಇನ್ನಷ್ಟು ಖಚಿತಪಡಿಸಿಕೊಳ್ಳೋದಕ್ಕೆ ಸರ್ಕಾರವು ಆ ಪ್ರದೇಶದಲ್ಲಿ ಹೆಚ್ಚಿನ ಹಣ್ಣಿನ ಮರಗಳನ್ನ ನೆಡಲು ನಿರ್ಧರಿಸಿದೆ.

Flower

ಗಡಿ ಗೋಡೆ ನಿರ್ಮಿಸಲು ಕ್ರಮ

ಸದ್ಯ ಚಿರತೆ ಸಫಾರಿ ಶುರು ಮಾಡೋದಕ್ಕೂ ಮುನ್ನವೇ ಕಾಡಿನ ಸಮೀಪದಲ್ಲಿರುವ ಜನರ ಸುರಕ್ಷತೆಗೂ ಸರ್ಕಾರ ಒತ್ತುಕೊಟ್ಟಿದೆ. ಗಡಿಯುದ್ಧಕ್ಕೂ ಸಿಮೆಂಟ್‌ ಗೋಡೆಗಳನ್ನ ನಿರ್ಮಿಸುವ ಯೋಜನೆಯನ್ನ ಈಗಾಗಲೇ ಪ್ರಸ್ತಾಪಿಸಲಾಗಿದೆ. ಜೊತೆಗೆ ಉದ್ಯಾನವನದೊಳಗೆ ಪರಿಫೆರಲ್‌ ರಸ್ತೆ (ಸಫಾರಿಗೆ ಸೂಕ್ತ ಮಾರ್ಗ) ನಿರ್ಮಿಸುವ ಜೊತೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಯೋಜನೆಯೂ ಇದೆ. ಹಿಂದೆಂದಿಗಿಂತಲೂ ವಾಚರ್ಸ್‌ಗಳ ಗಸ್ತು ಹೆಚ್ಚಾಗಿರುವಂತೆ ನೋಡಿಕೊಳ್ಳುವ ಪ್ರಸ್ತಾವನೆಯೂ ಸರ್ಕಾರದ ಮುಂದಿದೆ. ಮುಖ್ಯವಾಗಿ ಉದ್ಯಾನವನದಲ್ಲಿರುವ ಪ್ರಾಣಿಗಳ ಸುರಕಕ್ಷತೆ ಮೇಲೆ ನಿಗಾ ಇಡಲು ಉಪಗ್ರಹ ತಂತ್ರಜ್ಞಾನ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

Snake 1

ಚಿರತೆ ಸಫಾರಿ ಆರಂಭಿಸುವುದಕ್ಕೂ ಮುನ್ನ ಉದ್ಯಾನವನದಲ್ಲಿರುವ 22 ಬುಡಕಟ್ಟು ಪಾಡಾಗಳು (ತಾಂಡಾಗಳು) ಇವೆ. ಉದ್ಯಾನವನದ ಹೊರಗೆ ನೆಲೆಸಿರುವ 2,000 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಜೊತೆಗೆ ಅವರಿಗೆ ಮನೆಗಳನ್ನು ನಿರ್ಮಿಸಲು ಪ್ರಸ್ತಾಪಿಸಲಾಗಿದೆ. ಅದಕ್ಕಾಗಿ ಮುಂಬೈನ ಆರೆ ಕಾಲೋನಿಯಲ್ಲಿ 90 ಎಕರೆ ಭೂಮಿಯನ್ನ ಗುರುತಿಸಲಾಗಿದೆ. ಚಿರತೆಗಳು ರಾತ್ರಿ ವೇಳೆಯಲ್ಲಿ ಮನೆಗಳ ಮೇಲೆ ದಾಳಿ ಮಾಡುವುದನ್ನ ತಪ್ಪಿಸಲು ಸೋಲಾರ್‌ ಬೇಲಿ ವ್ಯವಸ್ಥೆ ಕಲ್ಪಿಸಲು ಜೊತೆಗೆ ಬಹಿರ್ದೆಸೆಗೆ ಹೋಗುವುದನ್ನ ತಡೆಯಲು ಶೌಚಾಲಯ ವ್ಯವಸ್ಥೆ ಮಾಡಲು ನಿರ್ದೇಶಿದೆ.

butterfly

ಈ ಎಲ್ಲ ತಯಾರಿಗಳನ್ನು ಮಾಡಿಕೊಂಡ ಬಳಿಕ ಚಿರತೆ ಸಫಾರಿ ಪರಿಚಯಿಸಲು ಸರ್ಕಾರ ತಯಾರಿ ನಡೆಸಿದೆ. ಈ ಮೂಲಕ ವನ್ಯಜೀವಿಪ್ರಿಯರಿಗೆ ಚಿರತೆಗಳನ್ನು ವೀಕ್ಷಿಸುವ ಅವಕಾಶ ಮಾಡಿಕೊಡಲಿದೆ. ಪ್ರಸ್ತುತ ಹುಲಿ ಮತ್ತು ಸಿಂಹ ಸಫಾರಿಗಳನ್ನು ನಡೆಸುತ್ತಿರುವ SGNP ಚಿರತೆಗಳ ಸುರಕ್ಷಿತ ನೆಲೆಯಾಗಿದ್ದರೂ, ಸಫಾರಿ ಶುರು ಮಾಡಿರಲಿಲ್ಲ. ಅಲ್ಲದೇ ಚಿರತೆ ಸಫಾರಿಗೆ ಸುಮಾರು 30 ಹೆಕ್ಟೇರ್‌ ಪ್ರದೇಶದ ಅಗತ್ಯವಿದೆ. ಈಗಾಗಲೇ ಈ ಸೌಲಭ್ಯ ಉದ್ಯಾನದಲ್ಲಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ ಸಫಾರಿ ಅಭಿವೃದ್ಧಿಪಡಿಸಲು ಅಂದಾಜು 5 ಕೋಟಿ ರೂ. ವೆಚ್ಚ ನಿಗದಿ ಮಾಡಲಾಗಿದೆ. ಅರಣ್ಯ ಇಲಾಖೆ ಮತ್ತು ಜಿಲ್ಲಾ ಯೋಜನಾ ಸಮಿತಿಯ ಮೂಲಕ ಹಣವನ್ನು ವ್ಯವಸ್ಥೆ ಮಾಡಲಾಗುತ್ತದೆ.  

TAGGED:Ganesh NaikLeopards SafarimumbaiSanjay Gandhi National Parkಚಿರತೆಚಿರತೆ ಸಫಾರಿಸಫಾರಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
8 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
26 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
43 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
50 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?