Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್‌ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್‌ ಏನು?

Latest

ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್‌ ಏನು?

Public TV
Last updated: July 29, 2025 10:11 am
Public TV
Share
3 Min Read
Nimisha Priya
SHARE

ಸನಾ: ಯೆಮೆನ್‌ನಲ್ಲಿ (Yemen) ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ (Nimisha Priya) ವಿಧಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಈ ಹಿಂದೆ ಅಮಾನತುಗೊಂಡಿದ್ದ ಮರಣದಂಡನೆ ಶಿಕ್ಷೆಯನ್ನ ಸಂಪೂರ್ಣವಾಗಿ ರದ್ದು ಮಾಡಲಾಗಿದೆ ಎಂದು ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿ ಈ ಮಾಹಿತಿ ನೀಡಿದೆ.

ಗ್ರ್ಯಾಂಡ್ ಮುಫ್ತಿ ಕಚೇರಿ (Grand Mufti of India) ಮಾಹಿತಿ ಪ್ರಕಾರ, ಯೆಮೆನ್‌ ರಾಜಧಾನಿ ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಶಿಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ರೆ ಯೆಮನ್‌ ಸರ್ಕಾರದಿಂದ ಅಧಿಕೃತ ಲಿಖಿತ ಪ್ರಕಟಣೆ ಬಂದಿಲ್ಲ ಎಂದೂ ಸಹ ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಯುರೋಪಿಯನ್‌ ಒಕ್ಕೂಟದೊಂದಿಗೆ ಟ್ರಂಪ್‌ ಬಿಗ್‌ ಡೀಲ್‌ – ಆಮದುಗಳ ಮೇಲೆ 15% ಸುಂಕ

Nimisha Priyas daughter

ವಿದೇಶಾಂಗ ಸಚಿವಾಲಯ ಹೇಳುವುದೇನು?
37 ವರ್ಷದ ನಿಮಿಷಾ ಪ್ರಿಯಾ ಮರಣದಂಡನೆ (Death Sentence) ಸಂಪೂರ್ಣ ರದ್ದಾದ ಬಗ್ಗೆ ಗ್ರ್ಯಾಂಡ್ ಮುಫ್ತಿ ಕಚೇರಿ ಹೇಳಿಕೆಯನ್ನ ಕೇಂದ್ರ ಸರ್ಕಾರ ನಿರಾಕರಿಸಿದೆ. ಶಿಕ್ಷೆ ಸಂಪೂರ್ಣ ರದ್ದಾಗಿರುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯಾಗಲಿ, ಲಿಖಿತ ಆದೇಶವಾಗಲಿ ಬಂದಿಲ್ಲ. ನಿಮಿಷಾ ಪ್ರಕರಣದ ಕುರಿತು ಕೆಲ ವ್ಯಕ್ತಿಗಳು ಹಂಚಿಕೊಳ್ಳುತ್ತಿರುವ ಮಾಹಿತಿ ತಪ್ಪಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ (MEA) ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.  ಇದನ್ನೂ ಓದಿ: ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ – ನಿಮಿಷಾ ಪ್ರಿಯಾ ಬಿಡುಗಡೆಗೆ ಮನವಿ ಮಾಡಲು ಯೆಮನ್‍ಗೆ ಬಂದ ಪುತ್ರಿ

ನಿಮಿಷಾ ಪ್ರಿಯಾ ಯಾರು?
ನಿಮಿಷಾ ಪ್ರಿಯಾ ಯೆಮನ್‌ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ನರ್ಸ್. ಯೆಮನ್ ನಾಗರಿಕ ತಲಾಲ್ ಅಬ್ದೋ ಮೆಹದಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ, 2017 ರಲ್ಲಿ ಕೊಲೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅದಕ್ಕೂ ಮುನ್ನ ಅವರು ಹಲವಾರು ವರ್ಷಗಳ ಕಾಲ ಆ ದೇಶದಲ್ಲಿ ನರ್ಸ್ ಆಗಿ ಕೆಲಸ ಮಾಡಿದ್ದರು.  ಇದನ್ನೂ ಓದಿ: ನ್ಯೂಯಾರ್ಕ್‌ನ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಬಂದೂಕುದಾರಿ ಸೇರಿ ಐವರು ಸಾವು

NIMISHA PRIYA

ಯೆಮನ್ ಪ್ರಜೆಯ ಕೊಲೆ ಏಕಾಯ್ತು?
ತಲಾಲ್ ಅವರ ಬೆಂಬಲದೊಂದಿಗೆ, ನಿಮಿಷಾ 2015ರ ಏಪ್ರಿಲ್‌ನಲ್ಲಿ ವಿದೇಶದಲ್ಲಿ ತನ್ನ ಕನಸಿನ ಚಿಕಿತ್ಸಾಲಯವನ್ನು ತೆರೆದರು. ಅಲ್ಲಿ ಅವರು ಮಾನಸಿಕ, ದೈಹಿಕ ಮತ್ತು ಆರ್ಥಿಕ ಕಿರುಕುಳವನ್ನು ಅನುಭವಿಸಿದ್ದಾರೆಂದು ಆರೋಪಿಸಲಾಗಿದೆ. ತಲಾಲ್ ಕ್ಲಿನಿಕ್‌ನಲ್ಲಿ ಶೇ.33 ರಷ್ಟು ಪಾಲನ್ನು ಪಡೆಯಲು ಸುಳ್ಳು ದಾಖಲೆ ಸೃಷ್ಟಿಸಿದ್ದ. ಆಕೆಯ ಪಾಸ್‌ಪೋರ್ಟ್ ಅನ್ನು ವಶಪಡಿಸಿಕೊಂಡಿದ್ದ. ಕಾನೂನುಬದ್ಧವಾಗಿ ಮದುವೆಯಾಗಿದ್ದಾವೆಂದು ಸೂಚಿಸಲು ವಿವಾಹ ಪ್ರಮಾಣಪತ್ರವನ್ನು ಸಹ ನಕಲಿ ಮಾಡಿದ್ದ. ಮಹ್ದಿ ತನ್ನ ಮೇಲೆ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಿಮಿಷಾ ಆರೋಪಿಸಿದ್ದರು.

2017ರ ಜುಲೈನಲ್ಲಿ ನಿಮಿಷಾ ಜೈಲಿಗೆ ಭೇಟಿ ನೀಡಿದಾಗ, ತನ್ನ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯಲು ಮಹ್ದಿಗೆ ನಿದ್ರಾಜನಕ ಇನ್‌ಜೆಕ್ಷನ್ ಚುಚ್ಚಿದರು. ಪ್ರಮಾಣ ಅತಿಯಾದ್ದರಿಂದ ವ್ಯಕ್ತಿ ಮೃತಪಟ್ಟಿದ್ದ. ಮತ್ತೊಬ್ಬ ನರ್ಸ್ ಸಹಾಯ ಪಡೆದು ಮೃತದೇಹ ವಿಲೇವಾರಿಗೆ ಮುಂದಾಗಿದ್ದರು. ದೇಹವನ್ನು ಕತ್ತರಿಸಿ ನೀರಿನ ಟ್ಯಾಂಕ್‌ನಲ್ಲಿ ಭಾಗಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿದ್ದ. ಇಬ್ಬರೂ ತಲೆಮರೆಸಿಕೊಂಡಿದ್ದರು. ಕೊನೆಗೆ ಅವರನ್ನು ಪೊಲೀಸರು ಬಂಧಿಸಿದರು. ಇದನ್ನೂ ಓದಿ: ಆಸ್ಟ್ರೇಲಿಯಾದ ನೈಸರ್ಗಿಕ ವಿಪತ್ತಾದ ‘ಆಲ್ಗಲ್ ಬ್ಲೂಮ್’ – ಈ ಬಿಕ್ಕಟ್ಟಿನ ಹಿಂದಿನ ಕಾರಣವೇನು?

ಯೆಮನ್ ನ್ಯಾಯಾಲಯ ತೀರ್ಪೇನು?
ಕೊಲೆ ಪ್ರಕರಣದಲ್ಲಿ ಪ್ರಿಯಾಳನ್ನು ಬಂಧಿಸಿ ಯೆಮನ್‌ನಲ್ಲಿ ವಿಚಾರಣೆ ನಡೆಸಲಾಯಿತು. 2020 ರಲ್ಲಿ, ಸ್ಥಳೀಯ ನ್ಯಾಯಾಲಯವು ಆಕೆಗೆ ಒಮ್ಮೆ ಅಲ್ಲ, ಮೂರು ಬಾರಿ ಮರಣದಂಡನೆ ವಿಧಿಸಿತು. ನಂತರ ಮೇಲ್ಮನವಿ ನ್ಯಾಯಾಲಯವು ಒಂದು ಶಿಕ್ಷೆಯನ್ನು ರದ್ದುಗೊಳಿಸಿತು. ಆದಾಗ್ಯೂ, ದೇಶದ ಸುಪ್ರೀಂ ಕೋರ್ಟ್ ಉಳಿದ ಎರಡು ಶಿಕ್ಷೆಯನ್ನು ಎತ್ತಿಹಿಡಿಯಿತು. ಯೆಮನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ, ಕಳೆದ ವರ್ಷ ಆಕೆಗೆ ಮರಣದಂಡನೆಯನ್ನು ಅನುಮೋದಿಸಿದರು. ಪ್ರಿಯಾ ಪ್ರಸ್ತುತ ಸನಾ ಕೇಂದ್ರ ಜೈಲಿನಲ್ಲಿದ್ದಾರೆ. ಈ ವರ್ಷದ ಜನವರಿಯಲ್ಲಿ, ಹೌತಿ ನಿಯಂತ್ರಿತ ಸುಪ್ರೀಂ ಪೊಲಿಟಿಕಲ್ ಕೌನ್ಸಿಲ್‌ನ ಅಧ್ಯಕ್ಷ ಮಹ್ದಿ ಅಲ್-ಮಶಾತ್ ಅವರು ಮರಣದಂಡನೆಯನ್ನು ಅನುಮೋದಿಸಿದರು.

ಬ್ಲಡ್‌ ಮನಿ ಅಂದ್ರೆ ಏನು?
ಪ್ರಿಯಾ ಅವರು ಯೆಮನ್‌ನಲ್ಲಿದ್ದು ಸಾಮಾಜಿಕ ಕಾರ್ಯಕರ್ತರೊಬ್ಬರೊಂದಿಗೆ ಕ್ಷಮಾ ಪರಿಹಾರ ಮೊತ್ತದ (ಬ್ಲಡ್ ಮನಿ) ವಿಚಾರವಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಆತನ ಕುಟುಂಬವು ಕ್ಷಮಾ ಪರಿಹಾರ ಮೊತ್ತವನ್ನು ಸ್ವೀಕರಿಸಲು ಒಪ್ಪಿದರೆ ಮಾತ್ರ ಮರಣ ದಂಡನೆಯನ್ನು ತಪ್ಪಿಸಲು ಸಾಧ್ಯ ಎಂದು ಹೇಳಲಾಗಿತ್ತು.

TAGGED:death sentenceGrand MuftiMEAnimisha priyaYemenಎಂಇಎಕೇರಳ ನರ್ಸ್ನಿಮಿಷಾ ಪ್ರಿಯಾ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
30 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
48 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?