ಆ.4ರಂದು ವೀರನಹೊಸಳ್ಳಿಯಲ್ಲಿ ದಸರಾ ಗಜಪಯಣ – ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

Public TV
2 Min Read
Mysuru Dasara Eshwar Khandre

ಬೆಂಗಳೂರು: ಈ ಬಾರಿಯೂ ಅಭಿಮನ್ಯು ದಸರಾ (Mysuru Dasara) ಅಂಬಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿದ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು 2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಅವರು, 2020ರಿಂದ ವಿಜಯ ದಶಮಿಯ ದಿನದಂದು ಜಂಬೂಸವಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ವಿಗ್ರಹವಿರುವ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯುವೇ ಕ್ಯಾಪ್ಟನ್ ಆಗಲಿದ್ದಾನೆ ಎಂದು ತಿಳಿಸಿದರು. ಇದನ್ನೂ ಓದಿ: Madikeri | ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – ಕೊಲೆ ಶಂಕೆ, ಕುಟುಂಬಸ್ಥರಿಂದ ದೂರು

Mysuru Dasara Eshwar Khandre 1

ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷ ವಯಸ್ಸಿನ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತನಾಗಿದ್ದಾನೆ ಎಂದರು. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನವಾದ 4 ದಿನದ ಬಳಿಕ ಸಿಕ್‌ ಲೀವ್‌ ಹಾಕಿದ್ರು 100ಕ್ಕೂ ಹೆಚ್ಚು ಪೈಲಟ್‌ಗಳು

ಈ ಬಾರಿಯ ಜಂಬೂಸವಾರಿಯಲ್ಲಿ ಮತ್ತಿಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು ಪ್ರಶಾಂತ್ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40) ಗಂಡಾನೆಗಳು ಹಾಗೂ ದುಬಾರೆ ಶಿಬಿರದ ಕಾವೇರಿ (45) ಹಾಗೂ ಬಳ್ಳೆಯ ಲಕ್ಷ್ಮೀ (53) ಹೆಣ್ಣಾನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ ಎಂದು ತಿಳಿಸಿದರು. ಇದನ್ನೂ ಓದಿ: ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ `ಮಾಸ್ಟರ್ ಪ್ಲ್ಯಾನ್’ – ಕಾಮಗಾರಿಗೆ ಸರ್ಕಾರದಿಂದ 215 ಕೋಟಿ ಅನುಮೋದನೆ

ಎರಡನೇ ಹಂತದಲ್ಲಿ 5 ಆನೆಗಳನ್ನು ಕಾಡಿನಿಂದ ಮೈಸೂರಿಗೆ ತರಲಾಗುವುದು. ಕಾಡಿನಿಂದ ನಾಡಿಗೆ ಬರುವ ಈ ಆನೆಗಳಿಗೆ ಆ.4ರಂದು ನಡೆಯುವ ಗಜಪಯಣದಲ್ಲಿ ವಿದ್ಯುಕ್ತವಾಗಿ ಮತ್ತು ಸಾಂಪ್ರದಾಯಿಕವಾಗಿ ಬೀಳ್ಕೊಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ತುಂಬಿ ಹರಿಯುತ್ತಿರುವ ನದಿ ದಾಟಿದ ವಿದ್ಯಾರ್ಥಿನಿ

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ, ಉನ್ನತಾಧಿಕಾರಿಗಳಾದ ಮಹೇಶ್ ಶಿರೂರ್, ಮನೋಜ್ ಕುಮಾರ್, ಮಾಲತಿ, ಪ್ರಭುಗೌಡ ಬಿರಾದಾರ್ ಪಾಲ್ಗೊಂಡಿದ್ದರು. ಇದನ್ನೂ ಓದಿ: ಧಾರವಾಡ | ವಿಚಾರಣೆ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಕಳ್ಳರಿಬ್ಬರ ಕಾಲಿಗೆ ಗುಂಡೇಟು

Share This Article